Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 16:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಜನರು ಸಂಸೋನನನ್ನು ನೋಡಿದಾಗ, “ನಮ್ಮ ದೇಶವನ್ನು ಹಾಳುಮಾಡಿ ನಮ್ಮಲ್ಲಿ ಅನೇಕರನ್ನು ಕೊಂದುಹಾಕಿದ ಈ ಶತ್ರುವನ್ನು ನಮ್ಮ ದೇವರು ನಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾನೆ” ಎಂದು ಹಾಡು ಹಾಡಿ ಸಂತೋಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಜನರು ಸಂಸೋನನನ್ನು ನೋಡಿ : ‘ನಮ್ಮ ದೇಶವನ್ನು ಹಾಳುಮಾಡಿದ, ನಮ್ಮಲ್ಲಿ ಅನೇಕರನ್ನು ಕೊಂದುಹಾಕಿದ, ಈ ಶತ್ರುವನ್ನು ನಮ್ಮ ದೇವರೇ ನಮ್ಮ ಕೈಗೊಪ್ಪಿಸಿದ,’ ಎಂದು ಗಾನಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಜನರು ಸಂಸೋನನನ್ನು ನೋಡಿ - ನಮ್ಮ ದೇಶವನ್ನು ಹಾಳುಮಾಡಿ ನಮ್ಮಲ್ಲಿ ಅನೇಕರನ್ನು ಕೊಂದು ಹಾಕಿದ ಈ ಶತ್ರುವನ್ನು ನಮ್ಮ ದೇವರು ನಮ್ಮ ಕೈಗೆ ಒಪ್ಪಿಸಿ ಕೊಟ್ಟಿದ್ದಾನೆ ಎಂದು ಗಾನಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಫಿಲಿಷ್ಟಿಯರು ಸಂಸೋನನನ್ನು ನೋಡಿದ ಕೂಡಲೇ ತಮ್ಮ ದೇವರನ್ನು ಸ್ತುತಿಸಿದರು. ಅವರು, “ಇವನು ನಮ್ಮ ಜನರನ್ನು ಹಾಳುಮಾಡಿದನು. ಇವನು ನಮ್ಮ ಅನೇಕ ಜನರನ್ನು ಕೊಂದನು. ಆದರೆ ನಮ್ಮ ದೇವರು ನಮ್ಮ ಶತ್ರುವನ್ನು ಸೆರೆಹಿಡಿಯಲು ಸಹಾಯ ಮಾಡಿದನು” ಎಂದು ಹಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಜನರು ಸಂಸೋನನನ್ನು ನೋಡಿದಾಗ ತಮ್ಮ ದೇವರನ್ನು ಹೊಗಳಿದರು. ಏಕೆಂದರೆ, “ನಮ್ಮ ದೇಶವನ್ನು ಹಾಳು ಮಾಡಿ, ನಮ್ಮಲ್ಲಿ ಅನೇಕರನ್ನು ಕೊಂದ ನಮ್ಮ ವೈರಿಯನ್ನು ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು,” ಎಂದು ಅವರು ಹೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 16:24
14 ತಿಳಿವುಗಳ ಹೋಲಿಕೆ  

ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದರು.


ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಹಿಂಸಿಸಿದ್ದರಿಂದ ಇವರು ಸತ್ತದ್ದಕ್ಕೆ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.


ತಮ್ಮ ಬಲೆಗಳಿಗೆ ಆರಾಧನೆ ಮಾಡುತ್ತಾ ಬಲಿ ಕೊಡುತ್ತಾರೆ, ತಮ್ಮ ಜಾಲಗಳ ಎದುರು ಧೂಪಹಾಕುತ್ತಾರೆ; ಅವುಗಳ ಮೂಲಕವೇ ಅವರ ಭೋಜನವು ಪುಷ್ಟಿಯಾಯಿತು, ಅವರ ಆಹಾರವು ರುಚಿ ಎಂದು ಹೇಳುತ್ತಾರೆ.


ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಮುಂದೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ, ಪತ್ನಿ ಹಾಗೂ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ, ಕಣ್ಣು, ಕಿವಿ ಇಲ್ಲದ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ, ಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ, ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ.


‘ಆದರೂ ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ, ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು.


ಹೀಗಿರುವುದರಿಂದ ಯೆಹೋವನೇ, ನಮ್ಮ ದೇವರೇ, ನೀನೇ ಅದ್ವಿತೀಯನಾದ ಯೆಹೋವನೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು ಎಂದು ಪ್ರಾರ್ಥಿಸಿದನು.”


ಫಿಲಿಷ್ಟಿಯರು ಸೌಲನಿಗಿರುವುದೆಲ್ಲವನ್ನು ಸುಲಿದುಕೊಂಡು ಅವನ ತಲೆಯನ್ನೂ, ಆಯುಧಗಳನ್ನೂ ತಮ್ಮ ದೇಶದ ಎಲ್ಲಾ ಕಡೆಗೆ ಕಳುಹಿಸಿ, ತಮ್ಮ ದೇವತೆಗಳಿಗೂ, ಜನರಿಗೂ ಜಯವಾರ್ತೆಯನ್ನು ಮುಟ್ಟಿಸಿದರು.


ಸೌಲನ ತಲೆಯನ್ನು ಕಡಿದು ಅವನ ಆಯುಧಗಳನ್ನು ತೆಗೆದುಕೊಂಡನು. ಅವುಗಳನ್ನು ತಮ್ಮ ದೇಶದ ಎಲ್ಲಾ ಕಡೆಗೂ ಕಳುಹಿಸಿ, ತಮ್ಮ ಎಲ್ಲ ಜನರಿಗೂ ದೇವಸ್ಥಾನಗಳಿಗೂ ಜಯವಾರ್ತೆಯನ್ನು ಮುಟ್ಟಿಸಿದರು.


“ಕತ್ತೆಯ ದವಡೇ ಎಲುಬಿನಿಂದ ಸಾವಿರ ಜನರನ್ನು ಸಾಯಿಸಿದೆನು; ಕತ್ತೆಯ ದವಡೇ ಎಲುಬಿನಿಂದ ಹೆಣಗಳನ್ನು ರಾಶಿರಾಶಿಯಾಗಿ ಬೀಳಿಸಿದೆನು” ಎಂದು ಹೇಳಿ,


ಅವರ ತೊಡೆ, ಸೊಂಟಗಳನ್ನು ಮುರಿದು, ಅವರನ್ನು ಸಂಹರಿಸಿ, ತಾನು ಹೋಗಿ ಏಟಾಮ್ ಗಿರಿಯ ಗುಹೆಯಲ್ಲಿ ವಾಸಮಾಡಿದನು.


ಆದರೆ ಅವರ ವಿರೋಧಿಗಳ ಹಮ್ಮಿನಿಂದ ತಪ್ಪಾದ ಭಾವನೆ ಮಾಡಿಕೊಂಡು, ‘ಇದು ನಮ್ಮ ಭುಜಬಲದಿಂದಲೇ ಹೊರತು ಯೆಹೋವನಿಂದ ಆಗಲಿಲ್ಲ ಅಂದುಕೊಳ್ಳುವರು’ ಎಂದು ನಾನು ಹಿಂದೆಗೆದೆನು” ಎಂಬುದೇ.


ಅವರು ಸಂಭ್ರಮದಲ್ಲಿದ್ದಾಗ, “ನಮ್ಮ ವಿನೋದಕ್ಕೋಸ್ಕರ ಸಂಸೋನನನ್ನು ಕರೆದುಕೊಂಡು ಬನ್ನಿರಿ” ಅಂದರು. ಅದರಂತೆಯೇ ಸಂಸೋನನನ್ನು ಸೆರೆಮನೆಯಿಂದ ಕರೆದುಕೊಂಡು ಬಂದರು. ಅವನು ಎರಡು ಸ್ತಂಭಗಳ ನಡುವೆ ನಿಂತು ವಿನೋದ ಮಾಡಬೇಕಾಯಿತು.


ವಿಗ್ರಹಗಳಲ್ಲಿ ಹಿಗ್ಗುವವರೂ, ಮೂರ್ತಿಪೂಜಕರೆಲ್ಲರೂ ನಾಚಿಕೆಗೆ ಒಳಪಡುವರು; ದೇವರುಗಳೆಂದು ಕರೆಯಲ್ಪಡುವವರೇ, ನೀವೆಲ್ಲರೂ ಆತನಿಗೆ ಅಡ್ಡಬೀಳಿರಿ.


ಸಂಸೋನನು ಲೆಹೀಯ ಸಮೀಪಕ್ಕೆ ಬರಲು ಫಿಲಿಷ್ಟಿಯರು ಅವನನ್ನು ಕಂಡು ಆರ್ಭಟಿಸಿದರು. ಯೆಹೋವನ ಆತ್ಮವು ಅವನ ಮೇಲೆ ಬಂದದ್ದರಿಂದ ಅವನ ರಟ್ಟೆಗಳಿಗೆ ಸುತ್ತಲೂ ಕಟ್ಟಿದ್ದ ಹಗ್ಗಗಳು ಸುಟ್ಟ ಸೆಣಬಿನ ಹಾಗಾದವು; ಕೈಗೆ ಹಾಕಿದ ಬೇಡಿಗಳು ಕಳಚಿ ಬಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು