Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 12:43 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ದೇವರು ತಮಗೆ ವಿಶೇಷ ಆನಂದವನ್ನು ಉಂಟುಮಾಡಿದ್ದರಿಂದ, ಜನರು ಆ ದಿನದಲ್ಲಿ ಅನೇಕ ಯಜ್ಞಗಳನ್ನು ಸಮರ್ಪಿಸಿ ತಮ್ಮ ಹೆಂಡತಿ ಮಕ್ಕಳೊಡನೆ ಮಹೋತ್ಸವಮಾಡಿದರು. ಯೆರೂಸಲೇಮಿನ ಉತ್ಸವದ ಹರ್ಷಧ್ವನಿಯು ಬಹಳ ದೂರದವರೆಗೂ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ದೇವರು ತಮಗೆ ವಿಶೇಷಾನಂದವನ್ನುಂಟು ಮಾಡಿದ್ದರಿಂದ ಜನರು ಆ ದಿನ ಅನೇಕ ಬಲಿದಾನಗಳನ್ನು ಸಮರ್ಪಿಸಿ ತಮ್ಮ ಮಡದಿಮಕ್ಕಳೊಡನೆ ಮಹೋತ್ಸವ ಮಾಡಿದರು. ಜೆರುಸಲೇಮಿನ ಉತ್ಸವದ ಹರ್ಷಧ್ವನಿ ಬಹುದೂರದವರೆಗೂ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ದೇವರು ತಮಗೆ ವಿಶೇಷಾನಂದವನ್ನುಂಟುಮಾಡಿದ್ದರಿಂದ ಜನರು ಆ ದಿನದಲ್ಲಿ ಅನೇಕ ಯಜ್ಞಗಳನ್ನು ಸಮರ್ಪಿಸಿ ತಮ್ಮ ಹೆಂಡತಿ ಮಕ್ಕಳೊಡನೆ ಮಹೋತ್ಸವ ಮಾಡಿದರು. ಯೆರೂಸಲೇವಿುನ ಉತ್ಸವದ ಹರ್ಷಧ್ವನಿಯು ಬಹುದೂರದವರೆಗೂ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಆ ವಿಶೇಷ ದಿನದಲ್ಲಿ ಯಾಜಕರು ಹೆಚ್ಚಿನ ಸಂಖ್ಯೆಯಲ್ಲಿ ಯಜ್ಞವನ್ನರ್ಪಿಸಿದರು. ಜನರೆಲ್ಲಾ ಸಂತೋಷಪಟ್ಟರು. ದೇವರು ಅವರಿಗೆಲ್ಲಾ ಅತ್ಯಾನಂದವನ್ನು ಉಂಟುಮಾಡಿದನು; ಹೆಂಗಸರೂ ಮಕ್ಕಳೂ ಉತ್ಸಾಹದಿಂದ ಆನಂದಿಸಿದರು; ಜೆರುಸಲೇಮಿನಿಂದ ಹೊರಟ ಅವರ ಹರ್ಷಧ್ವನಿಯು ಬಹುದೂರದವರೆಗೆ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಆ ದಿವಸದಲ್ಲಿ ಮಹಾಬಲಿಗಳನ್ನು ಅರ್ಪಿಸಿ, ದೇವರು ಅವರನ್ನು ಮಹಾ ಸಂತೋಷದಿಂದ ಸಂತೋಷಿಸಲು ಮಾಡಿದ್ದರಿಂದ ಅವರು ಸಂತೋಷಪಟ್ಟರು. ಇದಲ್ಲದೆ ಅವರು ತಮ್ಮ ಮಡದಿಮಕ್ಕಳೂಡನೆ ಮಹೋತ್ಸವ ಮಾಡಿದರು. ಆದ್ದರಿಂದ ಯೆರೂಸಲೇಮಿನ ಸಂತೋಷ ಧ್ವನಿಯು ಬಹು ದೂರಕ್ಕೆ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 12:43
29 ತಿಳಿವುಗಳ ಹೋಲಿಕೆ  

ಜನರು ಮಹಾಧ್ವನಿಯಿಂದ ಅರ್ಭಟಿಸುತ್ತಿದ್ದರಿಂದ ಹರ್ಷಧ್ವನಿ ಯಾವುದು ಅಳುವವರ ಧ್ವನಿ ಯಾವುದು ಗೊತ್ತಾಗಲಿಲ್ಲ. ಗದ್ದಲವು ಬಹುದೂರದ ವರೆಗೂ ಕೇಳಿಸಿತು.


ಯೆಹೋವನೇ, ನಿನ್ನ ಕ್ರಿಯೆಗಳಿಂದ ನನ್ನನ್ನು ಸಂತೋಷಪಡಿಸಿದ್ದಿ; ನಿನ್ನ ಕೆಲಸಗಳಿಗಾಗಿ ಉತ್ಸಾಹಧ್ವನಿ ಮಾಡುತ್ತೇನೆ.


ಆಗ ಯುವತಿಯು ನಾಟ್ಯವಾಡುತ್ತಾ ಉಲ್ಲಾಸಿಸುವಳು; ಯುವಕರು ಮತ್ತು ವೃದ್ಧರು ಜೊತೆಯಾಗಿ ಹರ್ಷಿಸುವರು. ನಾನು ಅವರ ದುಃಖವನ್ನು ನೀಗಿಸಿ ಸಂತೋಷವನ್ನು ಉಂಟುಮಾಡಿ, ಅವರು ತಮ್ಮ ವ್ಯಸನವನ್ನು ಬಿಟ್ಟು ಆನಂದಿಸುವಂತೆ ಅವರನ್ನು ಸಂತೈಸುವೆನು.


ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದರೆ, ಅವನು ದೇವರನ್ನು ನಂಬಿಕೆಯಿಂದ ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನು ಇದ್ದರೆ, ಅವನು ದೇವರಿಗೆ ಸ್ತುತಿಗೀತೆಗಳನ್ನು ಹಾಡಲಿ.


ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ, ಆತ್ಮೀಕ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನನ್ನು ಹಾಡಿ ಕೊಂಡಾಡಿರಿ.


ಹಾಗೆಯೇ, ನಿಮಗೂ ಈಗ ದುಃಖವಿದ್ದರೂ ನಾನು ನಿಮ್ಮನ್ನು ತಿರುಗಿ ನೋಡುವೆನು, ಆಗ ನಿಮ್ಮ ಹೃದಯಕ್ಕೆ ಆನಂದವಾಗುವುದು, ಮತ್ತು ನಿಮ್ಮ ಆನಂದವನ್ನು ಯಾರು ನಿಮ್ಮಿಂದ ತೆಗೆದು ಹಾಕಲು ಸಾಧ್ಯವಿಲ್ಲ.


ಆದರೆ ಮುಖ್ಯಯಾಜಕರೂ ಶಾಸ್ತ್ರಿಗಳೂ ಆತನು ಮಾಡಿದ ಆಶ್ಚರ್ಯಕರವಾದ ಕಾರ್ಯಗಳನ್ನು ನೋಡಿ ಹಾಗು “ದಾವೀದನ ಕುಮಾರನಿಗೆ ಹೊಸನ್ನ” ಎಂದು ದೇವಾಲಯದಲ್ಲಿ ಹುಡುಗರು ಕೂಗುತ್ತಿರುವುದನ್ನು ಕೇಳಿ ಕೋಪಗೊಂಡರು.


ಆತನ ಹಿಂದೆ ಮುಂದೆ ಗುಂಪಾಗಿ ಹೋಗುತ್ತಿದ್ದ ಜನರು, “ದಾವೀದನ ಕುಮಾರನಿಗೆ ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನು ಧನ್ಯನು! ಮೇಲಣ ಲೋಕಗಳಲ್ಲಿ ಹೊಸನ್ನ!” ಎಂದು ಆರ್ಭಟಿಸಿದರು.


ಹರ್ಷಧ್ವನಿ, ಉಲ್ಲಾಸ ಕೋಲಾಹಲ, ವಧೂವರರ ಸ್ವರ ಇವುಗಳು ಕೇಳಿಬರುವವು.”


ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.


ಯೆಹೋವನು ನನಗೆ ಬಲವೂ, ಗುರಾಣಿಯೂ ಆಗಿದ್ದಾನೆ; ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು. ಆದಕಾರಣ ನನ್ನ ಹೃದಯವು ಹರ್ಷಿಸುವುದು; ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು.


ಹೀಗಿರುವುದರಿಂದ ನನ್ನ ಸುತ್ತಲಿರುವ ವೈರಿಗಳ ಮೇಲೆ, ನನ್ನ ತಲೆ ಎತ್ತಲ್ಪಟ್ಟಿರುವುದು; ನಾನು ಯೆಹೋವನ ಗುಡಾರದಲ್ಲಿ, ಉತ್ಸಾಹಧ್ವನಿಯೊಡನೆ ಯಜ್ಞಗಳನ್ನು ಸಮರ್ಪಿಸುವೆನು. ಆತನನ್ನು ಹಾಡುತ್ತಾ ವಾದ್ಯಬಾರಿಸುವೆನು.


ಆತನು ನೆಮ್ಮದಿಯನ್ನು ದಯಪಾಲಿಸಿದರೆ ತಪ್ಪುಹೊರಿಸುವವರು ಯಾರು? ವಿಮುಖನಾದರೆ ಆತನ ದರ್ಶನ ಮಾಡುವವರಾರು? ಆತನು ಜನಾಂಗಕ್ಕಾಗಲಿ, ಮನುಷ್ಯನಿಗಾಗಲಿ ಮಾಡುವುದೆಲ್ಲಾ ಹೀಗೆಯೇ.


ಆ ನಂತರ ಯೆಹೂದ್ಯರೂ ಯೆರೂಸಲೇಮಿನವರೂ ಅವರ ಮುಂದೆ ಯೆಹೋಷಾಫಾಟನೂ ಯೆಹೋವನು ತಮಗೆ ಶತ್ರುಗಳ ಮೇಲೆ ಜಯವನ್ನು ಅನುಗ್ರಹಿಸಿದ್ದಾನೆಂದು ಜಯಘೋಷ ಮಾಡುತ್ತಾ ಯೆರೂಸಲೇಮಿಗೆ ಹಿಂತಿರುಗಿದರು.


ಎಲ್ಲಾ ಯೆಹೂದ್ಯರೂ ಅವರ ಹೆಂಡತಿ ಮಕ್ಕಳೂ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದರು.


ಏಳನೆಯ ತಿಂಗಳಿನ ಇಪ್ಪತ್ತ ಮೂರನೆಯ ದಿನದಲ್ಲಿ, ಅರಸನು ಜನರಿಗೆ ಅಪ್ಪಣೆಕೊಡಲು ಅವರು ಯೆಹೋವನಿಂದ ದಾವೀದ, ಸೊಲೊಮೋನರಿಗೂ, ಆತನ ಪ್ರಜೆಗಳಾದ ಇಸ್ರಾಯೇಲರಿಗೂ ಉಂಟಾದ ಉಪಕಾರಗಳನ್ನು ನೆನಪುಮಾಡಿಕೊಂಡು ಆನಂದಭರಿತರಾಗಿ, ಸಂತೋಷಿಸುತ್ತಾ ತಮ್ಮ ತಮ್ಮ ನಿವಾಸಗಳಿಗೆ ಹೊರಟು ಹೋದರು.


ಯೆಹೋವನ ಒಡಂಬಡಿಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ ಇಸ್ರಾಯೇಲ್ಯರೆಲ್ಲಾ ಭೂಮಿ ಕಂಪಿಸುವ ಹಾಗೆ ಆರ್ಭಟಿಸಿದರು.


ಇದಲ್ಲದೆ ನೀವು ಉತ್ಸವ ಕಾಲಗಳಲ್ಲಿಯು, ಹಬ್ಬಗಳಲ್ಲಿಯು, ಅಮಾವಾಸ್ಯೆಗಳಲ್ಲಿಯು ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸುವಾಗ ಆ ತುತ್ತೂರಿಗಳನ್ನು ಊದಿಸಬೇಕು. ಆ ತುತ್ತೂರಿಯ ಧ್ವನಿಯು ನಿಮ್ಮನ್ನು ನಿಮ್ಮ ದೇವರ ಜ್ಞಾಪಕಕ್ಕೆ ತರುವುದು, ನಾನೇ ನಿಮ್ಮ ದೇವರಾದ ಯೆಹೋವನು.”


ಮಾಸೇಯ, ಶೆಮಾಯ, ಎಲ್ಲಾಜಾರ್, ಉಜ್ಜೀ, ಯೆಹೋಹಾನಾನ್, ಮಲ್ಕೀಯ, ಏಲಾಮ್, ಎಜೆರ್, ಎಂಬುವರು ದೇವಾಲಯದ ಬಳಿಯಲ್ಲಿ ನಿಂತಿರಲು ಗಾಯಕರು ಹಾಡತೊಡಗಿದರು. ಇಜ್ರಹ್ಯನು ಇವರ ನಾಯಕನು.


ಪರಾತ್ಪರನಾದ ದೇವರೇ, ನಾನು ನಿನ್ನಲ್ಲಿ ಸಂತೋಷಿಸಿ ಉತ್ಸಾಹಗೊಳ್ಳುವೆನು; ನಿನ್ನ ಹೆಸರನ್ನು ಕೀರ್ತಿಸುವೆನು.


ಯೆರೂಸಲೇಮಿನ ಪೌಳಿಗೋಡೆಯನ್ನು ಪ್ರತಿಷ್ಠಿಸುವ ಸಮಯ ಬಂದಾಗ ಆಯಾ ಸ್ಥಳಗಳಲ್ಲಿದ್ದ ಲೇವಿಯರನ್ನು, ಕೀರ್ತನೆ ಗಾಯನಗಳಿಂದಲೂ ತಾಳ, ಸ್ವರಮಂಡಲ ಹಾಗು ಕಿನ್ನರಿ ಇವುಗಳಿಂದಲೂ ಪ್ರತಿಷ್ಠೆಯ ಉತ್ಸವವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿಗೆ ಕರೆಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು