Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 13:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೈವೇದ್ಯದ್ರವ್ಯ, ಧೂಪ, ಪಾತ್ರೆ ಇವುಗಳನ್ನೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ, ದಶಮಾಂಶವನ್ನೂ, ಲೇವಿಯರಿಗೆ, ಗಾಯಕರಿಗೆ, ದ್ವಾರಪಾಲಕರಿಗೆ ಸಲ್ಲತಕ್ಕ ಪದಾರ್ಥಗಳನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸತಕ್ಕ ಪದಾರ್ಥಗಳನ್ನೂ, ಇಡುವುದಕ್ಕಾಗಿ ಉಪಯೋಗಿಸುತ್ತಿದ್ದ ಕೊಠಡಿಯನ್ನು ಟೋಬೀಯನಿಗೋಸ್ಕರ ಸಿದ್ಧಮಾಡಿಸಿ ಕೊಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನೈವೇದ್ಯದ್ರವ್ಯ, ಧೂಪಪಾತ್ರೆ ಇವುಗಳನ್ನೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳ ದಶಮಾಂಶವನ್ನೂ ಲೇವಿಯರಿಗೆ, ಗಾಯಕರಿಗೆ ಹಾಗು ದ್ವಾರಪಾಲಕರಿಗೆ ಸಲ್ಲತಕ್ಕ ಪದಾರ್ಥಗಳನ್ನೂ ಯಾಜಕರಿಗಾಗಿ ಪ್ರತ್ಯೇಕಿಸತಕ್ಕ ಪದಾರ್ಥಗಳನ್ನೂ ಇಡುವುದಕ್ಕಾಗಿ ಉಪಯೋಗಿಸುತ್ತಿದ್ದ ಕೊಠಡಿಯನ್ನು ಅವನಿಗಾಗಿ ಸಿದ್ಧಮಾಡಿಸಿಕೊಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇವನು ಟೋಬೀಯನ ಬೀಗನಾಗಿದ್ದದರಿಂದ ನೈವೇದ್ಯದ್ರವ್ಯ ಧೂಪ ಪಾತ್ರೆ ಇವುಗಳನ್ನೂ ಧಾನ್ಯ ದ್ರಾಕ್ಷಾರಸ ಎಣ್ಣೆ ಇವುಗಳ ದಶಮಾಂಶವನ್ನೂ ಲೇವಿಯ ಗಾಯಕ ದ್ವಾರಪಾಲಕ ಇವರಿಗೆ ಸಲ್ಲತಕ್ಕ ಪದಾರ್ಥಗಳನ್ನೂ ಯಾಜಕರಿಗೋಸ್ಕರ ಪ್ರತ್ಯೇಕಿಸತಕ್ಕ ಪದಾರ್ಥಗಳನ್ನೂ ಇಡುವದಕ್ಕಾಗಿ ಉಪಯೋಗವಾಗುತ್ತಿದ್ದ ಕೊಠಡಿಯನ್ನು ಅವನಿಗೋಸ್ಕರ ಸಿದ್ಧಮಾಡಿಸಿ ಕೊಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಲೇವಿಯರಿಗೂ, ಹಾಡುಗಾರರಿಗೂ, ದ್ವಾರಪಾಲಕರಿಗೂ ನೇಮಕವಾದ ಕಾಣಿಕೆಗಳನ್ನೂ, ಧೂಪವನ್ನೂ, ಸಾಮಗ್ರಿಗಳನ್ನೂ, ಧಾನ್ಯದ ಹತ್ತನೆಯ ಪಾಲುಗಳನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ, ಯಾಜಕರ ಕಾಣಿಕೆಗಳನ್ನೂ ಪೂರ್ವಕಾಲದಲ್ಲಿ ಇಡುತ್ತಿದ್ದ ದೊಡ್ಡ ಕೊಠಡಿಯನ್ನು ಎಲ್ಯಾಷೀಬನು ಟೋಬೀಯನಿಗೋಸ್ಕರ ಸಿದ್ಧ ಮಾಡಿಕೊಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 13:5
9 ತಿಳಿವುಗಳ ಹೋಲಿಕೆ  

ಸೇವೆಮಾಡುತ್ತಿದ್ದ ಯಾಜಕರ ಮತ್ತು ಲೇವಿಯರ ವಿಷಯದಲ್ಲಿ ಯೆಹೂದ್ಯರಿಗೆ ಬಹು ಸಂತೋಷವುಂಟಾಗಿದ್ದರಿಂದ ಆ ದಿನದಲ್ಲಿ ಅವರು ಧರ್ಮವಿಧಿಯ ಪ್ರಕಾರ ಆಯಾ ಊರುಗಳ ಭೂಮಿಯಿಂದ ಯಾಜಕರಿಗೂ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಅಂದರೆ ದೇವರಿಗಾಗಿ ಪ್ರತ್ಯೇಕಿಸತಕ್ಕ ವಸ್ತುಗಳು, ಪ್ರಥಮಫಲ, ದಶಮಾಂಶ ಇವುಗಳನ್ನು ಸಂಗ್ರಹಮಾಡತಕ್ಕ ಕೊಠಡಿಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು.


ಅವರು ದಶಮಾಂಶವನ್ನು ಕೂಡಿಸುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಅವರ ಸಂಗಡ ಇರಬೇಕು. ಲೇವಿಯರು ತಮಗೆ ದೊರಕಿರುವ ಭಾಗದ ದಶಮಾಂಶವನ್ನು ದೇವಾಲಯದ ಭಂಡಾರದ ಕೊಠಡಿಗಳಲ್ಲಿ ಇರಿಸಬೇಕು.


ಕೆತ್ತಿದ ಕಲ್ಲು, ಜೋಡಿಸತಕ್ಕ ತೊಲೆ ಇವುಗಳನ್ನು ಕೊಂಡುಕೊಳ್ಳುವುದಕ್ಕಾಗಿಯೂ, ಯೆಹೂದ ರಾಜರ ಅಲಕ್ಷ್ಯದಿಂದ ಹಾಳಾಗಿದ್ದ ಕಟ್ಟಡಗಳಿಗೆ ಮಾಳಿಗೆ ಹಾಕುವುದಕ್ಕಾಗಿಯೂ, ದೇವಾಲಯವನ್ನೂ ಜೀರ್ಣೋದ್ಧಾರಮಾಡಿ ಭದ್ರಪಡಿಸುವುದಕ್ಕೆ ಬಡಗಿಗಳಿಗೂ ಶಿಲ್ಪಿಗಳಿಗೂ ಕೊಟ್ಟರು.


ನಾವು ದೇವರಿಗಾಗಿ ಪ್ರತ್ಯೇಕಿಸಿ ಇಡತಕ್ಕ ಪ್ರಥಮಫಲದ ಹಿಟ್ಟು, ಹಣ್ಣುಹಂಪಲು, ದ್ರಾಕ್ಷಾರಸ, ಎಣ್ಣೆ ಮೊದಲಾದವುಗಳನ್ನು ಯಾಜಕ ಸೇವೆಗೋಸ್ಕರ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದು ಇಡುವೆವು. ನಮ್ಮ ಭೂಮಿಯ ಹುಟ್ಟುವಳಿಯ ದಶಮಾಂಶವು ಲೇವಿಯರದಾಗಿರುತ್ತದೆ. ಲೇವಿಯರು ತಾವೇ ಬಂದು, ನಮ್ಮ ಸಾಗುವಳಿಯ ಊರುಗಳಲ್ಲಿ ಅದನ್ನು ಶೇಖರಿಸಿಕೊಳ್ಳಬೇಕು.


ಹಿಂತಿರುಗಿ ಯೆರೂಸಲೇಮಿಗೆ ಬಂದೆನು. ಎಲ್ಯಾಷೀಬನು ಟೋಬೀಯನಿಗೋಸ್ಕರ ದೇವಾಲಯದ ಪ್ರಾಕಾರದೊಳಗೆ ಕೊಠಡಿಯನ್ನು ಸಿದ್ಧಮಾಡಿಕೊಟ್ಟಿದ್ದನ್ನು ನೋಡಿ,


ಹೆಬ್ಬಾಗಿಲ ಕಂಬಗಳ ಪಕ್ಕದಲ್ಲಿ ಒಂದು ಕೋಣೆಯೂ, ಅದರ ದ್ವಾರವೂ ಕಾಣಿಸಿದವು. ಆ ಕೋಣೆಯೊಳಗೆ ಸರ್ವಾಂಗಹೋಮ ಪಶುಗಳ ಮಾಂಸವನ್ನು ತೊಳೆಯುತ್ತಿದ್ದರು.


ಆಗ ಹಿಜ್ಕೀಯನು ಯೆಹೋವನ ಆಲಯದಲ್ಲಿ ಕೊಠಡಿಗಳನ್ನು ಸಿದ್ಧಮಾಡಲು ಆಜ್ಞಾಪಿಸಿದನು.


ನಮ್ಮ ಚೊಚ್ಚಲಮಕ್ಕಳ ವಿಷಯದಲ್ಲೂ, ನಮ್ಮ ಪಶುಗಳ ಹಿಂಡುಗಳಲ್ಲಿ ಚೊಚ್ಚಲಮರಿಗಳ ವಿಷಯದಲ್ಲೂ ಧರ್ಮಶಾಸ್ತ್ರವಿಧಿಗಳಿಗೆ ಅನುಸಾರವಾಗಿ ನಡೆದುಕೊಳ್ಳುವೆವು. ನಮ್ಮ ಚೊಚ್ಚಲ ಕರುಗಳನ್ನೂ, ಚೊಚ್ಚಲ ಆಡು, ಕುರಿಮರಿಗಳನ್ನೂ ನಮ್ಮ ದೇವಾಲಯಕ್ಕೆ ತಂದು ಅಲ್ಲಿ ಕೆಲಸ ನಡೆಸುತ್ತಿರುವ ಯಾಜಕರಿಗೆ ಕೊಡುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು