Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 11:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನಾನು ಸುರಕ್ಷಿತವಾಗಿ ಮನೆಗೆ ಸೇರುವಾಗ ನನ್ನನ್ನು ಎದುರುಗೊಳ್ಳುವುದಕ್ಕಾಗಿ ನನ್ನ ಮನೆಯ ಬಾಗಿಲಿನಿಂದ ಮೊದಲು ಬರುವಂಥ ಪ್ರಾಣಿಯು ನಿನ್ನದೇ ಎಂದು ಅದನ್ನು ನಿನಗೋಸ್ಕರ ಯಜ್ಞವಾಗಿ ಅರ್ಪಿಸುವೆನು” ಎಂದು ಹರಕೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ನಾನು ಸುರಕ್ಷಿತವಾಗಿ ಹಿಂದಿರುಗುವಾಗ ನನ್ನ ಮನೆಯ ಬಾಗಿಲಿನಿಂದ ನನ್ನನ್ನು ಎದುರುಗೊಳ್ಳಲು ಮೊದಲು ಬರುವಂಥ ಪ್ರಾಣಿ ತಮಗೆ ಮೀಸಲು ಎಂದೂ ಅದನ್ನು ತಮಗೆ ದಹನಬಲಿದಾನ ಮಾಡುವೆನು” ಎಂದೂ ಹರಕೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನಾನು ಸುರಕ್ಷಿತನಾಗಿ ಮನೆಗೆ ಮುಟ್ಟಿದಾಗ ನನ್ನನ್ನು ಎದುರುಗೊಳ್ಳುವದಕ್ಕಾಗಿ ನನ್ನ ಮನೆಯ ಬಾಗಲಿನಿಂದ ಮೊದಲು ಬರುವಂಥ ಪ್ರಾಣಿಯು ನಿನ್ನದೇ ಎಂದು ಅದನ್ನು ನಿನಗೋಸ್ಕರ ಹೋಮಮಾಡುವೆನು ಎಂದು ಹರಕೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ನಾನು ಜಯಶಾಲಿಯಾಗಿ ಬರುವಾಗ ನನ್ನ ಮನೆಯಿಂದ ಹೊರ ಬರುವ ಮೊದಲನೆಯ ಜೀವಿಯನ್ನು ನಿನಗೆ ಕೊಡುತ್ತೇನೆ. ನಾನು ಅದನ್ನು ಯೆಹೋವನ ಸರ್ವಾಂಗಹೋಮಕ್ಕೆ ಆಹುತಿಯಾಗಿ ಕೊಡುವೆನು” ಎಂದು ಹರಕೆ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ನಾನು ಅಮ್ಮೋನಿಯರನ್ನು ಜಯಿಸಿ ಹಿಂತಿರುಗಿ ಬರುವಾಗ, ನನ್ನ ಮನೆಯ ಬಾಗಿಲಿನಿಂದ ನನ್ನನ್ನು ಎದುರುಗೊಳ್ಳಲು ಮೊದಲು ಬರುವಂಥದ್ದು ಯೆಹೋವ ದೇವರದಾಗಿರುವುದು. ಅದನ್ನು ದಹನಬಲಿಯಾಗಿ ಅರ್ಪಿಸುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 11:31
14 ತಿಳಿವುಗಳ ಹೋಲಿಕೆ  

ಹೋರಿಯನ್ನು ವಧಿಸುವವನು ನರಬಲಿಯನ್ನು ಕೊಡುತ್ತಾನೆ; ಕುರಿಯನ್ನು ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ; ನೈವೇದ್ಯಮಾಡುವವನು ಹಂದಿಯ ರಕ್ತವನ್ನು ಅರ್ಪಿಸುತ್ತಾನೆ; ಧೂಪಹಾಕುವವನು ವಿಗ್ರಹಾರಾಧನೆ ಮಾಡುತ್ತಾನೆ; ಇವರು ಮನಸ್ಸಿಗೆ ಬಂದ ಮಾರ್ಗಗಳನ್ನು ಆರಿಸಿಕೊಂಡು ತಮ್ಮ ಅಸಹ್ಯಕಾರ್ಯಗಳಲ್ಲಿ ಮನಃಪೂರ್ವಕವಾಗಿ ಆನಂದಿಸುತ್ತಾರೆ;


ಅದಕ್ಕೆ ಸೌಲನು, “ಯೋನಾತಾನನೇ, ನಾನು ನಿನ್ನನ್ನು ಕೊಲ್ಲದೆ ಬಿಟ್ಟರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದನು.


ಆ ದಿನ ಸೌಲನು ಇಸ್ರಾಯೇಲರನ್ನು ಕುರಿತು, “ಶತ್ರುಗಳಿಗೆ ಮುಯ್ಯಿತೀರಿಸುವುದಕ್ಕೋಸ್ಕರ ನಿಮ್ಮಲ್ಲಿ ಒಬ್ಬನಾದರೂ ಸಾಯಂಕಾಲದವರೆಗೆ ಊಟಮಾಡಬಾರದು; ಮಾಡಿದವನು ಶಾಪಗ್ರಸ್ತನಾಗಲಿ” ಎಂದು ಆಣೆಯಿಟ್ಟಿದ್ದರಿಂದ ಅಂದು ಅವರೆಲ್ಲರೂ ಬಹುವಾಗಿ ಬಳಲಿಹೋಗಿದ್ದರೂ ಒಬ್ಬನಾದರೂ ಆಹಾರ ಪಧಾರ್ಥವನ್ನು ರುಚಿಸಿ ನೋಡಿರಲಿಲ್ಲ.


ಆದರೆ ಬಾಲಕನಾದ ಸಮುವೇಲನು ಏಫೋದೆಂಬ ನಾರು ಮಡಿಯಂಗಿಯನ್ನು ತೊಟ್ಟುಕೊಂಡು ಯೆಹೋವನ ಸೇವೆ ಮಾಡುತ್ತಿದ್ದನು.


ನಾನು ಇವನನ್ನು ಯೆಹೋವನಿಗೇ ಒಪ್ಪಿಸಿಬಿಟ್ಟಿದ್ದೇನೆ. ಇವನು ಜೀವದಿಂದಿರುವ ತನಕ ಆತನಿಗೇ ಪ್ರತಿಷ್ಠಿತನಾಗಿರುವನು” ಎಂದು ಹೇಳಿದಳು. ಆ ಮೇಲೆ ಅವರು ಶಿಲೋವಿನಲ್ಲಿ ಯೆಹೋವನನ್ನು ಆರಾಧಿಸಿದರು.


“ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನಿನ್ನ ದಾಸಿಯನ್ನು ಮರೆಯದೆ ನನ್ನನ್ನು ನೆನಪಿಸಿಕೊಂಡು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ಅವನನ್ನು ನಿನಗೆ ಪ್ರತಿಷ್ಠಿಸುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಮುಟ್ಟಗೊಡುವುದಿಲ್ಲ” ಎಂದು ಪ್ರಾರ್ಥಿಸಿ ಹರಕೆಮಾಡಿದಳು.


ಇಸ್ರಾಯೇಲರ ಪುರುಷ ಅಥವಾ ಸ್ತ್ರೀಯೂ ವ್ಯಭಿಚಾರದಿಂದ ಸಂಪಾದಿಸಿದ ಹಣವನ್ನು ಹರಕೆಯಾಗಿ ನಿಮ್ಮ ದೇವರಾದ ಯೆಹೋವನ ಆಲಯದೊಳಗೆ ತರಲೇಬಾರದು. ಈ ಎರಡೂ ಯೆಹೋವನಿಗೆ ಅಸಹ್ಯವಾದ ವಿಷಯ.


ತಿರುಗಿ ನನ್ನನ್ನು ನನ್ನ ತಂದೆಯ ಮನೆಗೆ ಸುರಕ್ಷಿತವಾಗಿ ಬರಮಾಡಿದರೆ ಯೆಹೋವನೇ ನನಗೆ ದೇವರಾಗಿರುವನು.


ಇದಲ್ಲದೆ ಅವನು ಯೆಹೋವನಿಗೆ, “ನೀನು ಅಮ್ಮೋನಿಯರನ್ನು ನನ್ನ ಕೈಗೆ ಒಪ್ಪಿಸುವುದಾದರೆ


ಯೆಪ್ತಾಹನು ಅಮ್ಮೋನಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೋಗಲು ಯೆಹೋವನು ಅವರನ್ನು ಅವನ ಕೈಗೆ ಒಪ್ಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು