Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 13:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆದರೆ ಆಕೆಯು ಅವನಿಗೆ, “ಯೆಹೋವನು ನಮ್ಮನ್ನು ಕೊಲ್ಲಬೇಕೆಂದಿದ್ದರೆ ಆತನು ನಮ್ಮ ಕೈಯಿಂದ ಯಜ್ಞವನ್ನೂ, ನೈವೇದ್ಯವನ್ನೂ ಸ್ವೀಕರಿಸುತ್ತಿರಲಿಲ್ಲ; ಈಗ ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ, ಹೇಳುತ್ತಿರಲಿಲ್ಲ” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ದೇವರನ್ನು ಕಣ್ಣಾರೆ ಕಂಡೆವಲ್ಲಾ!” ಎಂದನು. ಆಕೆ ಅವನಿಗೆ, “ಸರ್ವೇಶ್ವರ ನಮ್ಮನ್ನು ಕೊಲ್ಲಬೇಕೆಂದಿದ್ದರೆ ಅವರು ನಮ್ಮ ಕೈಯಿಂದ ಬಲಿಯನ್ನೂ ನೈವೇದ್ಯವನ್ನೂ ಸ್ವೀಕರಿಸುತ್ತಿರಲಿಲ್ಲ. ಈಗ ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ; ಹೇಳುತ್ತಿರಲಿಲ್ಲ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆಕೆಯು ಅವನಿಗೆ - ಯೆಹೋವನು ನಮ್ಮನ್ನು ಕೊಲ್ಲಬೇಕೆಂದಿದ್ದರೆ ಆತನು ನಮ್ಮ ಕೈಯಿಂದ ಯಜ್ಞವನ್ನೂ ನೈವೇದ್ಯವನ್ನೂ ಸ್ವೀಕರಿಸುತ್ತಿದ್ದಿಲ್ಲ; ಈಗ ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿದ್ದಿಲ್ಲ, ಹೇಳುತ್ತಿದ್ದಿಲ್ಲ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದರೆ ಅವನ ಹೆಂಡತಿಯು ಅವನಿಗೆ, “ಯೆಹೋವನು ನಮ್ಮನ್ನು ಕೊಲ್ಲಬಯಸುವುದಿಲ್ಲ. ಯೆಹೋವನು ನಮ್ಮನ್ನು ಕೊಲ್ಲಬೇಕೆಂದಿದ್ದರೆ ಆತನು ನಮ್ಮ ಕೈಯಿಂದ ಸರ್ವಾಂಗಹೋಮವನ್ನೂ ಧಾನ್ಯಸಮರ್ಪಣೆಯನ್ನೂ ಸ್ವೀಕರಿಸುತ್ತಿರಲಿಲ್ಲ; ಆತನು ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ; ಇದನ್ನೆಲ್ಲ ನಮಗೆ ಹೇಳುತ್ತಿರಲಿಲ್ಲ” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವನ ಹೆಂಡತಿ ಅವನಿಗೆ, “ಯೆಹೋವ ದೇವರು ನಮ್ಮನ್ನು ಕೊಲ್ಲಬೇಕೆಂದಿದ್ದರೆ, ಅವರು ನಮ್ಮ ಕೈಯಿಂದ ದಹನಬಲಿಯನ್ನೂ, ಅರ್ಪಣೆಯನ್ನೂ ಸ್ವೀಕರಿಸುತ್ತಿರಲಿಲ್ಲ; ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ. ಈಗ ಹೇಳಿದವುಗಳನ್ನು ನಮಗೆ ತಿಳಿಯಮಾಡುತ್ತಿರಲಿಲ್ಲ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 13:23
12 ತಿಳಿವುಗಳ ಹೋಲಿಕೆ  

ಕಣ್ಣು ಕೈಗೆ, “ನೀನು ನನಗೆ ಅವಶ್ಯವಿಲ್ಲವೆಂದೂ,” ತಲೆಯು “ಪಾದಗಳಿಗೆ ನೀವು ನನಗೆ ಅವಶ್ಯವಿಲ್ಲವೆಂದೂ” ಹೇಳುವುದಕ್ಕಾಗುವುದಿಲ್ಲ.


ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತಮಿತ್ರನಂತಿರುವನು; ಅವರಿಗೆ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.


ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ, ಏಕೆಂದರೆ, ಯಜಮಾನನು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ, ಏಕೆಂದರೆ ತಂದೆಯ ಕಡೆಯಿಂದ ನಾನು ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಸಿದ್ದೇನೆ.


ನಾನು ನನ್ನ ತಂದೆಯಲ್ಲಿಯೂ, ನೀವು ನನ್ನಲ್ಲಿಯೂ ಮತ್ತು ನಾನು ನಿಮ್ಮಲ್ಲಿಯೂ ಇರುವುದನ್ನು ನೀವು ಆ ದಿನದಲ್ಲಿ ತಿಳಿದುಕೊಳ್ಳುವಿರಿ.


ನನಗಾಗಿ ಒಂದು ಶುಭಸೂಚನೆಯನ್ನು ತೋರಿಸು; ನನ್ನ ಶತ್ರುಗಳು ನೋಡಿ, “ಯೆಹೋವನು ಸಹಾಯಕನಾಗಿ ಇವನನ್ನು ಸಂತೈಸಿದ್ದಾನೆ” ಎಂದು ನಾಚಿಕೆಪಡಲಿ.


ವಕ್ರಬುದ್ಧಿಯವನು ಯೆಹೋವನಿಗೆ ಅಸಹ್ಯನು, ಯಥಾರ್ಥರಿಗೆ ಆತನ ಸ್ನೇಹವು ದೊರೆಯುವುದು.


ಯೇಸು ಅವನಿಗೆ, “ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ನನ್ನ ಮಾತಿನಂತೆ ನಡೆಯುವನು. ಅವನನ್ನು ನನ್ನ ತಂದೆಯು ಪ್ರೀತಿಸುವನು ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು, ಅವನೊಂದಿಗೆ ನೆಲೆಸುವೆವು.


ಜೀವಲೋಕದಲ್ಲಿಯೇ ಯೆಹೋವನ ದಯೆಯನ್ನು ಅನುಭವಿಸುವೆನು ಎಂದು ದೃಢವಾಗಿ ನಂಬಿದ್ದೇನೆ.


ಆ ಸ್ತ್ರೀಯು ಮಗನನ್ನು ಹೆತ್ತು ಅವನಿಗೆ ಸಂಸೋನನೆಂದು ಹೆಸರಿಟ್ಟಳು. ಹುಡುಗನು ದೊಡ್ಡವನಾದನು. ಯೆಹೋವನ ಆಶೀರ್ವಾದವು ಅವನ ಮೇಲಿತ್ತು.


ಆತನು ನಿನ್ನ ಇಷ್ಟಾರ್ಥವನ್ನು ನೆರವೇರಿಸಲಿ; ನಿನ್ನ ಎಲ್ಲಾ ಸಂಕಲ್ಪಗಳನ್ನು ಸಫಲಮಾಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು