Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ನಮ್ಮ ಅರಸರೂ, ಪ್ರಭುಗಳೂ, ಯಾಜಕರೂ, ಹಿರಿಯರೂ ನಿನ್ನ ಧರ್ಮೋಪದೇಶವನ್ನು ಅನುಸರಿಸಲಿಲ್ಲ, ನಿನ್ನ ಆಜ್ಞೆಗಳಿಗೆ ಕಿವಿಗೊಡಲಿಲ್ಲ. ನೀನು ಎಚ್ಚರಿಸಿ ಹೇಳಿದ ಮಾತುಗಳನ್ನು ಗಮನಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ನಮ್ಮ ಅರಸರು, ರಾಜ್ಯಪಾಲರು, ಯಾಜಕರು, ಹಿರಿಯರು ಅನುಸರಿಸಲಿಲ್ಲ, ನಿಮ್ಮಾಜ್ಞೆಯನು, ಧರ್ಮೋಪದೇಶವನು. ಲಕ್ಷಿಸಲಿಲ್ಲ ನೀವಿತ್ತ ಎಚ್ಚರಿಕೆಯ ಮಾತುಗಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ನಮ್ಮ ಅರಸರೂ ಪ್ರಭುಗಳೂ ಯಾಜಕರೂ ಹಿರಿಯರೂ ನಿನ್ನ ಧರ್ಮೋಪದೇಶವನ್ನು ಅನುಸರಿಸಲಿಲ್ಲ, ನಿನ್ನ ಆಜ್ಞೆಗಳಿಗೆ ಕಿವಿಗೊಡಲಿಲ್ಲ; ನೀನು ಎಚ್ಚರಿಸಿ ಹೇಳಿದ ಮಾತುಗಳನ್ನು ಲಕ್ಷಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ನಮ್ಮ ರಾಜರುಗಳು, ನಾಯಕರು, ಯಾಜಕರು ಮತ್ತು ನಮ್ಮ ಪೂರ್ವಿಕರು ನಿನ್ನ ಆಜ್ಞೆಯನ್ನು ಅನುಸರಿಸಲಿಲ್ಲ. ನಿನ್ನ ಎಚ್ಚರಿಕೆಯನ್ನು ಲಕ್ಷ್ಯಕ್ಕೆ ತರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ನಮ್ಮ ಅರಸರೂ, ನಮ್ಮ ಪ್ರಧಾನರೂ, ನಮ್ಮ ಯಾಜಕರೂ, ನಮ್ಮ ಪಿತೃಗಳೂ ನಿಮ್ಮ ನಿಯಮವನ್ನು ಕೈಗೊಳ್ಳದೆ, ನಿಮ್ಮ ಆಜ್ಞೆಗಳನ್ನೂ, ನೀವು ಅವರಿಗೆ ಎಚ್ಚರಿಸಿದ ನಿಮ್ಮ ಎಚ್ಚರಿಕೆಗಳನ್ನೂ ಕೇಳದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:34
13 ತಿಳಿವುಗಳ ಹೋಲಿಕೆ  

ಅವರು ನನ್ನ ಮಾತುಗಳನ್ನು ಕೇಳಲಿಲ್ಲವಲ್ಲಾ; ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಅವರ ಬಳಿಗೆ ತಪ್ಪದೆ ಕಳುಹಿಸಿ ಎಚ್ಚರಿಸುತ್ತಾ ಬಂದರೂ ಅವರು ಕೇಳಲೊಲ್ಲದೆ ಹೋದರು ಇದು ಯೆಹೋವನ ನುಡಿ.”


ಯೆಹೋವನು ದರ್ಶಕರೆನಿಸಿಕೊಂಡ ತನ್ನ ಪ್ರವಾದಿಗಳ ಮುಖಾಂತರವಾಗಿ ಇಸ್ರಾಯೇಲರಿಗೆ ಮತ್ತು ಯೆಹೂದ್ಯರಿಗೆ, “ನೀವು, ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪೂರ್ವಿಕರಿಗೂ, ನನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ನಿಮಗೆ ಕೊಟ್ಟಂಥ ನನ್ನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ನಡೆಯಿರಿ” ಎಂದು ಖಂಡಿತವಾಗಿ ಹೇಳಿಸಿದನು.


ಅನಂತರ ಅನೇಕ ಕಷ್ಟಗಳೂ ಮತ್ತು ವಿಪತ್ತುಗಳೂ ಸಂಭವಿಸಿದಾಗ ಈ ಪದ್ಯವು ಇವರ ಸಂತತಿಯವರ ಬಾಯಲ್ಲಿ ಇದ್ದುಕೊಂಡು ಅವರ ಮುಂದೆ ಸಾಕ್ಷಿಕೊಡುವುದು” ಎಂದು ಹೇಳಿದನು.


ನೀನು ಅನೇಕ ವರ್ಷಗಳ ತನಕ ಅವರ ವಿಷಯದಲ್ಲಿ ತಾಳ್ಮೆಯುಳ್ಳವನಾಗಿ ಪ್ರವಾದಿಗಳ ಮುಖಾಂತರ ಮಾತನಾಡುತ್ತಿದ್ದ ನಿನ್ನ ಆತ್ಮನಿಂದ ಅವರನ್ನು ಎಷ್ಟು ಎಚ್ಚರಿಸುತ್ತಿದ್ದರೂ ಅವರು ಕಿವಿಗೊಡದೆ ಹೋದ ಮೇಲೆ ನೀನು ಅವರನ್ನು ಅನ್ಯದೇಶಗಳವರ ಕೈಗೆ ಒಪ್ಪಿಸಿಬಿಟ್ಟೆ.


ಆತನು ತಮ್ಮ ಪೂರ್ವಿಕರಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ, ತಮಗೆ ಹೇಳಿಸಿದ ಒಡಂಬಡಿಕೆಯನ್ನು ತಿರಸ್ಕರಿಸಿ, ವ್ಯರ್ಥವಾದ ದೇವತೆಗಳನ್ನು ಸೇವಿಸಿ ನಿಷ್ಪ್ರಯೋಜಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಯೆಹೋವನು ಆಜ್ಞಾಪಿಸಿದರೂ ಅವರು ಕೇಳದೆ, ಅವರನ್ನು ಅನುಸರಿಸಿದರು.


ನೀನು ನಮ್ಮ ಮೇಲೆ ಎಷ್ಟು ಕೇಡನ್ನು ಬರಮಾಡಿದರೂ ನೀನು ನೀತಿಸ್ವರೂಪನೇ. ನೀನು ಸತ್ಯವನ್ನೇ ನಡಿಸಿದೆ. ನಾವಾದರೋ ದುಷ್ಟರು.


ಅವರು ಸ್ವರಾಜ್ಯದಲ್ಲಿದ್ದುಕೊಂಡು ನೀನು ದಯಪಾಲಿಸಿದ ಸಮೃದ್ಧಿಯನ್ನು ಅನುಭವಿಸುತ್ತಾ ನಿನ್ನ ಅನುಗ್ರಹದಿಂದ ದೊರಕಿದ ಫಲವತ್ತಾದ ವಿಶಾಲವಾದ ದೇಶದಲ್ಲಿ ವಾಸಿಸುತ್ತಾ ಇರುವಾಗ ನಿನ್ನನ್ನು ಆರಾಧಿಸದೆಯೂ ತಮ್ಮ ದುಷ್ಕೃತ್ಯಗಳನ್ನು ಬಿಡದೆಯೂ ಇದ್ದುದರಿಂದಲೇ ನಾವು ಈಗ ದಾಸರಾಗಿದ್ದೇವೆ.


ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುವುದಿಲ್ಲ ಎಂದು ನಾವು ಬಾಯಿಬಿಟ್ಟು ಹೇಳಿದ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುವೆವು. ಮೊದಲು ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇಮಿನ ಬೀದಿಗಳಲ್ಲಿ ನಾವೂ ಮತ್ತು ನಮ್ಮ ಪೂರ್ವಿಕರೂ ನಮ್ಮ ಅರಸರೂ, ನಮ್ಮ ಪ್ರಧಾನರೂ ಹೀಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬಾ ಉಂಡು ಸುಖಪಡುತ್ತಿದ್ದೆವು.


ನಮ್ಮ ಪೂರ್ವಿಕರು ನಮ್ಮ ದೇವರಾದ ಯೆಹೋವನಿಗೆ ದ್ರೋಹಮಾಡಿ, ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದು ಆತನನ್ನು ತೊರೆದುಬಿಟ್ಟರು. ಅವರು ಆತನ ನಿವಾಸ ಸ್ಥಳವನ್ನು ತೊರೆದು ವಿಮುಖರಾದರು.


ಇಷ್ಟು ಉಪಕಾರವನ್ನು ಪಡೆದ ನಾವು ಏನು ಅರಿಕೆಮಾಡಿಕೊಳ್ಳಲು ಸಾಧ್ಯ? ನಮ್ಮ ದೇವರೇ, ನಿನ್ನ ಆಜ್ಞೆಗಳನ್ನು ಉಲ್ಲಂಘಿಸಿದ್ದೇವೆ.


ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ತಡ ಮಾಡದೆ ಕಳುಹಿಸುತ್ತಾ, ‘ಆಹಾ! ನಾನು ಹೇಸುವ ಈ ಅಸಹ್ಯಕಾರ್ಯವನ್ನು ಮಾಡಬೇಡಿರಿ’ ಎಂದು ಪ್ರಕಟಿಸುತ್ತಾ ಬಂದರೂ,


ಅದು ನನ್ನ ನಿಯಮನಿಷ್ಠೆಗಳಿಗೆ ಒಳಪಡದೆ ಜನಾಂಗಗಳಿಗಿಂತಲೂ, ಸುತ್ತಲಿನ ದೇಶಗಳವರಿಗಿಂತಲೂ ಹೆಚ್ಚು ಅಧರ್ಮವನ್ನು ನಡೆಸಿದೆ; ಅದರ ನಿವಾಸಿಗಳು ನನ್ನ ನಿಯಮಗಳನ್ನು ಅನುಸರಿಸದೆ ನನ್ನ ವಿಧಿಗಳನ್ನು ನಿರಾಕರಿಸಿದ್ದಾರೆ.”


ನಮ್ಮ ಅರಸರು, ಪ್ರಧಾನರು, ಹಿರಿಯರು, ಸಾಮಾನ್ಯ ಜನರು, ಇವರಿಗೆಲ್ಲ ನಿನ್ನ ಹೆಸರಿನ ನಿಮಿತ್ತ ನುಡಿದ ನಿನ್ನ ಸೇವಕರಾದ ಪ್ರವಾದಿಗಳ ಕಡೆಗೆ ಕಿವಿಗೊಡಲೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು