Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 8:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇದಲ್ಲದೆ ನೆಹೆಮೀಯನು ಅವರಿಗೆ, “ಹೋಗಿ, ಮೃಷ್ಟಾನ್ನವನ್ನೂ, ಮಧುರಪಾನವನ್ನೂ ತೆಗೆದುಕೊಳ್ಳಿರಿ, ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಕರ್ತನಿಗೆ ಪರಿಶುದ್ಧ ದಿನವಾಗಿರುವುದರಿಂದ ದುಃಖಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಬಲವಾಗಿದೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇದಲ್ಲದೆ, ಎಜ್ರನು ಅವರಿಗೆ, “ಹೋಗಿ ಮೃಷ್ಟಾನ್ನವನ್ನೂ ಮಧುರಪಾನವನ್ನೂ ತೆಗೆದುಕೊಳ್ಳಿ; ತಮಗಾಗಿ ಏನೂ ಸಿದ್ಧಮಾಡದವರಿಗೆ ಒಂದು ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಸರ್ವೇಶ್ವರನಿಗೆ ಪ್ರತಿಷ್ಠಿತ ದಿನ! ವ್ಯಸನಪಡಬೇಡಿ; ಸರ್ವೇಶ್ವರನ ಆನಂದವೇ ನಿಮ್ಮ ಆಶ್ರಯವಾಗಿದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇದಲ್ಲದೆ ಎಜ್ರನು ಅವರಿಗೆ - ಹೋಗಿ ಮೃಷ್ಟಾನ್ನವನ್ನೂ ಮಧುರಪಾನವನ್ನೂ ತೆಗೆದುಕೊಳ್ಳಿರಿ; ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಭಾಗಗಳನ್ನು ಕಳುಹಿಸಿರಿ. ಈ ದಿನವು ನಮ್ಮ ಕರ್ತನಿಗೆ ಪ್ರತಿಷ್ಠಿತ ದಿನವಾಗಿರುವದರಿಂದ ವ್ಯಸನಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಆಶ್ರಯವಾಗಿದೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಹೋಗಿ ಮೃಷ್ಟಾನ್ನ ಭೋಜನ ಮಾಡಿ ಸಿಹಿ ಪಾನೀಯಗಳನ್ನು ಕುಡಿಯಿರಿ. ಅಡಿಗೆ ಮಾಡದೆ ಇದ್ದವರಿಗೂ ಅವುಗಳನ್ನು ಕೊಡಿರಿ. ಈ ದಿನ ಯೆಹೋವನಿಗೆ ವಿಶೇಷ ದಿನವಾಗಿದೆ. ದುಃಖಿಸಬೇಡಿರಿ. ಯಾಕೆಂದರೆ ಯೆಹೋವನ ಸಂತೋಷವು ನಮ್ಮನ್ನು ಬಲಗೊಳಿಸುತ್ತದೆ” ಎಂದು ನೆಹೆಮೀಯನು ಜನರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇದಲ್ಲದೆ ಎಜ್ರನು ಅವರಿಗೆ, “ನೀವು ಹೋಗಿ ಒಳ್ಳೆಯ ಆಹಾರವನ್ನು ತಿಂದು, ಸಿಹಿಯಾದದ್ದನ್ನು ಕುಡಿಯಿರಿ, ತಮಗಾಗಿ ಸಿದ್ಧಮಾಡಿಕೊಳ್ಳದವರಿಗೆ ಒಂದು ಪಾಲನ್ನು ಕಳುಹಿಸಿಕೊಡಿರಿ. ಈ ದಿನವು ನಮ್ಮ ಯೆಹೋವ ದೇವರಿಗೆ ಪರಿಶುದ್ಧವಾಗಿದೆ. ನೀವು ವ್ಯಥೆಪಡಬೇಡಿರಿ. ಯೆಹೋವ ದೇವರ ಆನಂದವೇ ನಿಮ್ಮ ಬಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 8:10
32 ತಿಳಿವುಗಳ ಹೋಲಿಕೆ  

ಹರ್ಷಹೃದಯವು ಒಳ್ಳೆಯ ಔಷಧ, ಕುಗ್ಗಿದ ಮನದಿಂದ ಅನಾರೋಗ್ಯ.


ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ಉಣ್ಣು. ನಿನ್ನ ದ್ರಾಕ್ಷಾರಸವನ್ನು ಒಳ್ಳೆಯ ಮನಸ್ಸಿನಿಂದ ಕುಡಿ. ದೇವರು ನಿನ್ನ ಕೆಲಸಗಳನ್ನು ಈಗ ಒಪ್ಪಿಕೊಳ್ಳುತ್ತಾನೆ.


ಇಸ್ರಾಯೇಲರು ತಮ್ಮ ಸೃಷ್ಟಿಕರ್ತನಲ್ಲಿ ಹೆಮ್ಮೆಪಡಲಿ; ಚೀಯೋನಿನವರು ತಮ್ಮ ರಾಜನಲ್ಲಿ ಹರ್ಷಿಸಲಿ.


ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು. ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ, ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ.


ಆದುದರಿಂದ ಪೌಳಿಗೋಡೆ ಇಲ್ಲದ ಹಳ್ಳಿಪಳ್ಳಿಯ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನವನ್ನೂ ನಗರಗಳ ಯೆಹೂದ್ಯರು ಹದಿನೈದನೆಯ ದಿನವನ್ನೂ ಶುಭದಿನವೆಂದು ಆಚರಿಸಿ, ಉತ್ಸವಭೋಜನಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ.


ಆ ಸಭೆಗಳವರಿಗೆ ಬಹಳ ಸಂಕಷ್ಟಗಳು ಬಂದರೂ ತಮ್ಮ ವಿಪರೀತವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.


ಆ ದಿನಗಳಲ್ಲಿ ಯೆಹೂದ್ಯರಿಗೆ ಶತ್ರುಪೀಡೆ ತಪ್ಪಿ ವಿಶ್ರಾಂತಿ ಉಂಟಾಯಿತು. ಆ ತಿಂಗಳಿನಲ್ಲಿ ಸಂತಾಪವು ಪರಿಹಾರವಾಗಿ ಅವರಿಗೆ ಸಂತೋಷವುಂಟಾಯಿತು; ದುಃಖವು ಹೋಗಿ ಸುಖಕಾಲವು ಬಂದಿತು. ಆದುದರಿಂದ ಅವರು ಆ ದಿನಗಳಲ್ಲಿ ಉತ್ಸವಭೋಜನ ಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಂಡು ಬಡವರಿಗೆ ದಾನಧರ್ಮ ಮಾಡಬೇಕು.


ಇದಲ್ಲದೆ ಪ್ರತಿಯೊಬ್ಬನೂ ಅನ್ನಪಾನಗಳನ್ನು ತೆಗೆದುಕೊಂಡು ತನ್ನ ನಾನಾ ಪ್ರಯಾಸಗಳಲ್ಲಿಯೂ ಸುಖವನ್ನನುಭವಿಸುವುದು ದೇವರ ಅನುಗ್ರಹವೇ ಎಂದು ನನಗೆ ಗೊತ್ತಿದೆ.


ಅನ್ನ ಪಾನಗಳನ್ನು ತೆಗೆದುಕೊಂಡು ತನ್ನ ಪ್ರಯಾಸದಲ್ಲಿಯೂ ಸುಖವನ್ನು ಅನುಭವಿಸುವುದಕ್ಕಿಂತ ಇನ್ನೇನೂ ಮನುಷ್ಯನಿಗೆ ಮೇಲಿಲ್ಲ. ಇದು ದೇವರಿಂದಾಯಿತೆಂಬುದನ್ನು ಕಂಡುಕೊಂಡೆನು.


ನೀನು ಅದನ್ನು ಏಳು ಮತ್ತು ಎಂಟು ಮಂದಿಗೆ ಹಂಚಿಬಿಡು. ಲೋಕದಲ್ಲಿ ಮುಂದೆ ಸಂಭವಿಸುವ ಕೇಡು ನಿನಗೆ ಗೊತ್ತಿಲ್ಲ.


ನಾನಾದರೋ ಶರೀರಸಂಬಂಧವಾದವುಗಳಲ್ಲಿ ಭರವಸವಿಡುವುದಕ್ಕೂ ಆಸ್ಪದವಿದೆ. ಬೇರೆ ಯಾವನಾದರೂ ಶರೀರಸಂಬಂಧವಾದವುಗಳಲ್ಲಿ ಭರವಸವಿಡಬಹುದೆಂದು ಯೋಚಿಸುವುದಾದರೆ ನಾನು ಅವನಿಗಿಂತಲೂ ಹೆಚ್ಚಾಗಿ ಹಾಗೆ ಯೋಚಿಸಬಹುದು.


ಹೇಗೂ ಒಳಗಿರುವಂಥದನ್ನು ದಾನಕೊಡಿರಿ, ಆಗ ಸಕಲವೂ ನಿಮಗೆ ಶುದ್ಧವಾಗಿರುವುದು.


ಪ್ರಿಯಳೇ, ವಧುವೇ, ಇಗೋ ನಾ ಬಂದಿರುವೆ ನನ್ನ ತೋಟದೊಳಗೆ, ನನ್ನ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ, ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ, ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ. ಪ್ರಿಯರೇ ಕುಡಿಯಿರಿ, ಬೇಕಾದಷ್ಟು ಪಾನಮಾಡಿರಿ.


ಇಗೋ, ನಾನು ಕಂಡದ್ದು ಇದೇ. ದೇವರು ಒಬ್ಬನಿಗೆ ದಯಪಾಲಿಸಿರುವ ಜೀವಮಾನದ ದಿನಗಳಲ್ಲೆಲ್ಲಾ ಅವನು ಅನ್ನಪಾನಗಳನ್ನು ತೆಗೆದುಕೊಂಡು ತಾನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಸುಖವನ್ನು ಅನುಭವಿಸುವನು. ಇದು ಅವನಿಗೆ ಉಚಿತವಾದದ್ದೂ, ಉತ್ತಮವಾದದ್ದೂ ಆಗಿದೆ. ಇದೇ ಅವನ ಪಾಲು.


ಚೀಯೋನಿನ ಜನರೇ ಹರ್ಷಿಸಿರಿ, ನಿಮ್ಮ ದೇವರಾದ ಯೆಹೋವನಲ್ಲಿ ಉಲ್ಲಾಸಿಸಿರಿ. ಆತನು ತನ್ನ ನೀತಿಯಿಂದ ಮುಂಗಾರು ಮಳೆಯನ್ನು ನಿಮಗೆ ಕೊಡುವನು. ಮುಂಗಾರು, ಹಿಂಗಾರು ಮಳೆಗಳನ್ನು ಮೊದಲಿನಂತೆ ನಿಮಗಾಗಿ ಸುರಿಸುವನು.


ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಹಿಂಸಿಸಿದ್ದರಿಂದ ಇವರು ಸತ್ತದ್ದಕ್ಕೆ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.


ನಿನ್ನ ಆಳುಗಳನ್ನು ಕೇಳು, ಅವರೇ ಹೇಳುವರು. ಹೀಗಿರುವುದರಿಂದ ಶುಭಕಾಲದಲ್ಲಿ ನಿನ್ನ ಬಳಿಗೆ ಬಂದಿರುವ ನನ್ನ ಸೇವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ. ಕೃಪೆಮಾಡಿ ನಿನ್ನ ಸೇವಕರಿಗೂ ಮಗನಾದ ದಾವೀದನಿಗೂ ನಿನಗಿರುವುದರಲ್ಲಿ ಕೊಡು’ ಎಂದು ಹೇಳಿರಿ” ಎಂದು ಅವರನ್ನು ಕಳುಹಿಸಿದನು.


ಲೇವಿಯರೂ ಜನರಿಗೆ, “ಸುಮ್ಮನಿರಿ, ಇದು ದೇವರ ಪರಿಶುದ್ಧ ದಿನ, ದುಃಖಿಸಬೇಡಿರಿ” ಎಂದು ಹೇಳಿ ಜನರನ್ನು ಸಂತೈಸಿದರು.


ತಮಗೆ ತಿಳಿಯಪಡಿಸಿದ ಮಾತುಗಳನ್ನು ಜನರೆಲ್ಲರೂ ಗ್ರಹಿಸಿದ ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು, ಏನೂ ಇಲ್ಲದವರಿಗೆ ಪಾಲನ್ನು ಕಳುಹಿಸಿ ಬಹಳವಾಗಿ ಸಂತೋಷಪಟ್ಟರು.


ಅಲ್ಲದೆ ಯೆರೂಸಲೇಮಿನಲ್ಲಿಯೂ, ಯೆಹೂದದಲ್ಲಿಯೂ ಇರುವ ಸಕಲ ಪಾತ್ರೆಗಳು ಸೇನಾಧೀಶ್ವರ ಯೆಹೋವನಿಗೆ ಮೀಸಲಾಗಿರುವವು; ಯಜ್ಞಮಾಡುವವರೆಲ್ಲರು ಬಂದು ಅವುಗಳನ್ನು ತೆಗೆದುಕೊಂಡು ಆ ಪಾತ್ರೆಗಳಲ್ಲಿ ಬೇಯಿಸುವರು; ಆ ದಿನದಲ್ಲಿ ಸೇನಾಧೀಶ್ವರ ಯೆಹೋವನ ಆಲಯದೊಳಗೆ ಯಾವ ವ್ಯಾಪಾರಿಯೂ ಇರುವುದಿಲ್ಲ.


ಎಂಟನೆಯ ದಿನ ಜನರಿಗೆ ಹೋಗುವುದಕ್ಕೆ ಅಪ್ಪಣೆಯಾಗಲು ಅವರು ಅರಸನನ್ನು ವಂದಿಸಿ ಯೆಹೋವನು ತನ್ನ ಸೇವಕನಾದ ದಾವೀದನಿಗೂ ತನ್ನ ಪ್ರಜೆಗಳಾದ ಇಸ್ರಾಯೇಲರಿಗೂ ಮಾಡಿದ ಸರ್ವೋಪಕಾರಗಳನ್ನು ನೆನದು ಆನಂದಚಿತ್ತರಾಗಿ, ಹರ್ಷಿಸುತ್ತಾ ತಮ್ಮ ತಮ್ಮ ನಿವಾಸಗಳಿಗೆ ತೆರಳಿದರು.


ಆತನ ಸಾನ್ನಿಧ್ಯದಲ್ಲಿ ಮಾನ ಮಹಿಮೆಗಳು ಆತನ ಪವಿತ್ರಾಲಯದಲ್ಲಿ ಮಹಿಮೆ, ಸ್ತುತಿಸ್ತೋತ್ರಗಳು, ಸಂತೋಷಗಳೂ ಇರುತ್ತವೆ.


ಅವರು ಹಿಗ್ಗುವ ಬಲವು ನೀನೇ. ನಿನ್ನ ಕರುಣೆಯ ಕಟಾಕ್ಷದಿಂದ ನಮ್ಮ ಕೊಂಬು ಎತ್ತಲ್ಪಟ್ಟಿರುವುದು.


ಆಹಾ, ನಾನು ಯೆಹೋವನ ದೃಷ್ಟಿಯಲ್ಲಿ ಮಾನ್ಯನು, ನನ್ನ ದೇವರೇ ನನಗೆ ಬಲವು. ಯಾಕೋಬ್ಯರನ್ನು ತನ್ನ ಕಡೆಗೆ ಸೇರಿಸಿಕೊಳ್ಳಬೇಕೆಂತಲೂ, ಇಸ್ರಾಯೇಲ್ ತನ್ನ ಕಡೆಗೆ ಕೂಡಿಬರಬೇಕೆಂತಲೂ ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನಲ್ಲವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು