Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇವರ ಹಾಗೆಯೇ ಯೋಸೇಫನ ವಂಶದವರೂ ಹೊರಟು ಬೇತೇಲಿಗೆ ಬಂದರು. ಯೆಹೋವನು ಅವರ ಸಂಗಡ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇವರ ಹಾಗೆಯೇ ಜೋಸೆಫನ ಕುಲದವರು ಹೊರಟು ಬೇತೇಲಿಗೆ ಬಂದರು. ಸರ್ವೇಶ್ವರಸ್ವಾಮಿ ಅವರೊಂದಿಗೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇವರ ಹಾಗೆಯೇ ಯೋಸೇಫನ ವಂಶದವರೂ ಹೊರಟು ಬೇತೇಲಿಗೆ ಬಂದರು. ಯೆಹೋವನು ಅವರ ಸಂಗಡ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22-23 ಯೋಸೇಫನ ಕುಲದವರು ಲೂಜ್ ಎಂಬ ಬೇತೇಲ್ ನಗರದ ಮೇಲೆ ಧಾಳಿಮಾಡಲು ಹೋದರು. ಯೆಹೋವನು ಯೋಸೇಫನ ಕುಲದವರ ಸಂಗಡ ಇದ್ದನು. ಯೋಸೇಫನ ಕುಲದವರು ಬೇತೇಲ್ ನಗರಕ್ಕೆ ಕೆಲವು ಜನ ಗೂಢಚಾರರನ್ನು ಕಳುಹಿಸಿದರು. ಇವರು ಬೇತೇಲ್ ನಗರವನ್ನು ವಶಪಡಿಸಿಕೊಳ್ಳುವ ಮಾರ್ಗಗಳ ಬಗ್ಗೆ ಯೋಚಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಇದಲ್ಲದೆ ಯೋಸೇಫನ ಮನೆಯವರು ಬೇತೇಲಿಗೆ ಏರಿಹೋದರು. ಯೆಹೋವ ದೇವರು ಅವರ ಸಂಗಡ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:22
12 ತಿಳಿವುಗಳ ಹೋಲಿಕೆ  

ಯೆಹೋವನು ಯೆಹೂದ್ಯರ ಸಂಗಡ ಇದ್ದುದರಿಂದ ಅವರು ಪರ್ವತಪ್ರದೇಶಗಳನ್ನೆಲ್ಲಾ ಸ್ವಾಧೀನಪಡಿಸಿಕೊಂಡರು. ಆದರೆ ತಗ್ಗಿನ ಪ್ರದೇಶಗಳಲ್ಲಿ ವಾಸಿಸುವವರಿಗೆ ಕಬ್ಬಿಣದ ರಥಗಳಿದ್ದುದರಿಂದ ಅವರನ್ನು ಹೊರಡಿಸುವುದಕ್ಕೆ ಆಗಲಿಲ್ಲ.


ಜೆಬುಲೋನನ ಕುಲದವರಲ್ಲಿ ಹನ್ನೆರಡು ಸಾವಿರ, ಯೋಸೇಫನ ಕುಲದವರಲ್ಲಿ ಹನ್ನೆರಡು ಸಾವಿರ, ಬೆನ್ಯಾಮೀನನ ಕುಲದವರಲ್ಲಿ ಮುದ್ರೆ ಹಾಕಿಸಿಕೊಂಡವರು ಹನ್ನೆರಡು ಸಾವಿರ ಮಂದಿ ಇದ್ದರು.


ಬೇತ್ಷಾನ್, ತಾನಾಕ್, ಮೆಗಿದ್ದೋ, ದೋರ್ ಎಂಬ ಪಟ್ಟಣಗಳೂ, ಅವುಗಳ ಗ್ರಾಮಗಳೂ ಮನಸ್ಸೆ ಕುಲದವರ ವಶದಲ್ಲಿದ್ದವು. ಈ ಊರುಗಳಲ್ಲಿ ಇಸ್ರಾಯೇಲನ ಮಗನಾದ ಯೋಸೇಫನ ಸಂತಾನದವರು ವಾಸಿಸುತ್ತಿದ್ದರು.


ಯೆಹೋವನು ಹಿಜ್ಕೀಯನ ಸಂಗಡ ಇದ್ದುದರಿಂದ ಅವನು ಹೋದ ಎಲ್ಲ ಕಡೆ ಅಭಿವೃದ್ಧಿ ಹೊಂದಿದನು. ಇವನು ಅಶ್ಶೂರದ ಅರಸನಿಗೆ ವಿರುದ್ಧವಾಗಿ ದಂಗೆ ಎದ್ದು ಸ್ವತಂತ್ರನಾದನು.


ಯೋಸೇಫನ ಮಕ್ಕಳಾದ ಮನಸ್ಸೆ ಮತ್ತು ಎಫ್ರಾಯೀಮ್ ಎಂಬ ಎರಡು ಕುಲಗಳಾಗಿ ಅವರು ಎಣಿಸಲ್ಪಟ್ಟಿದ್ದರಲ್ಲಾ; ಲೇವಿಯರಿಗೆ ಕೆಲವು ಪಟ್ಟಣಗಳೂ ಹಾಗೂ ಅವರ ದನಕುರಿಗಳಿಗೋಸ್ಕರ ಅಲ್ಲಿನ ಕೆಲವು ಹುಲ್ಲುಗಾವಲುಗಳನ್ನೂ ಬಿಟ್ಟರೆ ಬೇರೇನೂ ಸಿಕ್ಕಲಿಲ್ಲ.


ಯೋಸೇಫನಿಂದ ಹುಟ್ಟಿದವರೊಳಗೆ ಎಫ್ರಾಯೀಮ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.


ಯೋಸೇಫನ ವಂಶದವರಲ್ಲಿ: ಎಫ್ರಾಯೀಮ್ ಕುಲದಿಂದ ಅಮ್ಮೀಹೂದನ ಮಗನಾದ ಎಲೀಷಾಮಾ, ಮನಸ್ಸೆ ಕುಲದಿಂದ ಪೆದಾಚೂರನ ಮಗನಾದ ಗಮ್ಲೀಯೇಲ್,


ಆದರೂ ಯಾಕೋಬನ ವಂಶಸ್ಥರನ್ನು ರಕ್ಷಿಸುವ ಪರಾಕ್ರಮಿಯ ಭುಜಬಲದಿಂದಲೂ, ಇಸ್ರಾಯೇಲನಿಗೆ ಪಾಲಕನೂ ಬಂಡೆಯೂ ಆಗಿರುವಾತನಿಂದಲೂ ಅವನ ಕೈಗಳ ಬಿಲ್ಲು ಸ್ಥಿರವಾಗಿ ನಿಂತಿರುವುದು. ಅವನ ಕೈಗಳು ಯಾಕೋಬನ ಒಡೆಯನಿಂದ ಬಲಗೊಂಡಿವೆ.


ಯೆಹೋಶುವನು ಹೆಚ್ಚುಕಡಿಮೆ ಐದು ಸಾವಿರ ಜನರನ್ನು ಆರಿಸಿಕೊಂಡು ಬೇತೇಲಿಗೂ ಆಯಿಗೂ ನಡುವೆ ಇರುವ ಪಟ್ಟಣದ ಪಶ್ಚಿಮದಲ್ಲಿ ಹೊಂಚಿನೋಡುವುದಕ್ಕೋಸ್ಕರ ಇರಿಸಿದನು.


ಯೆರೂಸಲೇಮಿನಲ್ಲಿದ್ದ ಯೆಬೂಸಿಯರನ್ನು ಬೆನ್ಯಾಮೀನ್ಯರು ಹೊರಡಿಸಿಬಿಡಲಿಲ್ಲ. ಅವರು ಇಂದಿನವರೆಗೂ ಬೆನ್ಯಾಮೀನ್ಯರ ಸಂಗಡ ಯೆರೂಸಲೇಮಿನಲ್ಲಿಯೇ ವಾಸವಾಗಿದ್ದಾರೆ.


ಅವರು ಲೂಜ್ ಎಂದು ಕರೆಯುತ್ತಿದ್ದ ಬೇತೇಲ್ ಊರನ್ನು ಸಂಚರಿಸಿ ನೋಡುವುದಕ್ಕೆ ಗೂಢಚಾರರನ್ನು ಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು