Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 4:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ನಾನು ಅವರನ್ನು ಸಂದರ್ಶಿಸಿ ಅವರ ಮುಂದೆ ನಿಂತು ಶ್ರೀಮಂತರನ್ನೂ, ಅಧಿಕಾರಿಗಳನ್ನೂ, ಉಳಿದ ಜನರನ್ನೂ ಉದ್ದೇಶಿಸಿ, “ನಿಮ್ಮ ಹಗೆಗಳಿಗೆ ಹೆದರಬೇಡಿರಿ; ಮಹೋನ್ನತನೂ, ಭಯಂಕರನೂ ಆಗಿರುವ ಕರ್ತನನ್ನು ನೆನಪುಮಾಡಿಕೊಂಡು ನಿಮ್ಮ ಸಹೋದರರಿಗಾಗಿಯೂ, ಗಂಡು ಹೆಣ್ಣು ಮಕ್ಕಳಿಗಾಗಿಯೂ, ಹೆಂಡತಿಯರಿಗಾಗಿಯೂ, ನಿಮ್ಮ ಮನೆಗಳಿಗೋಸ್ಕರವೂ ಹೋರಾಡಿರಿ” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವರನ್ನು ಸಂದರ್ಶಿಸಿ, ಅವರ ಮುಂದೆ ನಿಂತು, ಶ್ರೀಮಂತರನ್ನೂ ಅಧಿಕಾರಿಗಳನ್ನೂ ಉಳಿದ ಜನರನ್ನೂ ಸಂಬೋಧಿಸಿ, “ನಿಮ್ಮ ಹಗೆಗಳಿಗೆ ಹೆದರಬೇಡಿ; ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆದ ಸರ್ವೇಶ್ವರಸ್ವಾಮಿಯನ್ನು ಸ್ಮರಿಸಿಕೊಂಡು, ನಿಮ್ಮ ಸಹೋದರರಿಗಾಗಿ, ಮಡದಿಮಕ್ಕಳಿಗಾಗಿ ಹಾಗು ನಿಮ್ಮ ಮನೆಮಠಗಳಿಗಾಗಿ ಕಾದಾಡಿರಿ,” ಎಂದು ಹುರಿದುಂಬಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವರನ್ನು ಸಂದರ್ಶಿಸಿ ಅವರ ಮುಂದೆ ನಿಂತು ಶ್ರೀಮಂತರನ್ನೂ ಅಧಿಕಾರಿಗಳನ್ನೂ ಉಳಿದ ಜನರನ್ನೂ ಸಂಬೋಧಿಸಿ - ನಿಮ್ಮ ಹಗೆಗಳಿಗೆ ಹೆದರಬೇಡಿರಿ; ಮಹೋನ್ನತನೂ ಭಯಂಕರನೂ ಆಗಿರುವ ಕರ್ತನನ್ನು ನೆನಪು ಮಾಡಿಕೊಂಡು ನಿಮ್ಮ ಸಹೋದರರಿಗೋಸ್ಕರವೂ ಗಂಡು ಹೆಣ್ಣು ಮಕ್ಕಳಿಗೋಸ್ಕರವೂ ಹೆಂಡತಿಯರಿಗೋಸ್ಕರವೂ ನಿಮ್ಮ ಮನೆಗಳಿಗೋಸ್ಕರವೂ ಕಾದಾಡಿರಿ ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಮಗೆದುರಾಗಿ ಬಂದಿದ್ದ ಪರಿಸ್ಥಿತಿಯನ್ನು ನಾನು ಚೆನ್ನಾಗಿ ಅವಲೋಕಿಸಿ ನಮ್ಮ ಜನರೊಂದಿಗೆ ಕುಟುಂಬ ಕುಟುಂಬವಾಗಿ, ಅಧಿಕಾರಿಗಳಿಗೆ ಮತ್ತು ಉಳಿದ ಜನರಿಗೆ ಹೀಗೆ ಹೇಳಿದೆನು: “ನಮ್ಮ ವೈರಿಗಳ ಬಗ್ಗೆ ನೀವು ಏನೂ ಹೆದರಬೇಡಿರಿ. ನಮ್ಮ ದೇವರನ್ನು ನೆನಪುಮಾಡಿರಿ. ಯೆಹೋವನು ಬಲಶಾಲಿಯೂ ಸರ್ವಶಕ್ತನೂ ಆಗಿದ್ದಾನೆ. ನೀವು ನಿಮ್ಮ ಸಹೋದರರಿಗಾಗಿ, ನಿಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ನಿಮ್ಮನಿಮ್ಮ ಹೆಂಡತಿಯರಿಗಾಗಿ ಮತ್ತು ಮನೆಗಳಿಗಾಗಿ ಹೋರಾಡಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾನು ಅವರನ್ನು ಸಂದರ್ಶಿಸಿ, ಅವರ ಮುಂದೆ ನಿಂತು ಶ್ರೇಷ್ಠರಿಗೂ, ಅಧಿಕಾರಸ್ಥರಿಗೂ, ಇತರ ಜನರಿಗೂ ಸಂಬೋಧಿಸಿ, “ನೀವು ಅವರಿಗೋಸ್ಕರ ಭಯಪಡಬೇಡಿರಿ. ದೊಡ್ಡವನಾಗಿಯೂ, ಭಯಂಕರನಾಗಿಯೂ ಇರುವ ಯೆಹೋವ ದೇವರನ್ನು ಜ್ಞಾಪಕಮಾಡಿಕೊಂಡು, ನಿಮ್ಮ ಪುತ್ರರಿಗೋಸ್ಕರ, ಪುತ್ರಿಯರಿಗೋಸ್ಕರ, ನಿಮ್ಮ ಹೆಂಡತಿಯರಿಗೋಸ್ಕರ, ನಿಮ್ಮ ಮನೆಗಳಿಗೋಸ್ಕರ ಯುದ್ಧಮಾಡಿರಿ,” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 4:14
34 ತಿಳಿವುಗಳ ಹೋಲಿಕೆ  

ಧೈರ್ಯದಿಂದಿರು, ನಮ್ಮ ಜನರಿಗೋಸ್ಕರವೂ ಮತ್ತು ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ನಮ್ಮ ಶೌರ್ಯವನ್ನು, ಪೌರುಷವನ್ನು ತೋರಿಸೋಣ. ಯೆಹೋವನು ತನ್ನ ಚಿತ್ತದಂತೆ ಮಾಡಲಿ” ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು.


ಹೀಗಿರುವುದರಿಂದ ಯೆಹೋವನಿಗೆ ತಿರುಗಿಬೀಳಬೇಡಿರಿ. ಇದಲ್ಲದೆ ಆ ದೇಶದ ಜನರಿಗೆ ಭಯಪಡಬೇಡಿರಿ. ಏಕೆಂದರೆ ನಾವು ಅವರನ್ನು ಸುಲಭವಾಗಿ ಜಯಿಸಿಬಿಡುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ, ಯೆಹೋವನು ನಮ್ಮ ಸಂಗಡ ಇದ್ದಾನೆ. ಅವರಿಗೆ ಭಯಪಡಬೇಡಿರಿ” ಎಂದರು.


ಆದ್ದರಿಂದ, “ಕರ್ತನು ನನ್ನ ಸಹಾಯಕನು ನಾನು ಭಯಪಡುವುದಿಲ್ಲ, ಮನುಷ್ಯನು ನನಗೆ ಏನು ಮಾಡಿಯಾನು?” ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.


ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.


ನೀವು ದೇವರಿಗೆ, “ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ; ನಿನ್ನ ಪರಾಕ್ರಮದ ಮಹತ್ತಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು;


ನಮ್ಮ ರಕ್ಷಕನಾದ ದೇವರೇ, ನೀನು ಭಯಂಕರ ಮಹತ್ಕಾರ್ಯಗಳನ್ನು ನಡೆಸಿ, ನಿನ್ನ ನೀತಿಗನುಸಾರವಾಗಿ ನಮಗೆ ಸದುತ್ತರವನ್ನು ದಯಪಾಲಿಸುವಿ. ಭೂಮಿಯ ಎಲ್ಲಾ ಕಡೆಯವರ, ಬಹುದೂರ ಸಮುದ್ರದ ಆಚೆಯ ಎಲ್ಲಾ ನಿವಾಸಿಗಳ ನಂಬಿಕೆಗೆ ಆಧಾರನು ನೀನೇ.


ಕೆಲವರು ರಥಬಲದಲ್ಲಿ, ಕೆಲವರು ಅಶ್ವಬಲದಲ್ಲಿ ಹೆಚ್ಚಳಪಡುತ್ತಾರೆ; ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ ಹೆಚ್ಚಳಪಡುತ್ತೇವೆ.


ಆ ವಿಜ್ಞಾಪನೆಗಳಲ್ಲಿ ನಾನು, “ಯೆಹೋವನೇ, ಮಹೋನ್ನತನೂ, ಭಯಭಕ್ತಿಗೂ ಪಾತ್ರನಾಗಿರುವ ಪರಲೋಕದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವನೇ,


“ಶೂರರಾಗಿರಿ, ಧೈರ್ಯದಿಂದಿರಿ; ಅಶ್ಶೂರದ ಅರಸನಿಗೂ ಅವನೊಂದಿಗಿರುವ ಆ ದೊಡ್ಡ ಗುಂಪಿಗೂ ಅಂಜಬೇಡಿರಿ, ಕಳವಳಪಡಬೇಡಿರಿ. ಅವನಿಗಿರುವ ಸಹಾಯಕ್ಕಿಂತ ನಮಗಿರುವ ಸಹಾಯವು ದೊಡ್ಡದ್ದು. ಅವನೊಂದಿಗಿರುವದಕ್ಕಿಂತ ದೊಡ್ಡವನಾಗಿರುವವನು ನಮ್ಮೊಂದಿಗಿದ್ದಾನೆ.


ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು” ಎಂದು ಹೇಳಿದನು.


ನಿಮ್ಮ ದೇವರಾದ ಯೆಹೋವನು ದೇವಾಧಿದೇವನಾಗಿಯೂ, ಕರ್ತರ ಕರ್ತನಾಗಿಯೂ ಇದ್ದಾನೆ. ಆತನು ಪರಮದೇವರೂ, ಪರಾಕ್ರಮಿಯೂ ಮತ್ತು ಭಯಂಕರನೂ ಆಗಿದ್ದಾನೆ. ಆತನು ಪಕ್ಷಪಾತ ಮಾಡುವವನಲ್ಲ ಹಾಗೂ ಲಂಚತೆಗೆದುಕೊಳ್ಳುವವನಲ್ಲ.


ನಿಮ್ಮ ದೇವರಾದ ಯೆಹೋವನು ಆ ದೇಶವನ್ನು ನಿಮಗೇ ಕೊಟ್ಟಿದ್ದಾನೆ; ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಹೇಳಿದಂತೆ ಆ ಬೆಟ್ಟವನ್ನು ಹತ್ತಿ ಸ್ವಾಧೀನಮಾಡಿಕೊಳ್ಳಿರಿ; ನೀವು ಭಯಪಡದೆ ಧೈರ್ಯವಾಗಿಯೇ ಇರಬೇಕು” ಎಂದು ಹೇಳಿದೆನು.


ಹಳೆಯ ದಿನಗಳನ್ನು ನೆನಪುಮಾಡಿಕೊಳ್ಳುತ್ತೇನೆ; ನಿನ್ನ ಎಲ್ಲಾ ಕಾರ್ಯಗಳನ್ನು ಧ್ಯಾನಿಸುತ್ತೇನೆ; ನಿನ್ನ ಕೈಕೆಲಸಗಳನ್ನು ಸ್ಮರಿಸುತ್ತೇನೆ;


ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಆತನ ಆಳ್ವಿಕೆ ನರರಲ್ಲಿ ಭಯ ಹುಟ್ಟಿಸತಕ್ಕದ್ದಾಗಿದೆ.


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ.


ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೆನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು?


ಉತ್ತರದಿಕ್ಕಿನಿಂದ ಹೊನ್ನಿನ ಹೊಳಪು ಹೊರಡುವುದು, ದೇವರು ಭಯಂಕರ ತೇಜಸ್ಸನ್ನು ಧರಿಸಿಕೊಂಡಿದ್ದಾನೆ.


ಕಷ್ಟದ ದಿನಗಳು ಬರುವುದಕ್ಕೆ ಮೊದಲು, “ಇವುಗಳಲ್ಲಿ ನನಗೆ ಸಂತೋಷವಿಲ್ಲ” ಎಂದು, ನೀನು ಹೇಳುವ ವರ್ಷಗಳು ಸಮೀಪಿಸುವುದರೊಳಗಾಗಿ, ಯೌವನದಲ್ಲಿಯೇ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸು.


ಯೆಹೋವನೇ ನಿಮಗಾಗಿ ಯುದ್ಧಮಾಡುವನು. ನೀವಂತು ಸುಮ್ಮನೇ ನಿಂತುಕೊಂಡಿರಿ” ಎಂದು ಹೇಳಿದನು.


ಯೆಹೋವನು ಅವರ ರಥಗಳ ಚಕ್ರದ ಕೀಲುಗಳಲ್ಲಿ ವ್ಯತ್ಯಾಸ ಮಾಡಿಬಿಟ್ಟದ್ದರಿಂದ ಐಗುಪ್ತರು ಬಹು ಕಷ್ಟದಿಂದ ರಥಗಳನ್ನು ಸಾಗಿಸಿಕೊಂಡು ಹೋಗಬೇಕಾಯಿತು. ಆಗ ಐಗುಪ್ತ್ಯರು, “ನಾವು ಇಸ್ರಾಯೇಲರ ಮುಂದೆ ನಿಲ್ಲಲಾರೆವು, ಓಡಿ ಹೋಗೋಣ, ಯೆಹೋವನು ಅವರಿಗೋಸ್ಕರ ನಮಗೆ ವಿರೋಧವಾಗಿ ಯುದ್ಧಮಾಡುತ್ತಿದ್ದಾನೆ” ಎಂದು ಹೇಳಿಕೊಂಡರು.


ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಕೊಂಬನ್ನು ಊದಿದನು. ಆಗ ಇಸ್ರಾಯೇಲರು ಅವನ ಬಳಿಗೆ ಬಂದು, ಗಟ್ಟಾ ಇಳಿದು ಅವನ ಸಂಗಡ ಹೊರಟರು.


ನಿಬಂಧನ ದ್ರೋಹಿಗಳು ಅವನ ನಯನುಡಿಗಳಿಂದ ಕೆಟ್ಟುಹೋಗುವರು. ತಮ್ಮ ದೇವರನ್ನು ಅರಿತವರೋ ದೃಢಚಿತ್ತರಾಗಿ ಕೃತಾರ್ಥರಾಗುವರು.


ಆಗ ಯೆಹೋವನು ಹೊರಟು, ಯುದ್ಧದ ದಿನದಲ್ಲಿ ಹೇಗೋ ಹಾಗೆಯೇ ಆ ಜನಾಂಗಗಳಿಗೆ ಪ್ರತಿಭಟಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು