Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 4:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಮ್ಮ ಶತ್ರುಗಳು ತಮ್ಮ ಉದ್ದೇಶ ನಮಗೆ ಗೊತ್ತಾಯಿತೆಂದೂ ದೇವರು ಅದನ್ನು ವ್ಯರ್ಥಮಾಡಿದನೆಂದೂ ತಿಳಿದುಕೊಂಡಾಗ ಅವರು ನಮ್ಮನ್ನು ಬಿಟ್ಟು ಹೋದರು. ನಾವೆಲ್ಲರೂ ನಮ್ಮ ನಮ್ಮ ಪೌಳಿಗೋಡೆಯ ಕೆಲಸವನ್ನು ಪುನಃ ಪ್ರಾರಂಭಿಸಲು ತೊಡಗಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಮ್ಮ ಶತ್ರುಗಳು ತಮ್ಮ ಹಂಚಿಕೆ ನಮಗೆ ಗೊತ್ತಾಯಿತೆಂದೂ ದೇವರು ಅದನ್ನು ವ್ಯರ್ಥಮಾಡಿದರೆಂದೂ ತಿಳಿದುಕೊಂಡರು. ನಮ್ಮನ್ನು ಬಿಟ್ಟುಹೋದರು; ನಾವೆಲ್ಲರು ನಮ್ಮ ನಮ್ಮ ಗೋಡೆಯ ಕೆಲಸಕ್ಕೆ ಮತ್ತೆ ಕೈಹಾಕಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಮ್ಮ ಶತ್ರುಗಳು ತಮ್ಮ ಹಂಚಿಕೆಯು ನಮಗೆ ಗೊತ್ತಾಯಿತೆಂದೂ ದೇವರು ಅದನ್ನು ವ್ಯರ್ಥ ಮಾಡಿದನೆಂದೂ ತಿಳಿದುಕೊಂಡಾಗ [ಅವರು ನಮ್ಮನ್ನು ಬಿಟ್ಟು ಹೋದರು;] ನಾವೆಲ್ಲರೂ ನಮ್ಮ ನಮ್ಮ ಗೋಡೆಯ ಕೆಲಸಕ್ಕೆ ತಿರಿಗಿ ಹೋದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅವರ ಕುತಂತ್ರವು ನಮಗೆ ಗೊತ್ತಾಯಿತೆಂದು ವೈರಿಗಳಿಗೆ ತಿಳಿದಾಗ ದೇವರೇ ಅವರ ಯೋಜನೆಯನ್ನು ನಿಷ್ಫಲಮಾಡಿದನೆಂದು ಅವರು ತಿಳಿದರು. ಮತ್ತೆ ನಾವೆಲ್ಲಾ ಕಟ್ಟುವ ಕೆಲಸಕ್ಕೆ ಕೈಹಾಕಿದೆವು. ಅವರವರ ಭಾಗಕ್ಕೆ ಜನರು ತೆರಳಿ ತಮ್ಮ ಕೆಲಸವನ್ನು ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಿಮ್ಮ ಶತ್ರುಗಳು ಅವರ ಕುತಂತ್ರವು ನಮಗೆ ಗೊತ್ತಾಯಿತೆಂದು ದೇವರು ಅದನ್ನು ವ್ಯರ್ಥ ಮಾಡಿದನೆಂದು ತಿಳಿದುಕೊಂಡರು. ನಮ್ಮನ್ನು ಬಿಟ್ಟುಹೋದರು. ನಾವೆಲ್ಲರು ನಮ್ಮ ನಮ್ಮ ಗೋಡೆಯ ಕೆಲಸಕ್ಕೆ ಮತ್ತೆ ಕೈಹಾಕಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 4:15
13 ತಿಳಿವುಗಳ ಹೋಲಿಕೆ  

ಇದನ್ನು ಕೇಳಿ ಅಬ್ಷಾಲೋಮನೂ, ಎಲ್ಲಾ ಇಸ್ರಾಯೇಲರೂ, “ಅರ್ಕೀಯನಾದ ಹೂಷೈಯ ಆಲೋಚನೆಯು ಅಹೀತೋಫೇಲನ ಆಲೋಚನೆಗಿಂತ ಒಳ್ಳೆಯದಾಗಿದೆ” ಎಂದರು. ಯೆಹೋವನು ಅಬ್ಷಾಲೋಮನಿಗೆ ಕೇಡನ್ನುಂಟುಮಾಡಬೇಕೆಂದು ಅಹೀತೋಫೇಲನ ಆಲೋಚನೆಯನ್ನು ನಿರರ್ಥಕಮಾಡಿದನು.


ಜಾಗ್ರತೆ ಬೇಕಾದಲ್ಲಿ ಆಲಸ್ಯವಾಗಿರದೆ ಆಸಕ್ತಚಿತ್ತರಾಗಿದ್ದು ಕರ್ತನ ಸೇವೆ ಮಾಡುವವರಾಗಿರಿ.


ನಾನು ಕೊಚ್ಚಿಕೊಳ್ಳುವವರ ಶಕುನಗಳನ್ನು ನಿರರ್ಥಕಪಡಿಸಿ, ಕಣಿಹೇಳುವವರನ್ನು ಮರುಳುಗೊಳಿಸಿ, ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳಿವಳಿಕೆಯನ್ನು ಹುಚ್ಚುತನವಾಗ ಮಾಡುವೆನು.


ಇದಲ್ಲದೆ ನಾವು ನಿಮಗೆ ಆಜ್ಞೆ ಕೊಟ್ಟಿರುವ ಪ್ರಕಾರ ನೀವು ಮತ್ತೊಬ್ಬರ ವಿಷಯದಲ್ಲಿ ತಲೆಹಾಕದೆ ಸುಮ್ಮಗಿದ್ದು, ಸ್ವಂತ ಕಾರ್ಯಗಳನ್ನೇ ನೋಡಿಕೊಳ್ಳುತ್ತಾ, ಕೈಯಾರೆ ಕೆಲಸಮಾಡಿ ದುಡಿಯಿರಿ.


ಅದು ಒಬ್ಬ ಮನುಷ್ಯನು ತನ್ನ ಮನೆಯನ್ನು ಬಿಟ್ಟು ದೂರಪ್ರಯಾಣಕ್ಕೆ ಹೋಗುವಾಗ ತನ್ನ ಸೇವಕರಿಗೆ ಮನೇ ಅಧಿಕಾರವನ್ನು ಒಪ್ಪಿಸಿಕೊಟ್ಟು ಪ್ರತಿಯೊಬ್ಬನಿಗೆ ಅವನವನ ಕೆಲಸಗಳನ್ನು ಕೊಟ್ಟು ಬಾಗಿಲು ಕಾಯುವವನಿಗೆ, ನೀನು ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇರುತ್ತದೆ” ಎಂದು ನಾನು ನಿಮಗೆ ಹೇಳುತ್ತಿದ್ದೇನೆ.


ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದುಹೋಗುವುದು. ಅಪ್ಪಣೆ ಮಾಡಿರಿ, ಅದು ನಿಲ್ಲುವುದಿಲ್ಲ. ಏಕೆಂದರೆ ದೇವರು ನಮ್ಮ ಕೂಡ ಇದ್ದಾನಷ್ಟೆ.


ಯಾವ ಜ್ಞಾನವೂ, ಯಾವ ವಿವೇಕವೂ, ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವುದಿಲ್ಲ.


ಅಬ್ಷಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು, “ಯೆಹೋವನೇ ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು” ಎಂದು ಪ್ರಾರ್ಥಿಸಿದನು.


ಅಂದಿನಿಂದ ನನ್ನ ಸ್ವಂತ ಆಳುಗಳಲ್ಲಿ ಅರ್ಧ ಮಂದಿ ಕೆಲಸದಲ್ಲಿ ಸಹಾಯಮಾಡಿದರು, ಅರ್ಧ ಮಂದಿ ಕವಚವನ್ನು ಧರಿಸಿಕೊಂಡು ಬರ್ಜಿ, ಗುರಾಣಿ, ಬಿಲ್ಲುಗಳನ್ನು ಹಿಡಿದುಕೊಂಡು ನಿಂತರು. ಅದೇ ಪ್ರಕಾರ ಈ ಕಾರ್ಯಕ್ಕಾಗಿ ನೇಮಿಸಲ್ಪಟ್ಟ ಅಧಿಕಾರಿಗಳು ಗೋಡೆಕಟ್ಟುವ ಯೆಹೂದ್ಯರ ಹಿಂದೆ ನಿಂತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು