Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 12:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಹಷಬ್ಯ, ಶೇರೇಬ್ಯ, ಯೇಷೂವ, ಬಿನ್ನೂಯ್, ಕದ್ಮೀಯೇಲ್ ಇವರು. ದೇವರ ಮನುಷ್ಯನಾದ ದಾವೀದನ ಅಪ್ಪಣೆಯ ಮೇರೆಗೆ ಇವರೂ ಇವರ ಸಹೋದರರೂ ಸರದಿಗೆ ಎರಡೆರಡು ವರ್ಗಗಳಾಗಿ ಪರಸ್ಪರ ಹಾಡುತ್ತಾ, ಕೀರ್ತನೆಯನ್ನೂ ಕೃತಜ್ಞತಾಸ್ತುತಿಯನ್ನೂ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಇವರ ಕಾಲದಲ್ಲಿದ್ದವರು - ಹಷಬ್ಯ, ಶೇರೇಬ್ಯ, ಯೇಷೂವ, ಬಿನ್ನೂಯ್, ಕದ್ಮೀಯೇಲ್ ಇವರು.ದೈವಪುರುಷ ದಾವೀದನ ಅಪ್ಪಣೆಯ ಮೇರೆಗೆ ಇವರೂ ಇವರ ಸಹೋದರರೂ ಸರದಿಗೆ ಎರಡೆರಡು ವರ್ಗಗಳಾಗಿ ಪರಸ್ಪರ ಹಾಡುತ್ತಾ ಕೀರ್ತನೆಯನ್ನೂ ಕೃತಜ್ಞತಾಸ್ತುತಿಯನ್ನೂ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಇವರ ಕಾಲದಲ್ಲಿದ್ದವರು - ಹಷಬ್ಯ, ಶೇರೇಬ್ಯ, ಯೇಷೂವ, ಬಿನ್ನೂಯ್, ಕದ್ಮೀಯೇಲ್ ಇವರು. (ದೇವರ ಮನುಷ್ಯನಾದ ದಾವೀದನ ಅಪ್ಪಣೆಯ ಮೇರೆಗೆ ಇವರೂ ಇವರ ಸಹೋದರರೂ ಸರತಿಗೆ ಎರಡೆರಡು ವರ್ಗಗಳಾಗಿ ಪರಸ್ಪರ ಹಾಡುತ್ತಾ ಕೀರ್ತನೆಯನ್ನೂ ಕೃತಜ್ಞತಾಸ್ತುತಿಯನ್ನೂ ಮಾಡುತ್ತಿದ್ದರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಬಾಗಿಲುಗಳ ಬಳಿಯಲ್ಲಿದ್ದ ಉಗ್ರಾಣದ ಕೋಣಿಗಳನ್ನು ಕಾಯುತ್ತಿದ್ದವರು ಯಾರೆಂದರೆ: ಮತ್ತನ್ಯ, ಬಕ್ಬುಕ್ಯ, ಓಬದ್ಯ, ಮೆಷುಲ್ಲಾಮ್, ಟಲ್ಮೋನ್ ಮತ್ತು ಅಕ್ಕೂಬ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಮತ್ತನ್ಯನೂ, ಬಕ್ಬುಕ್ಯನೂ, ಓಬದ್ಯನೂ, ಮೆಷುಲ್ಲಾಮನೂ, ಟಲ್ಮೋನನೂ, ಅಕ್ಕೂಬನೂ ಬೊಕ್ಕಸಗಳ ಬಾಗಿಲುಗಳನ್ನು ಕಾಯುವವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 12:25
10 ತಿಳಿವುಗಳ ಹೋಲಿಕೆ  

ಬಳಿಕ ಅವನು ಸಿಂಹದಂತೆ ಕೂಗಿ, “ಕರ್ತನೇ, ಪ್ರತಿ ದಿನವು ನಾನು ಕಾವಲಿನ ಬುರುಜಿನ ಮೇಲೆ ನಿಂತಿದ್ದೇನೆ, ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ.


ಓಬೇದೆದೋಮನಿಗೆ ದಕ್ಷಿಣದ ಬಾಗಿಲು, ಅವನ ಮಕ್ಕಳಿಗೆ ಉಗ್ರಾಣ ಮಂದಿರವೂ,


ಈ ದ್ವಾರಪಾಲಕರ ವರ್ಗಗಳು ಪ್ರಧಾನಪುರುಷರು ತಮ್ಮ ಕುಲಬಂಧುಗಳಂತೆ ಯೆಹೋವನ ಆಲಯದಲ್ಲಿ ಸೇವೆಮಾಡುವವರಾಗಿದ್ದರು.


ಹೀಗೆ ಅವರು ತಮ್ಮ ಸಹೋದರನಾದ ಆರೋನನ ಸಹಾಯಕರಾಗಿದ್ದು ದೇವದರ್ಶನದ ಗುಡಾರವನ್ನೂ, ಪರಿಶುದ್ಧವಾದ ಎಲ್ಲಾ ವಸ್ತುಗಳನ್ನು ನೋಡಿಕೊಳ್ಳುವುದೇ ಯೆಹೋವನ ಆಲಯದಲ್ಲಿ ಮಾಡತಕ್ಕ ಕರ್ತವ್ಯಗಳು.


ಊರಬಾಗಿಲಿಗೆ ಬಂದು ಕಾವಲುಗಾರರಿಗೆ, “ನಾವು ಅರಾಮ್ಯರ ಪಾಳೆಯಕ್ಕೆ ಹೋಗಿದ್ದೆವು. ಅಲ್ಲಿ ನಮಗೆ ಯಾರೂ ಕಾಣಿಸಲಿಲ್ಲ, ಮನುಷ್ಯರ ಶಬ್ದವೇ ಕೇಳಿಸಲಿಲ್ಲ. ಕತ್ತೆ ಕುದುರೆಗಳನ್ನು ಅಲ್ಲಲ್ಲಿ ಕಟ್ಟಿಹಾಕಲಾಗಿತ್ತು ಡೇರೆಗಳು ಇದ್ದ ಹಾಗೆಯೇ ಇವೆ” ಎಂದು ಕೂಗಿ ಹೇಳಿದರು.


ಲೇವಿಯರಲ್ಲಿ ಪ್ರತಿದಿನವೂ ಪೂರ್ವದಿಕ್ಕಿನ ಬಾಗಿಲನ್ನು ಆರು ಜನರು, ದಕ್ಷಿಣ ಬಾಗಿಲನ್ನು ನಾಲ್ಕು ಜನರು, ಉಗ್ರಾಣ ಮಂದಿರದ ಎರಡು ಬಾಗಿಲನ್ನು ಇಬ್ಬಿಬ್ಬರು,


ಇದಲ್ಲದೆ, ತನ್ನ ತಂದೆಯಾದ ದಾವೀದನ ಆಜ್ಞೆಗೆ ಅನುಸಾರವಾಗಿ ಯಾಜಕ ವರ್ಗಗಳನ್ನೂ, ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವರನ್ನು ಸ್ತುತಿಸಲು, ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯುತ್ತಲೂ ಇರಬೇಕಾಗಿತ್ತು. ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ ಇದೇ ಆಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು