Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 12:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಗಿಲ್ಯಾದಿನವರೆಲ್ಲರನ್ನೂ ಸೇರಿಸಿಕೊಂಡು ಎಫ್ರಾಯೀಮ್ಯರಿಗೆ ವಿರೋಧವಾಗಿ ಯುದ್ಧಕ್ಕೆ ನಿಂತನು. ಆಗ ಎಫ್ರಾಯೀಮ್ಯರು “ಗಿಲ್ಯಾದ್ಯರಾದ ನೀವು, ನಮ್ಮ ಮತ್ತು ಮನಸ್ಸೆಯವರ ಮಧ್ಯದಲ್ಲಿದ್ದು ಸ್ವಕುಲವನ್ನು ಬಿಟ್ಟು ಇಲ್ಲಿಗೆ ಓಡಿ ಬಂದಿದ್ದೀರಿ” ಎಂದು ಎಫ್ರಾಯೀಮ್ಯರು ಹೇಳಿದ್ದರಿಂದ ಗಿಲ್ಯಾದ್ಯರು ಕೋಪಗೊಂಡು ಅವರನ್ನು ಪೂರ್ಣವಾಗಿ ಸೋಲಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಬಳಿಕ ಗಿಲ್ಯಾದಿನವರೆಲ್ಲರನ್ನು ಕೂಡಿಸಿ, ಎಫ್ರಯಿಮರಿಗೆ ವಿರುದ್ಧ ಯುದ್ಧಕ್ಕೆ ನಿಂತನು. “ಗಿಲ್ಯಾದ್ಯರಾದ ನೀವು ನಮ್ಮ ಮತ್ತು ಮನಸ್ಸೆ ಯವರ ಮಧ್ಯದಲ್ಲಿದ್ದು ಸ್ವಕುಲವನ್ನು ಬಿಟ್ಟು ಇಲ್ಲಿಗೆ ಓಡಿಬಂದಿರಿ” ಎಂದು ಎಫ್ರಯಿಮ್ಯರು ಹೇಳಿದ್ದರಿಂದ ಗಿಲ್ಯಾದ್ಯರು ಕೋಪಗೊಂಡು ಅವರನ್ನು ಪೂರ್ಣವಾಗಿ ಸೋಲಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಗಿಲ್ಯಾದಿನವರೆಲ್ಲರನ್ನೂ ಕೂಡಿಸಿ ಎಫ್ರಾಯೀಮ್ಯರಿಗೆ ವಿರೋಧವಾಗಿ ಯುದ್ಧಕ್ಕೆ ನಿಂತನು. ಗಿಲ್ಯಾದ್ಯರಾದ ನೀವು ನಮ್ಮ ಮತ್ತು ಮನಸ್ಸೆಯವರ ಮಧ್ಯದಲ್ಲಿದ್ದು ಸ್ವಕುಲವನ್ನು ಬಿಟ್ಟು ಇಲ್ಲಿಗೆ ಓಡಿ ಬಂದಿರಿ ಎಂದು ಎಫ್ರಾಯೀಮ್ಯರು ಅಂದದರಿಂದ ಗಿಲ್ಯಾದ್ಯರು [ಕೋಪಗೊಂಡು] ಅವರನ್ನು ಪೂರ್ಣವಾಗಿ ಸೋಲಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ಯೆಫ್ತಾಹನು ಗಿಲ್ಯಾದಿನ ಜನರನ್ನು ಒಂದೆಡೆ ಸೇರಿಸಿದನು. ಅವರು ಎಫ್ರಾಯೀಮ್ಯರ ವಿರುದ್ಧ ಯುದ್ಧ ಮಾಡಿದರು. ಏಕೆಂದರೆ ಎಫ್ರಾಯೀಮ್ಯರು ಗಿಲ್ಯಾದ್ಯರನ್ನು ಅವಮಾನ ಮಾಡಿದ್ದರು. ಅವರು, “ಗಿಲ್ಯಾದಿನವರಾದ ನೀವು ಎಫ್ರಾಯೀಮ್ಯರಲ್ಲಿ ಬದುಕಿ ಉಳಿದವರೇ ಹೊರತು ಬೇರೆಯವರಲ್ಲ. ನಿಮಗೆ ನಿಮ್ಮ ಸ್ವಂತ ಪ್ರದೇಶವೂ ಇಲ್ಲ. ನಿಮ್ಮ ಒಂದು ಭಾಗವು ಎಫ್ರಾಯೀಮ್ ಕುಲಕ್ಕೆ ಸೇರಿದೆ; ಇನ್ನೊಂದು ಭಾಗವು ಮನಸ್ಸೆ ಕುಲಕ್ಕೆ ಸೇರಿದೆ” ಎಂದಿದ್ದರು. ಅವರು ಹೀಗೆ ಅಂದದ್ದರಿಂದ ಗಿಲ್ಯಾದಿನ ಜನರು ಎಫ್ರಾಯೀಮ್ ಜನರನ್ನು ಸೋಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಯೆಫ್ತಾಹನು ಗಿಲ್ಯಾದ್ ಜನರೆಲ್ಲರನ್ನು ಕೂಡಿಸಿ, ಎಫ್ರಾಯೀಮ್ಯರ ಸಂಗಡ ಯುದ್ಧಮಾಡಿದನು. ಏಕೆಂದರೆ, “ಎಫ್ರಾಯೀಮ್ಯರನ್ನು ಮನಸ್ಸೆಯವರ ಮಧ್ಯದಲ್ಲಿದ್ದ ಗಿಲ್ಯಾದ್ಯರಾದ ನೀವು ಸ್ವಕುಲವನ್ನು ಬಿಟ್ಟು ತಪ್ಪಿಸಿಕೊಂಡವರಾಗಿದ್ದೀರಿ,” ಎಂದು ಎಫ್ರಾಯೀಮ್ಯರು ಹೇಳಿದ್ದರಿಂದ ಗಿಲ್ಯಾದ್ಯರು ಎಫ್ರಾಯೀಮ್ಯರನ್ನು ಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 12:4
11 ತಿಳಿವುಗಳ ಹೋಲಿಕೆ  

ನಾಬಾಲನು ಅವರಿಗೆ, “ದಾವೀದನಾರು? ಇಷಯನ ಮಗನಾರು? ಯಜಮಾನರನ್ನು ಬಿಟ್ಟು ಹೋದ ಸೇವಕರು ಈಗಿನ ಕಾಲದಲ್ಲಿ ಎಷ್ಟು ಮಂದಿಯಿಲ್ಲ.


ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವುದು, ಬಿರುನುಡಿಯು ಸಿಟ್ಟನ್ನೇರಿಸುವುದು.


ದುಷ್ಟನು ತನ್ನ ತುಟಿಗಳ ದೋಷದಿಂದ ಬೋನಿಗೆ ಬೀಳುವನು, ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು.


ಎಫ್ರಾಯೀಮ್ ಕುಲದವರು ಬಿಲ್ಲುಗಳಿಂದ ಸಿದ್ಧರಾಗಿ, ಯುದ್ಧಸಮಯದಲ್ಲಿ ಹಿಂದಿರುಗಿ ಓಡಿಹೋದರು.


ನಮ್ಮ ದೇವರೇ ಕೇಳು, ಅವರು ನಮ್ಮನ್ನು ಎಷ್ಟು ಹೀಯಾಳಿಸುತ್ತಿದ್ದಾರೆ! ಈ ನಿಂದೆಯನ್ನು ಅವರ ತಲೆಯ ಮೇಲೆಯೇ ಬರಮಾಡು. ಅವರು ದೇಶಭ್ರಷ್ಟರಾಗಿ ಸೂರೆಹೋಗುವಂತೆ ಮಾಡು.


ಅವರು ಅವನಿಗೆ, “ಹಾಗೆಯೇ ಮಾಡುವೆವು; ನಮ್ಮಿಬ್ಬರ ಈ ಮಾತುಗಳಿಗೆ ಯೆಹೋವನೇ ಸಾಕ್ಷಿ” ಎಂದು ಉತ್ತರಕೊಟ್ಟರು.


ನೀವು ಸಹಾಯಮಾಡುವುದಿಲ್ಲವೆಂದು ತಿಳಿದು ಜೀವವನ್ನು ಕೈಯಲ್ಲಿ ಹಿಡಿದು ಅಮ್ಮೋನಿಯರೊಡನೆ ಯುದ್ಧಕ್ಕೆ ಹೋದೆನು. ಯೆಹೋವನು ಅವರನ್ನು ನನ್ನ ಕೈಗೆ ಒಪ್ಪಿಸಿದನು. ಹೀಗಿರಲು ನೀವು ಈಗ ಬಂದು ನನ್ನೊಡನೆ ಕಲಹಮಾಡುವುದೇಕೆ?” ಎಂದು ಉತ್ತರಿಸಿ,


ಇದಲ್ಲದೆ ಅವರು ಎಫ್ರಾಯೀಮಿಗೆ ಹೋಗುವ ಯೊರ್ದನಿನ ಹಾಯಗಡಗಳನ್ನೆಲ್ಲಾ ಹಿಡಿದರು. ತಪ್ಪಿಸಿಕೊಂಡ ಎಫ್ರಾಯೀಮ್ಯರಲ್ಲೊಬ್ಬನು ಅಲ್ಲಿಗೆ ಬಂದು ನನ್ನನ್ನು ದಾಟಗೊಡಿಸಿರಿ ಎಂದು ಅವರನ್ನು ಕೇಳಿದರೆ ಅವರು, “ನೀನು ಎಫ್ರಾಯೀಮ್ಯನೋ” ಎಂದು ಕೇಳುವರು.


ಗಿಲ್ಯಾದಿನ ತಿಷ್ಬೀಯ ಊರಿನವನಾದ ಎಲೀಯ ಎಂಬುವವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಾಣೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು