Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 3:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅಶ್ಶೂರದ ಅರಸನೇ, ನಿನ್ನ ದೇಶಪಾಲಕರು ದೀರ್ಘ ನಿದ್ರೆ ಮಾಡುತ್ತಿದ್ದಾರೆ; ನಿನ್ನ ಮಹನೀಯರು ದೀರ್ಘನಿದ್ದೆಯಲ್ಲಿದ್ದಾರೆ; ನಿನ್ನ ಪ್ರಜೆಗಳು ಬೆಟ್ಟಗಳಲ್ಲಿ ಚದರಿದ್ದಾರೆ, ಅವರನ್ನು ಕೂಡಿಸುವವರು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಅಸ್ಸೀರಿಯಾದ ಅರಸನೇ, ನಿನ್ನ ರಾಜ್ಯಪಾಲರು ದೀರ್ಘನಿದ್ರೆಯಲ್ಲಿದ್ದಾರೆ. ನಿನ್ನ ಪ್ರಮುಖರು ಜಡವಾಗಿ ಬಿದ್ದಿದ್ದಾರೆ. ನಿನ್ನ ಪ್ರಜೆಗಳು ಬೆಟ್ಟಗುಡ್ಡಗಳಲ್ಲಿ ಚದರಿಹೋಗಿದ್ದಾರೆ. ಅವರನ್ನು ಒಟ್ಟುಗೂಡಿಸತಕ್ಕವರು ಯಾರೂ ಇಲ್ಲದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅಶ್ಶೂರದ ಅರಸನೇ, ನಿನ್ನ ದೇಶಪಾಲಕರು ದೀರ್ಘನಿದ್ರೆಮಾಡುತ್ತಿದ್ದಾರೆ; ನಿನ್ನ ಮಹನೀಯರು ಒರಗಿಹೋಗಿದ್ದಾರೆ; ನಿನ್ನ ಪ್ರಜೆಗಳು ಬೆಟ್ಟಗಳಲ್ಲಿ ಚದರಿದ್ದಾರೆ, ಅವರನ್ನು ಕೂಡಿಸತಕ್ಕವರು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅಶ್ಶೂರದ ಅರಸನೇ, ನಿನ್ನ ಕುರುಬರು ನಿದ್ರಿಸುತ್ತಿದ್ದಾರೆ. ಆ ಬಲಾಢ್ಯ ಕುರುಬರು ನಿದ್ರೆ ಮಾಡುತ್ತಿದ್ದಾರೆ. ನಿನ್ನ ಕುರಿಗಳು ಬೆಟ್ಟಗಳ ಮೇಲೆ ಚದರಿಹೋಗಿವೆ. ಅವುಗಳನ್ನು ಹಿಂತಿರುಗಿಸಿ ಒಟ್ಟುಗೂಡಿಸಲು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅಸ್ಸೀರಿಯದ ಅರಸನೇ, ನಿನ್ನ ಕುರುಬರು ತೂಕಡಿಸುತ್ತಾರೆ. ನಿನ್ನ ಪ್ರಧಾನರು ವಿಶ್ರಾಂತಿಗೈಯುತ್ತಿದ್ದಾರೆ. ಕೂಡಿಸುವವರು ಯಾರೂ ಇಲ್ಲದಂತೆ ನಿನ್ನ ಜನರೆಲ್ಲರೂ ಬೆಟ್ಟಗಳಲ್ಲಿ ಚದರಿಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 3:18
13 ತಿಳಿವುಗಳ ಹೋಲಿಕೆ  

ಆಗ ಮೀಕಾಯೆಹುವು, “ಇಸ್ರಾಯೇಲರೆಲ್ಲರು ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದುರಿಹೋದದ್ದನ್ನು ಕಂಡೆನು. ಆಗ ಯೆಹೋವನು, ‘ಇವರು ಒಡೆಯನಿಲ್ಲದವರಾಗಿರುತ್ತಾರೆ, ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ’ ಎಂದನು” ಎಂಬುದಾಗಿ ಉತ್ತರಕೊಟ್ಟನು.


ನಾನು ಅದರ ಪ್ರಧಾನರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು, ಬಲಿಷ್ಠರು, ಇವರೆಲ್ಲರಿಗೂ ತಲೆಗೇರುವ ಮಟ್ಟಿಗೆ ಕುಡಿಸುವೆನು; ಅವರು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವರು ಎಂದು ಸೇನಾಧೀಶ್ವರನಾದ ಯೆಹೋವನೆಂಬ ಹೆಸರಿನ ರಾಜಾಧಿರಾಜನು ಅನ್ನುತ್ತಾನೆ.”


ಹೀಗಿರಲು ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ಅಶ್ಶೂರದ ಅರಸನನ್ನು ದಂಡಿಸಿದಂತೆ ಬಾಬೆಲಿನ ಅರಸನನ್ನೂ ಮತ್ತು ಅವನ ದೇಶವನ್ನೂ ದಂಡಿಸುವೆನು.


ಬೇಟೆಗಾರನಿಂದ ತಪ್ಪಿಸಿಕೊಂಡು ಓಡುವ ಜಿಂಕೆಯಂತೆಯೂ, ಒಟ್ಟುಗೂಡಿಸಲು ಯಾರೂ ಇಲ್ಲದಂಥ ಕುರಿಗಳಂತೆಯೂ ಪ್ರತಿಯೊಬ್ಬನೂ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.


ಆಗ ಭೂರಾಜರುಗಳೂ, ಮಹಾಪುರುಷರೂ, ಸಹಸ್ರಾಧಿಪತಿಗಳೂ, ಐಶ್ವರ್ಯವಂತರೂ, ಪರಾಕ್ರಮಶಾಲಿಗಳೂ, ಎಲ್ಲಾ ದಾಸರೂ ಮತ್ತು ಸ್ವತಂತ್ರರೂ ಬೆಟ್ಟಗಳ ಗವಿಗಳಿಗೂ ಮತ್ತು ಬಂಡೆಗಳ ಸಂದುಗಳಿಗೂ ಓಡಿಹೋಗಿ ತಮ್ಮನ್ನು ಮರೆಮಾಡಿಕೊಂಡರು.


ಅವರು ಹೊಟ್ಟೆಬಾಕರು, ನಾನು ಅವರಿಗೆ ಔತಣವನ್ನು ಸಿದ್ಧಪಡಿಸುವೇನು, ಅವರು ಅದರಿಂದ ಸಂಭ್ರಮಪಟ್ಟು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವಂತೆ ತಲೆಗೇರುವ ಮಟ್ಟಿಗೆ ಕುಡಿಸುವೆನು. ಇದು ಯೆಹೋವನ ನುಡಿ” ಎಂಬುದೇ.


ಯುವತಿಯೇ, ಬಾಬೆಲ್ ಪುರಿಯೇ, ಕೆಳಕ್ಕಿಳಿದು ಧೂಳಿನಲ್ಲಿ ಕುಳಿತುಕೋ, ಕಸ್ದೀಯರ ಯುವತಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ! ನಿನ್ನನ್ನು ಇನ್ನು ಕೋಮಲೆ ಮತ್ತು ಸುಕುಮಾರಿ ಎಂದು ಕರೆಯುವುದಿಲ್ಲ.


ಭಯವೂ, ಹೆದರಿಕೆಯೂ, ಅವರಿಗುಂಟಾಗುವುದು. ನಿನ್ನ ಭುಜಬಲದ ಶಕ್ತಿಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು. ಅಷ್ಟರಲ್ಲಿ ಯೆಹೋವನೇ, ನೀನು ಕಾಪಾಡಿದ ನಿನ್ನ ಪ್ರಜೆಗಳು ದಾಟಿ ಹೋಗಿ ದೇಶವನ್ನು ಸೇರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು