Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 2:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾನು ಅರಸನ ಪಾನಸೇವಕನಾಗಿದ್ದನು. ಅರಸನಾದ ಅರ್ತಷಸ್ತನ ಆಳ್ವಿಕೆಯ ಇಪ್ಪತ್ತನೆಯ ವರ್ಷದ ಚೈತ್ರಮಾಸದಲ್ಲಿ ದ್ರಾಕ್ಷಾರಸ ಪಾನಮಾಡುವ ಹೊತ್ತಿನಲ್ಲಿ ನಾನು ದ್ರಾಕ್ಷಾರಸವನ್ನು ತಂದು ಅವನಿಗೆ ಕೊಟ್ಟೆನು. ನಾನು ಅರಸನ ಸನ್ನಿಧಿಯಲ್ಲಿ ಇದ್ದಾಗ ಹಿಂದೆ ಎಂದೂ ಮನಗುಂದಿದವನಂತೆ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಾನು ರಾಜನ ಪಾನಸೇವಕನಾಗಿದ್ದೆ. ಅರ್ತಷಸ್ತರಾಜನ ಇಪ್ಪತ್ತನೆಯ ವರ್ಷದ ಚೈತ್ರಮಾಸದಲ್ಲಿ, ರಾಜನು ದ್ರಾಕ್ಷಾರಸ ಪಾನಮಾಡುವ ಹೊತ್ತಿನಲ್ಲಿ, ದ್ರಾಕ್ಷಾರಸವನ್ನು ತಂದುಕೊಟ್ಟೆ. ನಾನು ಅವನ ಸನ್ನಿಧಿಯಲ್ಲಿ ಹಿಂದೆ ಎಂದೂ ಖಿನ್ನನಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಾನು ಅರಸನ ಪಾನಸೇವಕನಾಗಿದ್ದೆನು. ಅರಸನಾದ ಅರ್ತಷಸ್ತನ ಇಪ್ಪತ್ತನೆಯ ವರುಷದ ಚೈತ್ರಮಾಸದಲ್ಲಿ ಅರಸನು ದ್ರಾಕ್ಷಾರಸಪಾನಮಾಡುವ ಹೊತ್ತಿನಲ್ಲಿ ನಾನು ದ್ರಾಕ್ಷಾರಸವನ್ನು ತಂದು ಅವನಿಗೆ ಕೊಟ್ಟೆನು. ನಾನು ಅವನ ಸನ್ನಿಧಿಯಲ್ಲಿ ಹಿಂದೆ ಎಂದೂ ಖಿನ್ನನಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅರ್ತಷಸ್ತನ ಆಳ್ವಿಕೆಯ ಇಪ್ಪತ್ತನೆಯ ವರ್ಷದ ನಿಸ್ಸಾನ್ ತಿಂಗಳಲ್ಲಿ ರಾಜನಿಗೆ ದ್ರಾಕ್ಷಾರಸವನ್ನು ನಾನು ಕೊಟ್ಟೆನು. ನಾನೆಂದೂ ರಾಜನ ಮುಂದೆ ದುಃಖಿತನಾಗಿರಲಿಲ್ಲ. ಆದರೆ ಈ ಸಮಯದಲ್ಲಿ ನನ್ನ ಮುಖವು ಕಳೆಗುಂದಿದ್ದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅರಸನಾದ ಅರ್ತಷಸ್ತನ ಇಪ್ಪತ್ತನೆಯ ವರ್ಷದ, ನಿಸಾನ ತಿಂಗಳಲ್ಲಿ, ಅವನ ಮುಂದೆ ದ್ರಾಕ್ಷಾರಸವನ್ನು ತೆಗೆದುಕೊಂಡು ಅರಸನಿಗೆ ಕೊಟ್ಟೆನು. ನಾನು ಅವನ ಸಮ್ಮುಖದಲ್ಲಿ ಹಿಂದೆ ಎಂದೂ ದುಃಖಿತನಾಗಿದ್ದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 2:1
9 ತಿಳಿವುಗಳ ಹೋಲಿಕೆ  

ಇದಾದ ಮೇಲೆ ಪರ್ಷಿಯ ರಾಜನಾದ ಅರ್ತಷಸ್ತನ ಆಳ್ವಿಕೆಯಲ್ಲಿ ಎಜ್ರನು ಬಾಬಿಲೋನಿನಿಂದ ಬಂದನು. ಇವನು ಸೆರಾಯನ ಮಗ; ಸೆರೆಯನು ಅಜರ್ಯನ ಮಗ; ಇವನು ಹಿಲ್ಕೀಯನ ಮಗ.


ಯೆಹೋವನೇ, ಕೃಪೆಮಾಡು; ನಿನ್ನ ಸೇವಕನಾದ ನನ್ನ ಪ್ರಾರ್ಥನೆಗೂ, ನಿನ್ನ ನಾಮ ಸ್ಮರಣೆಯಲ್ಲಿ ಆನಂದಿಸುವ ನಿನ್ನ ಭಕ್ತರ ಪ್ರಾರ್ಥನೆಗೂ ಕಿವಿಗೊಡು. ನಿನ್ನ ಸೇವಕನು ಈಹೊತ್ತು ಈ ಮನುಷ್ಯನ ದಯೆಗೆ ಪಾತ್ರನಾಗಿ ಸಫಲನಾಗುವಂತೆ ಅನುಗ್ರಹಿಸಬೇಕು” ಎಂದು ಪ್ರಾರ್ಥಿಸಿದೆನು.


ಹಕಲ್ಯನ ಮಗನಾದ ನೆಹೆಮೀಯನ ಚರಿತ್ರೆ: ಇಪ್ಪತ್ತನೆಯ ವರ್ಷದ ಮಾರ್ಗಶಿರ್ಷ ಮಾಸದಲ್ಲಿ ನಾನು ಶೂಷನ್ ಪಟ್ಟಣದ ಅರಮನೆಯಲ್ಲಿದ್ದಾಗ,


ಅರಸನಾದ ಅಹಷ್ವೇರೋಷನ ಆಳ್ವಿಕೆಯ ಹನ್ನೆರಡನೆಯ ತಿಂಗಳಾದ ಚೈತ್ರಮಾಸದಲ್ಲಿ ಹಾಮಾನನ ಮುಂದೆ ಶುಭ ಮಾಸವು ಮತ್ತು ಶುಭದಿನವು ಯಾವುದೆಂದು ತಿಳಿದುಕೊಳ್ಳುವುದಕ್ಕೆ “ಪೂರ್” ಅಂದರೆ ಚೀಟನ್ನು ಹಾಕಿದರು. ಚೀಟು ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನಕ್ಕೆ ಬಿತ್ತು.


ಅವನೊಡನೆ ಕೆಲವು ಜನರು ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ಗಾಯಕರೂ, ದ್ವಾರಪಾಲಕರೂ ಮತ್ತು ದೇವಸ್ಥಾನದಾಸರೂ ಅರ್ತಷಸ್ತ ಅರಸನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಯೆರೂಸಲೇಮಿಗೆ ಬಂದರು.


ಪಾನದಾಯಕರ ಮುಖ್ಯಸ್ಥನನ್ನು ಪುನಃ ಅವನ ಉದ್ಯೋಗಕ್ಕೆ ನೇಮಿಸಿದನು. ಅವನು ಪಾನ ಪಾತ್ರೆಯನ್ನು ಫರೋಹನ ಕೈಗೆ ಕೊಡುವವನಾದನು.


ಫರೋಹನ ಪಾನಪಾತ್ರೆಯು ನನ್ನ ಕೈಯಲ್ಲಿದ್ದದರಿಂದ ನಾನು ಆ ದ್ರಾಕ್ಷಿಯ ಗೊಂಚಲುಗಳನ್ನು ಕೊಯ್ದು ಪಾತ್ರೆಯಲ್ಲಿ ಹಿಂಡಿ ಪಾತ್ರೆಯನ್ನು ಫರೋಹನ ಕೈಗೆ ಒಪ್ಪಿಸಿದೆನು” ಎಂದು ಹೇಳಿದನು.


ಇದನ್ನು ತಿಳಿದು ಮನದಟ್ಟುಮಾಡಿಕೋ; ಯೆರೂಸಲೇಮ್ ಜೀರ್ಣೋದ್ಧಾರವಾಗಿ ಕಟ್ಟಲ್ಪಡಲಿ ಎಂಬ ದೈವೋಕ್ತಿಯು ಹರಡುವ ದಿನದಿಂದ ಅಭಿಷಿಕ್ತನಾದ ಪ್ರಭುವು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಲ್ಪಟ್ಟು ಅರವತ್ತೆರಡು ವಾರ ಇರುವುದು; ಅದಕ್ಕೆ ಚೌಕವೂ ಕಂದಕವೂ ಇರುವವು; ಆ ಕಾಲವು ಬಹು ಕಷ್ಟಕಾಲ.


ಮತ್ತು ಅರ್ತಷಸ್ತನ ಕಾಲದಲ್ಲಿ ಬಿಷ್ಲಾಮ್, ಮಿತ್ರದಾತ, ಟಾಬೆಯೇಲ್ ಈ ಮೊದಲಾದವರು ಪರ್ಷಿಯ ರಾಜನಾದ ಅರ್ತಷಸ್ತನಿಗೆ ಬರೆದರು. ಆ ಪತ್ರವು ಅರಾಮ್ಯ ಲಿಪಿಯಲ್ಲಿಯೂ ಮತ್ತು ಅರಾಮ್ಯ ಭಾಷೆಯಲ್ಲಿಯೂ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು