Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 8:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಮೇಲೆ ಯೇಷೂವ, ಬಾನೀ, ಶೇರೇಬ್ಯ, ಯಾಮಿನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್, ಪೆಲಾಯ ಎಂಬ ಲೇವಿಯರು ಧರ್ಮನಿಯಮದ ಸಾರವನ್ನು ಜನರು ಗ್ರಹಿಸುವಂತೆ ವಿವರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಮೇಲೆ ಯೇಷೂವ, ಬಾನೀ, ಶೇರೇಬ್ಯ, ಯಾಮೀನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್, ಪೆಲಾಯ ಎಂಬ ಲೇವಿಯರು ಧರ್ಮಶಾಸ್ತ್ರವನ್ನು ಜನರು ಗ್ರಹಿಸುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಮೇಲೆ ಯೇಷೂವ, ಬಾನೀ, ಶೇರೇಬ್ಯ, ಯಾಮೀನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್, ಪೆಲಾಯ ಎಂಬ ಲೇವಿಯರು ಧರ್ಮಶಾಸ್ತ್ರವನ್ನು ಜನರು ಗ್ರಹಿಸುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವರೆಲ್ಲಾ ನಿಂತಿರುವಾಗ ಲೇವಿಯರು ಧರ್ಮಶಾಸ್ತ್ರವನ್ನು ಅವರಿಗೆ ಓದಿತಿಳಿಸಿದರು. ಅವರು ಯಾರೆಂದರೆ: ಯೇಷೂವ, ಬಾನೀ, ಶೇರಬ್ಯ, ಯಾಮೀನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್ ಮತ್ತು ಪೆಲಾಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಮೇಲೆ ಯೇಷೂವ, ಬಾನೀ, ಶೇರೇಬ್ಯ, ಯಾಮೀನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್, ಪೆಲಾಯ ಎಂಬ ಲೇವಿಯರು ನಿಯಮವನ್ನು ತಿಳಿಯುವಂತೆ ಹೇಳಿದರು. ಜನರು ತಮ್ಮ ತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 8:7
27 ತಿಳಿವುಗಳ ಹೋಲಿಕೆ  

ಯೇಷೂವ, ಬಾನೀ ಕದ್ಮೀಯೇಲ್, ಶೆಬನ್ಯ, ಬುನ್ನೀ, ಶೇರೇಬ್ಯ, ಬಾನೀ, ಕೆನಾನೀ ಎಂಬುವವರು ಲೇವಿಯರು ಮೆಟ್ಟಿಲುಗಳ ಮೇಲೆ ನಿಂತು ಮಹಾಶಬ್ದದಿಂದ ತಮ್ಮ ದೇವರಾದ ಯೆಹೋವನಿಗೆ ಮೊರೆಯಿಟ್ಟರು.


ಯೆಹೋವನು ಮೋಶೆಯ ಮೂಲಕ ಇಸ್ರಾಯೇಲರಿಗೆ ಮಾಡಿದ ಎಲ್ಲಾ ಆಜ್ಞೆಗಳನ್ನು ಜನರಿಗೆ ಬೋಧಿಸುವುದೂ ನಿಮ್ಮ ಕರ್ತವ್ಯವಾಗಿದೆ” ಎಂದು ಹೇಳಿದನು.


ಇವರ ನಂತರ ಬೆನ್ಯಾಮೀನ್ ಮತ್ತು ಹಷ್ಷೂಬರು; ಇವರು ತಮ್ಮ ತಮ್ಮ ಮನೆಗಳಿಗೆ ಎದುರಾಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದರು. ಇವರ ನಂತರ ಅನನ್ಯನ ಮೊಮ್ಮಗನೂ ಮಾಸೇಯನ ಮಗನೂ ಆದ ಅಜರ್ಯ. ಇವನು ತನ್ನ ಮನೆಯ ಹತ್ತಿರದಲ್ಲಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು.


ಜ್ಞಾನಾನುಸಾರವಾಗಿ ಮಾತನಾಡುವುದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರನಾದ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳುವುದು ಧರ್ಮ. ನೀವೋ ದಾರಿತಪ್ಪಿದ್ದೀರಿ;


ತುತ್ತೂರಿ ಹಿಡಿದಿರುವ ಯಾಜಕರೊಡನೆ ಅಜರ್ಯ, ಎಜ್ರ, ಮೆಷುಲ್ಲಾಮ್,


ದ್ವಾರಪಾಲಕರಲ್ಲಿ; ಅಕ್ಕೂಬ್, ಟಲ್ಮೋನರೂ ಮತ್ತು ಬಾಗಿಲುಗಳನ್ನು ಕಾಯುತ್ತಿದ್ದ ಇವರ ಬಂಧುಗಳೂ ಒಟ್ಟು ನೂರ ಎಪ್ಪತ್ತೆರಡು ಮಂದಿ.


ಲೇವಿಗೋತ್ರ ಪ್ರಧಾನರಲ್ಲಿ: ದೇವಾಲಯದ ಹೊರಗಿನ ಕಾರ್ಯಗಳ ಮೇಲ್ವಿಚಾರಕನಾದ ಶಬ್ಬೆತೈ, ಯೋಜಾಬಾದ್ ಎಂಬುವವರು,


ಸೆರಾಯ, ಅಜರ್ಯ, ಯೆರೆಮೀಯ,


ಧರ್ಮೋಪದೇಶಕನಾದ ಎಜ್ರನು ಪಾರಾಯಣಕ್ಕಾಗಿ ಮಾಡಲ್ಪಟ್ಟ ಮರದ ಪೀಠದ ಮೇಲೆ ನಿಂತನು. ಅವನ ಬಲಗಡೆಯಲ್ಲಿ ಮತ್ತಿತ್ಯ, ಶೆಮ, ಅನಾಯ, ಊರೀಯ, ಹಿಲ್ಕೀಯ, ಮಾಸೇಯ ಎಂಬುವರೂ, ಎಡಗಡೆಯಲ್ಲಿ ಪೆದಾಯ, ಮಿಷಾಯೇಲ್, ಮಲ್ಕೀಯ, ಹಾಷುಮ್, ಹಷ್ಬದ್ದಾನ, ಜೆಕರ್ಯ, ಮೆಷುಲ್ಲಾಮ್ ಎಂಬುವರೂ ನಿಂತುಕೊಂಡಿದ್ದರು.


ಇವನ ಸಮೀಪದಲ್ಲಿ ಗೋಡೆಯ ಇನ್ನೊಂದು ಭಾಗವನ್ನು ಅಂದರೆ ಗೋಡೆಯ ಮೂಲೆಯಲ್ಲಿರುವ ಆಯುಧಶಾಲೆಗೆ ಹೋಗುವ ಮೆಟ್ಟಿಲುಗಳ ಎದುರಿಗಿರುವ ಭಾಗವನ್ನು ಮಿಚ್ಪದ ಅಧಿಕಾರಿಯೂ ಯೇಷೂವನ ಮಗ ಏಜೆರನು ಜೀರ್ಣೋದ್ಧಾರ ಮಾಡಿದನು.


ಇವನ ನಂತರ ಜೀರ್ಣೋದ್ಧಾರ ಮಾಡಿದವರು ಲೇವಿಯರು. ಅವರಲ್ಲಿ ಮೊದಲು ಬಾನಿಯ ಮಗನಾದ ರೆಹೂಮ್ ಸಮೀಪದಲ್ಲೇ ತನ್ನ ಪಟ್ಟಣದವರೊಡನೆ ಕಟ್ಟುತ್ತಿದ್ದ ಕೆಯೀಲದ ಅರ್ಧ ಪಟ್ಟಣಗಳ ಒಡೆಯನಾದ ಹಷಬ್ಯ ಇವರು.


ನಮ್ಮ ದೇವರ ಕೃಪಾಶೀರ್ವಾದ ನಮಗೆ ದೊರೆಕ್ಕಿದ್ದರಿಂದ ಅವರು ಇಸ್ರಾಯೇಲನ ಮಗನಾದ ಲೇವಿಯ ಕುಲದ ಮಹ್ಲೀ ಸಂತಾನದವರಲ್ಲಿ ಈಸ್ಸೆಕೆಲನನ್ನೂ, ಶೇರೇಬ್ಯನನ್ನೂ ಅವನ ಪುತ್ರಭ್ರಾತೃಗಳಲ್ಲಿ ಹದಿನೆಂಟು ಜನರನ್ನೂ,


ಹಿಜ್ಕೀಯನು ಯೆಹೋವನ ಸೇವೆಯಲ್ಲಿ ನಿಪುಣರಾದ ಎಲ್ಲಾ ಲೇವಿಯರೊಡನೆ ಪ್ರೀತಿಯಿಂದ ಮಾತನಾಡಿದನು. ನೇಮಕವಾದ ಏಳು ದಿನಗಳ ಹಬ್ಬದವರೆಗೂ ಜನರು ಸಮಾಧಾನ ಯಜ್ಞಗಳನ್ನು ಅರ್ಪಿಸುತ್ತಾ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತಮ್ಮ ದೇವರೆಂದು ಅರಿಕೆಮಾಡಿಕೊಳ್ಳುತ್ತಾ ಔತಣಮಾಡಿದರು.


ಅವರು ಯಾಕೋಬ್ ವಂಶದವರಿಗೆ ನಿನ್ನ ನಿರ್ಣಯಗಳನ್ನು ತಿಳಿಸುವರು; ಇಸ್ರಾಯೇಲರಿಗೆ ನಿನ್ನ ಧರ್ಮಶಾಸ್ತ್ರವನ್ನು ಕಲಿಸುವರು. ನಿನ್ನ ಸನ್ನಿಧಿಯಲ್ಲಿ ಧೂಪಹಾಕುವರು; ನಿನ್ನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಸಮರ್ಪಿಸುವರು.


ಎಲ್ಲಾ ಇಸ್ರಾಯೇಲರನ್ನು ಉಪದೇಶಿಸತಕ್ಕವರೂ, ಯೆಹೋವನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆ, “ದಾವೀದನ ಮಗನೂ ಇಸ್ರಾಯೇಲ್ ರಾಜನೂ ಆದ ಸೊಲೊಮೋನನು ಕಟ್ಟಿಸಿದ ದೇವಾಲಯದಲ್ಲಿ ಪವಿತ್ರ ಮಂಜೂಷವನ್ನು ಇರಿಸಿರಿ; ಅದನ್ನು ಹೆಗಲಿನ ಮೇಲೆ ಹೊತ್ತುಕೊಳ್ಳುವ ಅಗತ್ಯವಿಲ್ಲ. ಅದು ನಿಮ್ಮ ಹೆಗಲುಗಳಿಗೆ ಹೊರೆಯಾಗಿರಬಾರದು; ಇನ್ನು ಮುಂದೆ ನಿಮ್ಮ ದೇವರಾದ ಯೆಹೋವನನ್ನೂ, ಆತನ ಪ್ರಜೆಗಳಾದ ಇಸ್ರಾಯೇಲರನ್ನೂ ಸೇವಿಸಿರಿ.


ಎಜ್ರನು ಪರಾತ್ಪರನಾದ ದೇವರಾದ ಯೆಹೋವನನ್ನು ಸ್ತುತಿಸಿದಾಗ, ಸರ್ವಜನರೂ ತಮ್ಮ ಕೈಗಳನ್ನೆತ್ತಿ ಆಮೆನ್, ಆಮೆನ್, ಎಂದು ಹೇಳಿ ನೆಲದವರೆಗೂ ತಲೆಬಾಗಿ ಸ್ತೋತ್ರ ಆರ್ಪಿಸಿ ಯೆಹೋವನನ್ನು ಆರಾಧಿಸಿದರು.


ಜನರು ಎದ್ದುನಿಂತ ನಂತರ ಅವರು ದೇವರ ಧರ್ಮನಿಯಮಗಳನ್ನು ಸ್ಪಷ್ಟವಾಗಿ ಓದುತ್ತಾ ಅದರ ತಾತ್ಪರ್ಯವನ್ನು ವಿವರಿಸಿದಾಗ ಜನರು ಅರ್ಥಮಾಡಿಕೊಂಡರು.


ತಮಗೆ ತಿಳಿಯಪಡಿಸಿದ ಮಾತುಗಳನ್ನು ಜನರೆಲ್ಲರೂ ಗ್ರಹಿಸಿದ ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು, ಏನೂ ಇಲ್ಲದವರಿಗೆ ಪಾಲನ್ನು ಕಳುಹಿಸಿ ಬಹಳವಾಗಿ ಸಂತೋಷಪಟ್ಟರು.


ಇದಾದ ಮೇಲೆ ಅರಸನು ಎದ್ದು ನಿಂತು ಇಸ್ರಾಯೇಲ್ ಸಮೂಹದವರ ಕಡೆಗೆ ತಿರುಗಿಕೊಂಡು ಅವರನ್ನು ಆಶೀರ್ವದಿಸಿ,


ಅವರು ಮೂರು ತಾಸುಗಳವರೆಗೂ ತಮ್ಮ ತಮ್ಮ ಸ್ಥಳಗಳಲ್ಲಿ ನಿಂತುಕೊಂಡು ತಮ್ಮ ದೇವರಾದ ಯೆಹೋವನ ಧರ್ಮನಿಯಮಗಳ ಗ್ರಂಥವನ್ನು ಪಾರಾಯಣಮಾಡಿದರು. ತರುವಾಯ ಇನ್ನೂ ಮೂರು ತಾಸು ತಮ್ಮ ದೇವರಾದ ಯೆಹೋವನಿಗೆ ಅಡ್ಡ ಬಿದ್ದು ಪಾಪಗಳನ್ನು ಅರಿಕೆಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು