Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ತರುವಾಯ ಯೆಹೂದ್ಯರು ಹೋಗಿ ಪರ್ವತಪ್ರದೇಶ, ದಕ್ಷಿಣಸೀಮೆ ಹಾಗೂ ಕಣಿವೆ ಪ್ರದೇಶಗಳಲ್ಲಿದ್ದ ಕಾನಾನ್ಯರೊಡನೆ ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅನಂತರ ಅವರು ಪರ್ವತಪ್ರದೇಶ, ದಕ್ಷಿಣಸೀಮೆ ಮತ್ತು ತಗ್ಗುಪ್ರದೇಶ ಇವುಗಳಿಗೆ ಹೋಗಿ ಅಲ್ಲಿದ್ದ ಕಾನಾನ್ಯರೊಡನೆ ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ತರುವಾಯ ಅವರು ಹೋಗಿ ಪರ್ವತಪ್ರದೇಶ, ದಕ್ಷಿಣ ಸೀಮೆ, ಇಳಕಲಿನ ಪ್ರದೇಶ ಇವುಗಳಲ್ಲಿದ್ದ ಕಾನಾನ್ಯರೊಡನೆ ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ತರುವಾಯ ಯೆಹೂದ್ಯರು ಉಳಿದಿರುವ ಕಾನಾನ್ಯರೊಂದಿಗೆ ಯುದ್ಧಮಾಡಲು ಹೋದರು. ಆ ಕಾನಾನ್ಯರು ಬೆಟ್ಟಪ್ರದೇಶ, ನೆಗೆವ್ ಮತ್ತು ಪಶ್ಚಿಮದ ಇಳಕಲಿನ ಪ್ರದೇಶದಲ್ಲಿ ವಾಸ ಮಾಡಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ತರುವಾಯ ಯೆಹೂದ ಗೋತ್ರದವರು ಬೆಟ್ಟದಲ್ಲಿಯೂ ದಕ್ಷಿಣದಲ್ಲಿಯೂ ತಗ್ಗಿನಲ್ಲಿಯೂ ವಾಸಿಸಿದ ಕಾನಾನ್ಯರಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:9
7 ತಿಳಿವುಗಳ ಹೋಲಿಕೆ  

ಅದೇ ಕಾಲದಲ್ಲಿ ಯೆಹೋಶುವನು ಮಲೆನಾಡುಗಳಾದ ಹೆಬ್ರೋನ್, ದೆಬೀರ್, ಅನಾಬ್ ಎಂಬ ಊರುಗಳಲ್ಲಿಯೂ ಯೆಹೂದ ಹಾಗೂ ಇಸ್ರಾಯೇಲ್ ಪ್ರಾಂತ್ಯದ ಬೆಟ್ಟಗಳಲ್ಲಿಯೂ ವಾಸವಾಗಿದ್ದ ಅನಾಕ್ಯರನ್ನು (ಉನ್ನತ ಪುರುಷರು) ನಾಶಮಾಡಿ ಅವರ ಪಟ್ಟಣಗಳನ್ನು ಹಾಳುಮಾಡಿದನು.


ಅನಂತರ ಯೆಹೋಶುವನೂ, ಇಸ್ರಾಯೇಲರೂ ಎಗ್ಲೋನನ್ನು ಬಿಟ್ಟು ಹೆಬ್ರೋನಿಗೆ ಹೋಗಿ ಅದಕ್ಕೆ ವಿರೋಧವಾಗಿ ಯುದ್ಧಮಾಡಿ


ತರುವಾಯ ಅಬ್ರಾಮನು ಅಲ್ಲಿಂದ ಹೊರಟು ಕಾನಾನ್ ದೇಶದ ದಕ್ಷಿಣ ಸೀಮೆಗೆ ಪ್ರಯಾಣ ಮಾಡುತ್ತಾ ಹೋದನು.


ಯೆಹೂದ್ಯರು ಯೆರೂಸಲೇಮಿನವರೊಡನೆ ಯುದ್ಧಮಾಡಿ, ಅಲ್ಲಿನ ಜನರನ್ನು ಹಿಡಿದು ಕತ್ತಿಯಿಂದ ಸಂಹರಿಸಿ ಪಟ್ಟಣಕ್ಕೆ ಬೆಂಕಿಯಿಟ್ಟರು.


ಅವರು ಮೊದಲು ಕಿರ್ಯತರ್ಬ ಎಂಬ ಹೆಸರಿದ್ದ ಹೆಬ್ರೋನಿಗೆ ಹೋಗಿ ಅಲ್ಲಿದ್ದ ಕಾನಾನ್ಯರ ಮೇಲೆ ಬಿದ್ದು, ಅವರಲ್ಲಿ ಶೇಷೈ, ಅಹೀಮನ್, ತಲ್ಮೈ ಎಂಬುವರನ್ನು ಸೋಲಿಸಿದರು.


ಇಳುಕಲ್ಲಿನ ಪ್ರದೇಶಗಳು, ಕಣಿವೆ ಪ್ರದೇಶಗಳು, ಬೆಟ್ಟಗಳ ಬುಡದಲ್ಲಿರುವ ಸೀಮೆಗಳು, ಅರಣ್ಯದ ದಕ್ಷಿಣ ಪ್ರಾಂತ್ಯ ಇವುಗಳನ್ನು ಆಳುತ್ತಿದ್ದ ಹಿತ್ತಿಯ, ಅಮೋರಿಯ, ಕಾನಾನ, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ಅರಸರನ್ನೂ ಸೋಲಿಸಿ, ಅವರ ದೇಶಗಳನ್ನು ಇಸ್ರಾಯೇಲರ ಕುಲದವರಿಗೆ ಶಾಶ್ವತ ಆಸ್ತಿಯಾಗಿ ಕೊಟ್ಟನು. ಆ ಅರಸರ ಪಟ್ಟಿಯು ಹೇಗೆಂದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು