Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 8:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನೂನನ ಮಗನಾದ ಯೆಹೋಶುವನ ಕಾಲದಿಂದ ಆ ವರೆಗೂ ಇಸ್ರಾಯೇಲರು ಹೀಗೆ ಮಾಡಿರಲಿಲ್ಲ. ಸೆರೆಯಿಂದ ಹಿಂತಿರುಗಿ ಬಂದ ಸರ್ವ ಸಮೂಹದವರಾದರೋ ಬಿಡಾರಗಳನ್ನು ಮಾಡಿಕೊಂಡು ಅವುಗಳಲ್ಲಿ ವಾಸಮಾಡುತ್ತಾ ಬಹಳ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನೂನನ ಮಗ ಯೆಹೋಶುವನ ಕಾಲದಿಂದ ಆವರೆಗೂ ಇಸ್ರಯೇಲರು ಹೀಗೆ ಮಾಡಿರಲಿಲ್ಲ. ಸೆರೆಯಿಂದ ಹಿಂತಿರುಗಿಬಂದ ಸರ್ವಸಮಾಜದವರು ಪರ್ಣಕುಟೀರಗಳನ್ನು ಮಾಡಿಕೊಂಡು, ಅವುಗಳಲ್ಲಿ ವಾಸಿಸುತ್ತಾ, ಬಹು ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನೂನನ ಮಗನಾದ ಯೆಹೋಶುವನ ಕಾಲದಿಂದ ಆವರೆಗೂ ಇಸ್ರಾಯೇಲ್ಯರು ಹೀಗೆ ಮಾಡಿದ್ದಿಲ್ಲ. ಸೆರೆಯಿಂದ ತಿರಿಗಿ ಬಂದ ಸರ್ವಸಮೂಹದವರಾದರೋ ಪರ್ಣಶಾಲೆಗಳನ್ನು ಮಾಡಿಕೊಂಡು ಅವುಗಳಲ್ಲಿ ವಾಸಿಸುತ್ತಾ ಬಹು ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಸೆರೆವಾಸದಿಂದ ಮರಳಿಬಂದ ಇಸ್ರೇಲರು ಬಿಡಾರಗಳನ್ನು ಹಾಕಿಕೊಂಡು ಅವುಗಳಲ್ಲಿ ವಾಸಿಸಿದರು. ನೂನನ ಮಗನಾದ ಯೆಹೋಶುವನ ಕಾಲದಿಂದ ಇಂದಿನವರೆಗೂ ಇಸ್ರೇಲರು ಇಂಥ ಪರ್ಣಶಾಲೆಗಳ ಹಬ್ಬವನ್ನು ಆಚರಿಸಲಿಲ್ಲ. ಪ್ರತಿಯೊಬ್ಬರೂ ಬಹು ಸಂತೋಷಗೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಈ ಪ್ರಕಾರ ಸೆರೆಯಿಂದ ತಿರುಗಿ ಬಂದ ಸಭೆಯವರೆಲ್ಲರು ಪರ್ಣಶಾಲೆಗಳನ್ನು ಹಾಕಿ, ಅದರಲ್ಲಿ ವಾಸವಾಗಿದ್ದರು. ನೂನನ ಮಗ ಯೆಹೋಶುವನ ದಿನವು ಮೊದಲುಗೊಂಡು ಆ ದಿವಸದವರೆಗೂ ಇಸ್ರಾಯೇಲರು ಹಾಗೆ ಮಾಡಿರಲಿಲ್ಲ. ಅಲ್ಲಿ ಅವರಿಗೆ ಬಹಳ ಸಂತೋಷವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 8:17
13 ತಿಳಿವುಗಳ ಹೋಲಿಕೆ  

ಮೋಶೆಯ ಆಜ್ಞೆಯಂತೆ ಸಬ್ಬತ್ ದಿನ, ಅಮಾವಾಸ್ಯೆ, ವಾರೋತ್ಸವ ಜಾತ್ರೆ ಇವುಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳ ಹಬ್ಬ, ಪಂಚಾಶತ್ತಮ ದಿನದ ಹಬ್ಬ, ಪರ್ಣಶಾಲೆ ಹಬ್ಬ ಎಂಬ ಮೂರು ವಾರ್ಷಿಕ ಹಬ್ಬಗಳಲ್ಲಿಯೂ ಆಯಾ ದಿನಗಳಿಗೆ ನೇಮಕವಾದ ಯಜ್ಞಗಳನ್ನು ಸಮರ್ಪಿಸುತ್ತಿದ್ದನು.


ಇದಲ್ಲದೆ ಶಾಸ್ತ್ರದಲ್ಲಿ ಬರೆದಿರುವಂತೆ ಅವರು ಪರ್ಣಶಾಲೆಗಳ ಜಾತ್ರೆಯನ್ನು ಆಚರಿಸಿ, ಪ್ರತಿದಿನ ನಿಗದಿಪಡಿಸಿದ ವಿಧಿಗನುಸಾರವಾದ ಸರ್ವಾಂಗಹೋಮಗಳನ್ನು ಅರ್ಪಿಸಿದರು.


ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದಲಿಲ್ಲ. ಆದರೂ ಅವುಗಳನ್ನು ದೂರದಿಂದ ನೋಡಿ ಮತ್ತು ಉಲ್ಲಾಸದೊಡನೆ ಸ್ವೀಕರಿಸಿ ನಂಬಿಕೆಯುಳ್ಳವರಾಗಿ ಮೃತರಾದರು. ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿಗಳು ಆಗಿದ್ದೆವೆಂದು ಒಪ್ಪಿಕೊಂಡರು.


ನಂಬಿಕೆಯಿಂದಲೇ ಅವನು ವಾಗ್ದಾನದ ದೇಶಕ್ಕೆ ಬಂದಾಗ, ಅಲ್ಲಿ ಅನ್ಯ ದೇಶದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿ ಬದುಕಿದನು. ಅದೇ ವಾಗ್ದಾನಕ್ಕೆ ಸಹಭಾಧ್ಯರಾಗಿದ್ದ ಇಸಾಕನೂ, ಯಾಕೋಬನೂ ಅವನಂತೆಯೇ ಗುಡಾರಗಳಲ್ಲಿ ವಾಸಿಸಿದರು.


ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ, ಬೇರೊಂದು ದಿನವನ್ನು ಕುರಿತು ದೇವರು ಹೇಳುತ್ತಿರಲಿಲ್ಲವಲ್ಲಾ.


ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.


ಇಂಥಾ ಪಸ್ಕಹಬ್ಬವು ಪ್ರವಾದಿಯಾದ ಸಮುವೇಲನ ದಿನಗಳಿಂದ ಇಸ್ರಾಯೇಲರಲ್ಲಿ ನಡೆಯಲೇ ಇಲ್ಲ. ಯೋಷೀಯನೂ, ಯಾಜಕರೂ, ಲೇವಿಯರೂ ಕೂಡಿಬಂದಿದ್ದ ಇಸ್ರಾಯೇಲರು, ಯೆಹೂದ್ಯರು, ಯೆರೂಸಲೇಮಿನವರೂ ಪಸ್ಕಹಬ್ಬವನ್ನು ಆಚರಿಸಿದಂತೆ ಇಸ್ರಾಯೇಲ್ ರಾಜರಲ್ಲಿ ಒಬ್ಬನೂ ಆಚರಿಸಲಿಲ್ಲ.


ದಾವೀದನ ಮಗನೂ ಇಸ್ರಾಯೇಲರ ಅರಸನೂ ಆದ ಸೊಲೊಮೋನನ ಕಾಲದಿಂದ ಯೆರೂಸಲೇಮಿನಲ್ಲಿ ಅಂಥ ಉತ್ಸವವು ನಡೆದಿರಲಿಲ್ಲವಾದುದರಿಂದ ಯೆರೂಸಲೇಮಿನಲ್ಲಿ ಮಹಾಸಂತೋಷವುಂಟಾಯಿತು.


ಜನರು ದಾವೀದನ ಮಗನಾದ ಸೊಲೊಮೋನನನ್ನು ಪುನಃ ಅರಸನನ್ನಾಗಿ ಆರಿಸಿಕೊಂಡು ಅವನನ್ನು ರಾಜನನ್ನಾಗಿಸಿವುದಕ್ಕೂ, ಚಾದೋಕನನ್ನು ಯಾಜಕನಾಗುವುದಕ್ಕೂ ಅಭಿಷೇಕಿಸಿ ಯೆಹೋವನಿಗೋಸ್ಕರ ಪ್ರತಿಷ್ಠಿಸಿದರು.


ಯೆಹೋವನ ಸೇವಕನಾದ ಮೋಶೆಯ ಮರಣದ ನಂತರ ಯೆಹೋವನು ಮೋಶೆಯ ಸೇವಕನಾದ ನೂನನ ಮಗನಾದ ಯೆಹೋಶುವನಿಗೆ


ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳದಲ್ಲಿ ನೀವು ಏಳು ದಿನವೂ ಆ ಜಾತ್ರೆಯನ್ನು ಆಚರಿಸಬೇಕು. ನಿಮ್ಮ ವ್ಯವಸಾಯವನ್ನೂ ಮತ್ತು ಬೇರೆ ಎಲ್ಲಾ ಕೆಲಸಗಳನ್ನೂ ಆತನು ಸಫಲ ಮಾಡಿದ್ದರಿಂದ ನೀವು ಬಹಳ ಆನಂದದಿಂದಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು