Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 5:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರ ಹೊಲ, ದ್ರಾಕ್ಷಿತೋಟ, ಎಣ್ಣೆಮರಗಳ ತೋಪು, ಮನೆ ಇವುಗಳನ್ನೂ ನೀವು ಕೊಟ್ಟ ಹಣ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಿಗೋಸ್ಕರ ನೂರಕ್ಕೆ ಒಂದರಂತೆ ನೀವು ತೆಗೆದುಕೊಂಡಿರುವ ಬಡ್ಡಿಯನ್ನೂ ದಯವಿಟ್ಟು ಈ ಹೊತ್ತೇ ಹಿಂದಕ್ಕೆ ಕೊಡಿರಿ” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವರ ಹೊಲ, ದ್ರಾಕ್ಷೀತೋಟ, ಎಣ್ಣೆಮರಗಳ ತೋಪು, ಮನೆ ಇವುಗಳನ್ನು ಹಿಂದಕ್ಕೆ ಕೊಟ್ಟುಬಿಡಿ. ನೀವು ಕೊಟ್ಟ ಹಣ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಿಗೆ ಶೇಕಡಾ ಇಷ್ಟೆಂದು ವಸೂಲಿಮಾಡುವ ಹಕ್ಕನ್ನೂ ಕೂಡ ದಯವಿಟ್ಟು ಈ ದಿನವೇ ರದ್ದುಗೊಳಿಸಿ,” ಎಂದು ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರ ಹೊಲ, ದ್ರಾಕ್ಷೇತೋಟ, ಎಣ್ಣೆಮರಗಳ ತೋಪು, ಮನೆ ಇವುಗಳನ್ನೂ ನೀವು ಕೊಟ್ಟ ಹಣ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಿಗೋಸ್ಕರ ಶೇಕಡಾ ಇಷ್ಟೆಂದು ತೆಗೆದುಕೊಂಡಿರುವ ಬಡ್ಡಿಯನ್ನೂ ದಯವಿಟ್ಟು ಈಹೊತ್ತೇ ಹಿಂದಕ್ಕೆ ಕೊಡಿರಿ ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವರಿಂದ ಕಿತ್ತುಕೊಂಡ ಹೊಲಗದ್ದೆಗಳನ್ನು, ದ್ರಾಕ್ಷಾತೋಟ, ಎಣ್ಣೆಮರಗಳ ತೋಟ ಮತ್ತು ಅವರ ಮನೆಗಳನ್ನು ಅವರಿಗೆ ಈಗಲೇ ಹಿಂದಕ್ಕೆ ಕೊಡಿರಿ. ಅವರಿಂದ ವಸೂಲಿ ಮಾಡಿದ ಬಡ್ಡಿಯನ್ನು ಹಿಂದಕ್ಕೆ ಕೊಡಿರಿ. ನೀವು ಯಾವ ಯಾವದಕ್ಕೆ ಬಡ್ಡಿ ವಸೂಲಿ ಮಾಡಿರುವಿರೋ ಎಲ್ಲವನ್ನು ಹಿಂದಕ್ಕೆ ಕೊಡಿರಿ” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರ ಹೊಲ, ದ್ರಾಕ್ಷಿತೋಟ, ಓಲಿವ್ ಎಣ್ಣೆಮರಗಳ ತೋಪು, ಮನೆ ಇವುಗಳನ್ನು ಹಿಂದಕ್ಕೆ ಕೊಟ್ಟು ಬಿಡಿ; ನೀವು ಕೊಟ್ಟ ಹಣ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಿಗೆ ಶೇಕಡಾ ಇಷ್ಟೆಂದು ವಸೂಲಿ ಮಾಡುವ ಹಕ್ಕನ್ನೂ ಕೂಡ ದಯವಿಟ್ಟು ಈ ದಿನವೇ ರದ್ದುಗೊಳಿಸಿ,” ಎಂದು ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 5:11
9 ತಿಳಿವುಗಳ ಹೋಲಿಕೆ  

ನೋಡಿರಿ, ಕೇಡಿನ ಬಂಧನಗಳನ್ನು ಬಿಚ್ಚುವುದು, ನೊಗಹೊರಿಸುವ ಹುರಿಯನ್ನು ಕಳಚುವುದು, ಜಜ್ಜಿ ಹೋದವರನ್ನು ಬಿಡುಗಡೆ ಮಾಡುವುದು, ನೊಗಗಳನ್ನೆಲ್ಲಾ ಮುರಿಯುವುದು,


ಹಾಗಾದರೆ ಮಾನಸಾಂತರಕ್ಕೆ ಯೋಗ್ಯವಾದ ಫಲಗಳನ್ನು ತೋರಿಸಿರಿ. ‘ಅಬ್ರಹಾಮನು ನಮಗೆ ತಂದೆಯಲ್ಲವೇ’ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ.


ಅವನು ಕರುಣೆಯಿಲ್ಲದೆ ಹೀಗೆ ಮಾಡಿದ್ದರಿಂದ ಆ ಕುರಿಮರಿಗಾಗಿ ನಾಲ್ಕರಷ್ಟು ಹಿಂದಕ್ಕೆ ಕೊಡಬೇಕು” ಎಂದನು.


ಇಲ್ಲಿ ನಿಂತುಕೊಂಡಿರುವ ನಾನು ಯಾರ ಎತ್ತನ್ನಾಗಲಿ, ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರೂ ವಂಚಿಸಿ, ಪೀಡಿಸಿದ್ದೂ, ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಮಾಡಿದ್ದೂ ಉಂಟೋ? ಇದ್ದರೆ ಯೆಹೋವನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ” ಅಂದನು.


ತುಂಬಿದ ಮನೆಗಳನ್ನೂ, ನೀವು ತೋಡದ ನೀರುಗುಂಡಿಗಳನ್ನೂ, ನೀವು ಬೆಳಸದ ದ್ರಾಕ್ಷಿತೋಟಗಳನ್ನೂ ಮತ್ತು ಎಣ್ಣೆಮರಗಳನ್ನೂ ಅನುಭವಿಸುತ್ತಾ ತೃಪ್ತರಾಗಿರುವಾಗ,


ನಾನೂ ನನ್ನ ಸಹೋದರರೂ ಸೇವಕರೂ ಸಹ ಅವರಿಗೆ ಹಣವನ್ನೂ, ಧಾನ್ಯವನ್ನೂ ಸಾಲವಾಗಿ ಕೊಟ್ಟಿದ್ದೇವೆ. ಬಡ್ಡಿತೆಗೆದುಕೊಳ್ಳುವ ಈ ಪದ್ಧತಿಯನ್ನು ಬಿಟ್ಟುಬಿಡೋಣ.


ಅದಕ್ಕೆ ಅವರು, “ನಾವು ಅವರಿಂದ ತೆಗೆದುಕೊಂಡದ್ದನ್ನು ಹಿಂದಕ್ಕೆ ಕೊಡುತ್ತೇವೆ, ಅವರಿಂದ ಏನೂ ಕೇಳುವುದಿಲ್ಲ, ನೀನು ಹೇಳಿದಂತೆಯೇ ಮಾಡುತ್ತೇವೆ” ಎಂದು ಉತ್ತರಕೊಟ್ಟರು. ಆಗ ನಾನು ಯಾಜಕರನ್ನು ಕರೆಸಿ ಈ ಮಾತಿನಂತೆ ನಡೆಯುವುದಾಗಿ ಅವರಿಂದ ಪ್ರಮಾಣ ಮಾಡಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು