Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 10:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ನಾವು ದೇವರಿಗಾಗಿ ಪ್ರತ್ಯೇಕಿಸಿ ಇಡತಕ್ಕ ಪ್ರಥಮಫಲದ ಹಿಟ್ಟು, ಹಣ್ಣುಹಂಪಲು, ದ್ರಾಕ್ಷಾರಸ, ಎಣ್ಣೆ ಮೊದಲಾದವುಗಳನ್ನು ಯಾಜಕ ಸೇವೆಗೋಸ್ಕರ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದು ಇಡುವೆವು. ನಮ್ಮ ಭೂಮಿಯ ಹುಟ್ಟುವಳಿಯ ದಶಮಾಂಶವು ಲೇವಿಯರದಾಗಿರುತ್ತದೆ. ಲೇವಿಯರು ತಾವೇ ಬಂದು, ನಮ್ಮ ಸಾಗುವಳಿಯ ಊರುಗಳಲ್ಲಿ ಅದನ್ನು ಶೇಖರಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ನಾವು ದೇವರಿಗಾಗಿ ಪ್ರತ್ಯೇಕಿಸಿಡತಕ್ಕ ಪ್ರಥಮ ಫಲದ ಹಿಟ್ಟು, ಹಣ್ಣುಹಂಪಲು, ದ್ರಾಕ್ಷಾರಸ, ಎಣ್ಣೆ, ಮೊದಲಾದವುಗಳನ್ನು ಯಾಜಕರಿಗಾಗಿ ನಮ್ಮ ದೇವಾಲಯದ ಕೊಠಡಿಗಳಲ್ಲಿ ತಂದಿಡುತ್ತೇವೆ; ನಮ್ಮ ಭೂಮಿಯ ಆದಾಯದ ದಶಮಾಂಶವು ಲೇವಿಯರದಾಗಬೇಕು; ಲೇವಿಯರು ತಾವೇ ಬಂದು ನಮ್ಮ ಸಾಗುವಳಿಯ ಊರುಗಳಲ್ಲಿ ಅದನ್ನು ಕೂಡಿಸಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ನಾವು ದೇವರಿಗಾಗಿ ಪ್ರತ್ಯೇಕಿಸಿಡತಕ್ಕ ಪ್ರಥಮಫಲದ ಹಿಟ್ಟು, ಹಣ್ಣುಹಂಪಲು, ದ್ರಾಕ್ಷಾರಸ, ಎಣ್ಣೆ ಮೊದಲಾದವುಗಳನ್ನು ಯಾಜಕರಿಗೋಸ್ಕರ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದಿಡುವೆವು; ನಮ್ಮ ಭೂವಿುಯ ಹುಟ್ಟುವಳಿಯ ದಶಮಾಂಶವು ಲೇವಿಯರದಾಗಬೇಕು; ಲೇವಿಯರು ತಾವೇ ಬಂದು ನಮ್ಮ ಸಾಗುವಳಿಯ ಊರುಗಳಲ್ಲಿ ಅದನ್ನು ಕೂಡಿಸಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 “ಪ್ರಥಮ ಫಲದ ಹಿಟ್ಟನ್ನು, ಪ್ರಥಮ ಫಲದ ಹಣ್ಣುಗಳನ್ನು, ಹೊಸ ದ್ರಾಕ್ಷಾರಸವನ್ನು, ಹೊಸ ಎಣ್ಣೆಯನ್ನು ಯಾಜಕರಿಗೋಸ್ಕರವಾಗಿ ದೇವಾಲಯದ ಉಗ್ರಾಣಗಳಲ್ಲಿ ತಂದಿಡುವೆವು. ನಮ್ಮ ಬೆಳೆಗಳಲ್ಲಿ ಹತ್ತನೆಯ ಒಂದು ಭಾಗವನ್ನು ಲೇವಿಯರಿಗೆ ತಂದುಕೊಡುವೆವು. ನಾವು ಕೆಲಸ ಮಾಡುತ್ತಿರುವ ಊರುಗಳಿಂದ ಲೇವಿಯರು ಇವುಗಳನ್ನು ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ನಮ್ಮ ಹಿಟ್ಟಿನಲ್ಲಿ ಮೊದಲಿನ ಪಾಲನ್ನು ನಮ್ಮ ಕಾಣಿಕೆಗಳನ್ನೂ, ಸಕಲ ಮರಗಳ ಫಲವನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ಯಾಜಕರ ಬಳಿಗೆ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದಿಡುತ್ತೇವೆ; ಲೇವಿಯರು ಒಕ್ಕಲುತನವಿರುವ ಪಟ್ಟಣಗಳಿಂದ ಹತ್ತರಲ್ಲೊಂದು ಪಾಲನ್ನು ಹೊಂದುವ ಹಾಗೆ ನಮ್ಮ ಭೂಮಿಯ ಹತ್ತರಲ್ಲೊಂದು ಪಾಲನ್ನು ಲೇವಿಯರಿಗೆ ತರುವುದಕ್ಕೂ ಪ್ರಮಾಣ ಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 10:37
23 ತಿಳಿವುಗಳ ಹೋಲಿಕೆ  

ನಿಮ್ಮ ನಿವಾಸಗಳಿಂದ ತಂದ ಹಿಟ್ಟಿನಲ್ಲಿ ಆರು ಸೇರು ಹಿಟ್ಟಿನಿಂದ ಎರಡು ನೈವೇದ್ಯದ ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋದಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬೇಕು.


“ಲೇವಿಯರು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡುವುದಕ್ಕಾಗಿ ಇಸ್ರಾಯೇಲರಿಂದ ಸಕಲ ಪದಾರ್ಥಗಳ ಹತ್ತನೆಯ ಪಾಲನ್ನು ಗೊತ್ತುಮಾಡಿ ಕೊಟ್ಟಿದ್ದೇನೆ.


ಕೊಠಡಿಯನ್ನು ಶುದ್ಧಮಾಡುವುದಕ್ಕಾಗಿ ಅಪ್ಪಣೆಕೊಟ್ಟು ಅದು ಶುದ್ಧವಾದ ಮೇಲೆ ದೇವಾಲಯದ ಪಾತ್ರೆ, ನೈವೇದ್ಯದ್ರವ್ಯ, ಧೂಪ ಇವುಗಳನ್ನು ಪುನಃ ಆ ಕೊಠಡಿಯಲ್ಲಿ ಇಡಿಸಿದೆನು.


ನೈವೇದ್ಯದ್ರವ್ಯ, ಧೂಪ, ಪಾತ್ರೆ ಇವುಗಳನ್ನೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ, ದಶಮಾಂಶವನ್ನೂ, ಲೇವಿಯರಿಗೆ, ಗಾಯಕರಿಗೆ, ದ್ವಾರಪಾಲಕರಿಗೆ ಸಲ್ಲತಕ್ಕ ಪದಾರ್ಥಗಳನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸತಕ್ಕ ಪದಾರ್ಥಗಳನ್ನೂ, ಇಡುವುದಕ್ಕಾಗಿ ಉಪಯೋಗಿಸುತ್ತಿದ್ದ ಕೊಠಡಿಯನ್ನು ಟೋಬೀಯನಿಗೋಸ್ಕರ ಸಿದ್ಧಮಾಡಿಸಿ ಕೊಟ್ಟಿದ್ದನು.


ನಿಮ್ಮಲಿರುವ ಪ್ರತಿಯೊಬ್ಬನೂ ಆತನು ದಯಪಾಲಿಸಿದ ಹೊಲದ ಎಲ್ಲಾ ಬೆಳೆಗಳಲ್ಲಿ ಪ್ರಥಮಫಲಗಳನ್ನು ಪುಟ್ಟಿಯಲ್ಲಿಟ್ಟು, ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆದುಕೊಳ್ಳುವ ಸ್ಥಳಕ್ಕೆ ತರಬೇಕು.


ಧಾನ್ಯ, ದ್ರಾಕ್ಷಾರಸ ಮತ್ತು ಎಣ್ಣೆ ಇವುಗಳ ಪ್ರಥಮಫಲಗಳನ್ನು ಹಾಗೂ ಮೊದಲನೆಯ ಸಾರಿ ಕತ್ತರಿಸುವ ಕುರಿಗಳ ಉಣ್ಣೆಯನ್ನೂ ಅವರಿಗೆ ಕೊಡಬೇಕು.


ನನ್ನ ಆಲಯವು ಆಹಾರದ ಕೊರತೆಯಿಲ್ಲದಂತೆ ನೀವು ದಶಮಾಂಶವನ್ನು ಯಾವಾಗಲೂ ಭಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳಹಿಡಿಯಲಾಗದಷ್ಟು ಸುವರಗಳನ್ನು ಸುರಿಯುವೆನೋ ಇಲ್ಲವೋ ಎಂದು ಯೆಹೋವನಾದ ನನ್ನನ್ನು ಹೀಗೆ ಪರೀಕ್ಷಿಸಿರಿ.


“ನರಮನುಷ್ಯನು ದೇವರಿಂದ ಕದ್ದುಕೊಳ್ಳಬಹುದೇ? ನೀವೋ ನನ್ನಿಂದ ಕದ್ದುಕೊಳ್ಳುತ್ತಿದ್ದೀರಿ. ‘ನಿನ್ನಿಂದ ಏನು ಕದ್ದುಕೊಂಡಿದ್ದೇವೆ?’ ಎಂದು ಕೇಳುತ್ತೀರೋ. ದಶಮಾಂಶವನ್ನು, ನನಗೋಸ್ಕರ ಪ್ರತ್ಯೇಕಿಸಬೇಕಾದ ಪದಾರ್ಥ, ಇವುಗಳನ್ನೇ.


ಯೆಹೂದದ ಪಟ್ಟಣಗಳಲ್ಲಿ ವಾಸಿಸುತ್ತಿರುವ ಇಸ್ರಾಯೇಲರೂ ಯೆಹೂದ್ಯರೂ ಕುರಿದನ ಹಿಂಡುಗಳಲ್ಲಿ ದಶಮಾಂಶವನ್ನು ಕೊಟ್ಟದ್ದಲ್ಲದೆ, ದೇವರಾದ ಯೆಹೋವನಿಗೆ ಸಮರ್ಪಣೆಯಾಗತಕ್ಕ ಪರಿಶುದ್ಧ ದ್ರವ್ಯಗಳಲ್ಲಿಯೂ ದಶಮಾಂಶವನ್ನು ತಂದು ರಾಶಿಮಾಡಿದರು.


ಕಣಕದಲ್ಲಿ ಪ್ರಥಮಫಲವನ್ನು ದೇವರಿಗರ್ಪಿಸಿದ ಮೇಲೆ ಕಣಕವೆಲ್ಲಾ ಪವಿತ್ರವಾಯಿತು. ಬೇರು ಶುದ್ಧವಾಗಿದ್ದ ಮೇಲೆ ಕೊಂಬೆಗಳೂ ಹಾಗೆಯೇ.


ಪ್ರತಿವರ್ಷದ ನಿಮ್ಮ ಹೊಲದ ಬೆಳೆಯಲ್ಲಿ ದಶಮ ಭಾಗವನ್ನು ಪ್ರತ್ಯೇಕಿಸಬೇಕು.


ಇದಲ್ಲದೆ, ಲೇವಿಯರಿಗೆ ಸಲ್ಲತಕ್ಕ ಭಾಗಗಳು ಅವರಿಗೆ ಸಿಕ್ಕಲಿಲ್ಲವೆಂದೂ, ಆರಾಧನೆ ನಡೆಸತಕ್ಕ ಲೇವಿಯರೂ, ಗಾಯಕರೂ ತಮ್ಮ ತಮ್ಮ ಭೂಸ್ವಾಸ್ಥ್ಯಗಳಿಗೆ ಹಿಂತಿರುಗಿ ಹೋಗಿಬಿಟ್ಟರೆಂದೂ ನನಗೆ ಗೊತ್ತಾಯಿತು.


ಆಗ ಎಲ್ಲಾ ಯೆಹೂದ್ಯರು ತಮ್ಮ ತಮ್ಮ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಲ್ಲಿ ದಶಮಾಂಶವನ್ನು ತಂದು ಭಂಡಾರಗಳಲ್ಲಿ ಹಾಕಿದರು.


“ಇಸ್ರಾಯೇಲರಲ್ಲಿ ಹುಟ್ಟಿರುವ ಪ್ರತಿಯೊಂದು ಚೊಚ್ಚಲ ಗಂಡನ್ನು ನನಗಾಗಿ ಪ್ರತಿಷ್ಠಿಸಬೇಕು. ಮನುಷ್ಯರಲ್ಲಾಗಲೀ, ಪಶುಗಳಲ್ಲಾಗಲೀ ಹುಟ್ಟುವ ಪ್ರಥಮ ಗರ್ಭಫಲವು ನನ್ನದಾಗಿದೆ” ಎಂದು ಹೇಳಿದನು.


ನಿಮ್ಮಲ್ಲಿಯೂ ನಿಮ್ಮ ಪಶುಗಳಲ್ಲಿಯೂ ಹುಟ್ಟುವ ಪ್ರಥಮ ಗರ್ಭಫಲವು ಗಂಡಾದ ಪಕ್ಷಕ್ಕೆ ಅದು ಯೆಹೋವನ ಭಾಗವೆಂದು ತಿಳಿದುಕೊಂಡು ಅದನ್ನು ಆತನಿಗೆ ಸಮರ್ಪಿಸಬೇಕು.


ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ ಅವರು ಯೆಹೋವನಿಗೆ ಸಮರ್ಪಿಸುವ ಸಕಲಪ್ರಾಣಿಗಳಲ್ಲಿ ಚೊಚ್ಚಲಾದದ್ದು ನಿನಗೆ ಸಲ್ಲಬೇಕು. ಆದರೆ ಮನುಷ್ಯರ ಚೊಚ್ಚಲಮಕ್ಕಳಿಗೂ, ಅಪವಿತ್ರವಾದ ಪಶುಗಳ ಮರಿಗಳಿಗೂ ಬದಲಾಗಿ ನೀನು ಈಡನ್ನು ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡಬೇಕು.


ಅವುಗಳ ಮಾಂಸವು ಸಮಾಧಾನಯಜ್ಞಗಳಲ್ಲಿ ನೈವೇದ್ಯವಾಗಿ ನಿವಾಳಿಸುವ ಎದೆಯ ಭಾಗದಂತೆಯೂ, ಬಲತೊಡೆಯಂತೆಯೂ ನಿನಗೇ ಸಲ್ಲಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು