Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 16:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆಗ ಸಂಸೋನನು ಯೆಹೋವನಿಗೆ, “ಕರ್ತನೇ, ಯೆಹೋವನೇ, ಫಿಲಿಷ್ಟಿಯರು ಕಿತ್ತುಹಾಕಿದ ನನ್ನ ಎರಡೂ ಕಣ್ಣುಗಳಲ್ಲಿ ಒಂದಕ್ಕೋಸ್ಕರವಾದರೂ ನಾನು ಅವರಿಗೆ ಮುಯ್ಯಿತೀರಿಸುವ ಹಾಗೆ ನನ್ನನ್ನು ಈ ಸಾರಿ ಬಲಪಡಿಸು” ಎಂದು ಮೊರೆಯಿಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಆಗ ಸಂಸೋನನು ಸರ್ವೇಶ್ವರನಿಗೆ, “ಪ್ರಭು ಸರ್ವೇಶ್ವರಾ, ಫಿಲಿಷ್ಟಿಯರು ಕಿತ್ತುಹಾಕಿದ ನನ್ನ ಎರಡು ಕಣ್ಣುಗಳಲ್ಲಿ ಒಂದಕ್ಕಾದರು ನಾನು ಅವರಿಗೆ ಮುಯ್ಯಿ ತೀರಿಸುವ ಹಾಗೆ ನನ್ನನ್ನು ಈ ಸಾರಿ ಬಲಪಡಿಸಿರಿ,” ಎಂದು ಮೊರೆಯಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆಗ ಸಂಸೋನನು ಯೆಹೋವನಿಗೆ - ಕರ್ತನೇ, ಯೆಹೋವನೇ, ಫಿಲಿಷ್ಟಿಯರು ಕಿತ್ತುಹಾಕಿದ ನನ್ನ ಎರಡೂ ಕಣ್ಣುಗಳಲ್ಲಿ ಒಂದಕ್ಕೋಸ್ಕರವಾದರೂ ನಾನು ಅವರಿಗೆ ಮುಯ್ಯಿತೀರಿಸುವ ಹಾಗೆ ನನ್ನನ್ನು ಈ ಸಾರಿ ಬಲಪಡಿಸು ಎಂದು ಮೊರೆಯಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆಗ ಸಂಸೋನನು ಯೆಹೋವನಿಗೆ, “ಸರ್ವಶಕ್ತನಾದ ಯೆಹೋವನೇ, ನನ್ನ ಕಡೆಗೆ ಗಮನ ಹರಿಸು. ದೇವರೇ, ದಯವಿಟ್ಟು ನನಗಿನ್ನೊಂದು ಸಲ ಶಕ್ತಿಯನ್ನು ಕೊಡು. ಫಿಲಿಷ್ಟಿಯರು ನನ್ನ ಎರಡು ಕಣ್ಣುಗಳನ್ನು ಕಿತ್ತುಹಾಕಿದ್ದಕ್ಕೆ ಇದೊಂದು ಸಲ ಅವರನ್ನು ಶಿಕ್ಷಿಸುತ್ತೇನೆ” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆಗ ಸಂಸೋನನು ಯೆಹೋವ ದೇವರನ್ನು ಕೂಗಿ, “ಸಾರ್ವಭೌಮ ಯೆಹೋವ ದೇವರೇ, ನಾನು ನನ್ನ ಎರಡು ಕಣ್ಣುಗಳಿಗಾಗಿ ಒಂದೇ ಸಾರಿ ಫಿಲಿಷ್ಟಿಯರಿಗೆ ಮುಯ್ಯಿಗೆ ಮುಯ್ಯಿ ಮಾಡುವ ಹಾಗೆ ಈ ಸಾರಿ ಮಾತ್ರ ನನ್ನನ್ನು ನೆನಸಿ ಬಲಪಡಿಸಿ ದೇವರೇ,”

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 16:28
19 ತಿಳಿವುಗಳ ಹೋಲಿಕೆ  

ಅದಕ್ಕೆ ನಾನು, “ಯೆಹೋವನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕಕ್ಕೆ ತಂದು ಕಟಾಕ್ಷಿಸು; ನನಗಾಗಿ ನನ್ನ ಹಿಂಸಕರಿಗೆ ಮುಯ್ಯಿತೀರಿಸು. ಅವರಿಗೆ ಹೆಚ್ಚು ತಾಳ್ಮೆಯನ್ನು ತೋರಿಸಬೇಡ, ನನ್ನನ್ನು ನಿರ್ಮೂಲ ಮಾಡಬೇಡ. ನಿನ್ನ ನಿಮಿತ್ತವೇ ನಾನು ನಿಂದೆಗೆ ಗುರಿಯಾದೆನೆಂದು ಜ್ಞಾಪಕಕ್ಕೆ ತಂದುಕೋ.


ನನಗೆ ಕೃಪೆತೋರಿಸಿ ನನ್ನ ವೈರಿಗಳನ್ನು ಖಂಡಿಸಿಬಿಡು. ನನ್ನ ಪ್ರಾಣಕಂಟಕರನ್ನೆಲ್ಲಾ ಕಡಿದುಹಾಕು; ನಾನು ನಿನ್ನ ಸೇವಕನಲ್ಲವೇ.


ಅವರು, “ಸರ್ವಶಕ್ತನಾದ ಕರ್ತನೇ, ಪರಿಶುದ್ಧನೂ, ಸತ್ಯವಂತನೂ, ಆಗಿರುವಾತನೇ, ನಮ್ಮ ರಕ್ತವನ್ನು ಸುರಿಸಿದ ಭೂಲೋಕ ನಿವಾಸಿಗಳಿಗೆ ನೀನು ಇನ್ನೆಷ್ಟು ಸಮಯ ನ್ಯಾಯತೀರಿಸದೆಯೂ, ಪ್ರತಿದಂಡನೆ ಮಾಡದೆಯೂ ಇರುವಿ?” ಎಂದು ಮಹಾಶಬ್ದದಿಂದ ಕೂಗಿದರು.


ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು; ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು;


ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.


ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು. ಕರ್ತನು ಅವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಅವನಿಗೆ ಕೊಡುವನು.


ಆಗ ಯೆಹೋವನ ಹೆಸರನ್ನು ಹೇಳಿ, “ಯೆಹೋವನೇ, ಕೃಪೆಮಾಡಿ ನನ್ನ ಪ್ರಾಣವನ್ನು ರಕ್ಷಿಸು” ಎಂದು ಪ್ರಾರ್ಥಿಸಿದೆನು.


ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿಯೋ? ನಮ್ಮ ಮೇಲೆ ಬಂದಿರುವ ಈ ಮಹಾಸಮೂಹದ ಮುಂದೆ ನಿಲ್ಲುವುದಕ್ಕೆ ನಮ್ಮಲ್ಲಿ ಬಲವಿಲ್ಲ; ಏನು ಮಾಡಬೇಕೆಂಬುದೂ ತಿಳಿಯದು; ನಮ್ಮ ಕಣ್ಣುಗಳು ನಿನ್ನನ್ನೇ ನೋಡುತ್ತಿವೆ” ಎಂದು ಪ್ರಾರ್ಥಿಸಿದನು.


ಅವನು ಬಹಳ ಬಾಯಾರಿದವನಾಗಿ ಯೆಹೋವನಿಗೆ, “ನೀನು ನಿನ್ನ ಸೇವಕನ ಮೂಲಕವಾಗಿ ಈ ಮಹಾಜಯವನ್ನುಂಟುಮಾಡಿದ ಮೇಲೆ ನಾನು ದಾಹದಿಂದ ಸತ್ತು ಸುನ್ನತಿಯಿಲ್ಲದವರ ಕೈಯಲ್ಲಿ ಬೀಳಬೇಕೋ” ಎಂದು ಮೊರೆಯಿಡಲು


ಯೆಹೋವನ ಎಲ್ಲಾ ಶತ್ರುಗಳೂ ಹೀಗೆಯೇ ನಾಶವಾಗಲಿ. ಆತನನ್ನು ಪ್ರೀತಿಸುವ ಭಕ್ತರು ಪ್ರಕಾಶದಿಂದ ಉದಯಿಸುವ ಸೂರ್ಯನಂತಿರಲಿ.” ಅನಂತರ ದೇಶದಲ್ಲಿ ನಲವತ್ತು ವರ್ಷ ಸಮಾಧಾನವಿತ್ತು.


ಇನ್ನೂ ಏನು ಹೇಳಬೇಕು? ಗಿದ್ಯೋನ್, ಬಾರಾಕ ಸಂಸೋನ, ಯೆಪ್ತಾಹ, ದಾವೀದ, ಸಮುವೇಲ ಮತ್ತು ಪ್ರವಾದಿಗಳ ವಿಷಯವಾಗಿ ಹೇಳಬೇಕಾದರೆ ನನಗೆ ಸಮಯ ಸಾಲದು.


“ನನ್ನ ಆತ್ಮವು ನನ್ನಲ್ಲಿ ಕುಂದಿಹೋದಾಗ ಯೆಹೋವನಾದ ನಿನ್ನನ್ನು ನೆನಪು ಮಾಡಿಕೊಂಡು ಸ್ಮರಿಸಿದೆನು; ನನ್ನ ಬಿನ್ನಹವು ನಿನಗೆ ಮುಟ್ಟಿತು, ಅದು ನಿನ್ನ ಪರಿಶುದ್ಧಾಲಯವನ್ನು ಬಂದು ಸೇರಿತು.


ಆ ಮನೆಯು ಸ್ತ್ರೀಪುರುಷರಿಂದ ಕಿಕ್ಕಿರಿದು ಹೋಗಿತ್ತು. ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಅಲ್ಲಿದ್ದರು; ಸಂಸೋನನ ವಿನೋದವನ್ನು ನೋಡುವುದಕ್ಕಾಗಿ ಬಂದವರಲ್ಲಿ ಸುಮಾರು ಮೂರು ಸಾವಿರ ಮಂದಿ ಸ್ತ್ರೀಪುರುಷರು ಮಾಳಿಗೆಯ ಮೇಲಿದ್ದರು.


ಮನೆಯ ಆಧಾರಸ್ತಂಭಗಳಲ್ಲಿ ಒಂದನ್ನು ಬಲಗೈಯಿಂದಲೂ, ಇನ್ನೊಂದನ್ನು ಎಡಗೈಯಿಂದಲೂ ಹಿಡಿದು, ಅವುಗಳನ್ನು ಒತ್ತಿ,


ಯೆಹೋವನೇ, ಏಳು; ದೇವರೇ, ಕುಗ್ಗಿದವನನ್ನು ಮರೆಯಬೇಡ; ಅವನನ್ನು ರಕ್ಷಿಸುವುದಕ್ಕೆ ಕೈಚಾಚು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು