Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 6:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆನಂತರ ನಾನು ಮೆಹೇಟಬೇಲನ ಮೊಮ್ಮಗನೂ, ದೆಲಾಯನ ಮಗನೂ ಆದ ಶೆಮಾಯನ ಮನೆಗೆ ಹೋದೆನು. ಅವನು ಅಲ್ಲಿ ಅಡಗಿಕೊಂಡಿದ್ದನು. ಅವನು ನನಗೆ, “ನಿನ್ನನ್ನು ಕೊಲ್ಲುವುದಕ್ಕೆ ಈ ರಾತ್ರಿಯೇ ಬರುತ್ತಾರೆ. ಆದುದರಿಂದ ನಾವಿಬ್ಬರೂ ದೇವಾಲಯಕ್ಕೆ ಹೋಗಿ ಗರ್ಭಗುಡಿ ಪ್ರವೇಶಿಸಿ ಅದರ ಕದಗಳನ್ನು ಮುಚ್ಚಿಕೊಳ್ಳೋಣ ಬಾ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಒಂದು ದಿನ ನಾನು ಮೆಹೇಟಬೇಲನ ಮೊಮ್ಮಗನೂ ದೆಲಾಯನ ಮಗನೂ ಆದ ಶೆಮಾಯನ ಮನೆಗೆ ಹೋದೆ. ಅವನು ಅಲ್ಲಿ ಅವಿತುಕೊಂಡಿದ್ದನು. ಅವನು ನನಗೆ, “ನಿನ್ನನ್ನು ಕೊಲ್ಲುವುದಕ್ಕೆ ಬರುತ್ತಾರೆ; ಈ ರಾತ್ರಿಯೇ ಬರುತ್ತಾರೆ! ಆದುದರಿಂದ ನಾವಿಬ್ಬರೂ ದೇವಾಲಯಕ್ಕೆ ಹೋಗಿ ಗರ್ಭಗುಡಿಯನ್ನು ಸೇರಿ ಅದರ ಕದಗಳನ್ನು ಮುಚ್ಚಿಕೊಳ್ಳೋಣ ಬಾ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಒಂದು ದಿವಸ ನಾನು ಮೆಹೇಟಬೇಲನ ಮೊಮ್ಮಗನೂ ದೆಲಾಯನ ಮಗನೂ ಆದ ಶೆಮಾಯನ ಮನೆಗೆ ಹೋದೆನು. ಅವನು ಅಲ್ಲಿ ಅಡಗಿಕೊಂಡಿದ್ದನು. ಅವನು ನನಗೆ - ನಿನ್ನನ್ನು ಕೊಲ್ಲುವದಕ್ಕೆ ಬರುತ್ತಾರೆ, ಈ ರಾತ್ರಿಯೇ ಬರುತ್ತಾರೆ. ಆದದರಿಂದ ನಾವಿಬ್ಬರೂ ದೇವಾಲಯಕ್ಕೆ ಹೋಗಿ ಪವಿತ್ರಸ್ಥಾನವನ್ನು ಪ್ರವೇಶಿಸಿ ಅದರ ಕದಗಳನ್ನು ಮುಚ್ಚಿಕೊಳ್ಳೋಣ ಬಾ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಒಂದು ದಿನ ನಾನು ದೆಲಾಯನ ಮಗನಾದ ಶೆಮಾಯನ ಮನೆಗೆ ಹೋದೆನು. ದೆಲಾಯನು ಮೆಹೇಟಬೇಲನ ಮಗ. ಆಗ ಶೆಮಾಯನು ಮನೆಯಲ್ಲಿದ್ದನು. ಅವನು, “ನೆಹೆಮೀಯನೇ, ನಾವು ದೇವಾಲಯದಲ್ಲಿ ಭೇಟಿಯಾಗೋಣ. ನಾವು ಅದರ ಒಳಗೆ ಹೋಗಿ ಕದಗಳನ್ನು ಮುಚ್ಚಿಕೊಳ್ಳೋಣ. ಯಾಕೆಂದರೆ ನಿನ್ನನ್ನು ಕೊಲ್ಲಲು ಈ ರಾತ್ರಿ ಜನರು ಬರುತ್ತಾರೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ತರುವಾಯ ನಾನು ಅಡಗಿಕೊಂಡಿದ್ದ ಮೆಹೇಟಬೇಲನ ಮಗನಾದ ದೆಲಾಯ, ಇವನ ಮಗನಾದ ಶೆಮಾಯನ ಮನೆಗೆ ಬಂದೆನು. ಅವನು, “ನಾವಿಬ್ಬರೂ ದೇವರ ಆಲಯದಲ್ಲಿ ಪವಿತ್ರಸ್ಥಾನದೊಳಗೆ ಹೋಗಿ, ಮಂದಿರದ ಬಾಗಿಲನ್ನು ಮುಚ್ಚಿಕೊಳ್ಳೋಣ ಬಾ, ಏಕೆಂದರೆ ಈ ರಾತ್ರಿಯೇ ನಿನ್ನನ್ನು ಕೊಂದುಹಾಕಲು ಬರುತ್ತಾರೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 6:10
21 ತಿಳಿವುಗಳ ಹೋಲಿಕೆ  

ಮತ್ತು ಯೆರೆಮೀಯನು ಬಾರೂಕನಿಗೆ, “ಯೆಹೋವನ ಆಲಯದೊಳಗೆ ಪ್ರವೇಶಿಸಲು ನನಗೆ ತಡೆಯಾಗಿದೆ;


ಆಗ ಪಟ್ಟಣದಲ್ಲೆಲ್ಲಾ ಕೋಲಾಹಲವೆದ್ದಿತು, ಜನರು ಎಲ್ಲಾ ಕಡೆಯಿಂದಲೂ ಓಡಿಬಂದು ಸೇರಿಕೊಂಡರು. ಪೌಲನನ್ನು ಹಿಡಿದು, ದೇವಾಲಯದ ಹೊರಗಡೆಗೆ ಎಳೆದುಕೊಂಡು ಬಂದ ಕೂಡಲೇ ಬಾಗಿಲುಗಳನ್ನು ಮುಚ್ಚಿದರು.


ಕೆಟ್ಟದ್ದನ್ನು ಮಾಡುವವರು ತಮ್ಮ ದುಷ್ಕೃತ್ಯಗಳು ಬಹಿರಂಗವಾಗಬಾರದೆಂದು ಬೆಳಕಿಗೆ ಬರುವುದಿಲ್ಲ ಮತ್ತು ಬೆಳಕನ್ನು ದ್ವೇಷಿಸುತ್ತಾರೆ.


“ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ.


“ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು ದೇವಾಲಯದ ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು! ನಾನು ನಿಮ್ಮನ್ನು ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ದೇವರಾತ್ಮವು ನನ್ನೊಳಗೆ ಪ್ರವೇಶಿಸಿ, ನಾನು ಎದ್ದು ನಿಂತುಕೊಳ್ಳುವಂತೆ ಮಾಡಿದ ಮೇಲೆ ಆತನು ನನಗೆ ಹೀಗೆ ಹೇಳಿದನು, “ನೀನು ಹೋಗಿ ನಿನ್ನ ಮನೆಯೊಳಗೆ ಅಡಗಿಕೋ.


ಧರ್ಮಭ್ರಷ್ಟನು ಬಾಯಿಂದ ನೆರೆಯವನನ್ನು ಹಾಳು ಮಾಡುವನು, ಶಿಷ್ಟನು ತಿಳಿವಳಿಕೆಯಿಂದ ಉದ್ಧಾರವಾಗುವನು.


ದುಷ್ಟನು ನೀತಿವಂತನಿಗೆ ವಿರುದ್ಧವಾಗಿ ಆಲೋಚಿಸುತ್ತಾನೆ; ಅವನನ್ನು ನೋಡಿ ಹಲ್ಲುಕಡಿಯುತ್ತಾನೆ.


ಪ್ರತಿಯೊಬ್ಬರು ನೆರೆಯವರೊಡನೆ ಸುಳ್ಳನ್ನಾಡುತ್ತಾರೆ, ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತನಾಡುತ್ತಾರೆ.


ನಾನು ಸೂಕ್ಷ್ಮವಾಗಿ ವಿಚಾರ ಮಾಡಿದಾಗ ನನ್ನ ವಿಷಯವಾಗಿ ಆ ಕಾಲ, ಜ್ಞಾನ, ವಚನವನ್ನು ಉಚ್ಚರಿಸುವುದಕ್ಕೂ ಪ್ರವಾದನೆ ನುಡಿಯುವುದಕ್ಕೂ ಇವನನ್ನು ಪ್ರೇರೇಪಿಸಿದವನು ದೇವರಲ್ಲ, ಟೋಬೀಯನೂ, ಸನ್ಬಲ್ಲಟನೂ ಇವನಿಗೆ ಲಂಚ ಕೊಟ್ಟು ಹಾಗೆ ಹೇಳಿದ್ದಾರೆ ಎಂದು ನನಗೆ ಗೊತ್ತಾಯಿತು.


ಹಾರೀಮ್ ಸಂತಾನದವರಾದ ಎಲೀಯೆಜೆರ್, ಇಷ್ಷೀಯ, ಮಲ್ಕೀಯ, ಶೆಮಾಯ, ಸಿಮೆಯೋನ್,


ಆದುದರಿಂದ ನಾನು ಪ್ರಧಾನರಾದ ಎಲೀಯೆಜೆರ್, ಅರೀಯೇಲ್, ಶೆಮಾಯ, ಎಲ್ನಾತಾನ್, ಯಾರೀಬ್, ಎಲ್ನಾತಾನ್, ನಾತಾನ್, ಜೆಕರ್ಯ, ಮೆಷುಲ್ಲಾಮ್ ಇವರನ್ನೂ, ಪಂಡಿತರಾದ ಯೋಯಾರೀಬ್ ಎಲ್ನಾತಾನ್ ಇವರನ್ನೂ ಕರೆಯಿಸಿದೆನು.


ಅದರ ಮಂಟಪದ ಬಾಗಿಲುಗಳನ್ನು ಮುಚ್ಚಿ, ದೀಪಗಳನ್ನು ನಂದಿಸಿದರು. ಇಸ್ರಾಯೇಲ್ ದೇವರ ಪವಿತ್ರ ಸ್ಥಾನದಲ್ಲಿ ಧೂಪಹಾಕುವುದನ್ನೂ, ಸರ್ವಾಂಗಹೋಮ ಸಮರ್ಪಿಸುವುದನ್ನೂ ನಿಲ್ಲಿಸಿಬಿಟ್ಟರು.


ಅವನು ತನ್ನ ಆಳ್ವಿಕೆಯ ಮೊದಲನೆಯ ವರ್ಷದ ಮೊದಲನೆಯ ತಿಂಗಳಲ್ಲಿ ಯೆಹೋವನ ಆಲಯದ ಬಾಗಿಲುಗಳನ್ನು ತೆರೆಯಿಸಿ ಅವುಗಳನ್ನು ಭದ್ರಪಡಿಸಿದನು.


ಇದಲ್ಲದೆ, ಆಹಾಜನು ದೇವಾಲಯದ ಸಾಮಾನುಗಳನ್ನು ಒಟ್ಟುಗೂಡಿಸಿ ಅವುಗಳನ್ನು ಒಡೆದುಹಾಕಿದನು; ಯೆಹೋವನ ಆಲಯದ ಬಾಗಿಲುಗಳನ್ನು ಮುಚ್ಚಿ ಯೆರೂಸಲೇಮಿನ ಪ್ರತಿಯೊಂದು ಮೂಲೆಯಲ್ಲಿಯೂ ಯಜ್ಞವೇದಿಗಳನ್ನು ಕಟ್ಟಿಸಿದನು.


ಹೀಗೆ ಅವನು ಅತಲ್ಯಳಿಂದ ಹತವಾಗದಂತೆ ತಪ್ಪಿಸಿ ಕೊಂಡು ಆರು ವರ್ಷಗಳವರೆಗೂ ಯೆಹೋಷೆಬಳೊಡನೆ ಗುಪ್ತವಾಗಿ ಯೆಹೋವನ ಆಲಯದಲ್ಲಿದ್ದನು. ಆ ಆರು ವರ್ಷಗಳಲ್ಲಿ ಅತಲ್ಯಳೇ ದೇಶವನ್ನು ಆಳುತ್ತಿದ್ದಳು.


ಅಹಾಬನ ಕುಟುಂಬದವರೆಲ್ಲಾ ನಿರ್ನಾಮವಾಗಬೇಕು. ಅವನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ಗುಲಾಮನಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ತೆಗೆದುಹಾಕುವೆನು.


ದೇವಾಲಯದ ಗೋಡೆಯ ಸುತ್ತಲೂ ಅಂದರೆ ಪರಿಶುದ್ಧ ಸ್ಥಳ ಮತ್ತು ಮಹಾಪರಿಶುದ್ಧ ಸ್ಥಳ ಇವುಗಳ ಗೋಡೆಯ ಸುತ್ತಲೂ ಇನ್ನೊಂದು ಗೋಡೆಯನ್ನು ಕಟ್ಟಿಸಿ, ಇವುಗಳ ನಡುವೆ ಅಂತಸ್ತುಗಳುಳ್ಳ ಕೊಠಡಿಗಳನ್ನು ಮಾಡಿಸಿದನು.


ಅಕ್ಬೋರನ ಮಗನಾದ ಬಾಳ್ಹಾನಾನನು ಸತ್ತ ಮೇಲೆ ಹದರನು ಅರಸನಾದನು. ಅವನ ರಾಜಧಾನಿಯ ಹೆಸರು ಪಾಗು. ಅವನ ಹೆಂಡತಿಯ ಹೆಸರು ಮಹೇಟಬೇಲ್; ಆಕೆಯು ಮೇಜಾಹಾಬನ ಮಗಳಾದ ಮಟ್ರೇದಳ ಮಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು