Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 2:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅರಸನಿಗೆ ಹೀಗೆ ಉತ್ತರಕೊಟ್ಟೆನು, “ಅರಸನೇ ನಿಮ್ಮ ಚಿತ್ತವಿರುವುದಾದರೆ ಮತ್ತು ತಮ್ಮ ಸೇವಕನಾದ ನಾನು ತಮ್ಮ ದೃಷ್ಟಿಯಲ್ಲಿ ದಯೆಗೆ ಪಾತ್ರನಾಗಿದ್ದರೆ ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವನ್ನು ತಿರುಗಿ ಕಟ್ಟುವುದಕ್ಕಾಗಿ ಯೆಹೂದ ದೇಶಕ್ಕೆ ಹೋಗಲು ನನಗೆ ಅಪ್ಪಣೆಯಾಗಬೇಕು” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮತ್ತು ತಮ್ಮ ಸೇವಕನು ತಮ್ಮ ದೃಷ್ಟಿಯಲ್ಲಿ ದಯೆಗೆ ಪಾತ್ರನಾಗಿದ್ದರೆ, ನನ್ನ ಪಿತೃಗಳ ಸಮಾಧಿಗಳಿರುವ ಪಟ್ಟಣವನ್ನು ಮರಳಿ ಕಟ್ಟುವುದಕ್ಕೆ ಜುದೇಯ ನಾಡಿಗೆ ಹೋಗಲು ನನಗೆ ಅಪ್ಪಣೆಯಾಗಬೇಕು,” ಎಂದು ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ತಮ್ಮ ಸೇವಕನು ತಮ್ಮ ದೃಷ್ಟಿಯಲ್ಲಿ ದಯೆಗೆ ಪಾತ್ರನಾಗಿದ್ದರೆ ನನ್ನ ಪಿತೃಗಳ ಸಮಾಧಿಗಳಿರುವ ಪಟ್ಟಣವನ್ನು ತಿರಿಗಿ ಕಟ್ಟುವದಕ್ಕೋಸ್ಕರ ಯೆಹೂದದೇಶಕ್ಕೆ ಹೋಗಲು ನನಗೆ ಅಪ್ಪಣೆಯಾಗಬೇಕು ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅನಂತರ ಅರಸನಿಗೆ, “ನಾನು ನಿನಗೆ ಮೆಚ್ಚಿಕೆಯಾಗಿದ್ದಲ್ಲಿ ಮತ್ತು ನಿನಗೆ ಈ ವಿಷಯ ಸರಿಕಂಡಲ್ಲಿ ದಯಮಾಡಿ ಯೆಹೂದ ಪ್ರಾಂತ್ಯದಲ್ಲಿ ನನ್ನ ಪೂರ್ವಿಕರ ಸಮಾಧಿಗಳಿರುವ ಜೆರುಸಲೇಮಿಗೆ ನನ್ನನ್ನು ಕಳುಹಿಸು. ನಾನು ಅಲ್ಲಿಗೆ ಹೋಗಿ ಜೆರುಸಲೇಮನ್ನು ಮತ್ತೆ ಕಟ್ಟಬೇಕು” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅರಸನಿಗೆ, “ಅರಸನಿಗೆ ಮೆಚ್ಚಿಗೆಯಾದರೆ ಮತ್ತು ನಿಮ್ಮ ಸೇವಕನಿಗೆ ನಿಮ್ಮ ಮುಂದೆ ದಯೆ ದೊರಕಿದರೆ, ನನ್ನನ್ನು ನನ್ನ ತಂದೆಗಳ ಸಮಾಧಿಗಳಿರುವ ಪಟ್ಟಣವನ್ನು ಕಟ್ಟಿಸುವುದಕ್ಕಾಗಿ ಯೆಹೂದಕ್ಕೆ ನನ್ನನ್ನು ಕಳುಹಿಸಬೇಕು,” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 2:5
12 ತಿಳಿವುಗಳ ಹೋಲಿಕೆ  

“ಅರಸರಿಗೆ ಸರಿತೋರುವುದಾದರೆ ಯೆರೂಸಲೇಮಿನ ಈ ದೇವಾಲಯವನ್ನು ಪುನಃ ಕಟ್ಟುವುದಕ್ಕೆ ಅರಸನಾದ ಕೋರೆಷನಿಂದ ಅಪ್ಪಣೆ ದೊರಕಿದ್ದು ಸತ್ಯವೋ ಎಂಬುದರ ವಿಷಯವಾಗಿ ಬಾಬಿಲೋನಿನ ರಾಜಭಂಡಾರದಲ್ಲಿ ಹುಡುಕಿ ನೋಡಲಿ ಮತ್ತು ಈ ಸಂಗತಿಯನ್ನು ಕುರಿತು ರಾಜರ ಚಿತ್ತವೇನೆಂಬುದು ನಮಗೆ ತಿಳಿಸೋಣವಾಗಲಿ” ಎಂದು ಉತ್ತರಕೊಟ್ಟನು.


ಇದರಿಂದ ನೀನು ದೇವರ ಮತ್ತು ಮನುಷ್ಯರ ದಯೆಯನ್ನೂ, ಸಮ್ಮತಿಯನ್ನೂ ಪಡೆದುಕೊಳ್ಳುವಿ.


ಆಗ ಎಸ್ತೇರಳು ಅವನಿಗೆ, “ಅರಸನು ನನ್ನ ಮೇಲೆ ಕಟಾಕ್ಷವಿಟ್ಟು, ನನ್ನನ್ನು ಮೆಚ್ಚಿ, ನಾನು ಹೇಳುವ ಮಾತು ಒಳ್ಳೆಯದೆಂದು ಅದಕ್ಕೆ ಸಮ್ಮತಿಸುವುದಾದರೆ, ಅರಸನ ಎಲ್ಲಾ ಸಂಸ್ಥಾನಗಳಲ್ಲಿರುವ ಯೆಹೂದ್ಯರನ್ನು ಸಂಹರಿಸುವ ವಿಷಯವಾಗಿ ಅಗಾಗನ ವಂಶದವನೂ, ಹಮ್ಮೆದಾತನ ಮಗನು ಆದ ಹಾಮಾನನು ಬರೆಯಿಸಿದ ಪತ್ರವನ್ನು ರದ್ದುಮಾಡುವುದಕ್ಕಾಗಿ ಆಜ್ಞಾಪತ್ರವನ್ನು ಪ್ರಕಟಿಸಬೇಕು.


ಆಗ ಎಸ್ತೇರ್ ರಾಣಿಯು, “ಅರಸನು ನನ್ನ ಮೇಲೆ ಕಟಾಕ್ಷವಿಟ್ಟು ಸಮ್ಮತಿಸುವುದಾದರೆ ನನ್ನ ವಿಜ್ಞಾಪನೆಯನ್ನೂ, ಪ್ರಾರ್ಥನೆಯನ್ನೂ ಲಾಲಿಸಿ ನನ್ನ ಜೀವವನ್ನೂ ಮತ್ತು ನನ್ನ ಜನಾಂಗವನ್ನೂ ಉಳಿಸಬೇಕು.


ನಾನು ತಮಗೋಸ್ಕರ ಸಿದ್ಧಮಾಡಿಸುವ ಔತಣಕ್ಕೆ ನಾಳೆಯೂ ಹಾಮಾನನ ಜೊತೆಯಲ್ಲಿ ಬರೋಣವಾಗಲಿ; ಆಗ ಅರಸರು ಹೇಳಿದಂತೆ ಮಾಡುವೆನು. ಇದೇ ನನ್ನ ಮನವಿ” ಎಂದು ಉತ್ತರಕೊಟ್ಟಳು.


ಆಗ ಯೋವಾಬನು ನೆಲಕ್ಕೆ ಬಿದ್ದು ನಮಸ್ಕರಿಸಿ, ಅರಸನನ್ನು ಹರಸಿ, “ಅರಸನೇ ನನ್ನ ಒಡೆಯನೇ, ನೀನು ನಿನ್ನ ಸೇವಕನಾದ ನನ್ನ ಬಿನ್ನಹವನ್ನು ಲಾಲಿಸಿದ್ದರಿಂದ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತೆಂದು ಈಗ ಗೊತ್ತಾಯಿತು” ಎಂದು ಹೇಳಿದನು.


ಆಗ ಆಕೆಯು, “ಸ್ವಾಮೀ, ತಾವು ದಾಸಿಯಾದ ನನ್ನನ್ನು ಕಟಾಕ್ಷಿಸಿದ್ದೀರಿ; ನಾನು ತಮ್ಮ ದಾಸಿಯೆನಿಸಿಕೊಳ್ಳುವುದಕ್ಕೆ ಯೋಗ್ಯಳಲ್ಲದಿದ್ದರೂ ನನ್ನನ್ನು ಕನಿಕರಿಸಿ ಪ್ರೀತಿಯಿಂದ ಮಾತನಾಡಿಸಿದಿರಿ” ಅಂದಳು.


ಅರಸನು ಒಪ್ಪುವುದಾದರೆ ವಷ್ಟಿಯು ಪುನಃ ಅಹಷ್ವೇರೋಷ ರಾಜನು ಸನ್ನಿಧಿಗೆ ಬರಲೇ ಬಾರದೆಂಬ ರಾಜಾಜ್ಞೆಯು ಪ್ರಕಟವಾಗಿ ಅದು ಎಂದಿಗೂ ರದ್ದಾಗದ ಹಾಗೆ ಪಾರಸಿಯ ಮತ್ತು ಮೇದ್ಯ ಶಾಸನಗಳಲ್ಲಿ ಲಿಖಿತವಾಗಲಿ; ಅರಸನು ಆಕೆಯ ಪಟ್ಟವನ್ನು ಆಕೆಗಿಂತ ಉತ್ತಮಳಾದ ಇನ್ನೊಬ್ಬಳಿಗೆ ಕೊಡಲಿ.


“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ ನೀವು ಸುಣ್ಣಾ ಹಚ್ಚಿದ ಸಮಾಧಿಗಳಿಗೆ ಹೋಲಿಕೆಯಾಗಿದ್ದೀರಿ; ಇವು ಹೊರಗೆ ಸುಂದರವಾಗಿ ಕಾಣುತ್ತವೆ. ಒಳಗೆ ನೋಡಿದರೆ ಸತ್ತವರ ಎಲುಬುಗಳಿಂದಲೂ ಎಲ್ಲಾ ಹೊಲಸಿನಿಂದಲೂ ತುಂಬಿರುತ್ತವೆ.


ಆಗ ಅರಸನು, “ನಿನ್ನ ಅಪೇಕ್ಷೆಯೇನು” ಎಂದು ನನ್ನನ್ನು ಕೇಳಿದನು. ಆಗ ನಾನು ಪರಲೋಕದ ದೇವರನ್ನು ಪ್ರಾರ್ಥಿಸಿ,


ರಾಣಿಯು ಅರಸನ ಹತ್ತಿರದಲ್ಲೇ ಕುಳಿತುಕೊಂಡಿದ್ದಳು. ಅರಸನು ನನಗೆ, “ಪ್ರಯಾಣಕ್ಕೆ ನಿನಗೆಷ್ಟು ಕಾಲ ಬೇಕು? ಯಾವಾಗ ಹಿಂದಿರುಗುವಿ” ಎಂದು ವಿಚಾರಿಸಿದಾಗ ನಾನು ಕಾಲವನ್ನು ಸೂಚಿಸಲು ಅರಸನು ಒಪ್ಪಿಕೊಂಡು ಅಪ್ಪಣೆಕೊಟ್ಟನು.


ಇದನ್ನು ತಿಳಿದು ಮನದಟ್ಟುಮಾಡಿಕೋ; ಯೆರೂಸಲೇಮ್ ಜೀರ್ಣೋದ್ಧಾರವಾಗಿ ಕಟ್ಟಲ್ಪಡಲಿ ಎಂಬ ದೈವೋಕ್ತಿಯು ಹರಡುವ ದಿನದಿಂದ ಅಭಿಷಿಕ್ತನಾದ ಪ್ರಭುವು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಲ್ಪಟ್ಟು ಅರವತ್ತೆರಡು ವಾರ ಇರುವುದು; ಅದಕ್ಕೆ ಚೌಕವೂ ಕಂದಕವೂ ಇರುವವು; ಆ ಕಾಲವು ಬಹು ಕಷ್ಟಕಾಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು