Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 18:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯಾಜಕನು ಈ ಮಾತನ್ನು ಕೇಳಿ ಸಂತೋಷಪಟ್ಟು ಏಫೋದನ್ನೂ ದೇವತಾಪ್ರತಿಮೆಗಳನ್ನೂ, ಕೆತ್ತನೆಯ ವಿಗ್ರಹವನ್ನೂ, ತೆಗೆದುಕೊಂಡು ಅವರ ಬಳಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಯಾಜಕನು ಈ ಮಾತನ್ನು ಕೇಳಿ ಸಂತೋಷಪಟ್ಟು ಏಫೋದನ್ನೂ ದೇವತಾಪ್ರತಿಮೆಗಳನ್ನೂ ಕೆತ್ತನೆಯ ವಿಗ್ರಹವನ್ನೂ ತೆಗೆದುಕೊಂಡು ಅವರೊಡನೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯಾಜಕನು ಈ ಮಾತನ್ನು ಕೇಳಿ ಸಂತೋಷಪಟ್ಟು ಏಫೋದನ್ನೂ ದೇವತಾಪ್ರತಿಮೆಗಳನ್ನೂ ಕೆತ್ತನೆಯ ವಿಗ್ರಹವನ್ನೂ ತೆಗೆದುಕೊಂಡು ಅವರ ಬಳಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಇದರಿಂದ ಲೇವಿಯನಿಗೆ ಸಂತೋಷವಾಯಿತು. ಅವನು ಏಫೋದನ್ನೂ ಗೃಹದೇವತೆಗಳನ್ನೂ ಕೆತ್ತನೆಯ ಕೆಲಸದ ವಿಗ್ರಹವನ್ನೂ ತೆಗೆದುಕೊಂಡು ದಾನ್ಯರ ಜೊತೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಯಾಜಕನು ಸಂತೋಷಪಟ್ಟು ಏಫೋದನ್ನೂ, ಪ್ರತಿಮೆಗಳನ್ನೂ, ಕೆತ್ತಿದ ವಿಗ್ರಹವನ್ನೂ ತೆಗೆದುಕೊಂಡು ಜನರ ಮಧ್ಯದಲ್ಲಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 18:20
13 ತಿಳಿವುಗಳ ಹೋಲಿಕೆ  

ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ.


ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕೆಲಸಗಳಲ್ಲಿಯೇ ಅವರಿಗೆ ಘನತೆ, ಅವರು ಪ್ರಪಂಚದ ಕಾರ್ಯಗಳ ಕುರಿತು ಚಿಂತಿಸುವವರು.


ನಾನು ಯಾರ ಬೆಳ್ಳಿಬಂಗಾರವನ್ನಾಗಲಿ, ಉಡಿಗೆತೊಡಿಗೆಯನ್ನಾಗಲಿ ಬಯಸಲಿಲ್ಲ.


ಹೀಗಿರಲು ದೇಶವು ನರಳುವುದು, ಅದರಲ್ಲಿ ವಾಸಿಸುವ ಸಕಲ ಭೂಜಂತುಗಳೂ ಮತ್ತು ಆಕಾಶದ ಪಕ್ಷಿಗಳೂ ಬಳಲಿ ಹೋಗುವವು; ಸಮುದ್ರದ ಮೀನುಗಳು ಸಹ ನಶಿಸಿ ಹೋಗುವವು.


ನೀವು ಜವೆಗೋದಿಯ ಹಿಡಿಗಳನ್ನೂ, ರೊಟ್ಟಿಯ ಚೂರುಗಳನ್ನೂ ಆಶಿಸಿ ಸುಳ್ಳು ಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳುವುದರಿಂದ ಜೀವಿಸತಕ್ಕವರನ್ನು ಸಾಯಿಸಿ, ಸಾಯತಕ್ಕವರನ್ನು ಉಳಿಸಿ, ನನ್ನ ಜನರ ನಡುವೆ ನನ್ನ ಘನತೆಗೆ ಕುಂದುತಂದಿದ್ದೀರಿ.’


ಇವು ಹೊಟ್ಟೆಬಾಕ ನಾಯಿಗಳು, ಇವುಗಳಿಗೆ ಎಂದಿಗೂ ಸಾಕು ಎನಿಸದು. ಇಂಥವರು ಕುರಿಗಳನ್ನು ಕಾಯತಕ್ಕವರೋ! ಬುದ್ಧಿಹೀನರಾಗಿದ್ದಾರೆ, ಇವರಲ್ಲಿ ಯಾರೂ ತಪ್ಪದೆ ಪ್ರತಿಯೊಬ್ಬನೂ ಕೊಳ್ಳೆಹೊಡೆಯಬೇಕೆಂದು ತನ್ನ ತನ್ನ ಮಾರ್ಗಕ್ಕೆ ತಿರುಗಿಕೊಂಡಿದ್ದಾನೆ.


ಕೊಡು, ಕೊಡು ಅನ್ನುವ ಎರಡು ಹೆಣ್ಣು ಮಕ್ಕಳು ಜಿಗಣೆಗೆ ಉಂಟು. ತೃಪ್ತಿಪಡದವುಗಳು ಮೂರು ಉಂಟು, ಹೌದು, ಸಾಕೆನ್ನದವುಗಳು ನಾಲ್ಕು ಉಂಟು.


ಮೀಕನು ಅವನಿಗೆ, “ನೀನು ನಮ್ಮಲ್ಲಿರು; ನಮಗೆ ತಂದೆಯೂ, ಯಾಜಕನೂ ಆಗು. ನಿನಗೆ ವರ್ಷಕ್ಕೆ ಹತ್ತು ಬೆಳ್ಳಿ ನಾಣ್ಯಗಳನ್ನೂ, ಬಟ್ಟೆಯನ್ನೂ, ಆಹಾರವನ್ನೂ ಕೊಡುತ್ತೇನೆ” ಅನ್ನಲು


“ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು; ಕೆತ್ತಿದ ಪ್ರತಿಮೆಯನ್ನಾಗಲಿ ಅಥವಾ ಕಲ್ಲು ಕಂಬವನ್ನಾಗಲಿ ನಿಲ್ಲಿಸಿಕೊಳ್ಳಬಾರದು; ಅಡ್ಡಬೀಳುವುದಕ್ಕಾಗಿ ವಿಚಿತ್ರವಾಗಿ ಕೆತ್ತಿದ ಕಲ್ಲುಗಳನ್ನು ನಿಮ್ಮ ದೇಶದಲ್ಲಿ ಇಡಬಾರದು; ನಾನೇ ಯೆಹೋವನೆಂಬ ನಿಮ್ಮ ದೇವರು.


ಅವರು ಅವನಿಗೆ, “ಸುಮ್ಮನಿರು; ಬಾಯಿ ಮುಚ್ಚಿಕೊಂಡು; ನಮ್ಮ ಜೊತೆಯಲ್ಲಿ ಬಂದು ನಮಗೆ ತಂದೆಯೂ, ಯಾಜಕನೂ ಆಗಿರು. ಒಂದು ಮನೆಗೆ ಯಾಜಕನಾಗಿರುವುದು ಉತ್ತಮವೋ ಅಥವಾ ಇಸ್ರಾಯೇಲ್ಯರ ಒಂದು ಕುಲಕ್ಕೂ, ಗೋತ್ರಕ್ಕೂ ಯಾಜಕನಾಗಿರುವುದು ಉತ್ತಮವೋ?” ಎಂದು ಕೇಳಿದರು.


ತರುವಾಯ ಅವರು ತಮ್ಮ ಹೆಂಡತಿ ಮಕ್ಕಳನ್ನೂ, ಕುರಿದನ ಮೊದಲಾದ ಸೊತ್ತನ್ನೂ ಮುಂದಾಗಿ ಕಳುಹಿಸಿ ತಾವು ಹಿಂದಿನಿಂದ ಹೊರಟರು.


“ಮಾರ್ಗವು ಕವಲೊಡೆಯುವ ಸ್ಥಳದಲ್ಲಿ, ಎರಡು ದಾರಿಗಳ ಮೊದಲಲ್ಲಿ ಬಾಬೆಲಿನ ಅರಸನು ಶಕುನ ನೋಡುವುದಕ್ಕೆ ನಿಂತಿದ್ದಾನೆ; ಬಾಣಗಳನ್ನು ಕಲಕಿ, ವಿಗ್ರಹಗಳನ್ನು ಪ್ರಶ್ನೆಕೇಳಿ, ಕಾಳಿಜವನ್ನು ಪರೀಕ್ಷಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು