Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 2:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ಆ ವರೆಗೆ ಯೆಹೂದ್ಯರಿಗೂ, ಯಾಜಕರಿಗೂ, ಶ್ರೀಮಂತರಿಗೂ, ಅಧಿಕಾರಿಗಳಿಗೂ ಕೆಲಸ ಮಾಡುವ ಇತರರಿಗೂ ಏನೂ ತಿಳಿಸದೆ ಇದ್ದುದರಿಂದ ನಾನು ಎಲ್ಲಿ ಹೋಗಿದ್ದೆನು, ಏನು ಮಾಡಿದೆನು ಎಂಬುದು ಯಾರಿಗೂ ಗೊತ್ತಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಾನು ಆವರೆಗೆ ಯೆಹೂದ್ಯರಿಗೂ ಯಾಜಕರಿಗೂ ಶ್ರೀಮಂತರಿಗೂ ಅಧಿಕಾರಿಗಳಿಗೂ ಹಾಗು ಕೆಲಸ ನಡೆಸತಕ್ಕ ಇತರರಿಗೂ ಏನೂ ತಿಳಿಸದೆ ಇದ್ದುದರಿಂದ, ನಾನು ಎಲ್ಲಿ ಹೋಗಿದ್ದೆ, ಏನು ಮಾಡಿದೆ ಎಂಬುದು ಅಧಿಕಾರಿಗಳಿಗೆ ಗೊತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾನು ಆವರೆಗೆ ಯೆಹೂದ್ಯರಿಗೂ ಯಾಜಕರಿಗೂ ಶ್ರೀಮಂತರಿಗೂ ಅಧಿಕಾರಿಗಳಿಗೂ ಕೆಲಸನಡಿಸತಕ್ಕ ಇತರರಿಗೂ ಏನೂ ತಿಳಿಸದೆ ಇದ್ದದರಿಂದ ನಾನು ಎಲ್ಲಿ ಹೋಗಿದ್ದೆನು, ಏನು ಮಾಡಿದೆನು ಎಂಬದು ಅಧಿಕಾರಿಗಳಿಗೆ ಗೊತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಇಸ್ರೇಲಿನ ನಾಯಕರಿಗೂ ಅಧಿಕಾರಿಗಳಿಗೂ ನಾನು ಎಲ್ಲಿಗೆ ಹೋದೆನೆಂದು ತಿಳಿದಿರಲಿಲ್ಲ; ನಾನು ಏನು ಮಾಡುತ್ತಿದ್ದೇನೆಂದೂ ಅವರಿಗೆ ಗೊತ್ತಿರಲಿಲ್ಲ. ಯೆಹೂದ್ಯರಿಗಾಗಲಿ ಅಧಿಕಾರಿಗಳಿಗಾಗಲಿ ರಾಜನಿಂದ ನೇಮಕಗೊಂಡ ಕೆಲಸವರ್ಗದವರಿಗಾಗಲಿ ನಾನು ಇನ್ನೂ ಯಾವ ವಿಷಯವನ್ನೂ ಹೇಳಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಾನು ಎಲ್ಲಿ ಹೋದೆನೆಂದೂ, ಏನು ಮಾಡಿದೆನೆಂದೂ ಅಧಿಕಾರಿಗಳು ತಿಳಿಯದೆ ಇದ್ದರು. ಅಲ್ಲಿಯವರೆಗೆ ನಾನು ಯೆಹೂದ್ಯರಿಗಾದರೂ, ಯಾಜಕರಿಗಾದರೂ, ಶ್ರೀಮಂತರಿಗಾದರೂ, ಅಧಿಕಾರಿಗಳಿಗಾದರೂ, ಕೆಲಸ ಮಾಡುವ ಇತರ ಜನರಿಗಾದರೂ ಗೊತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 2:16
4 ತಿಳಿವುಗಳ ಹೋಲಿಕೆ  

ಅದಕಾರಣ ನಾನು ರಾತ್ರಿಯಲ್ಲಿ ಹಳ್ಳದ ಬದಿಯ ಮಾರ್ಗವಾಗಿ ಹೋಗಿ ಗೋಡೆಯನ್ನು ಪರೀಕ್ಷಿಸಿದೆನು. ಆ ಮೇಲೆ ಪುನಃ ತಗ್ಗಿನ ಬಾಗಿಲಿನಿಂದ ಹಿಂತಿರುಗಿ ಮನೆಗೆ ಬಂದೆನು.


ನಾನು ಅವರಿಗೆ, “ನಮ್ಮ ದುರಾವಸ್ಥೆ ನಿಮ್ಮ ಕಣ್ಣ ಮುಂದಿರುತ್ತದಲ್ಲವೇ; ಯೆರೂಸಲೇಮ್ ಪಟ್ಟಣವು ಹಾಳು ಬಿದ್ದಿದೆ, ಅದರ ಬಾಗಿಲುಗಳು ಬೆಂಕಿಯಿಂದ ಸುಡಲ್ಪಟ್ಟಿರುತ್ತವೆ; ಬನ್ನಿರಿ, ಯೆರೂಸಲೇಮಿನ ಗೋಡೆಯನ್ನು ಕಟ್ಟೋಣ. ಹೀಗೆ ಮಾಡಿದರೆ ನಮ್ಮ ಮೇಲಣ ನಿಂದೆಯು ಅಳಿಸಿ ಹೋಗುವುದು” ಎಂದು ಹೇಳಿದೆನು.


ಆತನು ಇಸ್ರಾಯೇಲರ ಮುಖಂಡರಿಗೆ ಯಾವ ಕೇಡನ್ನೂ ಮಾಡಲಿಲ್ಲ. ಅವರು ದೇವರನ್ನು ನೋಡಿ ಅನ್ನಪಾನಗಳನ್ನು ತೆಗೆದುಕೊಂಡರು.


ಜಾಣನು ತನ್ನ ಜ್ಞಾನವನ್ನು ಗುಪ್ತಪಡಿಸುವನು, ಮೂಢರ ಮನಸ್ಸು ಮೂರ್ಖತನವನ್ನು ಪ್ರಕಟಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು