Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 18:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವರು ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಿಂದ ತಮ್ಮ ಕುಲದಲ್ಲಿ ಐದು ಮಂದಿ ಪರಾಕ್ರಮಶಾಲಿಗಳಾದ ಗೂಢಚಾರರನ್ನು ಆರಿಸಿ ಅವರಿಗೆ, “ನೀವು ಹೋಗಿ ಲಯಿಷ್ ದೇಶವನ್ನು ಸಂಚರಿಸಿ ನೋಡಿರಿ” ಎಂದು ಆಜ್ಞಾಪಿಸಿ ಕಳುಹಿಸಿದರು. ಇವರು ಪ್ರಯಾಣಮಾಡುತ್ತಾ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿದ್ದ ಮೀಕನ ಮನೆಗೆ ಬಂದು ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಿಂದ ತಮ್ಮ ಕುಲದಲ್ಲಿ ಐದುಮಂದಿ ಪರಾಕ್ರಮಶಾಲಿಗಳಾದ ಗೂಢಚಾರರನ್ನು ಆರಿಸಿ ಅವರಿಗೆ, “ನೀವು ಹೋಗಿ (ಲಯಿಷ್) ದೇಶವನ್ನು ಸಂಚರಿಸಿ ನೋಡಿ ಬನ್ನಿ,” ಎಂದು ಆಜ್ಞಾಪಿಸಿ ಕಳುಹಿಸಿದನರು . ಇವರು ಪ್ರಯಾಣ ಮಾಡುತ್ತಾ ಎಫ್ರಯಿಮ್ ಬೆಟ್ಟದ ಸೀಮೆಯಲ್ಲಿ ಇದ್ದ ಮೀಕನ ಮನೆಗೆ ಬಂದು ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮತ್ತು ಅವರು ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಿಂದ ತಮ್ಮ ಕುಲದಲ್ಲಿ ಐದು ಮಂದಿ ಪರಾಕ್ರಮ ಶಾಲಿಗಳಾದ ಗೂಢಚಾರರನ್ನು ಆರಿಸಿ ಅವರಿಗೆ - ನೀವು ಹೋಗಿ [ಲಯಿಷ್] ದೇಶವನ್ನು ಸಂಚರಿಸಿ ನೋಡಿರಿ ಎಂದು ಆಜ್ಞಾಪಿಸಿ ಕಳುಹಿಸಿದರು. ಇವರು ಪ್ರಯಾಣಮಾಡುತ್ತಾ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿದ್ದ ಮೀಕನ ಮನೆಗೆ ಬಂದು ಇಳುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದಾನ್ ಕುಲದವರು ತಮಗೆ ಭೂಮಿಯನ್ನು ಹುಡುಕುವುದಕ್ಕಾಗಿ ಐದು ಮಂದಿ ಸೈನಿಕರನ್ನು ಕಳುಹಿಸಿದರು. ಅವರು ತಮ್ಮ ವಾಸಕ್ಕಾಗಿ ಒಳ್ಳೆಯ ಸ್ಥಳವನ್ನು ಹುಡುಕಲು ಹೋದರು. ಆ ಐದು ಮಂದಿ ಚೊರ್ಗಾ ಮತ್ತು ಎಷ್ಟಾವೋಲ್ ನಗರದವರಾಗಿದ್ದರು. ಅವರು ದಾನ್ ಕುಲದವರ ಮನೆತನಕ್ಕೆ ಸೇರಿದವರಾದ ಕಾರಣ “ಭೂಮಿಯನ್ನು ಹುಡುಕಲು” ಅವರನ್ನು ಕಳುಹಿಸಲಾಗಿತ್ತು. ಆ ಐದು ಜನರು ಎಫ್ರಾಯೀಮ್ ಬೆಟ್ಟದ ಸೀಮೆಗೆ ಬಂದು ಮೀಕನ ಮನೆಯಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದಾನರು ದೇಶವನ್ನು ಸಂಚರಿಸಿ ನೋಡಿ, ಪರಿಶೋಧಿಸುವುದಕ್ಕಾಗಿ ತಮ್ಮ ಮೇರೆಗಳಲ್ಲಿರುವ ಚೊರ್ಗದಿಂದಲೂ, ಎಷ್ಟಾವೋಲಿನಿಂದಲೂ ತಮ್ಮ ಕುಟುಂಬದಲ್ಲಿ ಪರಾಕ್ರಮಶಾಲಿಗಳಾದ ಐದು ಮಂದಿಯನ್ನು ಕರೆದು, ಅವರ ಸಂಗಡ, “ನೀವು ಹೋಗಿ ದೇಶವನ್ನು ಸಂಚರಿಸಿ ನೋಡಿರಿ,” ಎಂದು ಹೇಳಿ ಕಳುಹಿಸಿದರು. ಹಾಗೆಯೇ ಇವರು ಎಫ್ರಾಯೀಮ್ ಬೆಟ್ಟದಲ್ಲಿರುವ ಮೀಕನ ಮನೆಯ ಬಳಿಗೆ ಬಂದು ಅಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 18:2
20 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ಚೊರ್ಗಕ್ಕೂ, ಎಷ್ಟಾವೋಲಿಗೂ ಮಧ್ಯದಲ್ಲಿರುವ ದಾನ್ ಕುಲದ ಪಾಳೆಯದಲ್ಲಿದ್ದಾಗ ಯೆಹೋವನ ಆತ್ಮವು ಅವನನ್ನು ಪ್ರೇರೇಪಿಸುವುದಕ್ಕೆ ಪ್ರಾರಂಭಿಸಿತು.


ನೂನನ ಮಗನಾದ ಯೆಹೋಶುವನು ಇಬ್ಬರು ಗೂಢಚಾರರನ್ನು ಗುಪ್ತವಾಗಿ ಯೆರಿಕೋ ಪಟ್ಟಣವನ್ನೂ ನೋಡುವುದಕ್ಕೋಸ್ಕರ ಶಿಟ್ಟೀಮಿನಿಂದ ಕಳುಹಿಸಿದನು. ಅವರಿಗೆ “ನೀವು ಹೊರಟು ಹೋಗಿ ಕಾನಾನ್ ದೇಶದ ಯೆರಿಕೋ ಪಟ್ಟಣವನ್ನು ನೋಡಿರಿ” ಎಂದನು. ಆಗ ಅವರು ಹೊರಟು ಹೋಗಿ ರಾಹಾಬಳೆಂಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು.


ಆಗ ಚೊರ್ಗಾ ಎಷ್ಟಾವೋಲ್ ಊರುಗಳಿಂದ ಆರುನೂರು ಮಂದಿ ದಾನ್ ಕುಲದವರು ಯುದ್ಧ ಸನ್ನದ್ಧರಾಗಿ ಹೊರಟು,


ಹಿಂದಿರುಗಿ ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಲ್ಲಿರುವ ತಮ್ಮ ಬಂಧುಗಳ ಬಳಿಗೆ ಬಂದರು. ಅವರ ಬಂಧುಗಳು, “ನೀವು ಯಾವ ವರ್ತಮಾನ ತಂದಿದ್ದೀರಿ” ಎಂದು ಅವರನ್ನು ಕೇಳಲು


ಕಾನಾನ್ ದೇಶದಲ್ಲಿ ಸಂಚರಿಸಿ ನೋಡುವುದಕ್ಕೆ ಮೋಶೆ ಅವರನ್ನು ಕಳುಹಿಸುವಾಗ ಅವರಿಗೆ, “ನೀವು ಕಾನಾನ್ ದೇಶದ ದಕ್ಷಿಣ ಪ್ರಾಂತ್ಯದ ಮಾರ್ಗವಾಗಿ ಬೆಟ್ಟದ ಸೀಮೆಗೆ ಹತ್ತಿಹೋಗಿ ಆ ದೇಶದ ಸಂಗತಿಯನ್ನೆಲ್ಲಾ ನೋಡಿ ತಿಳಿದುಕೊಳ್ಳಬೇಕು.


ಇಲ್ಲವೆ ಯಾವ ಅರಸನಾದರೂ ಮತ್ತೊಬ್ಬ ಅರಸನ ಸಂಗಡ ಯುದ್ಧಮಾಡುವುದಕ್ಕೆ ಹೋಗುವಾಗ ತನ್ನ ಮೇಲೆ ಇಪ್ಪತ್ತು ಸಾವಿರ ದಂಡು ತೆಗೆದುಕೊಂಡು ಬರುವವನನ್ನು ತಾನು ಹತ್ತು ಸಾವಿರ ದಂಡಿನಿಂದ ಎದುರಿಸುವುದಕ್ಕೆ ಶಕ್ತನಾಗುವೆನೋ ಇಲ್ಲವೋ ಎಂದು ಕುಳಿತುಕೊಂಡು ಆಲೋಚಿಸುವುದಿಲ್ಲವೇ?


ಉದ್ದೇಶಗಳು ಮಂತ್ರಾಲೋಚನೆಯಿಂದ ನೆರವೇರುವವು, ಮಂತ್ರಾಲೋಚನೆಯಿಂದಲೇ ಯುದ್ಧವನ್ನು ನಡಿಸು.


ಆ ಲೇವಿಯನು ಅವನಿಗೆ, “ನಾವು ಯೆಹೂದದ ಬೇತ್ಲೆಹೇಮಿನಿಂದ ಎಫ್ರಾಯೀಮಿನ ಪರ್ವತಪ್ರದೇಶದ ಒಂದು ದೂರಸ್ಥಳದಲ್ಲಿರುವ ನಮ್ಮ ವಾಸಸ್ಥಳಕ್ಕೆ ಹೋಗುತ್ತಿದ್ದೇವೆ. ನಾನು ಯೆಹೂದದ ಬೇತ್ಲೆಹೇಮಿಗೆ ಹೋಗಿದ್ದೆನು; ಈಗ ತಿರುಗಿ ಯೆಹೋವನ ಮಂದಿರಕ್ಕೆ ಹೋಗುತ್ತೇನೆ. ಇಲ್ಲಿ ಯಾರೂ ನಮ್ಮನ್ನು ತಮ್ಮ ಮನೆಗೆ ಸೇರಿಸಿಕೊಳ್ಳಲಿಲ್ಲ.


ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಅರಸನಿರಲಿಲ್ಲ. ಎಫ್ರಾಯೀಮ್ ಪರ್ವತಪ್ರದೇಶದ ಒಂದು ದೂರ ಸ್ಥಳದಲ್ಲಿ ಒಬ್ಬ ಲೇವಿಯನು ಪ್ರವಾಸಿಯಾಗಿದ್ದನು. ಯೆಹೂದದ ಬೇತ್ಲೆಹೇಮಿನವಳಾದ ಒಬ್ಬ ಸ್ತ್ರೀಯು ಅವನಿಗೆ ಉಪಪತ್ನಿಯಾಗಿದ್ದಳು.


ಅವನ ಬಂಧುಗಳೂ, ತಂದೆಯ ಮನೆಯವರೆಲ್ಲರೂ ಬಂದು ಅವನ ಶವವನ್ನು ತೆಗೆದುಕೊಂಡು ಹೋಗಿ ಚೊರ್ಗಕ್ಕೂ ಎಷ್ಟಾವೋಲಿಗೂ ಮಧ್ಯದಲ್ಲಿದ್ದ ಅವನ ತಂದೆಯಾದ ಮಾನೋಹನ ಸಮಾಧಿಯಲ್ಲಿ ಹೂಣಿಟ್ಟರು. ಅವನು ಇಸ್ರಾಯೇಲರನ್ನು ಇಪ್ಪತ್ತು ವರ್ಷ ಪಾಲಿಸಿದ್ದನು.


ಚೊರ್ಗಾ ಎಂಬ ಊರಲ್ಲಿ ದಾನ್ ಕುಲದವನಾದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು. ಅವನ ಹೆಂಡತಿಯು ಬಂಜೆಯಾಗಿದ್ದರಿಂದ ಅವನಿಗೆ ಮಕ್ಕಳಿರಲಿಲ್ಲ.


ಚೊರ್ಗಾ, ಎಷ್ಟಾವೋಲ್, ಈರ್ಷೆಮೆಷ್,


ಯೋಸೇಫನು ಅವರ ವಿಷಯದಲ್ಲಿ ತನಗೆ ಬಿದ್ದ ಕನಸುಗಳನ್ನು ನೆನಪಿಗೆ ತಂದುಕೊಂಡನು. ಅವರಿಗೆ ಅವನು, “ನೀವು ಗೂಢಚಾರರು. ನಮ್ಮ ದೇಶದ ಭದ್ರತೆಯಿಲ್ಲದ ಸ್ಥಳಗಳನ್ನು ನೋಡುವುದಕ್ಕಾಗಿ ಬಂದವರು” ಎಂದು ಹೇಳಿದನು.


ಇಳಿಜಾರು ಪ್ರದೇಶದಲ್ಲಿ ಎಷ್ಟಾವೋಲ್, ಚೊರ್ಗಾ, ಅಶ್ನಾ


ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ಮೀಕನೆಂಬ ಒಬ್ಬ ಮನುಷ್ಯನಿದ್ದನು. ಅವನು ಒಂದು ದಿನ ತನ್ನ ತಾಯಿಗೆ, “ಅಮ್ಮಾ, ಕಳವಾಗಿದ್ದ ನಿನ್ನ ಸಾವಿರದ ನೂರು ರೂಪಾಯಿಗಳಿಗೋಸ್ಕರ ನೀನು ನನಗೆ ಕೇಳಿಸುವಂತೆ ಶಪಿಸಿದಿಯಲ್ಲಾ;


ಇವರು ಮೀಕನ ಮನೆಯ ಹತ್ತಿರದಲ್ಲಿ ಆ ಯೌವನಸ್ಥನಾದ ಲೇವಿಯನು ಮಾತನಾಡುವುದನ್ನು ಕೇಳಿ, ಗುರುತುಹಿಡಿದು, ಅವನ ಬಳಿಗೆ ಹೋಗಿ, “ನಿನ್ನನ್ನು ಇಲ್ಲಿಗೆ ಕರೆತಂದವರಾರು? ಇಲ್ಲಿ ಏನು ಕೆಲಸ ಮಾಡುತ್ತೀ? ಏನು ಸಿಕ್ಕುತ್ತದೆ” ಎಂದು ಅವನನ್ನು ಕೇಳಲು ಅವನು,


ಜನರು ಯೆರಿಕೋವಿನ ಅರಸನಿಗೆ “ಇಗೋ, ಈ ರಾತ್ರಿ ಇಸ್ರಾಯೇಲ್ಯರ ಕಡೆಯವರು ನಮ್ಮ ದೇಶವನ್ನು ಸಂಚರಿಸಿ ಹೊಂಚುಹಾಕುವುದಕ್ಕೆ ಬಂದಿದ್ದಾರೆ” ಎಂದು ತಿಳಿಸಿದರು.


ಅವರು ಅಲ್ಲಿಂದ ಮುಂದೆ ಪ್ರಯಾಣಮಾಡಿ ಎಫ್ರಾಯೀಮ್ ಪರ್ವತಪ್ರದೇಶದಲ್ಲಿದ್ದ ಮೀಕನ ಮನೆಯ ಹತ್ತಿರ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು