Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 3:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಿನ್ನ ಗಾಯವು ಗುಣಹೊಂದದು, ನಿನ್ನ ಗಾಯವು ತೀವ್ರವೇ. ನಿನ್ನ ವಿನಾಶದ ಸುದ್ದಿಯನ್ನು ಕೇಳಿದವರೆಲ್ಲರೂ ನಿನಗೆ ಚಪ್ಪಾಳೆ ಹಾಕಿ ನಗುತ್ತಾರೆ; ನಿನ್ನ ಕೆಡುಕಿಗೆ ನಿತ್ಯವೂ ಗುರಿಯಾಗದವರು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಿನ್ನ ಗಾಯಕ್ಕೆ ಮದ್ದಿಲ್ಲ. ನಿನಗೆ ಬಿದ್ದಿರುವ ಪೆಟ್ಟು ಪ್ರಾಣನಾಶಕ. ನಿನ್ನ ವಿನಾಶದ ಸಮಾಚಾರವನ್ನು ಕೇಳುವವರೆಲ್ಲ ಚಪ್ಪಾಳೆ ಹಾಕುತ್ತಾರೆ. ಏಕೆಂದರೆ ನೀನು ಮಾಡಿರುವ ಕೇಡಿಗೆ ಕೊನೆಯಿಲ್ಲ. ಅದರಿಂದ ತಪ್ಪಿಸಿಕೊಂಡವರು ಯಾರೂ ಇಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಿನ್ನ ಗಾಯವು ಗುಣಹೊಂದದು, ನಿನ್ನ ಪೆಟ್ಟು ಗಡಸು; ನಿನ್ನ ಸುದ್ದಿಯನ್ನು ಕೇಳಿದವರೆಲ್ಲರೂ ನಿನಗೆ ಚಪ್ಪಾಳೆಹಾಕುತ್ತಾರೆ; ನಿನ್ನ ಕೆಡುಕಿಗೆ ನಿತ್ಯವೂ ಗುರಿಯಾಗದವರು ಎಲ್ಲಿದ್ದಾರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಿನೆವೆಯೇ, ನೀನು ತೀವ್ರವಾದ ಗಾಯಹೊಂದಿರುವೆ. ಯಾವದೂ ನಿನ್ನನ್ನು ಗುಣಪಡಿಸಲಾರದು. ನಿನ್ನ ನಾಶನದ ಸುದ್ದಿ ಕೇಳಿದವರೆಲ್ಲರೂ ಚಪ್ಪಾಳೆ ತಟ್ಟುವರು. ಅವರು ಹರ್ಷಿಸುವರು. ಯಾಕೆಂದರೆ ನಿನಗಾದ ತೀವ್ರ ಗಾಯದ ನೋವನ್ನು ಅವರೆಲ್ಲರೂ ಅನುಭವಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಿನ್ನ ಗಾಯಕ್ಕೆ ಮದ್ದಿಲ್ಲ, ನಿನ್ನ ಗಾಯ ಪ್ರಾಣನಾಶಕ. ನಿನ್ನ ಸುದ್ದಿಯನ್ನು ಕೇಳುವವರೆಲ್ಲರೂ ನಿನ್ನ ಪತನಕ್ಕಾಗಿ ಕೈ ತಟ್ಟುವರು. ಏಕೆಂದರೆ ನಿನ್ನ ಕೆಡುಕಿಗೆ ನಿತ್ಯವೂ ಗುರಿಯಾಗದವರು ಯಾರಿದ್ದಾರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 3:19
20 ತಿಳಿವುಗಳ ಹೋಲಿಕೆ  

ಸಮಾರ್ಯಕ್ಕೆ ಬಿದ್ದ ಪೆಟ್ಟು ಗುಣಪಡಿಸಲಾಗದು. ಅದು ಯೆಹೂದಕ್ಕೂ ತಾಕಿದೆ. ನನ್ನ ಜನರ ಆಲೋಚನಾಸ್ಥಾನವಾದ ಯೆರೂಸಲೇಮಿಗೆ ಮುಟ್ಟಿದೆ.


ಹಾದುಹೋಗುವವರೆಲ್ಲರೂ ನಿನ್ನನ್ನು ನೋಡಿ ಚಪ್ಪಾಳೆಹೊಡೆಯುತ್ತಾರೆ, ಯೆರೂಸಲೇಮ್ ನಗರಿಯನ್ನು ಕಂಡು, “ಆಹಾ, ಪರಿಪೂರ್ಣಸುಂದರಿ, ಸಮಸ್ತಲೋಕ ಸಂತೋಷಿಣಿ ಎನ್ನಿಸಿಕೊಳ್ಳುತ್ತಿದ್ದ ಪುರಿಯು ಇದೇ ಏನು? ಛೀ ಛೀ” ಎಂದು ತಲೆಯಾಡಿಸುತ್ತಾರೆ.


ಜನರು ಅವನನ್ನು ನೋಡಿ ಚಪ್ಪಾಳೆಹೊಡೆದು ಛೀಮಾರಿ ಹಾಕಿ, ಆಚೆಗೆ ಹೊರಡಿಸುವರು.”


ಐಗುಪ್ತದ ಕುಮಾರಿಯೇ, ಯುವತಿಯೇ, ಗಿಲ್ಯಾದಿಗೆ ಹೋಗಿ ಔಷಧವನ್ನು ಸಂಪಾದಿಸು; ನೀನು ಬಗೆಬಗೆಯ ಔಷಧವನ್ನು ಉಪಯೋಗಿಸುವುದು ಪ್ರಯೋಜನವಿಲ್ಲ; ನಿನಗೆ ಗುಣವಾಗದು.


ಯೆಹೋವನೇ, ಅಶ್ಶೂರದ ಅರಸರು ಸಕಲ ಜನಾಂಗಗಳನ್ನೂ, ಅವರ ದೇಶಗಳನ್ನೂ ಹಾಳು ಮಾಡಿದ್ದು ನಿಜ.


ಪರಲೋಕವೇ, ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ ಅವಳ ನಿಮಿತ್ತ ಜಯಘೋಷಮಾಡಿರಿ. ಏಕೆಂದರೆ ಇವಳು ನಿಮಗೆ ಮಾಡಿದ ಅನ್ಯಾಯಕ್ಕೆ ಸರಿಯಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.


ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು ಮತ್ತು ಭೂನಿವಾಸಿಗಳು ಆಕೆಯ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು” ಎಂದು ನನಗೆ ಹೇಳಿದನು.


ಇದಲ್ಲದೆ ದೇವಜನರ ಮೇಲೆ ಯುದ್ಧ ಮಾಡಿ ಅವರನ್ನು ಜಯಿಸುವುದಕ್ಕೆ ಅದಕ್ಕೆ ಅಧಿಕಾರ ಕೊಡಲ್ಪಟ್ಟಿತು ಮತ್ತು ಸಕಲ ಕುಲ, ಜನ, ಭಾಷೆ, ಜನಾಂಗಗಳ ಮೇಲೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಚಪ್ಪಾಳೆ ಹೊಡೆದು, ಕಾಲಿನಿಂದ ನೆಲವನ್ನು ಬಡಿದು, ಇಸ್ರಾಯೇಲ್ ದೇಶವನ್ನು ಮನಃಪೂರ್ವಕವಾಗಿ ತಿರಸ್ಕರಿಸಿ, ಅದರ ಗತಿಗೆ ಹಿಗ್ಗಿಕೊಂಡೆ.


ಇಗೋ, ಒಂದು ಸದ್ದು! ಆಹಾ, ಬರುತ್ತಿದೆ! ಯೆಹೂದದ ಪಟ್ಟಣಗಳನ್ನು ನಾಶಪಡಿಸಿ ನರಿಗಳ ಹಕ್ಕೆಯನ್ನಾಗಿ ಮಾಡುವುದಕ್ಕೆ ಉತ್ತರದೇಶದಿಂದ ಮಹಾಕಂಪನವು ಸಂಭವಿಸುತ್ತದೆ.


ಯೆಹೋವನು ಇಂತೆನ್ನುತ್ತಾನೆ, “ನಿನ್ನ ಗಾಯವು ಗುಣಹೊಂದುವುದಿಲ್ಲ, ನಿನ್ನ ಬಾಸುಂಡೆಯು ಘೋರವಾಗಿದೆ.


ಅಶ್ಶೂರದ ಅರಸರು ಎಲ್ಲಾ ರಾಜ್ಯಗಳನ್ನು ಸಂಪೂರ್ಣವಾಗಿ ನಾಶಮಾಡಿದರೆಂದು ಕೇಳಿದಿಯಲ್ಲಾ? ಹೀಗಿದ್ದ ಮೇಲೆ ನೀನು ಉಳಿಯುವಿಯೋ?


“ನೀನು ಇಲ್ಲಿಂದ ಹೊರಟು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದನ್ನು ಕಟುವಾಗಿ ಖಂಡಿಸಿ ಹೇಳು, ಏಕೆಂದರೆ ಅಲ್ಲಿರುವ ನಿವಾಸಿಗಳ ದುಷ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ” ಎಂದು ಅಪ್ಪಣೆಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು