Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 2:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇದಲ್ಲದೆ, ನನ್ನ ದೇವರ ಕೃಪಾಹಸ್ತವು ನನ್ನನ್ನು ಪಾಲಿಸಿದ್ದನ್ನೂ, ಅರಸನು ನನಗೆ ಹೇಳಿದ್ದನ್ನೂ ಅವರಿಗೆ ವಿವರಿಸಿದೆನು. ಆಗ ಅವರು, “ಬನ್ನಿರಿ, ಕಟ್ಟೋಣ” ಎಂದು ಹೇಳಿ ಆ ಒಳ್ಳೇ ಕೆಲಸಕ್ಕೆ ಕೈಹಾಕಲು ಪರಸ್ಪರ ಧೈರ್ಯ ನೀಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇದಲ್ಲದೆ, ನನ್ನ ದೇವರ ಕೃಪಾಹಸ್ತ ನನ್ನನ್ನು ಹೇಗೆ ನಡೆಸಿತೆಂಬುದನ್ನೂ ರಾಜನು ನನಗೆ ಹೇಳಿದ್ದನ್ನೂ ಅವರಿಗೆ ವಿವರಿಸಿದೆ. ಆಗ ಅವರು, “ಬನ್ನಿ, ಕಟ್ಟೋಣ” ಎಂದು ಹೇಳಿ ಆ ಒಳ್ಳೇ ಕೆಲಸಕ್ಕೆ ಕೈಹಾಕಲು ಧೈರ್ಯಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇದಲ್ಲದೆ ನನ್ನ ದೇವರ ಕೃಪಾಹಸ್ತವು ನನ್ನನ್ನು ಪಾಲಿಸಿದ್ದನ್ನೂ ಅರಸನು ನನಗೆ ಹೇಳಿದ್ದನ್ನೂ ಅವರಿಗೆ ವಿವರಿಸಿದೆನು. ಆಗ ಅವರು - ಬನ್ನಿರಿ, ಕಟ್ಟೋಣ ಎಂದು ಹೇಳಿ ಆ ಒಳ್ಳೇ ಕೆಲಸಕ್ಕೆ ಕೈಹಾಕಲು ಧೈರ್ಯಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಾನು ಅವರಿಗೆ ದೇವರು ನನಗೆ ಕರುಣೆಯನ್ನು ತೋರಿಸಿದ್ದನ್ನು ಮತ್ತು ರಾಜನು ಹೇಳಿದ ವಿಷಯಗಳನ್ನು ತಿಳಿಸಿದೆನು. ಆಗ ಅವರು, “ನಾವು ಈಗಲೇ ಕೆಲಸ ಪ್ರಾರಂಭಿಸೋಣ” ಎಂದು ಹೇಳಿದರು. ಹೀಗೆ ನಾವು ಈ ಒಳ್ಳೆಯ ಕಾರ್ಯವನ್ನು ಪ್ರಾರಂಭಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇದಲ್ಲದೆ, ನನ್ನ ದೇವರ ಕೃಪಾಹಸ್ತ ನನ್ನನ್ನು ಹೇಗೆ ನಡೆಸಿತೆಂಬುದನ್ನೂ, ರಾಜನು ನನಗೆ ಹೇಳಿದ್ದನ್ನೂ ಅವರಿಗೆ ವಿವರಿಸಿದೆ. ಆಗ ಅವರು, “ಬನ್ನಿ, ಪುನಃ ಕಟ್ಟೋಣ,” ಎಂದು ಹೇಳಿ, ಆ ಒಳ್ಳೆಯ ಕೆಲಸಕ್ಕೆ ಕೈಹಾಕಲು ಧೈರ್ಯಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 2:18
10 ತಿಳಿವುಗಳ ಹೋಲಿಕೆ  

ಯಾಕೆಂದರೆ ದೇವರೇ ತನ್ನ ಸುಚಿತ್ತವನ್ನು ನೆರವೇರಿಸಬೇಕೆಂದು ನಿಮ್ಮಲ್ಲಿ ಉದ್ದೇಶವನ್ನೂ ಮತ್ತು ಪ್ರಯತ್ನವನ್ನೂ ಉಂಟುಮಾಡುವವನಾಗಿದ್ದಾನೆ.


ಇದರಿಂದ ಅರಸನು ಧ್ಯೆರ್ಯಗೊಂಡು, ಅಲ್ಲಲ್ಲಿ ಬಿದ್ದುಹೋಗಿದ್ದ ಪೌಳಿಗೋಡೆಯನ್ನು ಜೀರ್ಣೋದ್ಧಾರ ಮಾಡಿಸಿ, ಅದರ ಮೇಲೆ ಗೋಪುರಗಳನ್ನೂ, ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿಸಿದನು. ದಾವೀದನಗರದ ಮಿಲ್ಲೋ ಕೋಟೆಯನ್ನು ಭದ್ರಪಡಿಸಿದಲ್ಲದೆ. ಅನೇಕ ಆಯುಧಗಳನ್ನೂ, ಗುರಾಣಿಗಳನ್ನೂ ಮಾಡಿಸಿದನು.


ಧೈರ್ಯದಿಂದಿರು, ನಮ್ಮ ಜನರಿಗೋಸ್ಕರವೂ, ನಮ್ಮ ದೇವರ ಪಟ್ಟಣಗಳಿಗೋಸ್ಕರವೂ, ನಮ್ಮ ಪೌರುಷವನ್ನು ತೋರಿಸೋಣ. ಯೆಹೋವನು ತನಗೆ ಸರಿಕಾಣುವ ಹಾಗೆ ಮಾಡಲಿ” ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರುದ್ಧವಾಗಿ ಕಳುಹಿಸಿದನು.


ಕಡೆಯದಾಗಿ, ನೀವು ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.


ಇದಲ್ಲದೆ ಇಸ್ರಾಯೇಲ್ ದೇವರ ಆಲಯವನ್ನು ಕಟ್ಟುವುದರಲ್ಲಿ ಅಶ್ಶೂರದ ಅರಸನು ತಮಗೆ ಸಹಾಯಮಾಡುವಂತೆ ಯೆಹೋವನು ಅವನ ಮನಸ್ಸನ್ನು ತಿರುಗಿಸಿ ತಮಗೆ ಸಂತೋಷವನ್ನು ಉಂಟುಮಾಡಿದ್ದಾನೆ ಎಂದು ಹರ್ಷಿಸುತ್ತಾ ಏಳು ದಿನಗಳ ವರೆಗೂ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನು ಆಚರಿಸಿದರು.


ಯೆಹೂದ್ಯರು ನನ್ನನ್ನು ಅಭಿಷೇಕಿಸಿ, ತಮ್ಮ ಅರಸನನ್ನಾಗಿ ಮಾಡಿಕೊಂಡಿದ್ದಾರೆ. ನಿಮ್ಮ ಅರಸನಾದ ಸೌಲನು ಸತ್ತುಹೋದರೂ ನೀವು ಶೂರರಾಗಿರಿ, ನಿಮ್ಮ ಕೈಗಳು ಜೋಲುಬೀಳದಿರಲಿ” ಎಂದು ಹೇಳಿ ಕಳುಹಿಸಿದನು.


ರಾಜ್ಯಸಂಬಂಧವಾಗಿ ದಾವೀದನಿಗೆ ವಿಶೇಷ ಸಹಾಯಕರಾಗಿದ್ದು, ಯೆಹೋವನ ವಾಕ್ಯಾನುಸಾರವಾಗಿ ಇಸ್ರಾಯೇಲರೆಲ್ಲರೊಡನೆ ಅವನನ್ನು ಅರಸನನ್ನಾಗಿ ಮಾಡಿದ ಮುಖ್ಯಸ್ಥರನ್ನು ಕುರಿತದ್ದು.


ಆಗ ಸೌಲನ ಮಗನಾದ ಯೋನಾತಾನನು ಅಲ್ಲಿಗೆ ಹೋಗಿ,


ರಾಜವನಪಾಲಕನಾದ ಆಸಾಫನು ದೇವಾಲಯದ ಕೋಟೆಯ ಬಾಗಿಲುಗಳು, ಪಟ್ಟಣದ ಪೌಳಿಗೋಡೆ, ನಾನು ಸೇರುವ ಮನೆ ಇವುಗಳಿಗೆ ಬೇಕಾಗುವ ತೊಲೆಗಳಿಗಾಗಿ ಮರಗಳನ್ನು ಕೊಡುವ ಹಾಗೆ ಅರಸನು ನನಗೆ ಪತ್ರಗಳನ್ನು ಕೊಡಬೇಕು” ಎಂದು ಬಿನ್ನವಿಸಲು, ನನ್ನ ದೇವರ ಕೃಪಾಹಸ್ತಪಾಲನೆ ನನಗಿದ್ದುದರಿಂದ ಅರಸನು ಅವುಗಳನ್ನು ನನಗೆ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು