Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಅವರು ಸ್ವರಾಜ್ಯದಲ್ಲಿದ್ದುಕೊಂಡು ನೀನು ದಯಪಾಲಿಸಿದ ಸಮೃದ್ಧಿಯನ್ನು ಅನುಭವಿಸುತ್ತಾ ನಿನ್ನ ಅನುಗ್ರಹದಿಂದ ದೊರಕಿದ ಫಲವತ್ತಾದ ವಿಶಾಲವಾದ ದೇಶದಲ್ಲಿ ವಾಸಿಸುತ್ತಾ ಇರುವಾಗ ನಿನ್ನನ್ನು ಆರಾಧಿಸದೆಯೂ ತಮ್ಮ ದುಷ್ಕೃತ್ಯಗಳನ್ನು ಬಿಡದೆಯೂ ಇದ್ದುದರಿಂದಲೇ ನಾವು ಈಗ ದಾಸರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಅವರಿದ್ದರು ನೀವೇ ಅನುಗ್ರಹಿಸಿದ ಸ್ವರಾಜ್ಯದಲಿ ನಲಿದಾಡಿದರು ನೀವು ಕರುಣಿಸದ ಸಮೃದ್ಧಿಯಲಿ ವಾಸಿಸಿದರು ಸಾರವತ್ತಾದ ಸವಿಸ್ತಾರ ನಾಡಿನಲಿ. ಆದರೂ ಮಾಡಲಿಲ್ಲ ನಿಮ್ಮ ಸೇವೆ, ಬಿಡಲಿಲ್ಲ ತಮ್ಮ ದುರ್ನಡತೆ ನಮಗೊದಗಿರುವ ಗುಲಾಮಗಿರಿ, ಇದರ ಪರಿಣಾಮವಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಅವರು ಸ್ವರಾಜ್ಯದಲ್ಲಿದ್ದುಕೊಂಡು ನೀನು ದಯಪಾಲಿಸಿದ ಸಮೃದ್ಧಿಯನ್ನು ಅನುಭವಿಸುತ್ತಾ ನಿನ್ನ ಅನುಗ್ರಹದಿಂದ ದೊರಕಿದ ಸಾರವುಳ್ಳ ವಿಸ್ತಾರದೇಶದಲ್ಲಿ ವಾಸಿಸುತ್ತಾ ಇರುವಾಗ ನಿನ್ನನ್ನು ಸೇವಿಸದೆಯೂ ತಮ್ಮ ದುಷ್ಕೃತ್ಯಗಳನ್ನು ಬಿಡದೆಯೂ ಇದ್ದದರಿಂದಲೇ ನಾವು ಈಗ ದಾಸರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ನಮ್ಮ ಪೂರ್ವಿಕರು ನಿನ್ನ ಸೇವೆಮಾಡಲಿಲ್ಲ. ತಮ್ಮ ಸ್ವಂತ ದೇಶದಲ್ಲಿ ವಾಸಿಸುವಾಗಲೂ ನಿನ್ನ ಸೇವೆಮಾಡಲಿಲ್ಲ; ಕೆಟ್ಟತನವನ್ನು ನಿಲ್ಲಿಸಲಿಲ್ಲ. ನೀನು ಕೊಟ್ಟ ಉತ್ತಮ ವಸ್ತುಗಳಲ್ಲಿಯೂ ಉತ್ತಮ ಭೂಮಿಯಲ್ಲಿಯೂ ಆನಂದಿಸಿದರು. ಅವರಿಗೆ ಬೇಕಾದಷ್ಟು ಜಮೀನಿತ್ತು. ಆದರೂ ಅವರು ತಮ್ಮ ದುಷ್ಟತನವನ್ನು ನಿಲ್ಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಅವರು ತಮ್ಮ ರಾಜ್ಯದಲ್ಲಿಯೂ, ನೀವು ಅವರಿಗೆ ಮಾಡಿದ ಮಹಾ ಉಪಕಾರದಲ್ಲಿಯೂ ನೀವು ಅವರಿಗೆ ಕೊಟ್ಟ ವಿಸ್ತಾರವಾದ, ರಸವತ್ತಾದ ದೇಶದಲ್ಲಿಯೂ, ನಿಮ್ಮನ್ನು ಸೇವಿಸಲಿಲ್ಲ. ತಮ್ಮ ಕೆಟ್ಟ ಕಾರ್ಯಗಳನ್ನು ಬಿಟ್ಟು ತಿರುಗಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:35
11 ತಿಳಿವುಗಳ ಹೋಲಿಕೆ  

ನಿಮಗೆ ಸರ್ವಸಮೃದ್ಧಿಯುಂಟಾದ ಕಾಲದಲ್ಲಿಯೂ ನೀವು ನಿಮ್ಮ ದೇವರಾದ ಯೆಹೋವನನ್ನು ಹರ್ಷಾನಂದಗಳುಳ್ಳವರಾಗಿ ಸೇವಿಸದೆ ಹೋದುದರಿಂದ,


“ನಮ್ಮ ದೇವರಾದ ಯೆಹೋವನು ಇವುಗಳನ್ನೆಲ್ಲಾ ನಮಗೆ ಏಕೆ ಮಾಡಿದ್ದಾನೆ?” ಎಂದು ನಿನ್ನ ಜನರು ಅನ್ನುವಾಗ ನೀನು ಅವರಿಗೆ, “ನೀವು ಯೆಹೋವನನ್ನು ತೊರೆದು, ಸ್ವದೇಶದಲ್ಲಿ ಅನ್ಯದೇವತೆಗಳನ್ನು ಆರಾಧಿಸಿದ ಹಾಗೆ ಪರದೇಶದಲ್ಲಿ ಅನ್ಯರನ್ನು ಆರಾಧಿಸುವಿರಿ” ಎಂದು ಹೇಳು.


ಅವರು ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ, ಸಾರವುಳ್ಳ ಭೂಮಿಯನ್ನೂ, ಸಮಸ್ತ ವಿಧವಾದ ಉತ್ತಮ ವಸ್ತುಗಳಿಂದ ತುಂಬಿದ ಮನೆಗಳನ್ನೂ, ತೋಡಿದ ಬಾವಿಗಳನ್ನೂ, ದ್ರಾಕ್ಷಿತೋಟಗಳನ್ನೂ, ಎಣ್ಣೇಮರಗಳ ತೋಪುಗಳನ್ನೂ, ಹೆಚ್ಚಾದ ಹಣ್ಣಿನ ಮರ ಇವುಗಳನ್ನೂ ವಶಮಾಡಿಕೊಂಡು ಚೆನ್ನಾಗಿ ತಿಂದು, ಕುಡಿದು ತೃಪ್ತರಾಗಿ ಕೊಬ್ಬಿ, ನೀನು ಕೊಟ್ಟ ಸಮೃದ್ಧಿಯಲ್ಲಿ ಆನಂದಿಸುತ್ತಿದ್ದರು.


ಅನಂತರ ಅನೇಕ ಕಷ್ಟಗಳೂ ಮತ್ತು ವಿಪತ್ತುಗಳೂ ಸಂಭವಿಸಿದಾಗ ಈ ಪದ್ಯವು ಇವರ ಸಂತತಿಯವರ ಬಾಯಲ್ಲಿ ಇದ್ದುಕೊಂಡು ಅವರ ಮುಂದೆ ಸಾಕ್ಷಿಕೊಡುವುದು” ಎಂದು ಹೇಳಿದನು.


ನಮ್ಮ ಅರಸರೂ, ಪ್ರಭುಗಳೂ, ಯಾಜಕರೂ, ಹಿರಿಯರೂ ನಿನ್ನ ಧರ್ಮೋಪದೇಶವನ್ನು ಅನುಸರಿಸಲಿಲ್ಲ, ನಿನ್ನ ಆಜ್ಞೆಗಳಿಗೆ ಕಿವಿಗೊಡಲಿಲ್ಲ. ನೀನು ಎಚ್ಚರಿಸಿ ಹೇಳಿದ ಮಾತುಗಳನ್ನು ಗಮನಿಸಲಿಲ್ಲ.


ಯೆಹೋವನು ನಮಗೆ ಅನುಗ್ರಹಿಸಿದ್ದನ್ನೆಲ್ಲಾ ಸ್ಮರಿಸಿ ಆತನ ಕೃಪಾಕಾರ್ಯಗಳನ್ನು ಮತ್ತು ಸ್ತುತ್ಯಕೃತ್ಯಗಳನ್ನು, ಆತನು ಕನಿಕರದಿಂದಲೂ, ಕೃಪಾತಿಶಯದಿಂದಲೂ ಇಸ್ರಾಯೇಲ್ ವಂಶದವರಿಗೆ ದಯಪಾಲಿಸಿರುವ ಮಹೋಪಕಾರವನ್ನೂ ಪ್ರಸಿದ್ಧಿಪಡಿಸುವೆನು.


ಯೆಹೋವನು ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವನು; ಆಗ ನೀವು ಹಸಿವೆ, ಬಾಯಾರಿಕೆಗಳುಳ್ಳವರಾಗಿ, ಬಟ್ಟೆಯೂ ಮತ್ತು ಏನೂ ಇಲ್ಲದವರಾಗಿ ಆ ಶತ್ರುಗಳಿಗೇ ಸೇವಕರಾಗಬೇಕಾಗುವುದು. ಯೆಹೋವನು ಕಬ್ಬಿಣದ ನೊಗವನ್ನು ಹೇರಿಸಿ ನಿಮ್ಮನ್ನು ನಾಶಮಾಡುವನು.


ಅದು ನನ್ನ ನಿಯಮನಿಷ್ಠೆಗಳಿಗೆ ಒಳಪಡದೆ ಜನಾಂಗಗಳಿಗಿಂತಲೂ, ಸುತ್ತಲಿನ ದೇಶಗಳವರಿಗಿಂತಲೂ ಹೆಚ್ಚು ಅಧರ್ಮವನ್ನು ನಡೆಸಿದೆ; ಅದರ ನಿವಾಸಿಗಳು ನನ್ನ ನಿಯಮಗಳನ್ನು ಅನುಸರಿಸದೆ ನನ್ನ ವಿಧಿಗಳನ್ನು ನಿರಾಕರಿಸಿದ್ದಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು