Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 15:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಫಿಲಿಷ್ಟಿಯರು ಇದನ್ನು ಮಾಡಿದವರು ಯಾರೆಂದು ವಿಚಾರಿಸುವಲ್ಲಿ ತಿಮ್ನಾ ಊರಿನವನ ಅಳಿಯನಾದ ಸಂಸೋನನೆಂದು ಗೊತ್ತಾಯಿತು. ಅವನ ಮಾವನು ಅವನ ಹೆಂಡತಿಯನ್ನು ಬೇರೊಬ್ಬನಿಗೆ ಕೊಟ್ಟುಬಿಟ್ಟದ್ದೇ ಇದಕ್ಕೆ ಕಾರಣವೆಂದು ಅವರು ತಿಳಿದು, ಆಕೆಯನ್ನೂ, ಆಕೆಯ ತಂದೆಯನ್ನೂ ಸುಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಫಿಲಿಷ್ಟಿಯರು ಇದನ್ನು ಮಾಡಿದವರಾರೆಂದು ವಿಚಾರಿಸುವಲ್ಲಿ ತಿಮ್ನಾ ಊರಿನವನ ಅಳಿಯನಾದ ಸಂಸೋನನೆಂದು ಗೊತ್ತಾಯಿತು. ಅವನ ಮಾವ ಅವನ ಹೆಂಡತಿಯನ್ನು ಬೇರೊಬ್ಬನಿಗೆ ಕೊಟ್ಟುಬಿಟ್ಟದ್ದೇ ಇದಕ್ಕೆ ಕಾರಣವೆಂದು ಅವರು ತಿಳಿದು, ಅಲ್ಲಿಗೆ ಬಂದು ಆಕೆಯನ್ನೂ ಆಕೆಯ ತಂದೆಯನ್ನೂ ಸುಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಫಿಲಿಷ್ಟಿಯರು ಇದನ್ನು ಮಾಡಿದವರಾರೆಂದು ವಿಚಾರಿಸುವಲ್ಲಿ ತಿಮ್ನಾ ಊರಿನವನ ಅಳಿಯನಾದ ಸಂಸೋನನೆಂದು ಗೊತ್ತಾಯಿತು. ಅವನ ಮಾವನು ಅವನ ಹೆಂಡತಿಯನ್ನು ಬೇರೊಬ್ಬನಿಗೆ ಕೊಟ್ಟುಬಿಟ್ಟದ್ದೇ ಇದಕ್ಕೆ ಕಾರಣವೆಂದು ಅವರು ತಿಳಿದು ಬಂದು ಆಕೆಯನ್ನೂ ಆಕೆಯ ತಂದೆಯನ್ನೂ ಸುಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಇದನ್ನು ಮಾಡಿದವರು ಯಾರು?” ಎಂದು ಫಿಲಿಷ್ಟಿಯರು ವಿಚಾರಿಸಿದರು. ಒಬ್ಬನು, “ತಿಮ್ನಾ ನಗರದವನ ಅಳಿಯನಾದ ಸಂಸೋನನು ಇದನ್ನು ಮಾಡಿದನು. ಸಂಸೋನನ ಮಾವನು ಸಂಸೋನನ ಹೆಂಡತಿಯನ್ನು ಮದುವೆಯಲ್ಲಿದ್ದ ಉತ್ತಮ ಪುರುಷನೊಬ್ಬನಿಗೆ ಮದುವೆಮಾಡಿಕೊಟ್ಟಿದ್ದಕ್ಕಾಗಿ ಅವನು ಹೀಗೆಲ್ಲಾ ಮಾಡಿದನು” ಎಂದು ಹೇಳಿದನು. ಆಗ ಫಿಲಿಷ್ಟಿಯರು ಸಂಸೋನನ ಹೆಂಡತಿಯನ್ನು ಮತ್ತು ಅವಳ ತಂದೆಯನ್ನು ಸುಟ್ಟುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಫಿಲಿಷ್ಟಿಯರು, “ಇದನ್ನು ಮಾಡಿದವರು ಯಾರು?” ಎಂದರು. ಅದಕ್ಕೆ ಅವರು, “ತಿಮ್ನಾದವನ ಅಳಿಯನಾದ ಸಂಸೋನನು ಮಾಡಿದನು. ಏಕೆಂದರೆ ಇವನು ಅವನ ಹೆಂಡತಿಯನ್ನು ತೆಗೆದುಕೊಂಡು, ಅವನ ಜೊತೆಗಾರನಿಗೆ ಕೊಟ್ಟನು,” ಎಂದರು. ಆಗ ಫಿಲಿಷ್ಟಿಯರು ಬಂದು, ಅವಳನ್ನೂ, ಅವಳ ತಂದೆಯನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 15:6
6 ತಿಳಿವುಗಳ ಹೋಲಿಕೆ  

ಅವರು ಏಳನೆಯ ದಿನದಲ್ಲಿ ಸಂಸೋನನ ಹೆಂಡತಿಗೆ, “ನಿನ್ನ ಗಂಡನನ್ನು ಮರುಳುಗೊಳಿಸಿ ಅವನಿಂದ ಒಗಟಿನ ಅರ್ಥವನ್ನು ತಿಳಿದುಕೋ; ಇಲ್ಲವಾದರೆ ನಾವು ನಿನ್ನನ್ನೂ, ನಿನ್ನ ತಂದೆಯ ಮನೆಯವರನ್ನೂ ಬೆಂಕಿಯಿಂದ ಸುಟ್ಟುಬಿಡುವೆವು; ನಮಗಿರುವುದೆಲ್ಲವನ್ನೂ ಕಸಿದುಕೊಳ್ಳುವುದಕ್ಕೆ ನಮ್ಮನ್ನು ಇಲ್ಲಿಗೆ ಕರೆಸಿದಿರೋ” ಅಂದರು.


ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಕೇಡು ಮಾಡಬಾರದು. ನಾವು ಮೊದಲೇ ತಿಳಿಸಿ, ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಪ್ರತಿಕಾರ ಮಾಡುವವನಾಗಿದ್ದಾನೆ.


ಕೆಟ್ಟತನವನ್ನು ಬಿತ್ತುವವನು ಕೇಡನ್ನೇ ಕೊಯ್ಯುವನು, ಹೆಮ್ಮೆಯಿಂದ ಹಿಡಿದ ದಂಡವು ಅವನ ಕೈಯಿಂದ ಬಿದ್ದುಹೋಗುವುದು.


ಎಫ್ರಾಯೀಮ್ಯರು ಒಟ್ಟಿಗೆ ಸೇರಿಕೊಂಡು ಯೊರ್ದನ್ ನದಿಯನ್ನು ದಾಟಿ ಉತ್ತರದಿಕ್ಕಿನಲ್ಲಿರುವ ಚಾಫೋನಿಗೆ ಹೋಗಿ ಯೆಪ್ತಾಹನಿಗೆ, “ನೀನು ಅಮ್ಮೋನಿಯರ ಸಂಗಡ ಯುದ್ಧಕ್ಕೆ ಹೋಗುವಾಗ ನಮ್ಮನ್ನು ಯಾಕೆ ಕರೆಯಲಿಲ್ಲ? ಈಗ ನಾವು ನಿನ್ನನ್ನೂ ನಿನ್ನ ಮನೆಯನ್ನೂ ಸುಟ್ಟುಬಿಡುತ್ತೇವೆ” ಅಂದರು.


ಆ ನರಿಗಳನ್ನು ಫಿಲಿಷ್ಟಿಯರ ಹೊಲಗಳಲ್ಲಿ ಬಿಟ್ಟು, ಅವರ ತೆನೆಗೂಡುಗಳನ್ನೂ, ಇನ್ನೂ ಕೊಯ್ಯದೆ ಇದ್ದ ಬೆಳೆಯನ್ನೂ, ಎಣ್ಣೆಯ ಮರಗಳ ತೋಟಗಳನ್ನೂ ಸುಟ್ಟುಬಿಟ್ಟನು.


ಸಂಸೋನನು ಅವರಿಗೆ, “ನೀವು ಹೀಗೆ ಮಾಡಿದ್ದರಿಂದ ನಾನು ನಿಮಗೆ ಮುಯ್ಯಿತೀರಿಸದೆ ಬಿಡುವುದಿಲ್ಲ” ಎಂದು ಹೇಳಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು