Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 11:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆ ಅರಸನು ದೂತರಿಗೆ, “ಇಸ್ರಾಯೇಲರು ಐಗುಪ್ತದಿಂದ ಬಂದಾಗ ಅರ್ನೋನಿನಿಂದ ಯಬ್ಬೋಕ್ ಮತ್ತು ಯೊರ್ದನ್ ಹೊಳೆಗಳವರೆಗೂ ಇದ್ದ ನನ್ನ ದೇಶವನ್ನು ವಶಪಡಿಸಿಕೊಂಡರಲ್ಲಾ; ನೀನು ಈಗ ಅದನ್ನು ಸಮಾಧಾನದಿಂದ ಹಿಂದಕ್ಕೆ ಕೊಡು” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆ ಅರಸನು ದೂತರಿಗೆ, “ಇಸ್ರಯೇಲರು ಈಜಿಪ್ಟಿನಿಂದ ಬಂದಾಗ ಅರ್ನೋನಿನಿಂದ ಯಬ್ಬೋಕ್, ಜೋರ್ಡನ್ ನದಿಗಳವರೆಗೂ ಇದ್ದು ನನ್ನ ದೇಶವನ್ನು ಕಸಿದುಕೊಂಡರಲ್ಲವೆ? ನೀನು ಈಗ ಅದನ್ನು ಸಮಾಧಾನದಿಂದ ಹಿಂದಕ್ಕೆ ಕೊಡು,” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆ ಅರಸನು ದೂತರಿಗೆ - ಇಸ್ರಾಯೇಲ್ಯರು ಐಗುಪ್ತದಿಂದ ಬಂದಾಗ ಅರ್ನೋನಿನಿಂದ ಯಬ್ಬೋಕ್, ಯೊರ್ದನ್ ಹೊಳೆಗಳವರೆಗೂ ಇದ್ದ ನನ್ನ ದೇಶವನ್ನು ಕಸಕೊಂಡರಲ್ಲಾ; ನೀನು ಈಗ ಅದನ್ನು ಸಮಾಧಾನದಿಂದ ಹಿಂದಕ್ಕೆ ಕೊಡು ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅಮ್ಮೋನಿಯರ ಅರಸನು ಯೆಫ್ತಾಹನ ದೂತರಿಗೆ, “ಇಸ್ರೇಲರು ಈಜಿಪ್ಟಿನಿಂದ ಬಂದಾಗ ನಮ್ಮ ಪ್ರದೇಶವನ್ನು ತೆಗೆದುಕೊಂಡರು; ಆದ್ದರಿಂದ ಈಗ ನಾವು ಇಸ್ರೇಲರೊಂದಿಗೆ ಯುದ್ಧ ಮಾಡುತ್ತಿದ್ದೇವೆ. ಅವರು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯವರೆಗೂ ಜೋರ್ಡನ್ ನದಿಯವರೆಗಿನ ಭೂಮಿಯನ್ನೂ ತೆಗೆದುಕೊಂಡಿದ್ದಾರೆ. ಈಗ ನಮ್ಮ ಭೂಮಿಯನ್ನು ನಮಗೆ ಶಾಂತಿಯಿಂದ ಹಿಂದಿರುಗಿಸಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅಮ್ಮೋನಿಯ ಅರಸನು ಯೆಫ್ತಾಹನ ದೂತರಿಗೆ, “ಇಸ್ರಾಯೇಲರು ಈಜಿಪ್ಟಿನಿಂದ ಬರುವಾಗ, ಅರ್ನೋನಿನಿಂದ ಯಬ್ಬೋಕಿನವರೆಗೂ ಮತ್ತು ಯೊರ್ದನಿನವರೆಗೂ ಇರುವ ನನ್ನ ದೇಶವನ್ನು ತೆಗೆದುಕೊಂಡರು. ಆದ್ದರಿಂದ ಈಗ ಅದನ್ನು ನನಗೆ ಸಮಾಧಾನವಾಗಿ ತಿರುಗಿಕೊಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 11:13
8 ತಿಳಿವುಗಳ ಹೋಲಿಕೆ  

ಆ ರಾತ್ರಿ ಅವನು ತನ್ನ ಇಬ್ಬರು ಹೆಂಡತಿಯರನ್ನು, ಇಬ್ಬರು ದಾಸಿಯರನ್ನು ಹಾಗೂ ಹನ್ನೊಂದು ಮಂದಿ ಮಕ್ಕಳನ್ನು ಕರೆದುಕೊಂಡು ಯಬ್ಬೋಕ್ ಹೊಳೆಯನ್ನು ದಾಟಿದನು.


ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾಡುವವನು ಹಾಳಾಗುವನು.


ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾಡುವವನು ತಪ್ಪಿಸಿಕೊಳ್ಳನು.


(ಪೂರ್ವದ) ಯಬ್ಬೋಕ್ ನದಿಯ ವರೆಗೂ ಇರುವ ಪ್ರದೇಶವನ್ನು ರೂಬೇನ್ಯರಿಗೂ ಮತ್ತು ಗಾದ್ಯರಿಗೂ ಕೊಟ್ಟೆನು. ಅರ್ನೋನ್ ತಗ್ಗಿನ ಮಧ್ಯಭಾಗವೇ ಅವರ (ದಕ್ಷಿಣ) ಮೇರೆ. ಅವರಿಗೂ ಅಮ್ಮೋನಿಯರಿಗೂ ನಡುವೆ ಇರುವ ಯಬ್ಬೋಕ್ ನದಿಯು ಅವರ (ಪೂರ್ವದಿಕ್ಕಿನವರೆಗೆ) ಮೇರೆ.


ಅಮ್ಮೋನಿಯರ ದೇಶವನ್ನು ಮಾತ್ರ ಅಂದರೆ ಯಬ್ಬೋಕ್ ಹೊಳೆಯ ಬಳಿಯಲ್ಲಿರುವ ಪ್ರದೇಶವು ಮತ್ತು ಬೆಟ್ಟದ ಸೀಮೆಯ ಊರುಗಳು ಇವೇ ಮೊದಲಾದ ಸ್ಥಳಗಳನ್ನು ನೀವು ಅತಿಕ್ರಮಿಸಲಿಲ್ಲ; ಅಲ್ಲಿಗೆ ಹೋಗಲೇ ಬಾರದೆಂದು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದ್ದನು.


ಯೆಪ್ತಾಹನು ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನನಗೂ ನಿನಗೂ ಏನಿದೆ? ನೀನು ನನ್ನ ದೇಶಕ್ಕೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಏನು ಕಾರಣ?” ಎಂದು ಕೇಳಿದನು.


ಯೆಪ್ತಾಹನು ಇನ್ನೊಂದು ಸಾರಿ ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು