Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 8:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಜನರೆಲ್ಲರೂ ಧರ್ಮೋಪದೇಶ ವಾಕ್ಯಗಳನ್ನು ಕೇಳುತ್ತಾ ಅಳುತ್ತಿದ್ದುದರಿಂದ ದೇಶಾಧಿಪತಿಯಾದ ನೆಹೆಮೀಯನೂ, ಧರ್ಮೋಪದೇಶಕನಾದ ಎಜ್ರನೂ, ಜನರಿಗೆ ಬೋಧಿಸುತ್ತಿದ್ದ ಲೇವಿಯರೂ, “ಯೆಹೋವನಿಗೆ ಈ ದಿನವು ಪರಿಶುದ್ಧವಾಗಿರುವುದರಿಂದ ನೀವು ದುಃಖಿಸುತ್ತಾ ಅಳುತ್ತಾ ಇರಬೇಡಿರಿ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಜನರೆಲ್ಲರು ಧರ್ಮೋಪದೇಶದ ವಾಕ್ಯಗಳನ್ನು ಕೇಳುತ್ತಾ ಕಣ್ಣೀರಿಡುತ್ತಿದ್ದರು. ರಾಜ್ಯಪಾಲ ನೆಹೆಮೀಯನು, ಧರ್ಮೋಪದೇಶ ಮಾಡುವ ಯಾಜಕ ಎಜ್ರನು ಹಾಗು ಜನರನ್ನು ಸಂಬೋಧಿಸುತ್ತಿದ್ದ ಲೇವಿಯರು ಜನರಿಗೆ, “ಈ ದಿನ ನಿಮ್ಮ ದೇವರಾದ ಸರ್ವೇಶ್ವರನಿಗೆ ಪರಿಶುದ್ಧ ದಿನ! ಆದುದರಿಂದ ನೀವು ದುಃಖಿಸುತ್ತಾ ಅಳುತ್ತಾ ಇರಬೇಡಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಜನರೆಲ್ಲರೂ ಧರ್ಮೋಪದೇಶವಾಕ್ಯಗಳನ್ನು ಕೇಳುತ್ತಾ ಅಳುತ್ತಿದ್ದದರಿಂದ ದೇಶಾಧಿಪತಿಯಾದ ನೆಹೆಮೀಯನೂ ಧರ್ಮೋಪದೇಶಮಾಡುವ ಯಾಜಕನಾದ ಎಜ್ರನೂ ಜನರನ್ನು ಬೋಧಿಸುತ್ತಿದ್ದ ಲೇವಿಯರೂ ಅವರಿಗೆ - ಈ ದಿನವು ನಿಮ್ಮ ದೇವರಾದ ಯೆಹೋವನಿಗೆ ಪರಿಶುದ್ಧದಿನವಾಗಿರುವದರಿಂದ ನೀವು ದುಃಖಿಸುತ್ತಾ ಅಳುತ್ತಾ ಇರಬೇಡಿರಿ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಗ ಜನರೆಲ್ಲಾ ಅಳಲು ಪ್ರಾರಂಭಿಸಿದರು. ಆಗ ರಾಜ್ಯಪಾಲನಾದ ನೆಹೆಮೀಯನೂ ಯಾಜಕನೂ ಮತ್ತು ಉಪದೇಶಕನೂ ಆಗಿದ್ದ ಎಜ್ರನೂ ಲೇವಿಯರೂ ಎದ್ದುನಿಂತು ಜನರಿಗೆ, “ಈ ದಿನವು ನಿಮ್ಮ ದೇವರಾದ ಯೆಹೋವನಿಗೆ ವಿಶೇಷ ದಿನವಾಗಿದೆ. ಆದ್ದರಿಂದ ದುಃಖಿಸಬೇಡಿ ಮತ್ತು ಅಳಬೇಡಿರಿ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ರಾಜಪಾಲನಾದ ನೆಹೆಮೀಯನೂ, ನಿಯಮಶಾಸ್ತ್ರಿಯೂ, ಯಾಜಕನೂ ಆದ ಎಜ್ರನೂ, ಜನರನ್ನು ಬೋಧಿಸುತ್ತಿದ್ದ ಲೇವಿಯರೂ ಜನರೆಲ್ಲರಿಗೆ: “ಈ ದಿನವು ನಿಮ್ಮ ದೇವರಾಗಿರುವ ಯೆಹೋವ ದೇವರಿಗೆ ಪರಿಶುದ್ಧವಾದುದರಿಂದ ದುಃಖಿಸದೆ, ಅಳದೆ ಇರಿ,” ಎಂದರು. ಏಕೆಂದರೆ ಜನರೆಲ್ಲರು ದೇವರ ನಿಯಮದ ಮಾತುಗಳನ್ನು ಕೇಳಿದಾಗ ಅತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 8:9
30 ತಿಳಿವುಗಳ ಹೋಲಿಕೆ  

ಗೋತ್ರಪ್ರಧಾನರಲ್ಲಿ ಕೆಲವರು ಕೆಲಸಕಾರ್ಯಗಳಿಗಾಗಿ ಧನ ಸಹಾಯ ಮಾಡಿದರು. ತಿರ್ಷಾತಾ ಅನ್ನಿಸಿಕೊಳ್ಳುವ ದೇಶಾಧಿಪತಿಯು ಭಂಡಾರಕ್ಕೆ ಕೊಟ್ಟದ್ದು ಸಾವಿರ ಬಂಗಾರದ ನಾಣ್ಯಗಳು, ಐವತ್ತು ಬೋಗುಣಿಗಳು, ಐನೂರಮೂವತ್ತು ಯಾಜಕವಸ್ತ್ರಗಳು.


ಊರೀಮ್ ಮತ್ತು ತುಮ್ಮೀಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ ಇವರು ಮಹಾಪರಿಶುದ್ಧ ಪದಾರ್ಥಗಳನ್ನು ಭೋಜನ ಮಾಡಬಾರದೆಂಬುದಾಗಿ ದೇಶಾಧಿಪತಿಯು ಆಜ್ಞಾಪಿಸಿದನು.


ಅಲ್ಲಿ ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ದಾಸಿಯರೂ ಮತ್ತು ನಿಮ್ಮೊಡನೆ ಸ್ವತ್ತನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.


ಯಾಜಕನಾದ ಎಜ್ರನು ಗ್ರಹಿಸಿಕೊಳ್ಳಲು ಶಕ್ತರಾದ ಸ್ತ್ರೀಪುರುಷರು ನೆರೆದಿದ್ದ ಸಮೂಹದವರ ಮುಂದೆ ಏಳನೆಯ ತಿಂಗಳಿನ ಮೊದಲ ದಿನದಲ್ಲಿ ಆ ಧರ್ಮಶಾಸ್ತ್ರವನ್ನು ತಂದನು.


ಮತ್ತು ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮಿಸಬೇಕು.


ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.


ಅಳುವ ಸಮಯ, ನಗುವ ಸಮಯ, ಗೋಳಾಡುವ ಸಮಯ, ಕುಣಿದಾಡುವ ಸಮಯ,


ಊರೀಮ್ ಮತ್ತು ತುಮ್ಮೀಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ ಇವರು ಮಹಾಪರಿಶುದ್ಧ ಪದಾರ್ಥಗಳಲ್ಲಿ ಭೋಜನ ಮಾಡಬಾರದೆಂಬುದಾಗಿ ದೇಶಾಧಿಪತಿಯು ತೀರ್ಪುಮಾಡಿದನು.


ಅಲ್ಲಿಯೇ ಆತನ ಸನ್ನಿಧಿಯಲ್ಲಿ ಊಟಮಾಡಿ, ನಿಮ್ಮ ದೇವರಾದ ಯೆಹೋವನು ನಿಮ್ಮ ಪ್ರಯತ್ನಗಳನ್ನು ಕೈಗೂಡುವಂತೆ ಮಾಡಿದ್ದಕ್ಕಾಗಿ ನೀವೂ ಮತ್ತು ನಿಮ್ಮ ಮನೆಗಳವರೂ ಸಂತೋಷದಿಂದಿರಬೇಕು.


“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನಿಮಗೆ ಸಂಪೂರ್ಣ ವಿರಾಮವಿರಬೇಕು. ಅದನ್ನು ತುತ್ತೂರಿಗಳ ಧ್ವನಿಯಿಂದ ಪ್ರಕಟಪಡಿಸಬೇಕು. ದೇವಾರಾಧನೆಗಾಗಿ ಸಭೆಸೇರಬೇಕು.


ಮೊದಲು ನಾನು ಧರ್ಮಶಾಸ್ತ್ರವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪಕ್ಕೆ ಜೀವ ಬಂದಿತು. ನಾನು ಸತ್ತೆನು.


ಯಾಕೆಂದರೆ ಯಾವ ಮನುಷ್ಯನಾದರೂ ನೇಮನಿಷ್ಠೆಗಳನ್ನು ಅನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. ಧರ್ಮಶಾಸ್ತ್ರದಿಂದ ಪಾಪದ ಅರಿವು ಉಂಟಾಗುತ್ತದಷ್ಟೆ.


ಇನ್ನೊಂದು ಕೆಲಸವನ್ನು ಮಾಡುತ್ತೀರಿ - ಯೆಹೋವನ ಯಜ್ಞವೇದಿಯನ್ನು ನರಳಾಟದಿಂದಲೂ, ಗೋಳಾಟದಿಂದಲೂ ಕಣ್ಣೀರಿನಿಂದಲೂ ತುಂಬಿಸಿ ಮುಚ್ಚುತ್ತೀರಿ; ಆದಕಾರಣ ಆತನು ನಿಮ್ಮ ನೈವೇದ್ಯವನ್ನು ಇನ್ನು ಲಕ್ಷಿಸನು, ನಿಮ್ಮ ಕೈಯಿಂದ ಅದನ್ನು ಪ್ರಸನ್ನನಾಗಿ ಸ್ವೀಕರಿಸನು.


ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟಿದ್ದರಿಂದ ಇನ್ನು ನನಗೆ ಯಾಜಕಸೇವೆ ಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು. ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ, ನಾನು ನಿಮ್ಮ ಸಂತತಿಯವರನ್ನು ಮರೆತು ಬಿಡುವೆನು.


ಇವರಲ್ಲದೆ ಬಾಗಿಲುಗಳ ಬಳಿಯಲ್ಲಿದ್ದ ಉಗ್ರಾಣಗಳನ್ನು ಕಾಯತ್ತಿದ್ದ ದ್ವಾರಪಾಲಕರು: ಮತ್ತನ್ಯ, ಬಕ್ಬುಕ್ಯ, ಓಬದ್ಯ, ಮೆಷುಲ್ಲಾಮ್, ಟಲ್ಮೋನ್, ಅಕ್ಕೂಬ್ ಎಂಬುವವರು.


ಲೇಖನ ರೂಪವಾದ ಪ್ರತಿಜ್ಞೆಗೆ ಸಹಿಮಾಡಿದವರು ಯಾರಾರೆಂದರೆ: ಹಕಲ್ಯನ ಮಗನಾದ ನೆಹೆಮೀಯನೆಂಬ ದೇಶಾಧಿಪತಿ ಹಾಗೂ ಯಾಜಕನಾದ ಚಿದ್ಕೀಯ,


ಯಾಜಕನು ಮತ್ತು ಶಾಸ್ತ್ರಿಯೂ, ಇಸ್ರಾಯೇಲರಿಗಾಗಿ ಕೊಡಲ್ಪಟ್ಟ ಯೆಹೋವನ ಆಜ್ಞಾವಿಧಿಸೂತ್ರಗಳಲ್ಲಿ ವಿದ್ವಾಂಸನೂ ಆಗಿದ್ದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರ.


ಎಲ್ಲಾ ಇಸ್ರಾಯೇಲರನ್ನು ಉಪದೇಶಿಸತಕ್ಕವರೂ, ಯೆಹೋವನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆ, “ದಾವೀದನ ಮಗನೂ ಇಸ್ರಾಯೇಲ್ ರಾಜನೂ ಆದ ಸೊಲೊಮೋನನು ಕಟ್ಟಿಸಿದ ದೇವಾಲಯದಲ್ಲಿ ಪವಿತ್ರ ಮಂಜೂಷವನ್ನು ಇರಿಸಿರಿ; ಅದನ್ನು ಹೆಗಲಿನ ಮೇಲೆ ಹೊತ್ತುಕೊಳ್ಳುವ ಅಗತ್ಯವಿಲ್ಲ. ಅದು ನಿಮ್ಮ ಹೆಗಲುಗಳಿಗೆ ಹೊರೆಯಾಗಿರಬಾರದು; ಇನ್ನು ಮುಂದೆ ನಿಮ್ಮ ದೇವರಾದ ಯೆಹೋವನನ್ನೂ, ಆತನ ಪ್ರಜೆಗಳಾದ ಇಸ್ರಾಯೇಲರನ್ನೂ ಸೇವಿಸಿರಿ.


“ನಮ್ಮ ಪೂರ್ವಿಕರು ಈ ಗ್ರಂಥದಲ್ಲಿ ಬರೆದಿರುವ ಯೆಹೋವನ ಆಜ್ಞೆಗಳನ್ನೆಲ್ಲಾ ಕೈಕೊಳ್ಳದೆ ಹೋದುದರಿಂದಲೇ ಯೆಹೋವನು ತನ್ನ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾನೆ; ಆದುದರಿಂದ ನೀವು ನನಗೋಸ್ಕರವೂ ಹಾಗೂ ಇಸ್ರಾಯೇಲ್ಯರಲ್ಲಿ, ಯೆಹೂದ್ಯರಲ್ಲಿ ಉಳಿದಿರುವವರಿಗೋಸ್ಕರವೂ ಯೆಹೋವನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ಅರ್ಥವನ್ನು ವಿವರವಾಗಿ ತಿಳಿದು ಬರಲು” ಆಜ್ಞಾಪಿಸಿದನು.


ಅರಸನು ಧರ್ಮಶಾಸ್ತ್ರದ ವಾಕ್ಯಗಳನ್ನು ಕೇಳಿದಾಗ ಬಟ್ಟೆಗಳನ್ನು ಹರಿದುಕೊಂಡನು.


ಹಿಜ್ಕೀಯನು ಯೆಹೋವನ ಸೇವೆಯಲ್ಲಿ ನಿಪುಣರಾದ ಎಲ್ಲಾ ಲೇವಿಯರೊಡನೆ ಪ್ರೀತಿಯಿಂದ ಮಾತನಾಡಿದನು. ನೇಮಕವಾದ ಏಳು ದಿನಗಳ ಹಬ್ಬದವರೆಗೂ ಜನರು ಸಮಾಧಾನ ಯಜ್ಞಗಳನ್ನು ಅರ್ಪಿಸುತ್ತಾ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತಮ್ಮ ದೇವರೆಂದು ಅರಿಕೆಮಾಡಿಕೊಳ್ಳುತ್ತಾ ಔತಣಮಾಡಿದರು.


ಆಗ ಇಸ್ರಾಯೇಲರಿಗೆ ಬಹುಕಾಲದಿಂದ ಸತ್ಯವಾದ ದೇವರೂ, ಬೋಧಿಸುವ ಯಾಜಕರೂ ಹಾಗೂ ಧರ್ಮಶಾಸ್ತ್ರವೂ ಇರಲಿಲ್ಲ.


‘ನಾನು ಈ ದೇಶವನ್ನೂ, ನಿವಾಸಿಗಳನ್ನೂ, ಶಾಪವಿಸ್ಮಯಗಳಿಗೆ ಗುರಿಮಾಡುವೆನೆಂಬುವುದನ್ನು ನೀನು ಕೇಳಿದಾಗ, ದುಃಖಪಟ್ಟು ಯೆಹೋವನಾದ ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದಲೂ, ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು’


ಅರಸನು ಧರ್ಮೋಪದೇಶಗ್ರಂಥದ ವಾಕ್ಯಗಳನ್ನು ಕೇಳಿದಾಗ, ಬಟ್ಟೆಗಳನ್ನು ಹರಿದುಕೊಂಡನು.


ನಾವು ಸತ್ತವರಿಗೋಸ್ಕರ ದುಃಖಿಸುವ ಕಾಲದಲ್ಲೆಲ್ಲಾ ಅದರಲ್ಲಿ ಏನೂ ತಿನ್ನಲಿಲ್ಲ; ಅಶುದ್ಧರಾಗಿ ಅದನ್ನು ತೆಗೆದುಹಾಕಲಿಲ್ಲ; ಸತ್ತವರಿಗೋಸ್ಕರ ಅದರಲ್ಲಿ ಏನೂ ಕೊಡಲಿಲ್ಲ; ನಮ್ಮ ದೇವರಾದ ಯೆಹೋವನ ಮಾತಿನಲ್ಲಿ ಲಕ್ಷ್ಯವಿಟ್ಟು ನೀನು ನೇಮಿಸಿದ್ದನ್ನೆಲ್ಲಾ ಅನುಸರಿಸಿದ್ದೇವೆ.


ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗುವನ್ನು ಬಿಟ್ಟು ಗೋಳಾಡಿರಿ. ಸಂತೋಷವನ್ನು ಬಿಟ್ಟು ಶೋಕಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು