Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 5:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ಮನಸ್ಸಿನಲ್ಲಿ ಸ್ವಲ್ಪ ಆಲೋಚಿಸಿಕೊಂಡು ಶ್ರೀಮಂತರಿಗೂ, ಅಧಿಕಾರಿಗಳಿಗೂ, “ನೀವು ನಿಮ್ಮ ಸಹೋದರರಿಂದ ಬಡ್ಡಿ ತೆಗೆದುಕೊಳ್ಳುವುದೆಂದರೇನು” ಎಂದು ಹೇಳಿ ಮಹಾಸಭೆಯನ್ನು ಕೂಡಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಾನು ತುಸು ಆಲೋಚಿಸಿ ನೋಡಿದೆ. ಬಳಿಕ ಶ್ರೀಮಂತರನ್ನೂ ಅಧಿಕಾರಿಗಳನ್ನೂ ಖಂಡಿಸಿ, “ನೀವು ನಿಮ್ಮ ಸಹೋದರರಿಂದ ಬಡ್ಡಿ ತೆಗೆದುಕೊಳ್ಳುವುದು ಸರಿಯೆ?” ಎಂದು ಹೇಳಿ ಅವರೊಡನೆ ಬಹಳವಾಗಿ ವಾಗ್ವಾದಿಸಿ ಅವರಿಗೆ ವಿರೋಧವಾಗಿ ಮಹಾಸಭೆಯನ್ನು ಕೂಡಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾನು ತುಸು ಆಲೋಚಿಸಿಕೊಂಡು ಶ್ರೀಮಂತರಿಗೂ ಅಧಿಕಾರಿಗಳಿಗೂ - ನೀವು ನಿಮ್ಮ ಸಹೋದರರಿಂದ ಬಡ್ಡಿ ತೆಗೆದುಕೊಳ್ಳುವದೆಂದರೇನು ಎಂದು ಹೇಳಿ ಅವರೊಡನೆ ಬಹಳವಾಗಿ ಹೆಣಗಾಡಿ ಅವರಿಗೆ ವಿರೋಧವಾಗಿ ಮಹಾಸಭೆಯನ್ನು ಕೂಡಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನನ್ನ ಕೋಪವು ಶಾಂತವಾದ ಬಳಿಕ ಧನಿಕರ ಮತ್ತು ಅಧಿಕಾರಿಗಳ ಬಳಿಗೆ ಹೋಗಿ, “ನೀವು ನಿಮ್ಮ ಸ್ವಂತ ಜನರಿಗೆ ಕೊಟ್ಟಿರುವ ಸಾಲಕ್ಕೆ ಬಡ್ಡಿಯನ್ನು ಕೊಡಲು ಬಲವಂತ ಮಾಡುತ್ತಿದ್ದೀರಿ. ನೀವು ಕೂಡಲೇ ಅದನ್ನು ನಿಲ್ಲಿಸಬೇಕು” ಎಂದೆನು. ಅನಂತರ ನಾನು ಎಲ್ಲಾ ಜನರನ್ನು ಒಟ್ಟುಗೂಡಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾನು ತುಸು ಆಲೋಚಿಸಿ ನೋಡಿದೆ. ಬಳಿಕ ಶ್ರೇಷ್ಠರನ್ನೂ, ಅಧಿಕಾರಿಗಳನ್ನೂ ಖಂಡಿಸಿ, “ನೀವು ನಿಮ್ಮ ಸಹೋದರರಿಂದ ಬಡ್ಡಿ ತೆಗೆದುಕೊಳ್ಳುವುದು ಸರಿಯೇ?” ಎಂದು ಹೇಳಿ ಅವರೊಡನೆ ಬಹಳವಾಗಿ ವಾಗ್ವಾದಿಸಿ, ಅವರಿಗೆ ವಿರೋಧವಾಗಿ ಮಹಾ ಸಭೆಯನ್ನು ಕೂಡಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 5:7
25 ತಿಳಿವುಗಳ ಹೋಲಿಕೆ  

ನೀವು ಅವನಿಂದ ಬಡ್ಡಿಯನ್ನಾಗಲಿ ಅಥವಾ ಲಾಭವನ್ನಾಗಲಿ ತೆಗೆದುಕೊಳ್ಳಬಾರದು; ಅವನು ನಿಮ್ಮ ಬಳಿಯಲ್ಲಿ ಬದುಕುವಂತೆ ನೀವು ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕು.


ನನ್ನ ಜನರಲ್ಲಿ ಒಬ್ಬ ಬಡವನಿಗೆ ನೀನು ಹಣ ಕೊಟ್ಟರೆ ಅವನನ್ನು ಸಾಲಗಾರನಂತೆ ಕಾಣಬಾರದು. ಅವನಿಂದ ಬಡ್ಡಿಯನ್ನು ಕೇಳಬಾರದು.


ನಿನ್ನವರು ರಕ್ತ ಸುರಿಸುವುದಕ್ಕೆ ಲಂಚ ತೆಗೆದುಕೊಂಡಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ದೋಚಿಕೊಂಡು ನನ್ನನ್ನು ಮರೆತೇ ಬಿಟ್ಟಿದ್ದಾರೆ ಇದು ಕರ್ತನಾದ ಯೆಹೋವನ ನುಡಿ.


ಅವನು ಸಾಲಕ್ಕೆ ಬಡ್ಡಿ ಕೇಳದವನೂ, ನಿರಪರಾಧಿಯ ಕೇಡಿಗಾಗಿ ಲಂಚವನ್ನು ತೆಗೆದುಕೊಳ್ಳದವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವುದಿಲ್ಲ.


“‘ವ್ಯಾಜ್ಯವನ್ನು ವಿಚಾರಿಸುವಾಗ ಅನ್ಯಾಯವಾದ ತೀರ್ಪನ್ನು ಮಾಡಬಾರದು. ಬಡವನ ಬಡತನವನ್ನಾಗಲಿ ಅಥವಾ ದೊಡ್ಡ ಮನುಷ್ಯನ ಘನತೆಯನ್ನಾಗಲಿ ಲಕ್ಷ್ಯಮಾಡದೆ, ಪಕ್ಷಪಾತವಿಲ್ಲದೆ ತೀರ್ಪನ್ನು ಕೊಡಬೇಕು.


ಈ ಕಾರ್ಯಗಳ ವಿಷಯದಲ್ಲಿ ಬೋಧಿಸುತ್ತಾ, ಎಚ್ಚರಿಸುತ್ತಾ, ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದ ಹಾಗೆ ನೋಡಿಕೋ.


ಪಾಪದಲ್ಲಿ ನಡೆಯುವವರನ್ನು ಎಲ್ಲರ ಮುಂದೆಯೇ ಗದರಿಸು. ಇವರಿಂದ ಉಳಿದವರಿಗೂ ಭಯವುಂಟಾಗುವುದು.


ಕೇಫನು ಅಂತಿಯೋಕ್ಯಕ್ಕೆ ಬಂದಾಗ ಅವನಲ್ಲಿ ತಪ್ಪು ಕಾಣಿಸಿಕೊಂಡದ್ದರಿಂದ ನಾನು ಅವನನ್ನು ಮುಖಾಮುಖಿಯಾಗಿ ಖಂಡಿಸಿದೆನು.


ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಮ್ಮೆ ಕ್ರಿಸ್ತನನ್ನು ನಾವು ಹೀಗೇ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಆ ರೀತಿಯಾಗಿ ಪರಿಗಣಿಸುವುದಿಲ್ಲ.


ಅವನು ಅವರ ಮಾತನ್ನು ಕೇಳದೆ ಹೋದರೆ ಅದನ್ನು ಸಭೆಗೆ ಹೇಳು. ಅವನು ಸಭೆಯ ಮಾತನ್ನು ಕೇಳದೆ ಹೋದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲಿನ ಪ್ರಭುಗಳೇ, ಇನ್ನು ಸಾಕು, ಕೊಳ್ಳೆಯನ್ನೂ ಬಲಾತ್ಕಾರವನ್ನೂ ತ್ಯಜಿಸಿ, ನೀತಿನ್ಯಾಯಗಳನ್ನು ನಡೆಸಿರಿ. ನನ್ನ ಜನರ ಬಾಧ್ಯತೆಗಳನ್ನು ತಪ್ಪಿಸುವ ಅನ್ಯಾಯವನ್ನು ಬಿಟ್ಟುಬಿಡಿರಿ. ಇದು ಕರ್ತನಾದ ಯೆಹೋವನ ನುಡಿ.


ಕಾರ್ಯದಿಂದ ಹೊರಪಡದ ಪ್ರೀತಿಗಿಂತಲೂ, ಬಹಿರಂಗವಾದ ಗದರಿಕೆಯು ಲೇಸು.


“ನನ್ನ ಸಾನ್ನಿಧ್ಯಕ್ಕೆ ಬಾ” ಎಂಬ ನಿನ್ನ ಮಾತಿಗೆ, ನಾನು, “ಯೆಹೋವನೇ, ನಿನ್ನ ಸಾನ್ನಿಧ್ಯಕ್ಕೆ ಬಂದೇ ಬರುವೆನು” ಎಂದು ಉತ್ತರಕೊಟ್ಟೆನು.


ಯೆಹೋವನೇ, ನಿನ್ನ ಗುಡಾರದಲ್ಲಿ ಇಳಿದುಕೊಂಡಿರುವುದಕ್ಕೆ ಯಾರು ಯೋಗ್ಯರು? ನಿನ್ನ ಪರಿಶುದ್ಧಪರ್ವತದಲ್ಲಿ ವಾಸಿಸತಕ್ಕವನು ಎಂಥವನಾಗಿರಬೇಕು?


ಭಯಪಡಿರಿ, ಪಾಪಮಾಡಬೇಡಿರಿ; ಹಾಸಿಗೆಯ ಮೇಲೆ ಇರುವಾಗ ಹೃದಯದಲ್ಲೇ ಆಲೋಚಿಸಿಕೊಳ್ಳಿರಿ ಮತ್ತು ಮೌನವಾಗಿರಿ. ಸೆಲಾ


ಸಾಲಕೊಟ್ಟವನು ಅವನ ಆಸ್ತಿಯನ್ನೆಲ್ಲಾ ಕಸಿದುಕೊಳ್ಳಲಿ; ಪರರು ಅವನ ಕಷ್ಟಾರ್ಜಿತವನ್ನು ಸುಲಿದುಕೊಳ್ಳಲಿ.


ನಾನು ಕೋಪಗೊಂಡು ನಿಮ್ಮ ಶತ್ರುಗಳನ್ನು ಕತ್ತಿಯಿಂದ ಸಂಹಾರಮಾಡಿಸುವೆನು. ನಿಮ್ಮ ಹೆಂಡತಿಯರು ವಿಧವೆಯರಾಗುವರು. ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು.


ದುಷ್ಟರಿಗೆ ವಿರುದ್ಧವಾಗಿ ನನಗೋಸ್ಕರ ಏಳುವವರು ಯಾರು? ಕೆಡುಕರಿಗೆ ವಿರುದ್ಧವಾಗಿ ನನಗೋಸ್ಕರ ಎದ್ದು ನಿಲ್ಲುವವರು ಯಾರು?


ಧರ್ಮೋಪದೇಶವನ್ನು ಕೈಕೊಳ್ಳದವರು ದುಷ್ಟರನ್ನು ಹೊಗಳುವರು, ಕೈಕೊಳ್ಳುವವರು ಅವರನ್ನು ಎದುರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು