Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮೋಶೆಯ ಮಾವನಾದ ಕೇನ್ಯನ ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ್ಯರ ಜೊತೆಯಲ್ಲಿ ಅರಾದಿನ ದಕ್ಷಿಣದಲ್ಲಿರುವ ಯೆಹೂದ ಅಡವಿಗೆ ಬಂದು ಅಲ್ಲಿನ ಜನರ ಸಂಗಡ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಕೇನ್ಯನೂ ಮೋಶೆಯ ಮಾವನೂ ಆದ ಹೋಬಾಬನ ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ ಕುಲದವರ ಜೊತೆಯಲ್ಲಿ ಆರಾದಿನ ದಕ್ಷಿಣದಲ್ಲಿರುವ ಯೆಹೂದ ಮರುಭೂಮಿಗೆ ಬಂದು ಅಲ್ಲಿಯ ಜನರ ಸಂಗಡ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಕೇನ್ಯನೂ ಮೋಶೆಯ ಮಾವನೂ ಆದ [ಹೋಬಾಬನ] ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ್ಯರ ಜೊತೆಯಲ್ಲಿ ಅರಾದಿನ ದಕ್ಷಿಣದಲ್ಲಿರುವ ಯೆಹೂದ ಅರಣ್ಯಕ್ಕೆ ಬಂದು ಅಲ್ಲಿನ ಜನರ ಸಂಗಡ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಕೇನ್ಯರು (ಕೇನ್ಯರು ಮೋಶೆಯ ಮಾವನ ಗೋತ್ರದವರಾಗಿದ್ದರು.) ಖರ್ಜೂರ ನಗರವನ್ನು (ಜೆರಿಕೊವನ್ನು) ಬಿಟ್ಟು ಯೆಹೂದ್ಯರ ಸಂಗಡ ಹೋದರು. ಅವರು ನೆಗೆವಿನಲ್ಲಿ ಅರಾದ್ ನಗರದ ಹತ್ತಿರವಿದ್ದ ಯೆಹೂದ ಅರಣ್ಯಕ್ಕೆ ಬಂದು ಅಲ್ಲಿನ ಜನರ ಸಂಗಡ ವಾಸ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಮೋಶೆಯ ಮಾವನಾದ ಕೇನ್ಯನ ಮಕ್ಕಳು ಖರ್ಜೂರ ಗಿಡಗಳ ಪಟ್ಟಣದಿಂದ ಹೊರಟು, ಯೆಹೂದ ಗೋತ್ರದವರ ಸಂಗಡ ಅರಾದಿಗೆ ದಕ್ಷಿಣಕ್ಕಿರುವ ಯೆಹೂದದ ಗೋತ್ರದವರ ಮರುಭೂಮಿಗೆ ಬಂದು, ಅಲ್ಲಿನ ಜನರ ಸಂಗಡ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:16
26 ತಿಳಿವುಗಳ ಹೋಲಿಕೆ  

(ಕೇನ್ಯನಾದ) ಹೆಬೆರನು ಉಳಿದ ಕೇನ್ಯರಿಂದ ತನ್ನನ್ನು ಪ್ರತ್ಯೇಕಿಸಿಕೊಂಡನು. ಕೇನ್ಯರು ಮೋಶೆಯ ಮಾವನಾದ ಹೋಬಾಬನ ವಂಶದವರು. ಹೆಬೆರನು ಕೆದೆಷಿನ ಹತ್ತಿರ ಇರುವ ಚಾನನ್ನೀಮೆಂಬ ಊರಿನ ಏಲೋನ್ ವೃಕ್ಷದ ವರೆಗೆ ಬಂದು ಅಲ್ಲಿ ಗುಡಾರ ಹಾಕಿಕೊಂಡಿದ್ದನು.


ಆದರೆ ಅವನು ಕೇನ್ಯರಿಗೆ, “ನೀವು ಅಮಾಲೇಕ್ಯರನ್ನು ಬಿಟ್ಟುಹೋಗಿರಿ; ಇಲ್ಲವಾದರೆ ನೀವೂ ಅವರೊಡನೆ ನಾಶವಾದೀರಿ. ಇಸ್ರಾಯೇಲರು ಐಗುಪ್ತದಿಂದ ಬರುತ್ತಿದ್ದಾಗ ನೀವು ಅವರಿಗೆ ದಯೆತೋರಿಸಿದಿರಲ್ಲಾ” ಎಂದು ಹೇಳಿಕಳುಹಿಸಿದನು. ಅದರಂತೆಯೇ ಅವರು ಅಮಾಲೇಕ್ಯರನ್ನು ಬಿಟ್ಟುಹೋದರು.


ದಕ್ಷಿಣಪ್ರದೇಶ, ಚೋಗರೂರಿನ ತನಕ ಯೆರಿಕೋ ಎಂಬ ಖರ್ಜೂರಗಳ ಪಟ್ಟಣದ ಸುತ್ತಲಿರುವ ಮೈದಾನ ಇದನ್ನೆಲ್ಲಾ ಅವನಿಗೆ ತೋರಿಸಿ,


ಕಾನಾನ್ ದೇಶದ ದಕ್ಷಿಣ ಪ್ರಾಂತ್ಯದಲ್ಲಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು, ಅತಾರೀಮ್ ಮಾರ್ಗವಾಗಿ ಇಸ್ರಾಯೇಲರು ಬರುತ್ತಾರೆಂಬ ವರ್ತಮಾನವನ್ನು ಕೇಳಿದಾಗ, ಅವನು ಅವರ ಮೇಲೆ ಯುದ್ಧಮಾಡಿ ಕೆಲವರನ್ನು ಸೆರೆಹಿಡಿದನು.


ಇವನು ಅಮ್ಮೋನಿಯರನ್ನೂ, ಅಮಾಲೇಕ್ಯರನ್ನೂ ಕೂಡಿಸಿಕೊಂಡು ಹೊರಟು ಬಂದು ಇಸ್ರಾಯೇಲರನ್ನು ಸೋಲಿಸಿ ಖರ್ಜೂರನಗರವನ್ನು ಹಿಡಿದನು.


ಹಾಚೋರಿನ ಅರಸನಾದ ಯಾಬೀನನಿಗೂ ಕೇನ್ಯನಾದ ಹೆಬೆರನ ಮನೆಯವರಿಗೂ ಸಮಾಧಾನವಿದ್ದುದರಿಂದ ಸೀಸೆರನು ಕಾಲುನಡಿಗೆಯಿಂದ ಕೇನ್ಯನಾದ ಹೆಬೆರನ ಹೆಂಡತಿ ಯಾಯೇಲಳ ಗುಡಾರದ ಕಡೆಗೆ ಹೋದನು.


“ನೀನು ರೇಕಾಬನ ಮನೆತನದವರ ಬಳಿಗೆ ಹೋಗಿ ಅವರ ಸಂಗಡ ಮಾತನಾಡಿ ಅವರನ್ನು ಯೆಹೋವನ ಆಲಯದ ಒಂದು ಕೋಣೆಯೊಳಕ್ಕೆ ಕರೆದು ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಡು” ಎಂಬುದೇ.


ಆ ಕಾಲದಲ್ಲಿ ಅರಸನಾದ ಆಹಾಜನು ತನಗೆ ಸಹಾಯ ಮಾಡಬೇಕೆಂದು ಅಶ್ಶೂರದ ರಾಜರನ್ನು ದೂತರ ಮುಖಾಂತರ ಬೇಡಿಕೊಂಡನು.


ಆರನೆಯವನು ಓಚೆಮ್, ಏಳನೆಯವನು ದಾವೀದ್.


ಹೊರ್ಮದ ಅರಸನು - 1 ಅರಾದಿನ ಅರಸನು - 1


ತರುವಾಯ ಮೋಶೆ ತನ್ನ ಮಾವನಿಗೆ ಅಪ್ಪಣೆ ಕೊಡಲಾಗಿ, ಅವನು ಸ್ವದೇಶಕ್ಕೆ ಹೊರಟುಹೋದನು.


ಇದಲ್ಲದೆ ಮೋಶೆಯ ಮಾವನಾದ ಇತ್ರೋವನು ದೇವರಿಗೆ ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸಿದನು. ಆರೋನನು, ಇಸ್ರಾಯೇಲರ ಹಿರಿಯರೆಲ್ಲರೂ ಅವನ ಸಂಗಡ ದೇವರ ಸನ್ನಿಧಿಯಲ್ಲಿ ಸಹಭೋಜನವನ್ನು ಮಾಡುವುದಕ್ಕೆ ಬಂದರು.


ಮೋಶೆಯು ತನ್ನ ಮಾವನನ್ನು ಎದುರುಗೊಳ್ಳುವುದಕ್ಕೆ ಹೊರಟು ಆತನನ್ನು ವಂದಿಸಿ ಮುದ್ದಿಟ್ಟನು. ಅವರು ಪರಸ್ಪರ ಯೋಗಕ್ಷೇಮವನ್ನು ವಿಚಾರಿಸಿದ ಮೇಲೆ ಡೇರೆಯೊಳಗೆ ಹೋದರು.


ದೇವರು ಮೋಶೆಗೂ ತನ್ನ ಜನರಾದ ಇಸ್ರಾಯೇಲರಿಗೂ ಮಹೋಪಕಾರಗಳನ್ನು ಮಾಡಿದ್ದನ್ನೂ, ಯೆಹೋವನು ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಕರತಂದದ್ದನ್ನೂ, ಮಿದ್ಯಾನ್ಯರ ಆಚಾರ್ಯನೂ ಮೋಶೆಯ ಮಾವನೂ ಆಗಿದ್ದ ಇತ್ರೋವನು ಕೇಳಿದನು.


ಆಗ ಮೋಶೆ ತನ್ನ ಮಾವನಾದ ಇತ್ರೋನನ ಬಳಿಗೆ ಹಿಂದಿರುಗಿ ಬಂದು ಅವನಿಗೆ, “ನಾನು ಐಗುಪ್ತ ದೇಶದಲ್ಲಿರುವ ನನ್ನ ಸಹೋದರರ ಬಳಿಗೆ ಹಿಂತಿರುಗಿ ಹೋಗಿ ಅವರು ಜೀವದಿಂದ ಇದ್ದಾರೋ ಇಲ್ಲವೋ ಎಂದು ಹೋಗಿ ನೋಡುವೆನು” ಎಂದನು. ಇತ್ರೋನನು ಮೋಶೆಗೆ, “ನೀನು ಸಮಾಧಾನದಿಂದ ಹೋಗು” ಅಂದನು.


ಮೋಶೆಯು ತನ್ನ ಮಾವನಾದ, ಮಿದ್ಯಾನ್ಯರ ಯಾಜಕನಾದ ಇತ್ರೋನನ ಮಂದೆಯನ್ನು ಮೇಯಿಸುತ್ತಿರಲಾಗಿ ಆ ಮಂದೆಯನ್ನು ಅಡವಿಯ ಮತ್ತೊಂದುಭಾಗಕ್ಕೆ ನಡಿಸಿಕೊಂಡು ಹೋಗುತ್ತಾ, “ಹೋರೇಬ್” ಎಂಬ ದೇವರ ಬೆಟ್ಟಕ್ಕೆ ಬಂದನು.


ಆ ದಿನಗಳಲ್ಲಿ ಸ್ನಾನಿಕನಾದ ಯೋಹಾನನೆಂಬುವವನು ಯೂದಾಯದ ಅಡವಿಯಲ್ಲಿ ಬೋಧನೆ ಮಾಡುತ್ತಾ,


ಆಕೆಯು, “ನನಗೊಂದು ದಾನಕೊಡಬೇಕು; ನೀನು ನನ್ನನ್ನು ದಕ್ಷಿಣ ಪ್ರಾಂತ್ಯಕ್ಕೆ ಕೊಟ್ಟುಬಿಟ್ಟಿಯಲ್ಲಾ, ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು” ಅಂದಳು. ಆಗ ಅವನು ಆಕೆಗೆ ಮೇಲಣ ಬುಗ್ಗೆ ಮತ್ತು ಕೆಳಗಣ ಪ್ರದೇಶದ ಬುಗ್ಗೆಗಳನ್ನು ಕೊಟ್ಟನು.


ಆಕೀಷನು ಅವನನ್ನು “ಈ ಹೊತ್ತು ಯಾವ ಪ್ರಾಂತ್ಯದವರನ್ನು ಸೂರೆಮಾಡಿಕೊಂಡು ಬಂದಿರಿ” ಎಂದು ಕೇಳುವನು. ದಾವೀದನು ಅವನಿಗೆ “ದಕ್ಷಿಣ ಪ್ರಾಂತ್ಯದಲ್ಲಿರುವ ಯೆಹೂದ್ಯರು, ಎರಹ್ಮೇಲ್ಯರು ಕೇನ್ಯರು ಇವರಲ್ಲಿ ಯಾರ ಹೆಸರನ್ನಾದರೂ” ಹೇಳುವರು.


ರಾಕಾಲಿನವರು, ಎರಹ್ಮೇಲ್ಯರು, ಕೇನ್ಯರು,


“ನಾನು ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನಮಾಡಿದ ದೇಶವು ಇದೇ; ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ನದಿ ದಾಟಿ ಅಲ್ಲಿಗೆ ಹೋಗಕೂಡದು” ಎಂದು ಹೇಳಿದನು.


ಬೆನ್ಯಾಮೀನ್ ಗೋತ್ರಗಳ ಸ್ವತ್ತಿನ ಸುತ್ತಣ ಮೇರೆಯು ಇದೇ ಬೆನ್ಯಾಮೀನನ ಗೋತ್ರಗಳಿಗೆ ದೊರಕಿದ ಪಟ್ಟಣಗಳು ಯಾವುವೆಂದರೆ: ಯೆರಿಕೋ, ಬೇತ್‌ಹೊಗ್ಲಾ, ಏಮೆಕ್ಕೆಚ್ಚೀಚ್,


ಯಾಬೇಚಿನಲ್ಲಿ ವಾಸಿಸುವ ಬರವಣಿಗೆಯಲ್ಲಿ ಮತ್ತು ದಾಖಲೆಗಳನ್ನು ಬರೆಯುವುದರಲ್ಲೂ ಮತ್ತು ಪ್ರತಿಗಳನ್ನು ಮಾಡುವುದರಲ್ಲೂ ಪ್ರವೀಣರಾದ ತಿರ್ರಾತ್ಯರು, ಶಿಮ್ಗಾತ್ಯರು ಮತ್ತು ಸೂಕಾತ್ಯರು, ಇವರು ರೇಕಾಬನ ಮನೆಯವರ ಮೂಲ ಪುರುಷನಾಗಿರುವ ಹಮತನಿಂದ ಹುಟ್ಟಿದ ಕೇನ್ಯರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು