Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 2:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಪುರಾತನ ಕಾಲದಿಂದ ನಿನವೆ ಪಟ್ಟಣವೂ ಕಟ್ಟೆ ಒಡೆದು ನೀರು ತುಂಬಿದ ಕೆರೆಯಂತೆ ಇದೆ. ಆಹಾ! ಹರಿದು ಓಡುವ ನೀರಿನಂತೆ ಅದರ ನಿವಾಸಿಗಳು ಓಡಿಹೋಗುತ್ತಾರೆ; ನಿಲ್ಲಿರಿ, ನಿಲ್ಲಿರಿ ಎಂದು ಅಪ್ಪಣೆಯಾದರೂ ಯಾರೂ ಹಿಂದೆ ನೋಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಿನೆವೆ ಕಟ್ಟೆಯೊಡೆದ ಕೆರೆಯಂತಿದೆ; “ನಿಲ್ಲಿರಿ! ನಿಲ್ಲಿರಿ!” ಎಂಬ ಕೂಗು ಕೇಳುತ್ತಿದೆ; ಆದರೂ ಓಡುತಿಹರು ಜನರೆಲ್ಲರು ಹಿಂದೆ ನೋಡದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಪುರಾತನಕಾಲದಿಂದ ನಿನೆವೆಯು ನೀರು ತುಂಬಿದ ಕೆರೆಯಂತೆ ಇರುತ್ತದೆ; ಆಹಾ, [ಒಡೆದು ಓಡುವ ನೀರಿನಂತೆ ಅದರ ನಿವಾಸಿಗಳು] ಓಡಿಹೋಗುತ್ತಾರೆ; ನಿಲ್ಲಿರಿ, ನಿಲ್ಲಿರಿ [ಎಂದು ಅಪ್ಪಣೆಯಾದರೂ] ಯಾರೂ ಹಿಂದೆ ನೋಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಿನೆವೆಯು ನೀರು ಬತ್ತುತ್ತಿರುವ ಕೊಳದಂತಿದೆ. “ನಿಲ್ಲಿ, ನಿಲ್ಲಿ, ಓಡಿಹೋಗಬೇಡಿ” ಎಂದು ಜನರು ಬೊಬ್ಬಿಡುತ್ತಾರೆ. ಆದರೆ ಅದರಿಂದ ಪ್ರಯೋಜನವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಿನೆವೆ ಹುಟ್ಟಿದಂದಿನಿಂದ ನೀರಿನ ಕೆರೆಯ ಹಾಗಿತ್ತು. ಅದರ ನೀರು ಹರಿದು ಖಾಲಿಯಾಗುತ್ತಲಿದೆ. “ನಿಲ್ಲಿರಿ! ನಿಲ್ಲಿರಿ!” ಎಂದು ಅವರು ಕೂಗಿದರೂ, ಒಬ್ಬನೂ ಹಿಂದಕ್ಕೆ ನೋಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 2:8
15 ತಿಳಿವುಗಳ ಹೋಲಿಕೆ  

ಇನ್ನೂ ಆ ದೇವದೂತನು ನನಗೆ ಹೇಳಿದ್ದೇನಂದರೆ, “ಆ ಜಾರಸ್ತ್ರೀ ಕುಳಿತ್ತಿದ್ದ ನೀರನ್ನು ನೀನು ನೋಡಿದೆಯಲ್ಲ, ಅವು ಜನಾಂಗಳನ್ನು, ಜನ ಸಮೂಹಗಳನ್ನು, ರಾಷ್ಟ್ರಗಳನ್ನು, ಭಾಷೆಗಳನ್ನು ಸೂಚಿಸುತ್ತದೆ ಎಂದನು.


ಏಳು ಬಟ್ಟಲುಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು, “ಬಾ, ಬಹಳ ನೀರುಗಳ ಮೇಲೆ ಕುಳಿತ್ತಿರುವ ಮಹಾ ಜಾರಸ್ತ್ರೀಗೆ ಆಗುವ ನ್ಯಾಯತೀರ್ಪನ್ನು ನಿನಗೆ ತೋರಿಸುತ್ತೇನೆ.


ನಿನ್ನ ಪ್ರಭುಗಳು ಮಿಡತೆಯಂತಿದ್ದಾರೆ, ಮಿಡತೆಯ ದಂಡು ಚಳಿಗಾಲದಲ್ಲಿ ಬೇಲಿಗಳೊಳಗೆ ಇಳಿದಿದ್ದು, ಹೊತ್ತು ಹುಟ್ಟಿದಾಗ ಓಡಿಹೋಗಿ ಯಾರಿಗೂ ಗೊತ್ತಾಗದ ಸ್ಥಳದಲ್ಲಿ ಅಡಗುವ ಪ್ರಕಾರ ನಿನ್ನ ಸೇನಾಪತಿಗಳು ಮಾಯವಾಗುತ್ತಾರೆ.


ಬಾಬೆಲಿನ ಶೂರರು ಯುದ್ಧಕ್ಕೆ ಹಿಂದೆಗೆದು ಹೆಂಗಸರಂತೆ ಬಲಹೀನರಾಗಿ ತಮ್ಮ ಕೋಟೆಗಳಲ್ಲಿ ನಿಂತಿದ್ದಾರೆ; ಅದರ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ, ಅವರ ಅಗುಳಿಗಳು ಮುರಿದುಹೋಗಿವೆ.


ಬೀಜ ಬಿತ್ತುವವನನ್ನೂ ಮತ್ತು ಸುಗ್ಗಿಯಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನಿಂದ ನಿರ್ಮೂಲಮಾಡಿರಿ; ಪ್ರತಿಯೊಬ್ಬ ವಿದೇಶೀಯನು ಹಿಂಸೆಯ ಖಡ್ಗದ ದೆಸೆಯಿಂದ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.


ಆಹಾ, ನನ್ನ ಕಣ್ಣಿಗೆ ಬಿದ್ದದ್ದೇನು? ಅವರು ಧೈರ್ಯಗೆಟ್ಟು ಬೆನ್ನುಕೊಟ್ಟಿದ್ದಾರೆ. ಅವರ ಶೂರರು ಪೆಟ್ಟುತಿಂದು ಹಿಂದಿರುಗದೆ ಓಡಿಹೋಗುತ್ತಾರೆ; ಸುತ್ತಮುತ್ತಲು ದಿಗಿಲು ಎಂದು ಯೆಹೋವನು ಅನ್ನುತ್ತಾನೆ.


ಬಾಬೆಲಿನಿಂದ ಹೊರಡಿರಿ! ಕಸ್ದೀಯರ ಕಡೆಯಿಂದ ಹಾರಿಹೋಗಿರಿ! ಹರ್ಷಧ್ವನಿಯಿಂದ ಇದನ್ನು ತಿಳಿಸಿರಿ, ಪ್ರಕಟಿಸಿರಿ. ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ. ‘ಯೆಹೋವನು ತನ್ನ ಸೇವಕನಾದ ಯಾಕೋಬನ್ನು ವಿಮೋಚಿಸಿದ್ದಾನೆ’” ಎಂದು ಹೇಳಿರಿ.


ಮಂತ್ರಾಲೋಚನೆಗಳನ್ನು ಕೇಳಿ ಕೇಳಿ ನಿನಗೆ ಸಾಕಾಯಿತಲ್ಲವೇ. ಖಗೋಳಜ್ಞರು, ಜೋಯಿಸರು, ಪಂಚಾಂಗದವರು ಇವರೆಲ್ಲರೂ, ನಿಂತು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ಉದ್ಧರಿಸಲಿ.


ಬೇಟೆಗಾರನಿಂದ ತಪ್ಪಿಸಿಕೊಂಡು ಓಡುವ ಜಿಂಕೆಯಂತೆಯೂ, ಒಟ್ಟುಗೂಡಿಸಲು ಯಾರೂ ಇಲ್ಲದಂಥ ಕುರಿಗಳಂತೆಯೂ ಪ್ರತಿಯೊಬ್ಬನೂ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.


ಅವನು ಆ ದೇಶದಿಂದ ಹೊರಟು ಅಶ್ಶೂರ್ ದೇಶಕ್ಕೆ ಬಂದು ನಿನೆವೆ, ರೆಹೋಬೋತೀರ್, ಕೆಲಹ ಎಂಬ ಪಟ್ಟಣಗಳನ್ನೂ,


ಆಹಾ, ಬಹುಜಲಾಶ್ರಯಗಳ ಮಧ್ಯೆ ನಿವಾಸಿನಿಯಾಗಿರುವ ನಗರವೇ, ಧನಭರಿತಪುರವೇ, ನಿನ್ನ ಅಂತ್ಯವು ಬಂದಿದೆ, ನೀನು ಸೂರೆಮಾಡಿದ್ದು ಸಾಕು.


ಶತ್ರುವಿನ ಕುದುರೆಗಳ ಗೊರಸುಗಳು ನೆಲವನ್ನು ಅಪ್ಪಳಿಸುವ ಶಬ್ದಕ್ಕೂ, ರಥಗಳ ರಭಸಕ್ಕೂ, ಚಕ್ರಗಳ ಬಿರುಗುಟ್ಟುವಿಕೆಗೂ ತಂದೆಗಳು ಹೆದರುತ್ತಾ ಜೋಲುಗೈ ಉಳ್ಳವರಾಗಿ ತಮ್ಮ ಮಕ್ಕಳನ್ನು ಹಿಂದಿರುಗಿ ನೋಡರು.


ನಿನವೆ ಪಟ್ಟಣದ ಬಗ್ಗೆ ದೈವೋಕ್ತಿ. ಎಲ್ಕೋಷ್ ಊರಿನ ನಹೂಮ ಎಂಬ ಪ್ರವಾದಿಗೆ ಆದ ದೈವದರ್ಶನದ ಗ್ರಂಥ.


ನಾನು ಬಾನಕ್ಕಿಯಂತೆಯೂ, ಬಕದ ಹಾಗೂ ಕೀಚುಗುಟ್ಟಿದೆನು, ಪಾರಿವಾಳದಂತೆ ಮೊರೆಯಿಟ್ಟೆನು, ಯೆಹೋವನೇ, ನಾನು ಬಾಧೆಪಡುತ್ತಿದ್ದೇನೆ, ನನಗೆ ಆಶ್ರಯವಾಗು ಎಂದು ನಿನ್ನನು ದೃಷ್ಟಿಸುತ್ತಾ ಕಂಗೆಟ್ಟೆನು.


ನಾವೆಲ್ಲರೂ ಕರಡಿಗಳಂತೆ ಗುರುಗುಟ್ಟುತ್ತೇವೆ, ಪಾರಿವಾಳಗಳಂತೆ ಮುಲುಗುತ್ತಲೇ ಇದ್ದೇವೆ; ನಾವು ಯೆಹೋವನ ನ್ಯಾಯನಿರ್ಣಯವನ್ನು ಎದುರುನೋಡಿದರೂ ಅದು ನಮಗೆ ಸಿಕ್ಕದು, ಆತನ ರಕ್ಷಣಕಾರ್ಯವನ್ನು ನಿರೀಕ್ಷಿಸಿದರೂ ಅದು ನಮಗೆ ದೂರವಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು