Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 6:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾನು ಪೌಳಿಗೋಡೆಯನ್ನು ಪುನಃ ಕಟ್ಟಿಸಿದೆನು, ಆದರೆ ಹೆಬ್ಬಾಗಿಲುಗಳನ್ನೂ ಇನ್ನೂ ಇಡಿಸಿರಲಿಲ್ಲ. ಜೀರ್ಣೋದ್ಧಾರದ ಕಾರ್ಯಗಳೆಲ್ಲವೂ ಪೂರ್ಣವಾಯಿತೆಂಬುದು ಸನ್ಬಲ್ಲಟ್, ಟೋಬೀಯ, ಅರಬಿಯನಾದ ಗೆಷೆಮ್ ಇವರಿಗೂ, ನಮ್ಮ ಬೇರೆ ವಿರೋಧಿಗಳಿಗೂ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಾನು ಗೋಡೆಯನ್ನು ಕಟ್ಟಿ ಮುಗಿಸಿ ಬಾಗಿಲುಗಳಿಗೆ ಕದಗಳನ್ನು ಇನ್ನೂ ಹಚ್ಚಿಸಿರಲಿಲ್ಲ. ಗೋಡೆಯ ಸಂದುಗೊಂದುಗಳನ್ನು ಕೂಡಿಸಿದ ಸಂಗತಿ ಸನ್ಬಲ್ಲಟ್, ಟೋಬೀಯ ಹಾಗು ಅರೇಬಿಯನಾದ ಗೆಷಮ್ ಇವರಿಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಾನು ಗೋಡೆಯನ್ನು ಕಟ್ಟಿಸಿ ತೀರಿಸಿ ಬಾಗಲುಗಳಿಗೆ ಕದಗಳನ್ನು ಇನ್ನೂ ಹಚ್ಚಿಸದಿದ್ದರೂ ಎಲ್ಲಾ ಸಂದುಗಳನ್ನು ಕೂಡಿಸಿದ ಸಂಗತಿಯು ಸನ್ಬಲ್ಲಟ್, ಟೋಬೀಯ, ಅರಬಿಯನಾದ ಗೆಷೆಮ್ ಇವರಿಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸನ್ಬಲ್ಲಟನಿಗೆ, ಟೋಬೀಯನಿಗೆ, ಅರಬಿಯವನಾದ ಗೆಷೆಮನಿಗೆ ಮತ್ತು ಇನ್ನಿತರ ವೈರಿಗಳಿಗೆ ನಾವು ಗೋಡೆಯನ್ನು ಕಟ್ಟಿ ಮುಗಿಸಿದ್ದು ಗೊತ್ತಾಯಿತು. ಗೋಡೆಯಲ್ಲಿದ್ದ ಎಲ್ಲಾ ಕಿಂಡಿಗಳನ್ನು ನಾವು ಮುಚ್ಚಿದೆವು. ಆದರೆ ಗೋಡೆಯಲ್ಲಿನ ದ್ವಾರಗಳಿಗೆ ಇನ್ನೂ ಬಾಗಿಲುಗಳನ್ನು ಇಟ್ಟಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಾನು ಹೆಬ್ಬಾಗಿಲುಗಳಲ್ಲಿ ಬಾಗಿಲುಗಳನ್ನು ಇಡುವುದಕ್ಕಿಂತ ಮುಂಚೆ ನಾನು ಗೋಡೆಯಲ್ಲಿ ಒಂದು ಸಂದನ್ನೂ ಬಿಡದೆ ಪುನಃ ಕಟ್ಟಿದೆನೆಂದು ಸನ್ಬಲ್ಲಟನೂ, ಟೋಬೀಯನೂ, ಅರಬಿಯನಾದ ಗೆಷೆಮನೂ, ಮಿಕ್ಕಾದ ನಮ್ಮ ಶತ್ರುಗಳೂ ಕೇಳಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 6:1
10 ತಿಳಿವುಗಳ ಹೋಲಿಕೆ  

ಹೋರೋನಿನವನಾದ ಸನ್ಬಲ್ಲಟನೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ದಾಸನೂ, ಅರಬಿಯನಾದ ಗೆಷೆಮನೂ ಈ ವರ್ತಮಾನವನ್ನು ಕೇಳಿದಾಗ ಅವರು ನಮ್ಮನ್ನು ತಿರಸ್ಕರಿಸಿ ಗೇಲಿಮಾಡಿ, “ನೀವು ಇಲ್ಲಿ ಮಾಡುವುದೇನು? ಅರಸನಿಗೆ ವಿರುದ್ಧವಾಗಿ ತಿರುಗಿ ಬೀಳಬೇಕೆಂದಿದ್ದೀರೋ?” ಎಂದು ಕೇಳಿದರು.


ಇಸ್ರಾಯೇಲರ ಹಿತಚಿಂತಕನೊಬ್ಬನು ಬಂದಿದ್ದಾನೆಂಬ ವರ್ತಮಾನವು ಹೋರೋನ್ ಪಟ್ಟಣದವನಾದ ಸನ್ಬಲ್ಲಟನಿಗೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ದಾಸನಿಗೂ ತಲುಪಿದಾಗ ಅವರು ಬಹಳವಾಗಿ ಹೊಟ್ಟೆಕಿಚ್ಚುಪಟ್ಟರು.


ನಾವು ಪೌಳಿಗೋಡೆಯನ್ನು ಕಟ್ಟುತ್ತಿದ್ದ ಸುದ್ದಿಯು ಸನ್ಬಲ್ಲಟನಿಗೆ ಗೊತ್ತಾದಾಗ ಅವನು ಬಹಳ ಹೊಟ್ಟೆಕಿಚ್ಚಿನಿಂದ ಕೋಪಗೊಂಡು ಯೆಹೂದ್ಯರನ್ನು ಗೇಲಿ ಮಾಡಿದನು.


ಮೀನುಬಾಗಿಲನ್ನು ಕಟ್ಟಿದವರು ಹಸ್ಸೆನಾಹನ ಮನೆಯವರು. ಇವರು ಅವುಗಳಿಗೆ ಹೊಸ್ತಿಲುಗಳನ್ನಿಟ್ಟು ಅದಕ್ಕೆ ಬಾಗಿಲು ತಿರುಗುಣಿ ಅಗುಳಿಗಳನ್ನು ಇರಿಸಿದರು.


ಹೀಗೆ ಮಹಾಯಾಜಕನಾದ ಎಲ್ಯಾಷೀಬನೂ ಅವನ ಕುಟುಂಬದ ಯಾಜಕರೂ ಕುರಿಬಾಗಿಲನ್ನು ಕಟ್ಟಿ ಅದನ್ನು ಪ್ರತಿಷ್ಠಿಸಿ ಅದಕ್ಕೆ ಬಾಗಿಲುಗಳನ್ನು ಇಟ್ಟರು. ಅಲ್ಲಿಂದ ಹಮ್ಮೆಯಾ ಗೋಪುರದವರೆಗೆ ಗೋಡೆಕಟ್ಟಿ ಅದನ್ನು ಪ್ರತಿಷ್ಠಿಸಿದರು. ಅಲ್ಲಿಂದ ಹನನೇಲ್ ಗೋಪುರದವರೆಗೂ ಕಟ್ಟಿದರು.


ಇದನ್ನು ತಿಳಿದು ಮನದಟ್ಟುಮಾಡಿಕೋ; ಯೆರೂಸಲೇಮ್ ಜೀರ್ಣೋದ್ಧಾರವಾಗಿ ಕಟ್ಟಲ್ಪಡಲಿ ಎಂಬ ದೈವೋಕ್ತಿಯು ಹರಡುವ ದಿನದಿಂದ ಅಭಿಷಿಕ್ತನಾದ ಪ್ರಭುವು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಲ್ಪಟ್ಟು ಅರವತ್ತೆರಡು ವಾರ ಇರುವುದು; ಅದಕ್ಕೆ ಚೌಕವೂ ಕಂದಕವೂ ಇರುವವು; ಆ ಕಾಲವು ಬಹು ಕಷ್ಟಕಾಲ.


ಹಳೆಯದಾಗಿದ್ದ ಬಾಗಿಲುಗಳ ಜೀರ್ಣೋದ್ಧಾರ ಮಾಡಿದವರು ಪಾಸೇಹನ ಮಗನಾದ ಯೋಯಾದನೂ, ಬೆಸೋದ್ಯನ ಮಗನಾದ ಮೆಷುಲ್ಲಾಮನೂ. ಇವರು ಅವುಗಳಿಗೆ ಹೊಸ್ತಿಲುಗಳನ್ನಿಟ್ಟು ಅದಕ್ಕೆ ಬಾಗಿಲು, ತಿರುಗುಣಿ, ಅಗುಳಿಗಳನ್ನು ಇರಿಸಿದರು.


ಗೋಡೆಯನ್ನು ಕಟ್ಟಿ ಮುಗಿಸಿದ ನಂತರ ನಾನು ಬಾಗಿಲುಗಳನ್ನು ಇರಿಸಿದೆನು; ದ್ವಾರಪಾಲಕರನ್ನೂ, ಗಾಯಕರನ್ನೂ, ಲೇವಿಯರನ್ನೂ ನೇಮಿಸಲಾಯಿತು.


ಇದಕ್ಕಿಂತ ಮೊದಲು ಯಾಜಕನಾದ ಎಲ್ಯಾಷೀಬನು ನಮ್ಮ ದೇವಾಲಯದ ಕೊಠಡಿಗಳ ಮೇಲ್ವಿಚಾರಕನಾಗಿ ನೇಮಿಸಲ್ಪಟ್ಟಿದ್ದನು. ಇವನು ಟೋಬೀಯನ ಸಂಬಂಧಿಕನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು