Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದು ಆಕಾಶದ ಕಡೆಯಿಂದ ಅವರೊಡನೆ ಮಾತನಾಡಿ, ಅವರಿಗೆ ನೀತಿನಿಯಮಗಳನ್ನೂ, ಯಥಾರ್ಥ ಧರ್ಮೋಪದೇಶವನ್ನೂ, ಶ್ರೇಷ್ಠವಾದ ಆಜ್ಞಾವಿಧಿಗಳನ್ನೂ ಅನುಗ್ರಹಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸೀನಾಯಿ ಬೆಟ್ಟದ ಮೇಲೆ ಇಳಿದುಬಂದು ಆಕಾಶದ ಕಡೆಯಿಂದ ಅವರೊಡನೆ ಮಾತಾಡಬಂದು ಅವರಿಗನುಗ್ರಹಿಸಿದಿರಿ ನೀತಿನಿಯಮಗಳನು ಸತ್ಯಧರ್ಮೋಪದೇಶವನು, ಶ್ರೇಷ್ಠ ಆಜ್ಞಾವಿಧಿಗಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದು ಆಕಾಶದ ಕಡೆಯಿಂದ ಅವರೊಡನೆ ಮಾತಾಡಿ ಅವರಿಗೆ ನೀತಿನಿಯಮಗಳನ್ನೂ ಯಥಾರ್ಥ ಧರ್ಮೋಪದೇಶವನ್ನೂ ಶ್ರೇಷ್ಠವಾದ ಆಜ್ಞಾವಿಧಿಗಳನ್ನೂ ಅನುಗ್ರಹಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಮೇಲೆ ಸೀನಾಯ ಬೆಟ್ಟಕ್ಕೆ ಇಳಿದುಬಂದೆ. ಪರಲೋಕದಿಂದ ಅವರೊಂದಿಗೆ ಮಾತನಾಡಿದೆ. ಅವರಿಗೆ ಒಳ್ಳೆಯ ಕಟ್ಟಳೆಗಳನ್ನು ದಯಪಾಲಿಸಿದೆ; ಸತ್ಯಬೋಧನೆಯನ್ನು ನೀಡಿದೆ, ವಿಧಿನಿಯಮಗಳನ್ನು ಕಲಿಸಿದೆ. ಅವುಗಳೆಲ್ಲಾ ಉತ್ತಮವಾದವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ನೀವು ಸೀನಾಯಿ ಪರ್ವತದ ಮೇಲಕ್ಕೆ ಇಳಿದುಬಂದು, ಆಕಾಶದಿಂದ ಅವರ ಸಂಗಡ ಮಾತನಾಡಿದಿರಿ. ಸರಿಯಾದ ನ್ಯಾಯಗಳನ್ನೂ, ಸತ್ಯವಾದ ನಿಯಮಗಳನ್ನೂ, ಉತ್ತಮವಾದ ಕಟ್ಟಳೆಗಳನ್ನೂ, ಆಜ್ಞೆಗಳನ್ನೂ ಅವರಿಗೆ ಕೊಟ್ಟಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:13
27 ತಿಳಿವುಗಳ ಹೋಲಿಕೆ  

ನಿನ್ನ ವಾಕ್ಯದ ಸಾರಾಂಶವು ಸತ್ಯವೇ, ನಿನ್ನ ನೀತಿವಿಧಿಗಳೆಲ್ಲಾ ಯುಗಯುಗಾಂತರಕ್ಕೂ ಇರುವವು. ಷಿನ್.


ದೇವರು ಈ ಎಲ್ಲಾ ಆಜ್ಞಾವಿಧಿಗಳನ್ನು ಅವರಿಗೆ ಕೊಟ್ಟನು:


ಮೂರನೆಯ ದಿನದಲ್ಲಿ ಅವರು ಸಿದ್ಧರಾಗಿರಬೇಕು. ಮೂರನೆಯ ದಿನದಲ್ಲಿ ಯೆಹೋವನು ಸಮಸ್ತ ಜನರಿಗೂ ಪ್ರತ್ಯಕ್ಷನಾಗಿ ಸೀನಾಯಿ ಬೆಟ್ಟದ ಮೇಲೆ ಇಳಿದು ಬರುವನು.


ಆದರೆ ನಾನು ಮಾಡುವಂಥದಕ್ಕೆ ನನ್ನ ಮನಸ್ಸು ಒಪ್ಪದಿದ್ದರೆ ಧರ್ಮಶಾಸ್ತ್ರವು ಉತ್ತಮವಾದದ್ದೆಂದು ಒಪ್ಪಿಕೊಂಡ ಹಾಗಾಯಿತು.


ತೇಮಾನಿನಿಂದ ಕರುಣಾಸಾಗರನಾದ ದೇವರು ಬರುತ್ತಿದ್ದಾನೆ, ಸದಮಲಸ್ವಾಮಿಯು ಪಾರಾನ್ ಪರ್ವತದಿಂದ ಬರುತ್ತಾನೆ; ಸೆಲಾ. ಆತನ ಪ್ರಭಾವವು ಆಕಾಶಮಂಡಲವನ್ನೆಲ್ಲಾ ಆವರಿಸಿಕೊಂಡಿದೆ, ಆತನ ಮಹಿಮೆಯು ಭೂಮಂಡಲವನ್ನು ತುಂಬುತ್ತಿದೆ;


ಹೌದು, ನೀನು ಮೊದಲಿನಂತೆ ನಮ್ಮ ನಿರೀಕ್ಷೆಗೆ ಮೀರಿದ ಭಯಂಕರ ಕೃತ್ಯಗಳನ್ನು ನಡೆಸಿ ಇಳಿದು ಬಂದು, ಪರ್ವತಗಳು ನಿನ್ನ ದರ್ಶನದಿಂದ ನಡುಗಿದರೆ ಎಷ್ಟೋ ಲೇಸು!


ಆಹಾ, ನೀನು ಆಕಾಶವನ್ನು ಸೀಳಿ ಇಳಿದು ಬರಬಾರದೇ! ನಿನ್ನ ದರ್ಶನವು ಉಂಟಾಗಿ ಪರ್ವತಗಳು ಅಗಲಿದರೆ ಎಷ್ಟೋ ಒಳ್ಳೆಯದು!


ಯೆಹೋವನೇ, ನೀನು ನೀತಿಸ್ವರೂಪನು, ನಿನ್ನ ವಿಧಿಗಳು ನ್ಯಾಯವಾಗಿವೆ.


“ಯೆಹೋವನು ಸೀನಾಯಿಬೆಟ್ಟದಿಂದ ಬಂದು ಸೇಯೀರ್ ಎಂಬ ಬೆಟ್ಟದ ಸೀಮೆಯೊಳಗಿಂದ ಪ್ರಕಾಶಿಸಿ ಪಾರಾನ್ ಪರ್ವತದಿಂದ ಪ್ರಜ್ವಲಿಸಿ, ಲಕ್ಷಾಂತರ ಪರಿಶುದ್ಧದೂತರ ಮಧ್ಯದಿಂದ ಅವರಿಗೋಸ್ಕರ ದಯಮಾಡಿದನು; ಆತನ ಬಲಪಾರ್ಶ್ವದಲ್ಲಿ ಅಗ್ನಿಸದೃಶವಾದ ಧರ್ಮಶಾಸ್ತ್ರವಿತ್ತು.


ಯೆಹೋವನು ಆ ಬೆಟ್ಟದ ಮೇಲೆ ಬೆಂಕಿಯ ಜ್ಞಾಲೆಯೊಳಗಿಂದ ಮುಖಾಮುಖಿಯಾಗಿ ನಿಮ್ಮ ಸಂಗಡ ಮಾತನಾಡಿದನು.


ದೇವರು ಬೆಂಕಿಯ ಜ್ವಾಲೆಯೊಳಗಿಂದ ಮಾತನಾಡಿದ ಸ್ವರವು ನಿಮಗೆ ಕೇಳಿಸಿತಲ್ಲಾ; ಬೇರೆ ಯಾವ ಜನರಾದರೂ ದೇವರ ಸ್ವರವನ್ನು ಕೇಳಿ ಬದುಕಿದ್ದುಂಟೋ?


ನಾನು ಈ ಹೊತ್ತು ನಿಮ್ಮ ಮುಂದೆ ಇಡುವ ಇಂಥ ನ್ಯಾಯವಾದ ಆಜ್ಞಾವಿಧಿಗಳುಳ್ಳ ಈ ಧರ್ಮಶಾಸ್ತ್ರಕ್ಕೆ ಸಮಾನವಾದದ್ದು ಬೇರೆ ಯಾವ ಜನಾಂಗಕ್ಕೆ ಉಂಟು?


ಯೆಹೋವನು ಮೋಶೆಗೆ ಹೀಗೆಂದನು, “ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ; ‘ನಾನು ಆಕಾಶದಿಂದ ನಿಮ್ಮ ಸಂಗಡ ಮಾತನಾಡಿದ್ದನ್ನು ನೀವು ನೋಡಿದ್ದೀರಿ.


ಅದಕ್ಕೆ ಅವನು, “ಇದು ಯೆಹೋವನು ಹೇಳಿದ ಮಾತು, ‘ನಾಳೆ ಯೆಹೋವನಿಗೆ ವಿಶ್ರಾಂತಿಯ ಪರಿಶುದ್ಧ ಸಬ್ಬತ ದಿನವಾಗಿದೆ. ಈ ದಿನವೇ ಸುಡಬೇಕಾದದ್ದನ್ನು ಸುಟ್ಟು, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ನಾಳೆಯವರೆಗೆ ಇಟ್ಟುಕೊಳ್ಳಿರಿ’” ಎಂದನು.


ಆತನು ನಿಮ್ಮ ಶಿಕ್ಷಣಕ್ಕೋಸ್ಕರ ಆಕಾಶದಿಂದ ತನ್ನ ಸ್ವರವನ್ನು ನಿಮಗೆ ಕೇಳಿಸುವಂತೆ ಮಾಡಿದನು; ಮತ್ತು ತನ್ನ ಮಹಾ ಅಗ್ನಿಜ್ವಾಲೆಯನ್ನು ಭೂಮಿಯ ಮೇಲೆ ತೋರಿಸಿದನು. ಅದಲ್ಲದೆ ಆ ಅಗ್ನಿಜ್ವಾಲೆಯೊಳಗಿಂದ ಆತನು ಆಡಿದ ಮಾತುಗಳನ್ನು ಕೇಳಿಸುವಂತೆ ಮಾಡಿದನು.


ನಿನ್ನ ನಿಯಮಗಳನ್ನು ಜಾಗರೂಕತೆಯಿಂದ ಕೈಕೊಂಡು ನಡೆಸಬೇಕೆಂದು, ನೀನೇ ಆಜ್ಞಾಪಿಸಿರುತ್ತಿ.


ಯೆಹೋವನಾದ ನಾನು ನಿಮಗೆ ಬರೆಯಿಸಿ ಕೊಟ್ಟ ಆಜ್ಞಾವಿಧಿಗಳನ್ನು ಧರ್ಮನಿಯಮಗಳನ್ನು ತಪ್ಪದೇ ಕೈಕೊಳ್ಳಬೇಕು. ನೀವು ಅನ್ಯ ದೇವತೆಗಳಿಗೆ ಭಯಪಡಬಾರದು.


ಎಜ್ರನು ಇಸ್ರಾಯೇಲ್ ದೇವರಾದ ಯೆಹೋವನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾರಂಗತನಾದ ಶಾಸ್ತ್ರಿಯಾಗಿದ್ದನು. ಅವನ ದೇವರಾದ ಯೆಹೋವನ ಹಸ್ತಪಾಲನೆಯಿಂದ ಅರಸನು ಅವನಿಗೆ ಇಷ್ಟವಾದದ್ದನ್ನೆಲ್ಲಾ ಅನುಗ್ರಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು