Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 15:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವನು ಬಹಳ ಬಾಯಾರಿದವನಾಗಿ ಯೆಹೋವನಿಗೆ, “ನೀನು ನಿನ್ನ ಸೇವಕನ ಮೂಲಕವಾಗಿ ಈ ಮಹಾಜಯವನ್ನುಂಟುಮಾಡಿದ ಮೇಲೆ ನಾನು ದಾಹದಿಂದ ಸತ್ತು ಸುನ್ನತಿಯಿಲ್ಲದವರ ಕೈಯಲ್ಲಿ ಬೀಳಬೇಕೋ” ಎಂದು ಮೊರೆಯಿಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇದರಿಂದಾಗಿ ಸಂಸೋನನಿಗೆ ಬಹಳ ದಾಹವಾಯಿತು. ಅವನು ಸರ್ವೇಶ್ವರನಿಗೆ, “ನೀವು ನಿಮ್ಮ ದಾಸನ ಮುಖಾಂತರ ಇಂಥ ಮಹಾ ಜಯವನ್ನು ದಯಪಾಲಿಸಿದಿರಿ. ಆದರೆ ಈಗ ನಾನು ದಾಹದಿಂದ ಸತ್ತು ಸುನ್ನತಿಯಿಲ್ಲದವರ ಕೈಯಲ್ಲಿ ಬೀಳಬೇಕೇ?’ ಎಂದು ಮೊರೆಯಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಮತ್ತು ಅವನು ಬಹಳ ದಾಹವುಳ್ಳವನಾಗಿ ಯೆಹೋವನಿಗೆ - ನೀನು ನಿನ್ನ ಸೇವಕನ ಮೂಲಕವಾಗಿ ಈ ಮಹಾಜಯವನ್ನುಂಟು ಮಾಡಿದ ಮೇಲೆ ನಾನು ದಾಹದಿಂದ ಸತ್ತು ಸುನ್ನತಿಯಿಲ್ಲದವರ ಕೈಯಲ್ಲಿ ಬೀಳಬೇಕೋ ಎಂದು ಮೊರೆಯಿಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಸಂಸೋನನಿಗೆ ತುಂಬ ನೀರಡಿಕೆಯಾಗಿತ್ತು. ಅವನು ಯೆಹೋವನಿಗೆ, “ನಾನು ನಿನ್ನ ಸೇವಕನಾಗಿದ್ದೇನೆ. ನೀನು ನನಗೆ ಈ ಮಹಾವಿಜಯವನ್ನು ಕೊಟ್ಟಿರುವೆ. ದಯವಿಟ್ಟು ಈಗ ನಾನು ನೀರಡಿಕೆಯಿಂದ ಸಾಯಲು ಬಿಡಬೇಡ. ಸುನ್ನತಿ ಮಾಡಿಸಿಕೊಂಡಿಲ್ಲದವರು ನನ್ನನ್ನು ಹಿಡಿದುಕೊಡುವಂತೆ ಮಾಡಬೇಡ” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವನಿಗೆ ಬಹಳ ಬಾಯಾರಿಕೆಯಾದದರಿಂದ ಅವನು ಯೆಹೋವ ದೇವರಿಗೆ ಮೊರೆಯಿಟ್ಟನು, “ನಿಮ್ಮ ಸೇವಕನಿಗೆ ನೀವು ಈ ಮಹಾ ರಕ್ಷಣೆಯನ್ನು ಕೊಟ್ಟಿದ್ದೀರಿ. ಈಗ ಬಾಯಾರಿಕೆಯಿಂದ ಬಳಲಿ, ಸುನ್ನತಿಯಾಗದ ಈ ಜನರ ಕೈಯಲ್ಲಿ ನಾನು ಬೀಳಬೇಕೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 15:18
19 ತಿಳಿವುಗಳ ಹೋಲಿಕೆ  

ಇನ್ನೂ ಏನು ಹೇಳಬೇಕು? ಗಿದ್ಯೋನ್, ಬಾರಾಕ ಸಂಸೋನ, ಯೆಪ್ತಾಹ, ದಾವೀದ, ಸಮುವೇಲ ಮತ್ತು ಪ್ರವಾದಿಗಳ ವಿಷಯವಾಗಿ ಹೇಳಬೇಕಾದರೆ ನನಗೆ ಸಮಯ ಸಾಲದು.


ಇದಾದ ಮೇಲೆ ಯೇಸು ಈಗ ಎಲ್ಲ ಪೂರ್ತಿಯಾಗಿದೆಯೆಂದು ತಿಳಿದು, ಧರ್ಮಶಾಸ್ತ್ರದ ಮಾತು ನೆರವೇರುವಂತೆ, “ನನಗೆ ನೀರಡಿಕೆಯಾಗಿದೆ” ಎಂದನು.


ಈ ಸಂಗತಿಯನ್ನು ಗತ್ ಊರಿನಲ್ಲಿ ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರಬೇಡಿರಿ. ಫಿಲಿಷ್ಟಿಯರ ಹೆಂಗಸರು ಸಂತೋಷಿಸಾರು. ಸುನ್ನತಿಯಿಲ್ಲದವರ ಸ್ತ್ರೀಯರು ಉಲ್ಲಾಸಪಟ್ಟಾರು.


ದಾವೀದನು ತನ್ನ ಮನಸ್ಸಿನಲ್ಲಿ, “ನಾನು ಇಲ್ಲೇ ಇದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಸಾಯಲೇಬೇಕು ಆದ್ದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆ ಮೇಲೆ ಸೌಲನು ಇಸ್ರಾಯೇಲ್ಯರ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕದೆ ಬಿಟ್ಟುಬಿಡುವನು. ನಾನು ಅವನ ಕೈಗೆ ತಪ್ಪಿಸಿಕೊಂಡವನಾಗಿರುವೆನು” ಅಂದುಕೊಂಡನು.


ನಿನ್ನ ಸೇವಕನಿಂದ ಕೊಲ್ಲಲ್ಪಟ್ಟ ಸಿಂಹಕ್ಕೂ, ಕರಡಿಗೂ ಆದ ಗತಿಯೇ ಜೀವಸ್ವರೂಪನಾದ ದೇವರ ಸೈನ್ಯವನ್ನು ನಿಂದಿಸುವಂಥ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು.


ದಾವೀದನು, “ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸುವುದಕ್ಕೆ ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಾಯೇಲ್ಯರಿಗೆ ಬಂದಿರುವ ನಿಂದೆಯನ್ನು ತೆಗೆದುಹಾಕುವವನಿಗೆ ಏನು ಸಿಕ್ಕುವುದು ಹೇಳಿರಿ” ಎಂದು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರನ್ನು ಕೇಳಿದನು,


ಆಗ ಸಂಸೋನನು ಯೆಹೋವನಿಗೆ, “ಕರ್ತನೇ, ಯೆಹೋವನೇ, ಫಿಲಿಷ್ಟಿಯರು ಕಿತ್ತುಹಾಕಿದ ನನ್ನ ಎರಡೂ ಕಣ್ಣುಗಳಲ್ಲಿ ಒಂದಕ್ಕೋಸ್ಕರವಾದರೂ ನಾನು ಅವರಿಗೆ ಮುಯ್ಯಿತೀರಿಸುವ ಹಾಗೆ ನನ್ನನ್ನು ಈ ಸಾರಿ ಬಲಪಡಿಸು” ಎಂದು ಮೊರೆಯಿಟ್ಟು,


ಗಿದ್ಯೋನನು ಅವನ ಸಂಗಡ ಇದ್ದ ಮುನ್ನೂರು ಜನರು ಬಹಳ ದಣಿದವರಾಗಿದ್ದರೂ, ಹಿಂದಟ್ಟುತ್ತಾ ಯೊರ್ದನನ್ನು ದಾಟಿ ಸುಖೋತಿಗೆ ಬಂದರು.


ಅವನು, ಪೆನೂವೇಲನ್ನು ದಾಟುತ್ತಿರುವಾಗ ಸೂರ್ಯೋದಯವಾಯಿತು. ಆದರೆ ಯಾಕೋಬನು ತೊಡೆಯ ನೋವಿನ ನಿಮಿತ್ತ ಕುಂಟುತ್ತಾ ನಡೆದನು.


ಅದಕ್ಕೆ ಅಬ್ರಹಾಮನು, “ಈ ಸ್ಥಳದವರು ದೇವರ ಭಯಭಕ್ತಿ ಇಲ್ಲದವರಾಗಿ ನನ್ನ ಹೆಂಡತಿಯ ನಿಮಿತ್ತ ನನ್ನನ್ನು ಕೊಂದಾರೆಂದು ಭಾವಿಸಿದೆನು.


ತನ್ನ ಕೈಯಲ್ಲಿದ್ದ ಎಲುಬನ್ನು ಬೀಸಾಡಿದನು. ಆ ಸ್ಥಳಕ್ಕೆ ರಾಮತ್ ಲೆಹೀ ಎಂದು ಹೆಸರಾಯಿತು.


ಆಗ ಅವರು ಅವನಿಗೆ, “ಸುನ್ನತಿಯಿಲ್ಲದ ಫಿಲಿಷ್ಟಿಯರ ಹೆಣ್ಣನ್ನು ಮದುವೆ ಮಾಡಿಕೊಳ್ಳಬೇಕೆಂದಿರುತ್ತೀಯಲ್ಲಾ; ನಿನ್ನ ಬಂಧುಗಳಲ್ಲಿಯೂ, ನಮ್ಮ ಎಲ್ಲಾ ಜನರಲ್ಲಿಯೂ ನಿನಗೆ ಹೆಣ್ಣು ಸಿಕ್ಕುವುದಿಲ್ಲವೋ?” ಎಂದು ಕೇಳಲು ಅವನು, “ನನಗೋಸ್ಕರ ಆಕೆಯನ್ನೇ ತೆಗೆದುಕೊಳ್ಳಬೇಕು; ಆಕೆಯನ್ನೇ ಮೆಚ್ಚಿಕೊಂಡಿದ್ದೇನೆ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು