Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋಶುವನು ಮರಣಹೊಂದಿದ ನಂತರ ಇಸ್ರಾಯೇಲ್ಯರು “ಕಾನಾನ್ಯರೊಡನೆ ಯುದ್ಧಮಾಡುವುದಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ಯೆಹೋವನನ್ನು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೆಹೋಶುವನು ಮರಣಹೊಂದಿದ ಬಳಿಕ ಇಸ್ರಯೇಲರು ಕಾನಾನ್ಯರೊಡನೆ ಯುದ್ಧಮಾಡಲು ತಮ್ಮಲ್ಲಿ ಯಾವ ಕುಲ ಮುಂದಾಗಿ ಹೋಗಬೇಕೆಂದು ಸರ್ವೇಶ್ವರಸ್ವಾಮಿಯನ್ನು ವಿಚಾರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋಶುವನು ಮರಣಹೊಂದಿದ ನಂತರ ಇಸ್ರಾಯೇಲ್ಯರು - ಕಾನಾನ್ಯರೊಡನೆ ಯುದ್ಧಮಾಡುವದಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು ಎಂದು ಯೆಹೋವನನ್ನು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋಶುವನು ಮರಣಹೊಂದಿದ ನಂತರ ಇಸ್ರೇಲರು ಯೆಹೋವನಿಗೆ, “ನಮ್ಮಲ್ಲಿ ಯಾವ ಕುಲದವರು ಮೊದಲು ಹೋಗಿ ಕಾನಾನ್ಯರ ವಿರುದ್ಧ ಯುದ್ಧಮಾಡಬೇಕು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋಶುವನು ಮರಣ ಹೊಂದಿದ ಬಳಿಕ ಇಸ್ರಾಯೇಲರು, “ಕಾನಾನ್ಯರೊಡನೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ಯೆಹೋವ ದೇವರನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:1
17 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರು ಬೇತೇಲಿಗೆ ಹೋಗಿ, “ಬೆನ್ಯಾಮೀನ್ಯರ ಮೇಲೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ದೇವರಾದ ಯೆಹೋವನನ್ನು ಕೇಳಲು ಆತನು, “ಮೊದಲು ಯೆಹೂದ ಕುಲದವರು ಹೋಗಲಿ” ಎಂದು ಹೇಳಿದನು.


ಯೆಹೋವನ ಚಿತ್ತವನ್ನು ತಿಳಿದುಕೊಳ್ಳುವುದಕ್ಕೆ ಅವನು ಮಹಾಯಾಜಕನಾದ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಯೆಹೋವನ ಸನ್ನಿಧಿಯಲ್ಲಿ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ವಿಚಾರಣೆಯನ್ನು ಮಾಡಬೇಕು. ಯೆಹೋಶುವನೂ ಮತ್ತು ಇಸ್ರಾಯೇಲರ ಸರ್ವಸಮೂಹದವರೂ ಅವನ ಮಾತಿನಂತೆ ಹೊರಡಬೇಕು, ಹಿಂತಿರುಗಬೇಕು, ಅವನ ಮಾತಿನಂತೆ ನಡೆಯಬೇಕು.” ಎಂದು ಆಜ್ಞಾಪಿಸಿದನು.


ಆರೋನನ ಮೊಮ್ಮಗನೂ, ಎಲ್ಲಾಜಾರನ ಮಗನೂ ಆದ ಫೀನೆಹಾಸನು ಯಾಜಕಸೇವೆಮಾಡುತ್ತಿದ್ದನು. ಹೀಗಿರುವುದರಿಂದ ಇಸ್ರಾಯೇಲ್ಯರು, “ನಾವು ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಕ್ಕೆ ಹೋಗಬೇಕೋ, ಬೇಡವೋ?” ಎಂದು ಯೆಹೋವನನ್ನು ಕೇಳಿದರು. ಆತನು ಅವರಿಗೆ, “ಹೋಗಿರಿ, ನಾಳೆ ಅವರನ್ನು ನಿಮ್ಮ ಕೈಗೆ ಒಪ್ಪಿಸುವೆನು” ಅಂದನು.


ಮನಸ್ಸೆಯವರು ಬೇತ್ ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ಎಂಬ ಪಟ್ಟಣಗಳಲ್ಲಿಯೂ ಅವುಗಳ ಗ್ರಾಮಗಳಲ್ಲಿಯೂ ವಾಸವಾಗಿದ್ದವರನ್ನು ಹೊರಡಿಸಿಬಿಡಲಿಲ್ಲ. ಆದುದರಿಂದ ಕಾನಾನ್ಯರು ಆ ಪ್ರಾಂತ್ಯಗಳಲ್ಲೇ ವಾಸಿಸುವುದಕ್ಕೆ ದೃಢಮಾಡಿಕೊಂಡರು.


ದೈವನಿರ್ಣಯವನ್ನು ತಿಳಿಸುವ ಊರೀಮ್ ತುಮ್ಮೀಮ್‌ ಆ ಎದೆಯ ಪದಕದಲ್ಲಿ ಇಡಬೇಕು. ಆರೋನನು ಯೆಹೋವನ ಸನ್ನಿಧಿಗೆ ಹೋಗುವಾಗ ಅವು ಅವನ ಎದೆಯ ಮೇಲೆ ಇರುವವು. ಇಸ್ರಾಯೇಲರು ಕೈಕೊಳ್ಳಬೇಕಾದ ದೈವನಿರ್ಣಯವನ್ನು ಆರೋನನು ಹೀಗೆ ತನ್ನ ಹೃದಯದ ಮೇಲೆ ಯೆಹೋವನ ಸನ್ನಿಧಿಯಲ್ಲಿ ಯಾವಾಗಲೂ ಧರಿಸಿಕೊಂಡಿರಬೇಕು.


ಹೀಗಿರುವುದರಿಂದ ಯೆಹೋಶುವನು ಸಾಯುವ ಮೊದಲು ಹೊರಡಿಸದೆ ಬಿಟ್ಟಿದ ಜನಾಂಗಗಳಲ್ಲಿ ನಾನು ಒಂದನ್ನು ಹೊರಡಿಸಿಬಿಡುವುದಿಲ್ಲ.


ಮೋಶೆ ತನ್ನ ಮಾವನಿಗೆ, “ದೇವರ ನಡೆಸುವಿಕೆಯನ್ನು ತಿಳಿದುಕೊಳ್ಳುವುದಕ್ಕಾಗಿ ಜನರು ನನ್ನ ಹತ್ತಿರ ಬರುತ್ತಾರೆ.


ಯೆಹೋವನ ಸೇವಕನಾದ ನೂನನ ಮಗ ಯೆಹೋಶುವನು ನೂರ ಹತ್ತು ವರ್ಷದವನಾಗಿ ಮರಣಹೊಂದಿದನು.


ಅವನನ್ನು ಅವನ ಸ್ವಾಧೀನದ ಭೂಮಿಯಾದ ತಿಮ್ನತ್ ಹೆರೆಸ್ ಎಂಬಲ್ಲಿ ಸಮಾಧಿಮಾಡಿದರು. ಅದು ಎಫ್ರಾಯೀಮ್ ಪರ್ವತಪ್ರದೇಶದಲ್ಲಿರುವ ಗಾಷ್ ಬೆಟ್ಟದ ಉತ್ತರದಿಕ್ಕಿನಲ್ಲಿರುತ್ತದೆ.


ಇಸ್ರಾಯೇಲ್ಯರು ಹೋಗಿ ಯೆಹೋವನ ಮುಂದೆ ಅಳುತ್ತಾ, “ನಾವು ತಿರುಗಿ ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಮಾಡಬೇಕೋ?” ಎಂದು ಕೇಳಲು, ಆತನು, “ಹೋಗಿ ಯುದ್ಧಮಾಡಿರಿ” ಅಂದನು.


ಆ ಕಾಲದಲ್ಲಿ ಯೆಹೋವನ ಒಡಂಬಡಿಕೆಯ ಮಂಜೂಷವು ಆ ಊರೊಳಗಿತ್ತು;


ಅವರು, “ಆ ಮನುಷ್ಯನು ಇಲ್ಲಿಗೆ ಬರುವನೋ” ಎಂದು ಯೆಹೋವನನ್ನು ವಿಚಾರಿಸಿದಾಗ ಆತನು, “ಬಂದಿದ್ದಾನೆ; ಇಗೋ, ಸಾಮಾನುಗಳ ಮಧ್ಯದಲ್ಲಿ ಅಡಗಿಕೊಂಡಿದ್ದಾನೆ” ಎಂದು ಉತ್ತರಕೊಟ್ಟನು.


ಯೆಹೋಷಾಫಾಟನು, “ಯೆಹೋವನ ಸನ್ನಿಧಿಯಲ್ಲಿ ಈಗ ವಿಚಾರಿಸು” ಎಂದು ಇಸ್ರಾಯೇಲರ ಅರಸನನ್ನು ಬೇಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು