Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 4:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇತ್ತ ಯೆಹೂದ್ಯರು, “ಹೊರೆ ಹೊರುವವರ ಬಲವು ಕುಂದಿಹೋಯಿತು, ಧೂಳಿನ ರಾಶಿಯು ವಿಪರೀತವಾಗಿದೆ; ಈ ಗೋಡೆಯನ್ನು ಕಟ್ಟುವುದು ನಮ್ಮಿಂದ ಆಗುವುದಿಲ್ಲ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇತ್ತ ಯೆಹೂದ್ಯರೇ, “ಹೊರೆಹೊರುವವರ ಬಲ ಕುಂದಿಹೋಯಿತು. ಧೂಳಿನ ರಾಶಿ ವಿಪರೀತ ಆಗಿದೆ; ಈ ಗೋಡೆಯನ್ನು ಕಟ್ಟುವುದು ನಮ್ಮಿಂದಾಗದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇತ್ತ ಯೆಹೂದ್ಯರು - ಹೊರೆಹೊರುವವರ ಬಲವು ಕುಂದಿ ಹೋಯಿತು, ಧೂಳಿನರಾಶಿಯು ವಿಪರೀತವಾಗಿದೆ; ಈ ಗೋಡೆಯನ್ನು ಕಟ್ಟುವದು ನಮ್ಮಿಂದಾಗದು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆ ಸಮಯದಲ್ಲಿ ಯೆಹೂದದ ಜನರು, “ಕೆಲಸಗಾರರು ಆಯಾಸಗೊಳ್ಳುತ್ತಿದ್ದಾರೆ; ದಾರಿಯಲ್ಲೆಲ್ಲಾ ತುಂಬಾ ಧೂಳು ಮತ್ತು ಕಸ ಇರುವುದರಿಂದ ನಾವು ಗೋಡೆಕಟ್ಟಡ ಕೆಲಸವನ್ನು ಮುಂದುವರಿಸಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಯೆಹೂದದವರು, “ಹೊರೆ ಹೊರುವವರ ಬಲವು ಕುಂದಿಹೋಯಿತು; ಕಲ್ಲುಮಣ್ಣಿನ ರಾಶಿ ಬಹಳವಾಗಿದೆ; ಈ ಗೋಡೆಯನ್ನು ಪುನಃ ಕಟ್ಟುವುದು ನಮ್ಮಿಂದಾಗದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 4:10
10 ತಿಳಿವುಗಳ ಹೋಲಿಕೆ  

ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಸಮಯವು ಇನ್ನು ಬಂದಿಲ್ಲ” ಎಂದು ಜನರು ಅಂದುಕೊಳ್ಳುತ್ತಾರಲ್ಲಾ.


“ನರಪುತ್ರನೇ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತೂರಿಗೆ ಮುತ್ತಿಗೆ ಹಾಕಿ, ತನ್ನ ಸೈನಿಕರಿಂದ ಅತಿ ಕ್ರೂರವಾಗಿ ಸೇವೆಯನ್ನು ಮಾಡಿಸಿದ್ದಾನೆ; ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲು ಸುಲಿದು ಹೋಗಿದೆ. ಆದರೂ ಆ ಮುತ್ತಿಗೆಯಲ್ಲಿ ಅವನು ಪಟ್ಟ ಶ್ರಮಕ್ಕೆ ಅವನಿಗಾಗಲಿ, ಅವನ ಸೈನಿಕರಿಗಾಗಲಿ ತೂರಿನಿಂದ ಪ್ರತಿಫಲವೇನೂ ಸಿಕ್ಕಲಿಲ್ಲ.”


ಅವರಲ್ಲಿ ಹೊರೆಹೊರುವುದಕ್ಕಾಗಿ ಎಪ್ಪತ್ತು ಸಾವಿರ ಮಂದಿಯನ್ನೂ, ಕಲ್ಲುಗಣಿಗಳಲ್ಲಿ ಕೆಲಸಮಾಡುವುದಕ್ಕಾಗಿ ಎಂಭತ್ತು ಸಾವಿರ ಮಂದಿಯನ್ನೂ, ಕೆಲಸದವರ ಮೇಲ್ವಿಚಾರಣೆಗಾಗಿ ಮೂರು ಸಾವಿರದ ಆರುನೂರು ಮಂದಿಯನ್ನೂ ನೇಮಿಸಿದನು.


ಅವರು ಎಷ್ಕೋಲ್ ತಗ್ಗಿಗೆ ಬಂದು ಆ ದೇಶವನ್ನು ನೋಡಿ ಇಸ್ರಾಯೇಲರಿಗೆ ಅಧೈರ್ಯವನ್ನು ಹುಟ್ಟಿಸಿದ್ದರಿಂದ ಇಸ್ರಾಯೇಲರು ತಮಗೆ ಯೆಹೋವನು ವಾಗ್ದಾನಮಾಡಿದ ದೇಶಕ್ಕೆ ಹೋಗಲು ಆಗಲಿಲ್ಲ.


ಆದರೆ ಅವನ ಜೊತೆಯಲ್ಲಿ ಹೋದವರು, “ಆ ಜನರು ನಮಗಿಂತ ಬಲಿಷ್ಠರು; ಅವರನ್ನು ಜಯಿಸಲು ನಮಗೆ ಶಕ್ತಿಸಾಲುವುದಿಲ್ಲ” ಎಂದು ಹೇಳಿದರು.


ಗಾಯನ ನಿಪುಣರಾದ ಲೇವಿಯರೆಲ್ಲರೂ ಹೊರೆಹೊರುವವರ ಮೇಲ್ವಿಚಾರಕರಾಗಿದ್ದು ಎಲ್ಲಾ ವಿಧವಾದ ಕೆಲಸಮಾಡುವವರನ್ನು ನಡೆಸುತ್ತಿದ್ದರು; ಲೇವಿಯರಲ್ಲಿ ಕೆಲವರು ಲೇಖಕರೂ, ಕೆಲವರು ಅಧಿಕಾರಿಗಳೂ, ದ್ವಾರಪಾಲಕರೂ ಲೇವಿಯರೇ ಆಗಿದ್ದರು.


ತನ್ನ ಸಹೋದರರ ಮತ್ತು ಸಮಾರ್ಯದ ಸೈನ್ಯದವರ ಮುಂದೆಯೂ, “ಬಲಹೀನರಾದ ಈ ಯೆಹೂದ್ಯರು ಮಾಡುವುದೇನು? ಇವರು ತಮ್ಮನ್ನು ಬಲಪಡಿಸಿಕೊಳ್ಳಬೇಕೆಂದಿರುವರೋ? ಯಜ್ಞವನ್ನರ್ಪಿಸುವರೋ? ಈ ದಿನವೇ ಈ ಕೆಲಸವನ್ನು ಮುಗಿಸುವರೇನು? ಸುಟ್ಟುಹೋದ ಪಟ್ಟಣದ ಧೂಳಿನ ರಾಶಿಯೊಳಗೆ ಹುಗಿದುಹೋದ ಕಲ್ಲುಗಳನ್ನು ಬದುಕಿಸಲೂ ಸಾಧ್ಯವೇ?” ಎಂದು ಹೇಳಿದನು.


ನಾವಾದರೋ ನಮ್ಮ ದೇವರಿಗೆ ಮೊರೆಯಿಟ್ಟು ಅವರಿಗೆ ವಿರುದ್ಧವಾಗಿ ಅವರು ಬರುವ ದಾರಿಯಲ್ಲಿ ಹಗಲಿರುಳು ಕಾವಲುಗಾರರನ್ನಿರಿಸಿದೆವು.


ಮತ್ತು ನಮ್ಮ ವಿರೋಧಿಗಳು, “ಅವರಿಗೆ ತಿಳಿಯದಂತೆ, ಗೋಚರವಾಗದಂತೆ ಫಕ್ಕನೆ ಅವರೊಳಗೆ ನುಗ್ಗಿ ಅವರನ್ನು ಕೊಂದು ಕೆಲಸವನ್ನು ನಿಲ್ಲಿಸಿಬಿಡೋಣ” ಎಂದುಕೊಳ್ಳುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು