Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 17:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮಗನು ಹಿಂದಕ್ಕೆ ಕೊಟ್ಟ ರೂಪಾಯಿಗಳಲ್ಲಿ ಇನ್ನೂರು ರೂಪಾಯಿಗಳನ್ನು ತೆಗೆದು ಅಕ್ಕಸಾಲಿಗನಿಗೆ ಕೊಟ್ಟಳು. ಅವನು ಅವುಗಳಿಂದ ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನು ಮಾಡಿಕೊಟ್ಟನು. ಮೀಕನು ಅದನ್ನು ತನ್ನ ಮನೆಯಲ್ಲಿಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮಗನು ಹಿಂದಕ್ಕೆ ಕೊಟ್ಟ ನಾಣ್ಯಗಳಲ್ಲಿ ಇನ್ನೂರು ನಾಣ್ಯಗಳನ್ನು ತೆಗೆದು ಅಕ್ಕಸಾಲಿಗನಿಗೆ ಕೊಟ್ಟಳು. ಅವನು ಅವುಗಳಿಂದ ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನು ಮಾಡಿಕೊಟ್ಟನು. ಮೀಕನು ಅದನ್ನು ತನ್ನ ಮನೆಯಲ್ಲೇ ಇಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮಗನು ಹಿಂದಕ್ಕೆ ಕೊಟ್ಟ ರೂಪಾಯಿಗಳಲ್ಲಿ ಇನ್ನೂರು ರೂಪಾಯಿಗಳನ್ನು ತೆಗೆದು ಅಕ್ಕಸಾಲಿಗನಿಗೆ ಕೊಟ್ಟಳು. ಅವನು ಅವುಗಳಿಂದ ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನು ಮಾಡಿಕೊಟ್ಟನು. ಮೀಕನು ಅದನ್ನು ತನ್ನ ಮನೆಯಲ್ಲಿಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ಮೀಕನು ಆ ಬೆಳ್ಳಿಯನ್ನು ತನ್ನ ತಾಯಿಗೆ ಹಿಂದಿರುಗಿಸಿದನು. ಅವಳು ಸುಮಾರು ಐದು ತೊಲೆಯಷ್ಟು ಬೆಳ್ಳಿಯ ನಾಣ್ಯಗಳನ್ನು ಒಬ್ಬ ಅಕ್ಕಸಾಲಿಗನಿಗೆ ಕೊಟ್ಟಳು. ಆ ಅಕ್ಕಸಾಲಿಗನು ಅದರಿಂದ ಒಂದು ವಿಗ್ರಹವನ್ನು ಮಾಡಿ ಅದಕ್ಕೆ ಬೆಳ್ಳಿಯ ಹೊದಿಕೆ ಹಾಕಲು ಉಪಯೋಗಿಸಿದನು. ಆ ವಿಗ್ರಹವನ್ನು ಮೀಕನ ಮನೆಯಲ್ಲಿ ಇಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ಅವನು ಆ ಹಣವನ್ನು ತನ್ನ ತಾಯಿಗೆ ತಿರುಗಿ ಕೊಟ್ಟನು. ಆಗ ಅವನ ತಾಯಿ ಇನ್ನೂರು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು ಅಕ್ಕಸಾಲಿಗನ ಕೈಯಲ್ಲಿ ಕೊಟ್ಟಳು. ಅವನು ಅವುಗಳಿಂದ ಕೆತ್ತಿದ ವಿಗ್ರಹವನ್ನೂ, ಎರಕದ ವಿಗ್ರಹವನ್ನೂ ಮಾಡಿದನು. ಅವು ಮೀಕನ ಮನೆಯಲ್ಲಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 17:4
9 ತಿಳಿವುಗಳ ಹೋಲಿಕೆ  

ಅವನು ಆ ಸಾವಿರದ ನೂರು ರೂಪಾಯಿಗಳನ್ನು ತನ್ನ ತಾಯಿಗೆ ಹಿಂದಕ್ಕೆ ಕೊಡಲು ಆಕೆಯು, “ನನ್ನ ಮಗನಿಗೆ ಹಿತವಾಗಲೆಂದು ಈ ಹಣವನ್ನು ಯೆಹೋವನಿಗೆ ಹರಕೆಮಾಡಿದ್ದೇನೆ; ಇದರಿಂದ ಒಂದು ಎರಕದ ವಿಗ್ರಹವನ್ನು ಮಾಡಿಸಿ ನಿನ್ನ ವಶಕ್ಕೆ ಕೊಡುವೆನು” ಎಂದು ಹೇಳಿ,


ಈ ಮೀಕನು ಏಫೋದನ್ನೂ ವಿಗ್ರಹಗಳನ್ನೂ ಮಾಡಿಸಿ, ಅವುಗಳನ್ನು ತಾನು ಕಟ್ಟಿಸಿದ ದೇವಸ್ಥಾನದಲ್ಲಿಟ್ಟು, ತನ್ನ ಮಕ್ಕಳಲ್ಲಿ ಒಬ್ಬನನ್ನು ಅರ್ಚಕ ಸೇವೆಗಾಗಿ ಪ್ರತಿಷ್ಠಿಸಿದನು.


ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ, ಎರಕದ ನಿಮ್ಮ ಬೊಂಬೆಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ಆ ವಿಗ್ರಹಗಳನ್ನು, “ತೊಲಗಿ ಹೋಗಿರಿ” ಎಂದು ಹೊಲೆಯಾದ ಬಟ್ಟೆಯಂತೆ ಬಿಸಾಡುವಿರಿ.


ಬಡಗಿಯು ಮರಕ್ಕೆ ನೂಲು ಹಾಕಿ ಮೊಳೆಯಿಂದ ಗೆರೆಯೆಳೆದು ಬಾಚಿಗಳಿಂದ ಕೆತ್ತಿ, ಕೈವಾರದಿಂದ ಗುರುತಿಸಿ, ಅದು ಮನೆಯಲ್ಲಿ ವಾಸಿಸತಕ್ಕದ್ದಾಗಲೆಂದು ಮನುಷ್ಯನ ಆಕಾರಕ್ಕೆ ತಂದು ಮನುಷ್ಯನ ಅಂದದಂತೆ ರೂಪಿಸುವನು.


‘ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರೆಲ್ಲರೂ, ‘ಆಮೆನ್’” ಅನ್ನಬೇಕು.


ಯಾಜಕನೂ ಬಂದು ಇವರೊಡನೆ ಬಾಗಿಲಲ್ಲಿ ನಿಂತಿದ್ದಾಗ, ಆ ಐದು ಮಂದಿ ಮನೆಯನ್ನು ಹೊಕ್ಕು, ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನೂ, ಏಫೋದನ್ನೂ, ದೇವತಾಪ್ರತಿಮೆಗಳನ್ನೂ ತೆಗೆದುಕೊಂಡರು.


ವಿಗ್ರಹ ಕೆತ್ತುವವನ ವಿಗ್ರಹವಾಗಲಿ ಅಥವಾ ಎರಕದಿಂದ ಮಾಡಿದ ಗೊಂಬೆಗಳಿಂದಾಗಲಿ ಲಾಭವೇನು? ಹಾಗೆ ದೇವರುಗಳನ್ನು ರೂಪಿಸುವವರು ಸುಳ್ಳನ್ನು ಬಿತ್ತುವವರು; ಏಕೆಂದರೆ, ಆ ನಿರ್ಜೀವ ವಿಗ್ರಹವನ್ನು ನಿರ್ಮಿಸಿದವನು ತನ್ನ ಕೈಕೆಲಸದ ಮೇಲೆಯೇ ಭರವಸೆ ಇಟ್ಟಿದ್ದಾನೆ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು