Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 2:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿನವೆಯು ಬರಿದಾಗಿದೆ, ಬಟ್ಟಬರಿದಾಗಿ ಬೀಳುಬಿದ್ದಿದೆ; ಎದೆಯು ಕರಗಿ ನೀರಾಗಿ ಹೋಗಿದೆ, ಮೊಣಕಾಲುಗಳು ಅದರುತ್ತವೆ, ಎಲ್ಲರ ಸೊಂಟಗಳಿಗೂ ವೇದನೆಯಾಗಿದೆ, ಎಲ್ಲರ ಮುಖಗಳೂ ಬಾಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಿನೆವೆ ಬರಿದಾಗಿದೆ; ಬಟ್ಟಬರಿದಾಗಿ ಪಾಳುಬಿದ್ದಿದೆ; ಎದೆಕರಗಿದೆ, ಮೊಣಕಾಲುಗಳು ಅದರುತ್ತಿವೆ. ಎಲ್ಲರ ಸೊಂಟಗಳು ಮುರಿದಂತಾಗಿವೆ, ಅವರ ಮುಖಗಳು ಬಾಡಿಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಗರಿಯು ಬರಿದಾಗಿದೆ, ಬಟ್ಟಬರಿದಾಗಿ ಬೀಳುಬಿದ್ದಿದೆ; ಎದೆಯು ನೀರಾಗಿ ಹೋಗಿದೆ, ಮೊಣಕಾಲುಗಳು ಅದರುತ್ತವೆ, ಎಲ್ಲರ ಸೊಂಟಗಳಿಗೂ ವೇದನೆಯಾಗಿದೆ, ಎಲ್ಲರ ಮುಖಗಳೂ ಬಾಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಈಗ ನಿನೆವೆಯು ಖಾಲಿಯಾಯಿತು. ಎಲ್ಲಾ ದೋಚಲ್ಪಟ್ಟಿತು. ನಗರವು ನಾಶವಾಯಿತು. ಜನರು ತಮ್ಮ ಧೈರ್ಯ ಕಳೆದುಕೊಂಡಿದ್ದಾರೆ. ಭಯದಿಂದ ಅವರ ಹೃದಯವು ಕರಗುತ್ತಿದೆ. ಮೊಣಕಾಲುಗಳು ನಡುಗುತ್ತಿದೆ. ಅವರ ದೇಹವು ಅಲ್ಲಾಡುತ್ತಿದೆ. ಭಯದಿಂದ ಅವರ ಮುಖವು ರಕ್ತಹೀನವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಿನೆವೆ ಬರಿದಾಗಿದೆ, ಸುಲಿಗೆಯಾಗಿದೆ, ಹಾಳುಬಿದ್ದಿದೆ, ಹೃದಯಗಳು ಕರಗುತ್ತವೆ; ಮೊಣಕಾಲುಗಳು ಒಟ್ಟಾಗಿ ಬಡಿದುಕೊಳ್ಳುತ್ತವೆ. ಎಲ್ಲರ ಸೊಂಟಗಳಲ್ಲಿ ಸಂಕಟವಿದೆ; ಎಲ್ಲಾ ಮುಖಗಳು ಕಳೆಗುಂದುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 2:10
24 ತಿಳಿವುಗಳ ಹೋಲಿಕೆ  

ನಾನು ಹೊಯ್ಯಲ್ಪಟ್ಟ ನೀರಿನಂತಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿದೆ. ನನ್ನ ಹೃದಯ ಮೇಣದಂತೆ ನನ್ನಲ್ಲಿ ಕರಗಿಹೋಗಿದೆ.


ಅವುಗಳ ದೆಸೆಯಿಂದ ರಾಷ್ಟ್ರಗಳಿಗೆ ಪ್ರಾಣ ಸಂಕಟ; ಎಲ್ಲರ ಮುಖಗಳು ಕಳೆಗುಂದುತ್ತವೆ.


ಆಗ ಅವನ ಮುಖ ಕಳೆಗುಂದಿತು, ಮನಸ್ಸು ಕಳವಳಗೊಂಡಿತು, ಸೊಂಟದ ಕೀಲು ಸಡಿಲವಾಯಿತು, ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.


ವಿಚಾರಿಸಿ ನೋಡಿರಿ, ಗಂಡಸು ಪ್ರಸವವೇದನೆ ಪಡುವುದುಂಟೆ? ಪ್ರತಿಯೊಬ್ಬನು ಹೆರುವವಳಂತೆ ಸೊಂಟವನ್ನು ಹಿಸಕಿಕೊಳ್ಳುವುದು, ಎಲ್ಲಾ ಮುಖಗಳು ಬಿಳಿಚಿಕೊಂಡಿರುವುದು, ಇವು ಏಕೆ ನನ್ನ ಕಣ್ಣಿಗೆ ಬೀಳುತ್ತವೆ?


ಇಗೋ, ಯೆಹೋವನು ಭೂಮಿಯನ್ನು ಬರಿದುಮಾಡಿ, ಎಲ್ಲಾ ಪ್ರದೇಶವನ್ನು ನಿರ್ಜನಮಾಡಿ, ಅದನ್ನು ವಿಕಾರಪಡಿಸಿ, ಅದರ ನಿವಾಸಿಗಳನ್ನು ಚದುರಿಸಿಬಿಡುವವನಾಗಿದ್ದಾನೆ.


ಆದುದ್ದರಿಂದ ನನ್ನ ಸೊಂಟದಲ್ಲಿ ನೋವು ತುಂಬಿದೆ, ಪ್ರಸವವೇದನೆಯಂತಿರುವ ವೇದನೆಯು ನನ್ನನ್ನು ಹಿಡಿದಿದೆ, ಕಿವಿ ಕಿವುಡಾಗುವಷ್ಟು ಸಂಕಟಪಡುತ್ತೇನೆ, ಕಣ್ಣು ಕುರುಡಾಗುವಷ್ಟು ತತ್ತರಗೊಂಡಿದ್ದೇನೆ.


ಯೆಹೋವನು ಇಂತೆನ್ನುತ್ತಾನೆ, “ನಾನು ಜನಾಂಗಗಳನ್ನು ಧ್ವಂಸಪಡಿಸಿದ್ದೇನೆ, ಅವುಗಳ ಕೋಟೆ ಕೊತ್ತಲುಗಳು ಪಾಳು ಬಿದ್ದವು; ಅವುಗಳ ಬೀದಿಗಳನ್ನು ಹಾಳುಮಾಡಿದ್ದೇನೆ; ಯಾರೂ ಹಾದುಹೋಗರು; ಅವುಗಳ ಪಟ್ಟಣಗಳು ನಾಶವಾದವು, ಜನರೇ ಇಲ್ಲ, ನಿರ್ನಾಮವಾಗಿವೆ.


ನಿನ್ನನ್ನು ನೋಡುವ ಪ್ರತಿಯೊಬ್ಬನು ನಿನ್ನ ಕಡೆಯಿಂದ ಓಡಿಹೋಗಿ, ‘ನಿನವೆಯೂ ಹಾಳಾಯಿತಲ್ಲಾ, ಅದಕ್ಕಾಗಿ ಯಾರು ಗೋಳಾಡುವರು?’ ನಿನ್ನನ್ನು ಸಂತೈಸುವವರು ನನಗೆ ಎಲ್ಲಿ ಸಿಕ್ಕಾರು?” ಅಂದುಕೊಳ್ಳುವನು.


‘ಯೆಹೋವನೇ, ನೀನು ಈ ಸ್ಥಳವನ್ನು ನಿರ್ಮೂಲಮಾಡಬೇಕೆಂದು ಉದ್ದೇಶಿಸಿ, ಇದು ಜನರಿಗೂ ಪಶುಗಳಿಗೂ ನೆಲೆಯಾಗದೆ ಸದಾ ಹಾಳಾಗಿಯೇ ಇರಲಿ ಎಂದು ನುಡಿದಿದ್ದೀಯಲ್ಲಾ’ ಎಂಬುದಾಗಿ ಅರಿಕೆಮಾಡಬೇಕು.


“ನಾನು ಆ ಪ್ರದೇಶವನ್ನು ಜವುಗು ನೆಲವನ್ನಾಗಿಯೂ, ಗೂಬೆಗಳ ಸೊತ್ತನ್ನಾಗಿಯೂ ಮಾಡುವೆನು. ನಾಶವೆಂಬ ಬರಲಿನಿಂದ ಗುಡಿಸಿಬಿಡುವೆನು” ಎಂದು ಸೇನಾಧೀಶ್ವರನಾದ ಯೆಹೋವನು ಹೇಳುತ್ತಾನೆ.


ನಮ್ಮ ಎದೆ ಒಡೆದು ಹೋಯಿತು; ನಿಮ್ಮನ್ನು ಎದುರಿಸುವ ಧೈರ್ಯವು ಯಾರಿಗೂ ಇಲ್ಲ. ನಿಮ್ಮ ದೇವರಾದ ಯೆಹೋವನೊಬ್ಬನೇ ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ದೇವರು.


ಭೂಮಿಯು ಕ್ರಮವಿಲ್ಲದೆಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕತ್ತಲಿತ್ತು. ದೇವರಾತ್ಮವು ಸಾಗರದ ಮೇಲೆ ಚಲಿಸುತ್ತಿತ್ತು.


ಆಯಿ ಊರಿನವರು ಅವರನ್ನು ಊರ ಬಾಗಿಲಿನಿಂದ ಕಲ್ಲುಗಣಿಗಳವರೆಗೂ ಹಿಂದಟ್ಟಿ ಇಳಿನೆಲದಲ್ಲಿ ಅವರನ್ನು ಸೋಲಿಸಿ ಸುಮಾರು ಮೂವತ್ತಾರು ಮಂದಿಯನ್ನು ಕೊಂದುಹಾಕಿದರು. ಇದರಿಂದ ಇಸ್ರಾಯೇಲರ ಧೈರ್ಯ ಕುಂದಿಹೋಯಿತು.


ನನ್ನ ಪ್ರಜೆಯೆಂಬಾಕೆಯ ವೇದನೆಯಿಂದ ನನಗೆ ಮನೋಯಾತನೆಯಾಯಿತು, ನಾನು ಶೋಕಿಸಿದೆನು, ಭಯವು ನನ್ನನ್ನು ಹಿಡಿದಿದೆ.


ದಮಸ್ಕವನ್ನು ಕುರಿತದ್ದು, “ಹಮಾತಿಗೂ ಮತ್ತು ಅರ್ಪಾದಿಗೂ ಆಶಾಭಂಗವಾಯಿತು; ಅವು ಅಶುಭ ಸಮಾಚಾರವನ್ನು ಕೇಳಿ ಕರಗಿ ಹೋಗಿವೆ; ಸಮುದ್ರಕ್ಕೆ ತಲ್ಲಣ ಹತ್ತಿದೆ, ಸುಮ್ಮನಿರಲಾರದು.


‘ಏಕೆ ನರಳಾಡುತ್ತೀ?’ ಎಂದು ಅವರು ನಿನ್ನನ್ನು ಕೇಳಲು ನೀನು ಅವರಿಗೆ, ‘ಕೆಟ್ಟ ವಾರ್ತೆಯ ನಿಮಿತ್ತ ನರಳುತ್ತೇನೆ; ಇಗೋ, ವಿಪತ್ತು ಬಂತು; ಎಲ್ಲರ ಹೃದಯವು ಕರಗಿ ನೀರಾಗುವುದು; ಎಲ್ಲರ ಕೈ ಜೋಲು ಬೀಳುವುದು, ಎಲ್ಲರ ಮನಸ್ಸು ಕುಂದುವುದು, ಎಲ್ಲರ ಮೊಣಕಾಲು ನೀರಿನಂತೆ ಚಂಚಲವಾಗುವುದು; ಇಗೋ, ಬಂದಿತು, ಬಂದಾಯಿತು’ ಇದು ಕರ್ತನಾದ ಯೆಹೋವನ ನುಡಿ ಎಂದು ಉತ್ತರಕೊಡು.”


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆ ವೃಕ್ಷವು ಪಾತಾಳಕ್ಕೆ ಇಳಿದು ಹೋದ ದಿನದಲ್ಲಿ ನಾನು ದುಃಖವನ್ನು ಹುಟ್ಟಿಸುವೆನು. ಅದರ ವಿಯೋಗಕ್ಕಾಗಿ ನಾನು ಮಹಾ ನದಿಯನ್ನು ಮರೆಮಾಡಿ, ನದಿಗಳನ್ನು ತಡೆದುಬಿಟ್ಟೆನು, ಜಲಪ್ರವಾಹವು ನಿಂತುಹೋಯಿತು; ಅದಕ್ಕಾಗಿ ಲೆಬನೋನು ಗೋಳಿಡುವಂತೆ ಮಾಡಿದೆನು, ಭೂಮಿಯ ಸಕಲ ವೃಕ್ಷಗಳು ಆ ದುಃಖಕ್ಕೆ ಕುಗ್ಗಿಹೋದವು.


ಆಹಾ, ಯೆಹೋವನು ಯಾಕೋಬಿನ ಅತಿಶಯವನ್ನು, ಇಸ್ರಾಯೇಲಿನ ಅತಿಶಯದಂತೆ ಪುನರುಜ್ಜೀವನಗೋಳಿಸುವನು; ಕೊಳ್ಳೆಹೊಡೆಯುವವರು ಆ ಅತಿಶಯವನ್ನು ಸೂರೆಗೈದು ಅವುಗಳ ದ್ರಾಕ್ಷಾಲತೆಗಳನ್ನು ಹಾಳುಮಾಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು