Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 10:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ದೇವಾಲಯದ ಸೇವಕರು ಉಳಿದ ಜನರು ಇವರಲ್ಲಿ ದೇವರ ಧರ್ಮೋಪದೇಶದ ನಿಮಿತ್ತವಾಗಿ ಅನ್ಯದೇಶದವರ ಗೊಡವೆಯನ್ನು ತೊರೆದುಬಿಟ್ಟವರು ತಮ್ಮ ತಮ್ಮ ಹೆಂಡತಿಯರು, ಗ್ರಹಿಸಿಕೊಳ್ಳಲು ಶಕ್ತರಾದ ಗಂಡು ಹೆಣ್ಣು ಮಕ್ಕಳು ಇವರೊಡನೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ದೇವಸ್ಥಾನ ಪರಿಚಾರಕರು, ಉಳಿದ ಜನರು, ಇವರಲ್ಲಿ ದೇವರ ಧರ್ಮೋಪದೇಶದ ನಿಮಿತ್ತ ಅನ್ಯದೇಶದವರ ಗೊಡವೆಯನ್ನು ತೊರೆದುಬಿಟ್ಟವರು, ತಮ್ಮ ತಮ್ಮ ಹೆಂಡತಿಯರು, ಗ್ರಹಿಸಲು ಶಕ್ತರಾದ ಗಂಡುಹೆಣ್ಣು ಮಕ್ಕಳು ಇವರೊಡನೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ದೇವಸ್ಥಾನದಾಸರು, ಉಳಿದ ಜನರು ಇವರಲ್ಲಿ ದೇವರ ಧರ್ಮೋಪದೇಶದ ನಿವಿುತ್ತವಾಗಿ ಅನ್ಯದೇಶದವರ ಗೊಡವೆಯನ್ನು ತೊರೆದುಬಿಟ್ಟವರು ತಮ್ಮ ತಮ್ಮ ಹೆಂಡತಿಯರು, ಗ್ರಹಿಸಶಕ್ತರಾದ ಗಂಡು ಹೆಣ್ಣು ಮಕ್ಕಳು ಇವರೊಡನೆ ಬಂದು ಮುಖಂಡರಾದ ತಮ್ಮ ಸಹೋದರರನ್ನು ಕೂಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28-29 ಹೀಗೆ ಇವರೆಲ್ಲಾ ಯೆಹೋವನಿಗೆ ಒಂದು ವಿಶೇಷವಾದ ವಾಗ್ದಾನವನ್ನು ಮಾಡಿದರು. ತಾವು ವಾಗ್ದಾನವನ್ನು ನೆರವೇರಿಸದೆ ಹೋದಲ್ಲಿ ಸಂಕಟಬಾಧೆಗಳು ಪ್ರಾಪ್ತವಾಗುವಂತೆ ಯೆಹೋವನನ್ನು ಕೇಳಿಕೊಂಡರು. ಇವರೆಲ್ಲಾ ದೇವರ ನೀತಿನಿಯಮಗಳನ್ನು ಅನುಸರಿಸುತ್ತೇವೆಂದು ಮಾತುಕೊಟ್ಟರು. ಆ ನೀತಿನಿಯಮಗಳನ್ನು ಯೆಹೋವನು ತನ್ನ ಸೇವಕನಾದ ಮೋಶೆಯ ಮೂಲಕ ನಮಗೆ ಕೊಟ್ಟನು. ಮೇಲೆ ಕಾಣಿಸಿದ ಹೆಸರುಗಳಲ್ಲದೆ ಉಳಿದ ಜನರು, ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ದೇವಾಲಯದ ಸೇವಕರು ಮತ್ತು ಇಸ್ರೇಲಿನ ಜನರು ತಮ್ಮ ಸುತ್ತಲು ವಾಸಿಸುವ ಜನರಿಂದ ಪ್ರತ್ಯೇಕಿಸಲ್ಪಟ್ಟರು. ದೇವರ ವಿಧಿನಿಯಮಗಳನ್ನು ಅನುಸರಿಸುವುದಕ್ಕಾಗಿ ತಮ್ಮ ಹೆಂಡತಿ ಮಕ್ಕಳೊಂದಿಗೆ ಪ್ರತ್ಯೇಕಿಸಿಕೊಂಡರು. ದೇವರಿಗೆ ಮಾಡಿದ ಒಡಂಬಡಿಕೆಯನ್ನು ನಡೆಸಿಕೊಡಲು ಒಪ್ಪಿದರು ಮತ್ತು ಹಾಗೆ ಮಾಡದಿದ್ದಲ್ಲಿ ದೇವರಿಂದ ಸಂಕಟ ವ್ಯಾಧಿಗಳನ್ನು ಸ್ವೀಕರಿಸಲೂ ಒಪ್ಪಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಜನರಲ್ಲಿ ಉಳಿದವರಾದ ಯಾಜಕರೂ, ಲೇವಿಯರೂ, ದ್ವಾರಪಾಲಕರೂ, ಹಾಡುಗಾರರೂ, ದೇವಾಲಯದ ಸೇವಕರೂ, ದೇವರ ನಿಯಮದ ಪ್ರಕಾರವಾಗಿ ಆ ದೇಶಗಳ ಜನರೊಳಗಿಂದ ತಮ್ಮನ್ನು ಪ್ರತ್ಯೇಕಿಸಿಕೊಂಡವರೆಲ್ಲರೂ, ಅವರ ಹೆಂಡತಿಯರೂ, ಅವರ ಪುತ್ರರೂ, ಅವರ ಪುತ್ರಿಯರೂ, ತಿಳುವಳಿಕೆಯೂ ಗ್ರಹಿಕೆಯೂ ಉಳ್ಳವರೆಲ್ಲರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 10:28
16 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ ಸಂತಾನದವರು ಎಲ್ಲಾ ಅನ್ಯಕುಲದವರಿಂದ ತಮ್ಮನ್ನು ಬೇರ್ಪಡಿಸಿಕೊಂಡು, ಎದ್ದು ನಿಂತುಕೊಂಡು ತಮ್ಮ ಪಾಪಗಳನ್ನೂ, ತಮ್ಮ ಪೂರ್ವಿಕರ ಪಾಪಗಳನ್ನೂ ಆತನಿಗೆ ಅರಿಕೆಮಾಡಿದರು.


ಯೇಸು ಕ್ರಿಸ್ತನ ದಾಸನೂ, ಅಪೊಸ್ತಲನಾಗುವುದಕ್ಕೆ ಕರೆಯಲ್ಪಟ್ಟವನೂ, ದೇವರ ಸುವಾರ್ತೆಯನ್ನು ಸಾರುವುದಕ್ಕೆ ಪ್ರತ್ಯೇಕಿಸಲ್ಪಟ್ಟವನೂ ಆಗಿರುವ ಪೌಲನು,


‘ಯೆಹೋವನ ಜೀವದಾಣೆ’ ಎಂದು ಸತ್ಯ, ನ್ಯಾಯ ಮತ್ತು ಧರ್ಮಾನುಸಾರವಾಗಿ ನೀನು ಪ್ರಮಾಣ ಮಾಡಿದರೆ, ಜನಾಂಗಗಳು ಆತನಿಂದ ತಮ್ಮನ್ನು ಆಶೀರ್ವದಿಸಿಕೊಂಡು ಆತನಲ್ಲಿ ಹೆಚ್ಚಳಪಡುವರು” ಎಂದು ಹೇಳುತ್ತಾನೆ.


ನಿನ್ನ ಬಾಯಿಂದ ದುಡುಕಬೇಡ ಮತ್ತು ದೇವರ ಮುಂದೆ ಮಾತನಾಡಲು ನಿನ್ನ ಹೃದಯದಲ್ಲಿ ಆತುರಪಡಬೇಡ. ದೇವರು ಪರಲೋಕದಲ್ಲಿದ್ದಾನೆ. ನೀನು ಭೂಮಿಯಲ್ಲಿದ್ದಿ, ಆದಕಾರಣ ನಿನ್ನ ಮಾತುಗಳು ಕಡಿಮೆಯಾಗಿರಲಿ.


ಏಕೆಂದರೆ, ದೇವರು ಭೂಲೋಕಕ್ಕೆಲ್ಲಾ ರಾಜನು; ಆತನನ್ನು ಜ್ಞಾನಯುಕ್ತರಾಗಿ ಕೀರ್ತಿಸಿರಿ.


ಇಸ್ರಾಯೇಲರು ಈ ಧರ್ಮವಿಧಿಯನ್ನು ಕೇಳಿದೊಡನೆ ಎಲ್ಲಾ ಮಿಶ್ರಜಾತಿಯವರನ್ನು ತಮ್ಮ ಮಧ್ಯದಿಂದ ಬೇರ್ಪಡಿಸಿದರು.


ಯಾಜಕನಾದ ಎಜ್ರನು ಗ್ರಹಿಸಿಕೊಳ್ಳಲು ಶಕ್ತರಾದ ಸ್ತ್ರೀಪುರುಷರು ನೆರೆದಿದ್ದ ಸಮೂಹದವರ ಮುಂದೆ ಏಳನೆಯ ತಿಂಗಳಿನ ಮೊದಲ ದಿನದಲ್ಲಿ ಆ ಧರ್ಮಶಾಸ್ತ್ರವನ್ನು ತಂದನು.


ದೇವಸ್ಥಾನದ ಸೇವೆಗಾಗಿ ಇದ್ದ ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು ಮತ್ತು ಸಾಧಾರಣಜನರಲ್ಲಿ ಕೆಲವರು ಅವರವರಿಗೆ ನೇಮಕವಾದ ಪಟ್ಟಣಗಳಲ್ಲಿ ವಾಸಿಸಿದರು; ಬೇರೆ ಎಲ್ಲಾ ಇಸ್ರಾಯೇಲರು ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸಿದರು.


ನಿಮಗಾದರೂ, ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ, ಹಾಲೂ ಮತ್ತು ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ. ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಯೆಹೋವನು.


ದೇಶಾಂತರದಿಂದ ಬಂದ ಇಸ್ರಾಯೇಲರೂ ಇಸ್ರಾಯೇಲ್ ದೇವರಾದ ಯೆಹೋವನನ್ನು ಹುಡುಕುವುದಕ್ಕಾಗಿ ದೇಶನಿವಾಸಿಗಳ ಅಶುದ್ಧತ್ವವನ್ನು ತೊರೆದುಬಿಟ್ಟು, ಇವರೊಡನೆ ಕೂಡಿಕೊಂಡವರೆಲ್ಲರೂ ಪಸ್ಕಭೋಜನಮಾಡಿದರು.


ಮಲ್ಲೂಕ್, ಹಾರಿಮ್, ಬಾನ ಎಂಬುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು