Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 6:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅದರಲ್ಲಿ “ಗೆಷೆಮ್ ಎಂಬುವನು ನನಗೆ ತಿಳಿಸಿದ ಪ್ರಕಾರ, ನೀನೂ ಮತ್ತು ಯೆಹೂದ್ಯರೂ ತಿರುಗಿ ಬೀಳಬೇಕೆಂದಿದ್ದೀರಿ; ಆದುದರಿಂದಲೇ ನೀನು ಆ ಗೋಡೆಯನ್ನು ಕಟ್ಟಿಸುತ್ತಿರುವೆ ಮತ್ತು ನೀನು ಅವರಿಗೆ ಅರಸನಾಗಬೇಕೆಂದಿರುವೆಯೆಂಬ ಸುದ್ದಿಯು ಜನರಲ್ಲಿ ಹಬ್ಬಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅದರಲ್ಲಿ, “ಗೆಷೆಮ್ ಎಂಬವನು ನನಗೆ ತಿಳಿಸಿದ ಪ್ರಕಾರ ನೀನೂ ಯೆಹೂದ್ಯರೂ ನನ್ನ ಮೇಲೆ ದಾಳಿಮಾಡಬೇಕೆಂದಿದ್ದೀರಿ; ಆದುದರಿಂದಲೇ, ನೀನು ಆ ಗೋಡೆಯನ್ನು ಕಟ್ಟಿಸುತ್ತಿರುವೆ. ನೀನು ಅವರ ಅರಸನಾಗುವೆ ಎಂಬ ಸುದ್ದಿ ಜನರಲ್ಲಿ ಹಬ್ಬಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅದರಲ್ಲಿ - ಗೆಷೆಮ್ ಎಂಬವನು ನನಗೆ ತಿಳಿಸಿದ ಪ್ರಕಾರ ನೀನೂ ಯೆಹೂದ್ಯರೂ ತಿರುಗಿಬೀಳಬೇಕೆಂದಿದ್ದೀರಿ; ಆದದರಿಂದಲೇ ನೀನು ಆ ಗೋಡೆಯನ್ನು ಕಟ್ಟಿಸುತ್ತೀ. ಮತ್ತು ನೀನು ಅವರ ಅರಸನಾಗುವಿಯೆಂಬ ಸುದ್ದಿಯು ಜನರಲ್ಲಿ ಹಬ್ಬಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅದರಲ್ಲಿ, “ಒಂದು ಸುದ್ದಿಯು ಹರಡುತ್ತಲಿದೆ. ಎಲ್ಲಾ ಕಡೆಗಳಲ್ಲಿ ಜನರು ಅದರ ವಿಷಯವಾಗಿ ಮಾತಾಡುತ್ತಿದ್ದಾರೆ. ಆ ಸುದ್ದಿಯು ಸತ್ಯವೆಂದು ಗೆಷೆಮನು ನನಗೆ ಹೇಳಿದನು. ನೀನು ಮತ್ತು ಯೆಹೂದ್ಯರು ಅರಸನಿಗೆ ವಿರುದ್ಧವಾಗಿ ದಂಗೆ ಏಳಲು ಯೋಚಿಸುತ್ತಿದ್ದೀರೆಂಬ ವದಂತಿ ಇದೆ. ಅದಕ್ಕೋಸ್ಕರವಾಗಿಯೇ ನೀವು ಕೋಟೆಗೋಡೆಯನ್ನು ಕಟ್ಟುತ್ತಿದ್ದೀರಿ. ನೀನು ಯೆಹೂದ್ಯರ ಅರಸನಾಗುವೆ ಎಂದೂ ಜನರಲ್ಲಿ ಸುದ್ದಿ ಹಬ್ಬಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅದರಲ್ಲಿ ಹೀಗೆ ಬರೆದಿತ್ತು: “ಗೆಷೆಮ್ ಎಂಬವನು ನನಗೆ ತಿಳಿಸಿದ ಪ್ರಕಾರ ನೀನೂ, ಯೆಹೂದ್ಯರೂ ತಿರುಗಿಬೀಳಲು ಯೋಚಿಸುತ್ತೀರಿ. ಆದಕಾರಣ ಈ ಮಾತುಗಳ ಪ್ರಕಾರ ನೀನು ಅವರಿಗೆ ಅರಸನಾಗಿರುವ ಹಾಗೆ ಗೋಡೆಯನ್ನು ಪುನಃ ಕಟ್ಟಿಸುತ್ತಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 6:6
16 ತಿಳಿವುಗಳ ಹೋಲಿಕೆ  

ಹೋರೋನಿನವನಾದ ಸನ್ಬಲ್ಲಟನೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ದಾಸನೂ, ಅರಬಿಯನಾದ ಗೆಷೆಮನೂ ಈ ವರ್ತಮಾನವನ್ನು ಕೇಳಿದಾಗ ಅವರು ನಮ್ಮನ್ನು ತಿರಸ್ಕರಿಸಿ ಗೇಲಿಮಾಡಿ, “ನೀವು ಇಲ್ಲಿ ಮಾಡುವುದೇನು? ಅರಸನಿಗೆ ವಿರುದ್ಧವಾಗಿ ತಿರುಗಿ ಬೀಳಬೇಕೆಂದಿದ್ದೀರೋ?” ಎಂದು ಕೇಳಿದರು.


ಒಳ್ಳೆಯ ಮನಸ್ಸಾಕ್ಷಿಯುಳ್ಳವರಾಗಿರಿ ಆಗ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೆಯ ನಡತೆಯನ್ನು ಕುರಿತು ಕೆಟ್ಟಮಾತುಗಳನ್ನಾಡುವವರು ನಿಮ್ಮನ್ನು ನಿಂದಿಸುವುದಕ್ಕೆ ನಾಚಿಕೆಪಡುವರು.


“ಒಳ್ಳೆಯದಾಗುವಂತೆ, ಕೆಟ್ಟದ್ದನ್ನೇ ಏಕೆ ಮಾಡಬಾರದು?” ಈ ರೀತಿ ಸ್ವತಃ ನಾನೇ ಬೋಧಿಸುತ್ತಿರುವುದಾಗಿ ಕೆಲವರು ನನ್ನನ್ನು ದೂಷಿಸಿ ನನ್ನ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಅಂಥವರಿಗೆ ತಕ್ಕ ಶಿಕ್ಷೆಯಾಗುವುದು ನ್ಯಾಯಸಮ್ಮತವಾದುದು.


ನಿನ್ನ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮನ್ನು ಸೇರಿ ರಾಜಕಂಟಕವಾದ ಆ ಕೆಟ್ಟ ಪಟ್ಟಣವನ್ನೂ, ಅದರ ಪೌಳಿಗೋಡೆಯನ್ನೂ ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿ ಪೌಳಿಗೋಡೆಯ ಅಸ್ತಿವಾರವನ್ನು ಜೀರ್ಣೋದ್ಧಾರಮಾಡಿದ್ದಾರೆ ಎಂಬುದಾಗಿ ನಾವು ತಮಗೆ ಅರಿಕೆಮಾಡಿಕೊಳ್ಳುತ್ತೇವೆ.


ನಾವು ಮಾನ ಮತ್ತು ಅವಮಾನ, ಕೀರ್ತಿ ಮತ್ತು ಅಪಕೀರ್ತಿಗಳಲ್ಲಿಯೂ ಸೇವೆಮಾಡಿದ್ದೇವೆ. ಸತ್ಯವಂತರಾದರೂ ಮೋಸಗಾರರೆನಿಸಿಕೊಂಡಿದ್ದೇವೆ.


ಈ ಮಾತುಗಳನ್ನು ಪಿಲಾತನು ಕೇಳಿ ಯೇಸುವನ್ನು ಹೊರಗೆ ಕರೆದುಕೊಂಡು ಬಂದು ಇಬ್ರಿಯ ಮಾತಿನಲ್ಲಿ, ಗಬ್ಬಥಾ ಎಂದು ಕರೆಯಲ್ಪಟ್ಟ, “ಕಲ್ಲು ಹಾಸಿದ ಕಟ್ಟೆ” ಎಂಬ ಸ್ಥಳಕ್ಕೆ ಹೋಗಿ ನ್ಯಾಯಾಸನದ ಮೇಲೆ ಕುಳಿತುಕೊಂಡನು.


“ಇವನು ತಾನೇ ಕ್ರಿಸ್ತನು, ಅರಸನಾಗಿದ್ದೇನೆಂದು ಹೇಳುತ್ತಾ, ಕೈಸರನಿಗೆ ಸುಂಕ ಕೊಡಬಾರದೆಂದು ಬೋಧಿಸುತ್ತಾ, ನಮ್ಮ ದೇಶದವರ ಮನಸ್ಸು ಕೆಡಿಸುವುದನ್ನು ನಾವು ಕಂಡಿದ್ದೇವೆ” ಎಂಬುದಾಗಿ ಆತನ ಮೇಲೆ ದೂರು ಹೇಳುವುದಕ್ಕೆ ತೊಡಗಿದರು.


“ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ ಹಿಂಸೆಪಡಿಸಿ ನಿಮ್ಮ ಮೇಲೆ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು.


“ಇವನ ಮೇಲೆ ದೂರು ಹೇಳಿರಿ, ನಾವೂ ಹೇಳುವೆವು” ಎಂದು ಬಹು ಜನರು ಗುಸುಗುಟ್ಟುವುದನ್ನು ಕೇಳಿದ್ದೇನೆ. ಸುತ್ತುಮುತ್ತಲೂ ದಿಗಿಲು; ನನ್ನ ಆಪ್ತ ಸ್ನೇಹಿತರೆಲ್ಲರೂ “ಇವನು ಎಡವಿ ಬೀಳಲಿ” ಎಂದು ನನ್ನನ್ನು ಹೊಂಚಿನೋಡುತ್ತಾ, “ಒಂದು ವೇಳೆ ಸಿಕ್ಕಿಬಿದ್ದಾನು, ಇವನನ್ನು ಗೆದ್ದು ಮುಯ್ಯಿತೀರಿಸಿಕೊಳ್ಳುವೆವು” ಎಂದು ತಮ್ಮತಮ್ಮೊಳಗೆ ಅಂದುಕೊಳ್ಳುತ್ತಿದ್ದಾರೆ.


ಈ ವಿಷಯವಾಗಿ ತಾವು ತಮ್ಮ ತಂದೆತಾತಂದಿರ ಚರಿತ್ರಗ್ರಂಥಗಳನ್ನು ಪರಿಶೋಧಿಸಿ ತಿಳಿದುಕೊಳ್ಳುವುದು ಸೂಕ್ತ ಎಂಬುದು ನಮ್ಮ ಅಭಿಪ್ರಾಯ. ಆ ಪಟ್ಟಣವು ರಾಜಕಂಟಕವಾದ ಪಟ್ಟಣವು. ಅರಸರಿಗೂ ಸಂಸ್ಥಾನಗಳಿಗೂ ತೊಂದರೆ ಹುಟ್ಟಿಸುವಂಥದು, ಪೂರ್ವಕಾಲದಿಂದಲೇ ದಂಗೆಯೆಬ್ಬಿಸುವಂಥದು ಎಂಬುದೂ ಆ ಕಾರಣದಿಂದಲೇ ಈ ಪಟ್ಟಣವು ನೆಲಸಮವಾಯಿತು ಎಂದು ಆ ಚರಿತ್ರಾ ಗ್ರಂಥದಲ್ಲಿ ಕಂಡುಬರುತ್ತದೆ.


ಐದನೆಯ ಸಾರಿ ಸನ್ಬಲ್ಲಟನು ಅದೇ ಉದ್ದೇಶದಿಂದ ತನ್ನ ಸ್ವಂತ ಸೇವಕನ ಮುಖಾಂತರವಾಗಿ ತೆರೆದಿರುವ ಒಂದು ಪತ್ರವನ್ನು ಕಳುಹಿಸಿದನು.


ಇದಲ್ಲದೆ, ‘ಯೆಹೂದದಲ್ಲಿ ಒಬ್ಬ ಅರಸನಿರುತ್ತಾನೆ’ ಎಂದು ನಿನ್ನನ್ನು ಕುರಿತು ಯೆರೂಸಲೇಮಿನಲ್ಲಿ ಪ್ರಕಟಿಸುವುದಕ್ಕೋಸ್ಕರ ಪ್ರವಾದಿಗಳನ್ನು ನೇಮಿಸಿದ್ದಿ ಎಂಬುದಾಗಿಯೂ ಜನರು ಹೇಳುತ್ತಿದ್ದಾರೆ. ಈ ಸುದ್ದಿ ರಾಜನಿಗೂ ತಲುಪಿದೆ; ಆದುದರಿಂದ ನಾವು ಸಭೆ ಸೇರಿ ಆಲೋಚಿಸೋಣ ಬಾ” ಎಂದು ಅದರಲ್ಲಿ ಬರೆದಿತ್ತು.


ನಾನು ಅಂಜಿಕೊಂಡು ಇವನ ಮಾತಿನಂತೆ ನಡೆದು ದೋಷಿಯಾಗಿ ತಮ್ಮ ನಿಂದೆಗೂ, ಕೆಟ್ಟ ಹೆಸರಿಗೂ ಒಳಗಾಗಲಿ ಎಂದು ಅವರು ಇವನಿಗೆ ಲಂಚ ಕೊಟ್ಟಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು