ನೆಹೆಮೀಯ 13:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಕೊನೆಗೆ ನಾನು ಅವರಿಗೆ, “ನೀವು ಗೋಡೆಯ ಹೊರಗೇಕೆ ಇಳಿದುಕೊಂಡಿದ್ದೀರಿ? ನೀವು ಪುನಃ ಹೀಗೆ ಮಾಡಿದರೆ ನಿಮ್ಮನ್ನು ಸೆರೆಹಿಡಿಸುವೆನು” ಎಂದು ಗದರಿಸಲು, ಅವರು ಅಂದಿನಿಂದ ಸಬ್ಬತ್ ದಿನದಲ್ಲಿ ಪುನಃ ಬರಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಕಡೆಗೆ ನಾನು ಅವರನ್ನು, “ನೀವು ಗೋಡೆಯ ಹೊರಗೇಕೆ ಇಳಿದುಕೊಂಡಿದ್ದೀರಿ? ನೀವು ಮತ್ತೆ ಹೀಗೆ ಮಾಡಿದರೆ ನಿಮ್ಮನ್ನು ಸೆರೆಹಿಡಿಸುವೆನು,” ಎಂದು ಗದರಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಕಡೆಯಲ್ಲಿ ನಾನು ಅವರನ್ನು - ನೀವು ಗೋಡೆಯ ಹೊರಗೇಕೆ ಇಳುಕೊಂಡಿದ್ದೀರಿ? ನೀವು ತಿರಿಗಿ ಹೀಗೆ ಮಾಡಿದರೆ ನಿಮ್ಮನ್ನು ಹಿಡಿಸುವೆನು ಎಂದು ಗದರಿಸಲು ಅವರು ಅಂದಿನಿಂದ ಸಬ್ಬತ್ದಿನದಲ್ಲಿ ತಿರಿಗಿ ಬರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನಾನು ಆ ವ್ಯಾಪಾರಸ್ತರಿಗೆ, “ನೀವು ಬಾಗಿಲಿಗೆದುರಾಗಿ ನಗರದ ಹೊರಗೆ ರಾತ್ರಿ ಉಳಿದುಕೊಳ್ಳಬಾರದು. ಹಾಗೆ ಮಾಡಿದ್ದಲ್ಲಿ ನಿಮ್ಮನ್ನು ದಸ್ತಗಿರಿ ಮಾಡಬೇಕಾಗುವದು” ಎಂದು ಎಚ್ಚರಿಸಿದೆನು. ಅಂದಿನಿಂದ ಅವರು ಸಬ್ಬತ್ ದಿನದಲ್ಲಿ ನಗರಕ್ಕೆ ವ್ಯಾಪಾರಕ್ಕಾಗಿ ಬರುವುದನ್ನು ನಿಲ್ಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆಗ ನಾನು ಅವರನ್ನು ಗದರಿಸಿ ಅವರಿಗೆ, “ನೀವು ಕೋಟೆಯ ಗೋಡೆಯ ಹೊರಗೆ ಏಕೆ ಇಳುಕೊಂಡಿದ್ದೀರಿ? ನೀವು ಇನ್ನು ಮೇಲೆ ಹಾಗೆ ಮಾಡಿದರೆ ನಿಮ್ಮನ್ನು ಸೆರೆಗೆ ಹಾಕುವೆನು,” ಎಂದೆನು. ಆ ದಿನದಿಂದ ಅವರು ಸಬ್ಬತ್ ದಿನದಲ್ಲಿ ಬರಲೇ ಇಲ್ಲ. ಅಧ್ಯಾಯವನ್ನು ನೋಡಿ |
ಆ ಕಾಲದಲ್ಲಿ ಯೆಹೂದದಲ್ಲಿ ಕೆಲವರು ಸಬ್ಬತ್ ದಿನದಲ್ಲಿ ತೊಟ್ಟಿಯೊಳಗೆ ದ್ರಾಕ್ಷಿ ತುಳಿಯುವುದನ್ನೂ, ಕಣದ ಕಾಳನ್ನು ಕೂಡಿಸಿ, ಆ ಕಾಳುಗಳನ್ನೂ, ದ್ರಾಕ್ಷಾರಸ, ದ್ರಾಕ್ಷಿ, ಅಂಜೂರದ ಹಣ್ಣು ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಯೆರೂಸಲೇಮಿಗೆ ತರುವುದನ್ನೂ ಕಂಡೆನು. ಅವರು ಆ ಆಹಾರ ಪದಾರ್ಥಗಳನ್ನು ಮಾರುವುದಕ್ಕೆ ಬಂದಾಗ ನಾನು ಅವರನ್ನು ವಿರೋಧಿಸಿದೆನು.