Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 18:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯಾಜಕನೂ ಬಂದು ಇವರೊಡನೆ ಬಾಗಿಲಲ್ಲಿ ನಿಂತಿದ್ದಾಗ, ಆ ಐದು ಮಂದಿ ಮನೆಯನ್ನು ಹೊಕ್ಕು, ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನೂ, ಏಫೋದನ್ನೂ, ದೇವತಾಪ್ರತಿಮೆಗಳನ್ನೂ ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಯಾಜಕನೂ ಬಂದು ಇವರೊಡನೆ ಬಾಗಿಲಲ್ಲಿ ನಿಂತಿದ್ದಾಗ ಆ ಐದು ಮಂದಿ ಮನೆಯನ್ನು ಹೊಕ್ಕು ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನೂ ‘ಏಫೋದ’ನ್ನೂ ದೇವತಾಪ್ರತಿಮೆಗಳನ್ನೂ ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯಾಜಕನೂ ಬಂದು ಇವರೊಡನೆ ಬಾಗಲಲ್ಲಿ ನಿಂತಿದ್ದಾಗ ಆ ಐದು ಮಂದಿ ಮನೆಯನ್ನು ಹೊಕ್ಕು ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನೂ ಏಫೋದನ್ನೂ ದೇವತಾ ಪ್ರತಿಮೆಗಳನ್ನೂ ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17-18 ಆ ಐದು ಜನ ಗೂಢಚಾರರು ಮನೆಯೊಳಗೆ ಪ್ರವೇಶ ಮಾಡಿದರು. ಯಾಜಕನು ಹೊರಗೆ ಬಾಗಿಲ ಬಳಿಯಲ್ಲಿ ಯುದ್ಧ ಸನ್ನದ್ಧರಾದ ಆರುನೂರು ಜನರ ಸಂಗಡ ನಿಂತಿದ್ದನು. ಆಗ ಆ ಐದು ಮಂದಿ ಮನೆಯೊಳಗೆ ಹೋಗಿ ಕೆತ್ತನೆಯ ವಿಗ್ರಹವನ್ನೂ ಏಫೋದನ್ನೂ ಬೆಳ್ಳಿವಿಗ್ರಹಗಳನ್ನೂ ಗೃಹದೇವತೆಗಳ ವಿಗ್ರಹಗಳನ್ನೂ ತೆಗೆದುಕೊಂಡರು. ಅವರನ್ನು ಕಂಡ ತರುಣ ಲೇವಿಯು, “ನೀವು ಏನು ಮಾಡುತ್ತಿದ್ದೀರಿ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ದೇಶವನ್ನು ಸಂಚರಿಸಿ ನೋಡಿ ಬಂದ ಆ ಐದು ಮಂದಿ ಒಳಗೆ ಹೋಗಿ, ಕೆತ್ತಿದ ವಿಗ್ರಹವನ್ನೂ, ಏಫೋದನ್ನೂ, ಪ್ರತಿಮೆಗಳನ್ನೂ, ಎರಕದ ವಿಗ್ರಹವನ್ನೂ ತೆಗೆದುಕೊಂಡರು. ಆಗ ಯಾಜಕನೂ, ಯುದ್ಧದ ಆಯುಧಗಳನ್ನು ಕಟ್ಟಿಕೊಂಡ ಆರುನೂರು ಜನರೂ ಬಾಗಿಲ ಬಳಿಯಲ್ಲಿ ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 18:17
19 ತಿಳಿವುಗಳ ಹೋಲಿಕೆ  

ಆಗ ಲಯಿಷ್ ದೇಶವನ್ನು ಸಂಚರಿಸಿ ನೋಡುವುದಕ್ಕೆ ಹೋಗಿದ್ದ ಐದು ಮಂದಿ ತಮ್ಮ ಬಂಧುಗಳಿಗೆ, “ಈ ಗ್ರಾಮದಲ್ಲಿ ಒಂದು ಏಫೋದೂ, ದೇವತಾಪ್ರತಿಮೆಗಳೂ, ಕೆತ್ತನೆಯ ಮತ್ತು ಎರಕದ ವಿಗ್ರಹಗಳೂ ಇರುತ್ತವೆಂಬುದು ನಿಮಗೆ ಗೊತ್ತುಂಟೋ?


ಅವರು ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಿಂದ ತಮ್ಮ ಕುಲದಲ್ಲಿ ಐದು ಮಂದಿ ಪರಾಕ್ರಮಶಾಲಿಗಳಾದ ಗೂಢಚಾರರನ್ನು ಆರಿಸಿ ಅವರಿಗೆ, “ನೀವು ಹೋಗಿ ಲಯಿಷ್ ದೇಶವನ್ನು ಸಂಚರಿಸಿ ನೋಡಿರಿ” ಎಂದು ಆಜ್ಞಾಪಿಸಿ ಕಳುಹಿಸಿದರು. ಇವರು ಪ್ರಯಾಣಮಾಡುತ್ತಾ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿದ್ದ ಮೀಕನ ಮನೆಗೆ ಬಂದು ಇಳಿದುಕೊಂಡರು.


ನಿನ್ನ ಮೂರ್ತಿಗಳನ್ನು, ಕಲ್ಲುಕಂಬಗಳನ್ನು ನಿನ್ನಲ್ಲಿ ನಿಲ್ಲದಂತೆ ಒಡೆದುಹಾಕುವೆನು. ನಿನ್ನ ಕೈರೂಪಿಸಿದ್ದನ್ನು ಇನ್ನು ಪೂಜಿಸದಂತೆ ಮಾಡುವೆ.


ಅವರು ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡಿ, ಪೀಠದ ಮೇಲೆ ಇಳಿಸಿ ನಿಲ್ಲಿಸುವರು. ಅದು ಅಲ್ಲಿಂದ ಜರುಗದು. ಒಬ್ಬನು ಕೂಗಿಕೊಂಡರೂ ಅದು ಅವನಿಗೆ ಉತ್ತರಕೊಡಲಾರದು. ಇಲ್ಲವೆ ಅವನನ್ನು ಕಷ್ಟದಿಂದ ಬಿಡಿಸಲಾರದು.


ದೇವರ ಮಂಜೂಷವು ಶತ್ರುವಶವಾಯಿತು; ಏಲಿಯ ಮಕ್ಕಳಾದ ಹೊಫ್ನಿಯೂ ಮತ್ತು ಫೀನೆಹಾಸನೂ ಹತರಾದರು.


ಯೋವಾಷನು ತನಗೆ ವಿರೋಧವಾಗಿ ನಿಂತವರೆಲ್ಲರಿಗೆ, “ಬಾಳನಿಗೋಸ್ಕರ ನೀವು ವ್ಯಾಜ್ಯಮಾಡಬೇಕೋ? ನೀವು ಅವನನ್ನು ರಕ್ಷಿಸಬೇಕೋ? ಅವನಿಗಾಗಿ ವ್ಯಾಜ್ಯಮಾಡುವವರು ಈ ಹೊತ್ತೇ ಕೊಲ್ಲಲ್ಪಡಲಿ. ಬಾಳನು ದೇವನಾಗಿದ್ದರೆ ತನ್ನ ಯಜ್ಞವೇದಿಯನ್ನು ಕೆಡವಿಬಿಟ್ಟದ್ದಕ್ಕಾಗಿ ತಾನೇ ವ್ಯಾಜ್ಯಮಾಡಲಿ” ಎಂದನು.


ಜನರು ಮಾಡಿಸಿಕೊಂಡಿದ್ದ ಹೋರಿಕರುವನ್ನು ಅವನು ಬೆಂಕಿಯಿಂದ ಸುಟ್ಟು ಅರೆದು ಪುಡಿ ಪುಡಿ ಮಾಡಿ ನೀರಿನಲ್ಲಿ ಕಲಸಿ ಇಸ್ರಾಯೇಲರಿಗೆ ಆ ನೀರನ್ನು ಕುಡಿಸಿದನು.


ಆಗ ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವುದಕ್ಕೋಸ್ಕರ ಹೋಗಿದ್ದನು. ಹೀಗಿರುವಲ್ಲಿ ರಾಹೇಲಳು ತನ್ನ ತಂದೆಯ ಮನೆಯಲ್ಲಿದ್ದ ವಿಗ್ರಹಗಳನ್ನು ಕದ್ದುಕೊಂಡಳು.


ಆದರೆ ತಂದೆಯ ಮನೆಗೆ ಹೋಗುವುದಕ್ಕೆ ನಿನಗೆ ಬಹಳ ಆಶೆಯಿರುವುದರಿಂದ ಹೋಗಬೇಕಾಯಿತು. ಆದರೆ ನೀನು ನನ್ನ ದೇವರುಗಳನ್ನು ಕದ್ದದ್ದು ಯಾಕೆ?” ಎಂದು ಕೇಳಿದನು.


ಇಷ್ಟರಲ್ಲಿ ಯುದ್ಧಸನ್ನದ್ಧರಾದ ಆರುನೂರು ಮಂದಿ ದಾನ್ಯರು ಬಂದು ಬಾಗಿಲಲ್ಲಿ ನಿಂತರು.


ಅವರು ಮೀಕನ ಮನೆಯನ್ನು ಹೊಕ್ಕು ಅವುಗಳನ್ನು ತೆಗೆದುಕೊಂಡು ಬರುವಾಗ ಯಾಜಕನು ಅದನ್ನು ಕಂಡು ಅವರಿಗೆ, “ನೀವು ಮಾಡಿದ್ದೇನು” ಅಂದನು.


ಅನಂತರ ಆಕೆಯು ಮನೆಯಲ್ಲಿದ್ದ ಒಂದು ವಿಗ್ರಹವನ್ನು ತಂದು, ಹಾಸಿಗೆಯ ಮೇಲೆ ಮಲಗಿಸಿ, ಅದರ ಮುಖದ ಮೇಲೆ ಮೇಕೆಕೂದಲಿನಿಂದ ಹೆಣೆದ ಜಾಲರಿಯನ್ನು ತಲೆದಿಂಬಿನ ಜಾಗದಲ್ಲಿ ಹಾಕಿ ಕಂಬಳಿಯನ್ನು ಹೊದಿಸಿದಳು.


ಆಹಾ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ವ್ಯರ್ಥವೇ, ಅವರ ಎರಕದ ಬೊಂಬೆಗಳು ಗಾಳಿ ಮತ್ತು ಶೂನ್ಯವೇ.


“ಮಾರ್ಗವು ಕವಲೊಡೆಯುವ ಸ್ಥಳದಲ್ಲಿ, ಎರಡು ದಾರಿಗಳ ಮೊದಲಲ್ಲಿ ಬಾಬೆಲಿನ ಅರಸನು ಶಕುನ ನೋಡುವುದಕ್ಕೆ ನಿಂತಿದ್ದಾನೆ; ಬಾಣಗಳನ್ನು ಕಲಕಿ, ವಿಗ್ರಹಗಳನ್ನು ಪ್ರಶ್ನೆಕೇಳಿ, ಕಾಳಿಜವನ್ನು ಪರೀಕ್ಷಿಸಿದ್ದಾನೆ.


ಇದರಂತೆ ರಾಜಮುಖಂಡ, ಯಜ್ಞ, ಸ್ತಂಭ, ಏಫೋದು, ವಿಗ್ರಹಗಳಿಲ್ಲದೆ ಇಸ್ರಾಯೇಲರು ಬಹಳ ದಿನಗಳು ತಾಳಿಕೊಂಡಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು