Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 5:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದಕ್ಕೆ ಅವರು, “ನಾವು ಅವರಿಂದ ತೆಗೆದುಕೊಂಡದ್ದನ್ನು ಹಿಂದಕ್ಕೆ ಕೊಡುತ್ತೇವೆ, ಅವರಿಂದ ಏನೂ ಕೇಳುವುದಿಲ್ಲ, ನೀನು ಹೇಳಿದಂತೆಯೇ ಮಾಡುತ್ತೇವೆ” ಎಂದು ಉತ್ತರಕೊಟ್ಟರು. ಆಗ ನಾನು ಯಾಜಕರನ್ನು ಕರೆಸಿ ಈ ಮಾತಿನಂತೆ ನಡೆಯುವುದಾಗಿ ಅವರಿಂದ ಪ್ರಮಾಣ ಮಾಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವರು, “ಹಿಂದಕ್ಕೆ ಕೊಡುತ್ತೇವೆ; ಅವರಿಂದ ಏನೂ ಕೇಳುವುದಿಲ್ಲ. ನೀವು ಹೇಳಿದಂತೆಯೇ, ಮಾಡುತ್ತೇವೆ,” ಎಂದು ಉತ್ತರಕೊಟ್ಟರು. ಆಗ ನಾನು ಯಾಜಕರನ್ನು ಕರೆಯಿಸಿದೆ; ಯಾಜಕರ ಮುಂದೆ, ತಾವು ಕೊಟ್ಟ ಮಾತಿನಂತೆ ನಡೆಯುವುದಾಗಿ ಪ್ರಮಾಣ ಮಾಡಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವರು - ಹಿಂದಕ್ಕೆ ಕೊಡುತ್ತೇವೆ; ಅವರಿಂದ ಏನೂ ಕೇಳುವದಿಲ್ಲ. ನೀನು ಹೇಳಿದಂತೆಯೇ ಮಾಡುತ್ತೇವೆ ಎಂದು ಉತ್ತರಕೊಟ್ಟರು. ಆಗ ನಾನು ಯಾಜಕರನ್ನು ಕರಿಸಿ ಈ ಮಾತಿನಂತೆ ನಡೆಯುವದಾಗಿ ಅವರಿಂದ ಪ್ರಮಾಣ ಮಾಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ಶ್ರೀಮಂತರೂ ಅಧಿಕಾರಿಗಳೂ, “ನಾವು ಹಿಂದಕ್ಕೆ ಕೊಡುತ್ತೇವೆ. ಅವರಿಂದ ನಾವು ಹೆಚ್ಚೇನೂ ಕೇಳುವುದಿಲ್ಲ. ನೆಹೆಮೀಯನೇ, ನೀನು ಹೇಳಿದಂತೆಯೇ ನಾವು ಮಾಡುತ್ತೇವೆ” ಎಂದರು. ಆಗ ನಾನು ದೇವರ ಮುಂದೆ ಅವರಿಂದ ಪ್ರತಿಜ್ಞೆ ಮಾಡಿಸಲು ಯಾಜಕರನ್ನು ಕರೆದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅದಕ್ಕವರು, “ನಾವು ಹಿಂದಕ್ಕೆ ಕೊಡುತ್ತೇವೆ. ಅವರಿಂದ ಏನೂ ಕೇಳುವುದಿಲ್ಲ. ನೀನು ಹೇಳಿದ ಹಾಗೆ ಮಾಡುತ್ತೇವೆ,” ಎಂದರು. ಆಗ ನಾನು ಯಾಜಕರನ್ನು ಕರೆದು, ಅವರು ಈ ಮಾತಿನ ಪ್ರಕಾರ ಮಾಡುವ ಹಾಗೆ ಅವರಿಂದ ಪ್ರಮಾಣವನ್ನು ತೆಗೆದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 5:12
15 ತಿಳಿವುಗಳ ಹೋಲಿಕೆ  

ಆಗ ಎಜ್ರನು ಎದ್ದು ಯಾಜಕರ ಮತ್ತು ಲೇವಿಯರ ಮುಖ್ಯಸ್ಥರಿಗೂ, ಎಲ್ಲಾ ಇಸ್ರಾಯೇಲರಿಗೂ ಈ ಪ್ರಕಾರ ನಡೆಯುವುದಾಗಿ ಪ್ರಮಾಣಮಾಡಬೇಕೆಂದು ಹೇಳಲು ಅವರು ಹಾಗೆಯೇ ಪ್ರಮಾಣಮಾಡಿದರು.


ಆದರೆ ಜಕ್ಕಾಯನು ನಿಂತುಕೊಂಡು “ಕರ್ತನಿಗೆ, ಕರ್ತನೇ, ನೋಡು, ನನ್ನ ಆಸ್ತಿಯಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ ಮತ್ತು ನಾನು ಅನ್ಯಾಯವಾಗಿ ಯಾರಿಂದ ಏನಾದರೂ ಕಿತ್ತುಕೊಂಡಿದ್ದೇಯಾದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ” ಎಂದು ಹೇಳಿದನು.


ಮಹಾಯಾಜಕನು ಯೇಸುವಿಗೆ, “ನಿನಗೆ ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ಕೇಳುತ್ತಿದ್ದಾನೆ; ನೀನು ದೇವಕುಮಾರನಾದ ಕ್ರಿಸ್ತನಾದರೆ ನಮಗೆ ಹೇಳಬೇಕು” ಅಂದನು.


ಅವರನ್ನು ಶಪಿಸಿ, ಅವರಲ್ಲಿ, ಕೆಲವರನ್ನು ಹೊಡೆದು ಅವರ ಕೂದಲುಗಳನ್ನು ಕಿತ್ತು,


ದೇಶನಿವಾಸಿಗಳು ಮಾರುವುದಕ್ಕೋಸ್ಕರ ತರುವ ಯಾವ ಸರಕುಗಳನ್ನೂ, ಧಾನ್ಯವನ್ನೂ, ಸಬ್ಬತ್ ಮೊದಲಾದ ಪರಿಶುದ್ಧ ದಿನಗಳಲ್ಲಿ ಅವುಗಳನ್ನು ನಾವು ಕೊಂಡುಕೊಳ್ಳುವುದಿಲ್ಲ. ಪ್ರತಿ ಏಳನೆಯ ವರ್ಷದ ಭೂಮಿಯ ಸಾಗುವಳಿಯನ್ನೂ ಇತರರು ಕೊಡಬೇಕಾದ ಸಾಲವನ್ನೂ ಮನ್ನಾ ಮಾಡಿಬಿಡುತ್ತೇವೆ.


ಮುಖಂಡರು ತಮ್ಮ ಸಹೋದರರೊಂದಿಗೆ ಸೇರಿಕೊಂಡು, ತಾವು ದೇವರ ಸೇವಕನಾದ ಮೋಶೆಯ ಮುಖಾಂತರ ಕೊಡಲ್ಪಟ್ಟ ದೇವರ ಧರ್ಮೋಪದೇಶವನ್ನು ಅನುಸರಿಸಿ ತಮ್ಮ ಕರ್ತನಾದ ಯೆಹೋವನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಅನುಸರಿಸಿ ನಡೆಯುವುದಾಗಿ ಆಣೆಯಿಟ್ಟು ಪ್ರಮಾಣ ಮಾಡಿದರು. ಹೇಗೆಂದರೆ:


ಆಗ ಕೂಡಿಬಂದವರೆಲ್ಲರೂ ಗಟ್ಟಿಯಾಗಿ, “ನೀನು ಹೇಳಿದಂತೆಯೇ ಮಾಡುವುದು ನಮ್ಮ ಕರ್ತವ್ಯ.


ಅವರ ಹೊಲ, ದ್ರಾಕ್ಷಿತೋಟ, ಎಣ್ಣೆಮರಗಳ ತೋಪು, ಮನೆ ಇವುಗಳನ್ನೂ ನೀವು ಕೊಟ್ಟ ಹಣ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಿಗೋಸ್ಕರ ನೂರಕ್ಕೆ ಒಂದರಂತೆ ನೀವು ತೆಗೆದುಕೊಂಡಿರುವ ಬಡ್ಡಿಯನ್ನೂ ದಯವಿಟ್ಟು ಈ ಹೊತ್ತೇ ಹಿಂದಕ್ಕೆ ಕೊಡಿರಿ” ಎಂದು ಹೇಳಿದೆನು.


ಈ ದೇಶನಿವಾಸಿಗಳಿಗೆ ನಮ್ಮ ಹೆಣ್ಣುಗಳನ್ನು ಕೊಡುವುದಿಲ್ಲ ಮತ್ತು ನಮ್ಮ ಗಂಡು ಮಕ್ಕಳಿಗೋಸ್ಕರ ಅವರಿಂದ ಹೆಣ್ಣುಗಳನ್ನು ತೆಗೆದುಕೊಳ್ಳುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು