Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 11:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಪರಿಶುದ್ಧ ನಗರದಲ್ಲಿದ್ದ ಎಲ್ಲಾ ಲೇವಿಯರು ಒಟ್ಟು ಇನ್ನೂರ ಎಂಭತ್ತನಾಲ್ಕು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಪರಿಶುದ್ಧ ನಗರದಲ್ಲಿದ್ದ ಎಲ್ಲ ಲೇವಿಯರು ಇನ್ನೂರ ಎಂಬತ್ತನಾಲ್ಕುಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಪರಿಶುದ್ಧ ನಗರದಲ್ಲಿದ್ದ ಎಲ್ಲಾ ಲೇವಿಯರು ಇನ್ನೂರೆಂಭತ್ತನಾಲ್ಕು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಹೀಗೆ ಒಟ್ಟು ಇನ್ನೂರ ಎಂಭತ್ತ ನಾಲ್ಕು ಮಂದಿ ಲೇವಿಯರು ಪರಿಶುದ್ಧ ನಗರದಲ್ಲಿ ವಾಸಿಸಲು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಪರಿಶುದ್ಧ ಪಟ್ಟಣದಲ್ಲಿರುವ ಲೇವಿಯರೆಲ್ಲಾ 284 ಮಂದಿಯಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 11:18
10 ತಿಳಿವುಗಳ ಹೋಲಿಕೆ  

ಇಸ್ರಾಯೇಲರ ಪ್ರಮುಖರು ಮಾತ್ರ ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದರು. ಉಳಿದ ಜನರೊಳಗೆ ಹತ್ತು ಜನರಲ್ಲಿ ಒಂಭತ್ತು ಜನ ತಮ್ಮ ತಮ್ಮ ಊರುಗಳಲ್ಲಿ ವಾಸಮಾಡುತ್ತಿದ್ದರು, ಒಬ್ಬನು ಮಾತ್ರ ಪವಿತ್ರನಗರವಾಗಿರುವ ಯೆರೂಸಲೇಮಿನಲ್ಲಿ ವಾಸಮಾಡಬೇಕು ಎಂದು ಚೀಟು ಹಾಕಿ ಅವನನ್ನು ಗೊತ್ತು ಮಾಡುತ್ತಿದ್ದರು.


ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮ್ ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾಗಿರುವ ಮದಲಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು.


ಆಲಯದ ಹೊರಗಿರುವ ಹೊರಾಂಗಣವನ್ನು ಅಳೆಯದೆ ಬಿಟ್ಟುಬಿಡು, ಅದು ಅನ್ಯಜನರಿಗಾಗಿ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಲವತ್ತೆರಡು ತಿಂಗಳು ತುಳಿದಾಡುವರು.


ಮತ್ತು ಆತನ ಪುನರುತ್ಥಾನವಾದ ಮೇಲೆ ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಗೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.


“ಪ್ರವಾದಿಯಾದ ದಾನಿಯೇಲನು ಹೇಳಿದ ಹಾಗೆ ವಿನಾಶಕಾರಕ, ವಿಕಾರ ವಸ್ತು ಪವಿತ್ರ ಸ್ಥಾನದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ)


ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ಆದರೆ ರಾಜ್ಯವನ್ನೆಲ್ಲಾ ಕಿತ್ತುಕೊಳ್ಳುವುದಿಲ್ಲ. ನನ್ನ ಸೇವಕನಾದ ದಾವೀದನಿಗೋಸ್ಕರವೂ ನಾನು ಆರಿಸಿಕೊಂಡ ಯೆರೂಸಲೇಮ್ ಪಟ್ಟಣಕ್ಕೋಸ್ಕರವೂ ನಿನ್ನ ಮಗನಿಗೆ ಒಂದು ಕುಲವನ್ನು ಉಳಿಸುವೆನು” ಎಂದು ಹೇಳಿದನು.


ಆಗ ಸೈತಾನನು ಯೇಸುವನ್ನು ಪರಿಶುದ್ಧ ಪಟ್ಟಣಕ್ಕೆ ಕರೆದುಕೊಂಡು ಹೋಗಿ ದೇವಾಲಯದ ಗೋಪುರದ ಮೇಲೆ ನಿಲ್ಲಿಸಿ


ಮೀಕನ ಮಗನೂ, ಜಬ್ದೀಯನ ಮೊಮ್ಮಗನೂ, ಆಸಾಫನ ಮರಿಮಗನೂ, ಪ್ರಾರ್ಥನೆಯ ಸಮಯದಲ್ಲಿ ಕೃತಜ್ಞತಾಸ್ತುತಿಯನ್ನು ಆರಂಭಿಸುತ್ತಾ ಆರಾಧನೆಯಲ್ಲಿ ಜನರನ್ನು ನಡೆಸುತ್ತಿದ್ದ ಮತ್ತನ್ಯ, ತನ್ನ ಬಂಧುಗಳಲ್ಲಿ ದ್ವಿತೀಯ ಸ್ಥಾನದವನಾದ ಬಕ್ಬುಕ್ಯ, ಶಮ್ಮೂವನ ಮಗನೂ, ಗಾಲಾಲನ ಮೊಮ್ಮಗನೂ, ಯೆದೂತೂನನ ಮರಿಮಗನೂ ಆದ ಅಬ್ದ ಎಂಬುವವರು,


ದ್ವಾರಪಾಲಕರಲ್ಲಿ; ಅಕ್ಕೂಬ್, ಟಲ್ಮೋನರೂ ಮತ್ತು ಬಾಗಿಲುಗಳನ್ನು ಕಾಯುತ್ತಿದ್ದ ಇವರ ಬಂಧುಗಳೂ ಒಟ್ಟು ನೂರ ಎಪ್ಪತ್ತೆರಡು ಮಂದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು