Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 16:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇದಲ್ಲದೆ ಅವಳು ಅವನನ್ನು ದಿನದಿನವೂ ಮಾತಿನಿಂದ ಪೀಡಿಸಿದ್ದರಿಂದ ಅವನಿಗೆ ಸಾಯುವುದು ಒಳ್ಳೆಯದು ಎನ್ನುವಷ್ಟು ಬೇಸರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇದಲ್ಲದೆ, ಅವಳು ಅವನನ್ನು ದಿನದಿನವೂ ಮಾತಿನಿಂದ ಪೀಡಿಸುತ್ತಿದ್ದುದರಿಂದ ಅವನಿಗೆ ಸಾಯುವುದೇ ಒಳ್ಳೆಯದೆನ್ನುವಷ್ಟು ಬೇಸರ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇದಲ್ಲದೆ ಅವಳು ಅವನನ್ನು ದಿನ ದಿನವೂ ಮಾತಿನಿಂದ ಪೀಡಿಸಿದ್ದರಿಂದ ಅವನಿಗೆ ಸಾಯುವದು ಒಳ್ಳೇದನ್ನುವಷ್ಟು ಬೇಸರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅವಳು ಸಂಸೋನನನ್ನು ಪ್ರತಿದಿನ ಪೀಡಿಸತೊಡಗಿದಳು. ಅವನ ಶಕ್ತಿಯ ರಹಸ್ಯದ ಬಗ್ಗೆ ಅವಳು ಪದೇಪದೇ ಕೇಳುತ್ತಿದ್ದದರಿಂದ ಅವನಿಗೆ ಸಾಯುವಷ್ಟು ಬೇಸರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವಳು ಅವನನ್ನು ದಿನದಿನವೂ ತನ್ನ ಮಾತುಗಳಿಂದ ಪೀಡಿಸಿ, ತೊಂದರೆ ಪಡಿಸಿದ್ದರಿಂದ, ಅವನ ಪ್ರಾಣವು ಸಾಯುವಷ್ಟು ವ್ಯಸನಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 16:16
11 ತಿಳಿವುಗಳ ಹೋಲಿಕೆ  

ಆದರೂ ಈ ವಿಧವೆ ನನ್ನನ್ನು ಕಾಡುತ್ತಾ ಬರುತ್ತಿರುವುದರಿಂದ ಈಕೆಯ ನ್ಯಾಯವನ್ನು ವಿಚಾರಿಸಿ ತೀರ್ಪುಮಾಡುವೆನು. ಇಲ್ಲವಾದರೆ ಈಕೆ ಪದೇಪದೇ ಬಂದು ನನ್ನನ್ನು ದಣಿಸಾಳು’ ಎಂದು ತನ್ನೊಳಗೆ ಅಂದುಕೊಂಡನು.”


ಆದರೂ, ಸ್ನೇಹದ ನಿಮಿತ್ತವಾಗಿ ಎದ್ದು ಬಂದು ಕೊಡದೆ ಇದ್ದರೂ, ನಾಚಿಕೆಪಡದೆ ಕೇಳುತ್ತಲೇ ಇದ್ದಾನಲ್ಲಾ ಎಂಬ ಕಾರಣದಿಂದಾದರೂ ಅವನು ಎದ್ದು ಬಂದು ಕೇಳಿದಷ್ಟು ರೊಟ್ಟಿಗಳನ್ನು ಕೊಡುತಾನೆಂಬುದು ನಿಜ.


ಯೇಸು ಅವರಿಗೆ, “ಇದು ನನ್ನ ರಕ್ತ, ಬಹು ಜನರಿಗಾಗಿ ಸುರಿಸಲ್ಪಡುವ ಒಡಂಬಡಿಕೆಯ ರಕ್ತ.


ಆಗ ದೇವರು ಯೋನನಿಗೆ, “ನೀನು ಸೋರೆಗಿಡ ಒಣಗಿದ್ದಕ್ಕಾಗಿ ಸಿಟ್ಟುಗೊಳ್ಳುವುದು ಸರಿಯೋ?” ಎಂದು ಕೇಳಲು ಯೋನನು “ಹೌದು, ನಾನು ಸಾಯುವಷ್ಟು ಕಾಲ ಸಿಟ್ಟುಗೊಳ್ಳುವುದು ಸರಿಯೇ” ಎಂದು ಉತ್ತರಕೊಟ್ಟನು.


ನಾನೇನು ಮನುಷ್ಯನ ವಿಷಯದಲ್ಲಿ ಗುಣುಗುಟ್ಟುತ್ತಿರುವೆನೆ? ನಾನೇಕೆ ಬೇಸರಗೊಳ್ಳಬಾರದು?


ಆಕೆಯು ತಿರುಗಿ ಅವನಿಗೆ, “ನನ್ನನ್ನು ಪ್ರೀತಿಸುತ್ತೇನೆಂದು ನೀನು ನನಗೆ ಹೇಗೆ ಹೇಳುವೇ? ನಿನ್ನ ಮನಸ್ಸು ನನ್ನ ಮೇಲೆ ಇಲ್ಲವಲ್ಲಾ; ಮೂರು ಸಾರಿ ನನ್ನನ್ನು ವಂಚಿಸಿದಿ. ನಿನಗೆ ಇಂಥ ಮಹಾ ಶಕ್ತಿ ಯಾವುದರಿಂದ ಬಂದಿತೆಂಬುದನ್ನು ನನಗೆ ತಿಳಿಸಲಿಲ್ಲ” ಅಂದಳು.


ಆಗ ಅವನು, “ಕ್ಷೌರಕತ್ತಿಯು ನನ್ನ ತಲೆಯ ಮೇಲೆ ಮುಟ್ಟಿಸಿಲ್ಲ; ನಾನು ಮಾತೃಗರ್ಭದಿಂದಲೇ ದೇವರಿಗೆ ಪ್ರತಿಷ್ಠಿತನಾದವನು (ನಾಜೀರನು). ನನ್ನ ತಲೆಯನ್ನು ಕ್ಷೌರಮಾಡುವುದಾದರೆ ನನ್ನ ಶಕ್ತಿಯು ಹೋಗುವುದು; ಮತ್ತು ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು” ಎಂದು ತನ್ನ ಗುಟ್ಟನ್ನೆಲ್ಲಾ ಆಕೆಯ ಮುಂದೆ ಬಿಚ್ಚಿಹೇಳಿದನು.


ಆಕೆಯು ಸಂಸೋನನ ಮುಂದೆ ಅಳುತ್ತಾ, “ನೀನು ನನ್ನನ್ನು ಪ್ರೀತಿಸುವುದಿಲ್ಲ, ದ್ವೇಷಿಸುತ್ತೀಯಷ್ಟೆ; ನನ್ನ ಜನರಿಗೆ ಒಗಟನ್ನು ಹೇಳಿದ್ದೀ, ಅದರ ಅರ್ಥವನ್ನು ನನಗೆ ತಿಳಿಸಲಿಲ್ಲವಲ್ಲಾ” ಎಂದು ತೊಂದರೆಪಡಿಸಿದಳು. ಅವನು ಆಕೆಗೆ, “ಅದನ್ನು ನನ್ನ ತಂದೆತಾಯಿಗಳಿಗೂ ಹೇಳಲಿಲ್ಲ; ನಿನಗೆ ಹೇಳುವೆನೋ?” ಎಂದು ಉತ್ತರ ಕೊಟ್ಟನು.


ಆಕೆಯು ಔತಣದ ಏಳು ದಿನಗಳಲ್ಲಿಯೂ ಅವನ ಮುಂದೆ ಅಳುತ್ತಿದ್ದಳು. ಏಳನೆಯ ದಿನದಲ್ಲಿ ಆಕೆಯು ಬಹಳವಾಗಿ ಪೀಡಿಸಿದ್ದರಿಂದ ಅವನು ಹೇಳಿಬಿಟ್ಟನು. ಆಕೆಯು ಒಗಟಿನ ಅರ್ಥವನ್ನು ತನ್ನ ಜನರಿಗೆ ತಿಳಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು