Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 10:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ದೇಶನಿವಾಸಿಗಳು ಮಾರುವುದಕ್ಕೋಸ್ಕರ ತರುವ ಯಾವ ಸರಕುಗಳನ್ನೂ, ಧಾನ್ಯವನ್ನೂ, ಸಬ್ಬತ್ ಮೊದಲಾದ ಪರಿಶುದ್ಧ ದಿನಗಳಲ್ಲಿ ಅವುಗಳನ್ನು ನಾವು ಕೊಂಡುಕೊಳ್ಳುವುದಿಲ್ಲ. ಪ್ರತಿ ಏಳನೆಯ ವರ್ಷದ ಭೂಮಿಯ ಸಾಗುವಳಿಯನ್ನೂ ಇತರರು ಕೊಡಬೇಕಾದ ಸಾಲವನ್ನೂ ಮನ್ನಾ ಮಾಡಿಬಿಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ದೇಶನಿವಾಸಿಗಳು ಮಾರುವುದಕ್ಕೆ ತರುವ ಯಾವ ಸರಕುಗಳನ್ನೂ ಧಾನ್ಯವನ್ನೂ ಸಬ್ಬತ್‍ ಮೊದಲಾದ ಪರಿಶುದ್ಧ ದಿನಗಳಲ್ಲಿ ಕೊಂಡುಕೊಳ್ಳುವುದಿಲ್ಲ; ಪ್ರತಿಯೊಂದು ಏಳನೆಯ ವರ್ಷ ಭೂಮಿಯ ಸಾಗುವಳಿಯನ್ನೂ, ಇತರರು ಕೊಡಬೇಕಾದ ಸಾಲವನ್ನೂ ಬಿಟ್ಟುಬಿಡುತ್ತೇವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ದೇಶನಿವಾಸಿಗಳು ಮಾರುವದಕ್ಕೋಸ್ಕರ ತರುವ ಯಾವ ಸರಕುಗಳನ್ನೂ ಧಾನ್ಯವನ್ನೂ ಸಬ್ಬತ್ ಮೊದಲಾದ ಪರಿಶುದ್ಧ ದಿನಗಳಲ್ಲಿ ಕೊಂಡುಕೊಳ್ಳುವದಿಲ್ಲ; ಪ್ರತಿಯೊಂದು ಏಳನೆಯ ವರುಷ [ಭೂವಿುಯ ಸಾಗುವಳಿಯನ್ನೂ ] ಹೆರರು ಕೊಡಬೇಕಾದ ಸಾಲವನ್ನೂ ಬಿಟ್ಟು ಬಿಡುತ್ತೇವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ಸಬ್ಬತ್ ದಿನದಲ್ಲಿ ಯಾವ ಕೆಲಸವನ್ನೂ ಮಾಡುವುದಿಲ್ಲವೆಂದು ಪ್ರಮಾಣಮಾಡುತ್ತೇವೆ. ನಮ್ಮ ಸುತ್ತಮುತ್ತಲಿನ ಜನರು ಸಬ್ಬತ್ ದಿನದಲ್ಲಿ ಮಾರಲು ದವಸಧಾನ್ಯವನ್ನಾಗಲಿ ಬೇರೆ ವಸ್ತುಗಳನ್ನಾಗಲಿ ತಂದರೆ ನಾವು ಸಬ್ಬತ್ ದಿನದಲ್ಲಿ ಮತ್ತು ಇತರ ಯಾವುದೇ ಹಬ್ಬದ ದಿನದಲ್ಲಿ ಅವುಗಳನ್ನು ಕೊಂಡುಕೊಳ್ಳುವುದಿಲ್ಲ. ಪ್ರತಿ ಏಳನೆಯ ವರ್ಷ ನಾವು ನೆಡುವುದೂ ಇಲ್ಲ. ಹೊಲದಲ್ಲಿ ಕೆಲಸ ಮಾಡುವುದೂ ಇಲ್ಲ. ನಮಗೆ ಬೇರೆಯವರು ಕೊಡಬೇಕಾಗಿರುವ ಸಾಲವನ್ನು ಏಳನೆಯ ವರ್ಷದಲ್ಲಿ ವಜಾ ಮಾಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಬೇರೆ ದೇಶದ ಜನರು ಸಬ್ಬತ್ ದಿನದಲ್ಲಿ ಸರಕುಗಳನ್ನೂ ಧಾನ್ಯವನ್ನೂ ಮಾರಲು ತೆಗೆದುಕೊಂಡು ಬಂದರೆ, ನಾವು ಅವುಗಳನ್ನು ಸಬ್ಬತ್ ದಿನದಲ್ಲಾದರೂ, ಪರಿಶುದ್ಧ ದಿನದಲ್ಲಾದರೂ ಅವರಿಂದ ಕೊಂಡುಕೊಳ್ಳುವುದಿಲ್ಲ. ಮತ್ತು ನಾವು ಏಳನೆಯ ವರ್ಷದಲ್ಲಿ ಭೂಮಿ ಕೆಲಸ ಮಾಡುವುದನ್ನು ಬಿಡುತ್ತೇವೆ ಮತ್ತು ಎಲ್ಲಾ ಸಾಲಗಳನ್ನು ರದ್ದುಗೊಳಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 10:31
24 ತಿಳಿವುಗಳ ಹೋಲಿಕೆ  

“‘ಆರು ದಿನಗಳಲ್ಲಿ ನೀವು ಕೆಲಸವನ್ನು ಮಾಡಬೇಕು; ಏಳನೆಯ ದಿನ ಯಾವ ಕೆಲಸವನ್ನು ಮಾಡಬಾರದು, ಅದು ಸಬ್ಬತ್ ದಿನವಾಗಿದೆ. ಅದರಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನದಲ್ಲಿ ಯಾವ ವಿಧವಾದ ಕೆಲಸವನ್ನು ಮಾಡಬಾರದು. ನಿಮ್ಮ ಎಲ್ಲಾ ವಾಸಮಾಡುವ ಸ್ಥಳಗಳಲ್ಲಿ ಅದು ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ.


ಆದರೆ ಏಳನೆಯ ದಿನವು ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿಯ ಸಬ್ಬತ್ ದಿನವಾಗಿದೆ. ಆ ದಿನದಲ್ಲಿ ನೀನು ಯಾವ ಕೆಲಸವನ್ನು ಮಾಡಬಾರದು. ನಿನ್ನ ಗಂಡುಮಕ್ಕಳು, ಹೆಣ್ಣುಮಕ್ಕಳು, ಗಂಡಾಳು, ಹೆಣ್ಣಾಳು, ಪಶುಪ್ರಾಣಿಗಳು ನಿನ್ನ ಊರಿನಲ್ಲಿರುವ ಅನ್ಯದೇಶದವನು ಸಹ ಯಾವ ಕೆಲಸವನ್ನೂ ಮಾಡಬಾರದು.


ನೋಡಿರಿ, ಕೇಡಿನ ಬಂಧನಗಳನ್ನು ಬಿಚ್ಚುವುದು, ನೊಗಹೊರಿಸುವ ಹುರಿಯನ್ನು ಕಳಚುವುದು, ಜಜ್ಜಿ ಹೋದವರನ್ನು ಬಿಡುಗಡೆ ಮಾಡುವುದು, ನೊಗಗಳನ್ನೆಲ್ಲಾ ಮುರಿಯುವುದು,


ಈ ಪ್ರಕಾರ ಯೆರೆಮೀಯನ ಮುಖಾಂತರ ಹೇಳಿಸಿದ ಯೆಹೋವನ ಮಾತು ನೆರವೇರಿತು; ದೇಶವು ತನ್ನ ಸಬ್ಬತ್ ಕಾಲವನ್ನು ಅನುಭವಿಸುವವರೆಗೂ ಸಮಾಧಾನವಾಗಿತ್ತಷ್ಟೇ. ದೇಶವು ಎಪ್ಪತ್ತು ವರ್ಷಗಳು ಪೂರ್ಣವಾಗುವವರೆಗೂ ಅದು ಶೂನ್ಯವಾಗಿದ್ದ ಸಬ್ಬತ್ತನ್ನು ಅನುಭವಿಸಿತು.


ಆ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕೆಂಬುದಾಗಿ ಪ್ರಕಟಪಡಿಸಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ.


“ಸ್ವದೇಶಸ್ಥರಾದ ನೀವೂ ಮತ್ತು ನಿಮ್ಮಲ್ಲಿ ವಾಸವಾಗಿರುವ ಅನ್ಯದೇಶದವರು, ಎಲ್ಲರೂ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸಕಲ ವಿಧವಾದ ಕೆಲಸಗಳನ್ನು ಬಿಟ್ಟು ಉಪವಾಸಮಾಡಿ ನಿಮ್ಮ ಆತ್ಮಗಳನ್ನು ಕುಂದಿಸಿಕೊಳ್ಳಬೇಕು. ಇದು ನಿಮಗೆ ಶಾಶ್ವತವಾದ ನಿಯಮ.


ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು. ಏಳನೆಯ ದಿನದಲ್ಲಿಯೂ ದೇವಾರಾಧನೆಗಾಗಿ ಸಭೆ ಸೇರಬೇಕು. ಈ ಎರಡು ದಿನಗಳಲ್ಲಿ ಯಾವ ಕೆಲಸವನ್ನು ಮಾಡಕೂಡದು. ಊಟಕ್ಕೆ ಬೇಕಾದದ್ದನ್ನು ಮಾತ್ರ ಮಾಡಬಹುದೇ ಹೊರತು ಬೇರೆ ಯಾವ ಕೆಲಸವನ್ನು ಮಾಡಬಾರದು.


ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.


ಹೀಗಿರುವುದರಿಂದ, ಅನ್ನಪಾನಗಳ ವಿಷಯದಲ್ಲಿಯೂ ಅಥವಾ ಹಬ್ಬ ಅಮಾವಾಸ್ಯೆ ಹಾಗೂ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮ್ಮನ್ನು ದೋಷಿಗಳೆಂದು ಯಾರೂ ನಿರ್ಣಯಿಸದಿರಲಿ.


ನಮಗೆ ತಪ್ಪು ಮಾಡಿದವರನ್ನು ನಾವು ಕ್ಷಮಿಸಿದಂತೆ ನಮ್ಮ ತಪ್ಪುಗಳನ್ನು ಕ್ಷಮಿಸು.


ಅದಲ್ಲದೆ ನೀವು ನಿಮ್ಮ ಪುತ್ರರಿಗಾಗಿ ಅವರಲ್ಲಿ ಪುತ್ರಿಯರನ್ನು ತೆಗೆದುಕೊಳ್ಳುವುದಕ್ಕೆ ಅದು ಮಾರ್ಗವಾಗುವುದು; ತರುವಾಯ ಆ ಸೊಸೆಯರು ತವರುಮನೆಯ ದೇವತೆಗಳನ್ನು ಪೂಜಿಸುವವರಾಗಿ ನಿಮ್ಮ ಮಕ್ಕಳನ್ನೂ ಅನ್ಯದೇವರುಗಳ ಪೂಜೆ ಎಂಬ ವ್ಯಭಿಚಾರಕ್ಕೆ ಎಳೆದಾರು, ಎಚ್ಚರ.


ಅದೇ ಕಾಲದಲ್ಲಿ ನಾನು ಅಷ್ಡೋದ್, ಅಮ್ಮೋನಿಯ, ಮೋವಾಬ್ ಸ್ತ್ರೀಯರನ್ನು ಮದುವೆಮಾಡಿಕೊಂಡ ಯೆಹೂದ್ಯರನ್ನು ಕುರಿತು ವಿಚಾರಣೆ ಮಾಡಿದೆನು.


ಹೀಗಿರಲಾಗಿ ನೀವೂ ಅನ್ಯಸ್ತ್ರೀಯರನ್ನು ಮದುವೆಮಾಡಿಕೊಂಡು ಅದೇ ಘೋರವಾದ ದುಷ್ಟತ್ವವನ್ನು ಮಾಡಿ ದೇವರಿಗೆ ದ್ರೋಹಿಗಳಾಗುವುದನ್ನು ನಾವು ಒಪ್ಪಿಕೊಳ್ಳಬೇಕೋ? ಎಂದು ಅವರನ್ನು ಗದರಿಸಿ “ಅವರ ಮಕ್ಕಳಿಗೆ ಹೆಣ್ಣನ್ನು ಕೊಡಬಾರದು, ನಿಮಗಾಗಲಿ ನಿಮ್ಮ ಮಕ್ಕಳಿಗಾಗಲಿ ಅವರಿಂದ ತರಲೂಬಾರದು” ಎಂಬ ಧರ್ಮವಿಧಿಯನ್ನು ಕೈಕೊಳ್ಳುವುದಾಗಿ ದೇವರ ಹೆಸರಿನಲ್ಲಿ ಪ್ರಮಾಣ ಮಾಡಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು