Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 18:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವನು, “ನೀವು ಯಾಜಕನನ್ನೂ ನಾವು ಮಾಡಿಸಿಕೊಂಡ ದೇವರುಗಳನ್ನೂ ಅಪಹರಿಸಿಕೊಂಡಿದ್ದೀರಿ, ನನಗೆ ಇನ್ನೇನಿದೆ; ಹೀಗಿರಲಾಗಿ ನಿನಗೇನಾಯಿತೆಂದು ನೀವು ನನ್ನನ್ನು ಕೇಳುವುದು ಹೇಗೆ?” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅವನು, “ನೀವು ಯಾಜಕನನ್ನೂ ನಾನು ಮಾಡಿಸಿಕೊಂಡ ದೇವರುಗಳನ್ನೂ ಅಪಹರಿಸಿಕೊಂಡಿದ್ದೀರಿ, ನನಗೆ ಇನ್ನೇನಿದೆ; ಹೀಗಿರಲಾಗಿ ನಿನಗೇನಾಯಿತೆಂದು ನೀವೇ ನನ್ನನ್ನು ಕೇಳುವುದು ಹೇಗೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವನು - ನೀವು ಯಾಜಕನನ್ನೂ ನಾನು ಮಾಡಿಸಿಕೊಂಡ ದೇವರುಗಳನ್ನೂ ಅಪಹರಿಸಿಕೊಂಡಿದ್ದೀರಿ ನನಗೆ ಇನ್ನೇನಿದೆ; ಹೀಗಿರಲಾಗಿ ನಿನಗೇನಾಯಿತೆಂದು ನೀವು ನನ್ನನ್ನು ಕೇಳುವದು ಹೇಗೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಮೀಕನು, “ದಾನ್ಯರಾದ ನೀವು ನನ್ನ ವಿಗ್ರಹಗಳನ್ನು ತೆಗೆದುಕೊಂಡಿದ್ದೀರಿ. ಆ ವಿಗ್ರಹಗಳನ್ನು ನಾನು ನನಗೋಸ್ಕರ ಮಾಡಿಸಿದ್ದೆ. ನೀವು ನನ್ನ ಯಾಜಕನನ್ನು ಸಹ ತೆಗೆದುಕೊಂಡಿದ್ದೀರಿ. ನನ್ನ ಹತ್ತಿರ ಈಗ ಏನು ಉಳಿದಿದೆ? ಹೀಗೆಲ್ಲ ಮಾಡಿ ನೀವು ನನಗೆ, ‘ನಿನಗೇನಾಗಿದೆ?’ ಎಂದು ಕೇಳಬಹುದೇ?” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅವನು, “ನಾನು ಮಾಡಿಕೊಂಡ ನನ್ನ ದೇವರುಗಳನ್ನೂ, ಯಾಜಕನನ್ನೂ ತೆಗೆದುಕೊಂಡು ಹೋದಿರಿ. ಇನ್ನು ನನಗೆ ಏನಿದೆ? ನೀವು ನನ್ನನ್ನು, ‘ನಿನಗೆ ಏನಾಯಿತೆಂದು ಕೇಳುವುದೇನು?’ ಎಂದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 18:24
15 ತಿಳಿವುಗಳ ಹೋಲಿಕೆ  

ಅವುಗಳನ್ನು ಮಾಡುವವರೂ, ಅವುಗಳಲ್ಲಿ ಭರವಸವಿಡುವವರೂ ಅವುಗಳಂತೆಯೇ.


ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು ಮತ್ತು ಭೂನಿವಾಸಿಗಳು ಆಕೆಯ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು” ಎಂದು ನನಗೆ ಹೇಳಿದನು.


ಆದರೆ ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲವೆಂದು ಆ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಹೆಚ್ಚುಕಡಿಮೆ ಆಸ್ಯಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿಬಿಟ್ಟಿದ್ದಾನೆ ಎಂಬುದನ್ನು ನೀವು ನೋಡುತ್ತಿದ್ದೀರಿ, ಕೇಳುತ್ತಿದ್ದೀರಿ.


“ಒಹೊಲಳು ನನ್ನ ವಶವಾಗಿರುವಾಗಲೇ, ವ್ಯಭಿಚಾರ ಮಾಡಿದಳು. ಅವಳು ತನ್ನ ಪ್ರಿಯರನ್ನು, ತನ್ನ ನೆರೆಯವರಾದ ಅಶ್ಶೂರ್ಯರನ್ನು,


ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು; ಅವನು ಎರಕಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.


ಬರಗಾಲವು ಅವರ ನೀರನ್ನೆಲ್ಲಾ ಹೀರಲಿ! ಅದು ಬತ್ತಿಹೋಗುವುದು. ಅದು ಬೊಂಬೆಗಳಿಂದ ತುಂಬಿದ ದೇಶ, ಅದರ ಜನರು ತಮ್ಮ ಭಯಂಕರವಾದ ವಿಗ್ರಹಗಳ ಪೂಜೆಯಿಂದ ಮದವೇರಿಸಿಕೊಳ್ಳುತ್ತಾರಷ್ಟೆ;


“ಒಬ್ಬ ಲೇವಿಯು ನನ್ನ ಮನೆಯಲ್ಲಿ ಯಾಜಕನಾಗಿರುವುದರಿಂದ ಯೆಹೋವನು ನನ್ನನ್ನು ಆಶೀರ್ವದಿಸುವನೆಂದು ಬಲ್ಲೆನು” ಅಂದುಕೊಂಡನು.


ಆದರೆ ತಂದೆಯ ಮನೆಗೆ ಹೋಗುವುದಕ್ಕೆ ನಿನಗೆ ಬಹಳ ಆಶೆಯಿರುವುದರಿಂದ ಹೋಗಬೇಕಾಯಿತು. ಆದರೆ ನೀನು ನನ್ನ ದೇವರುಗಳನ್ನು ಕದ್ದದ್ದು ಯಾಕೆ?” ಎಂದು ಕೇಳಿದನು.


ಈ ಮೀಕನು ಏಫೋದನ್ನೂ ವಿಗ್ರಹಗಳನ್ನೂ ಮಾಡಿಸಿ, ಅವುಗಳನ್ನು ತಾನು ಕಟ್ಟಿಸಿದ ದೇವಸ್ಥಾನದಲ್ಲಿಟ್ಟು, ತನ್ನ ಮಕ್ಕಳಲ್ಲಿ ಒಬ್ಬನನ್ನು ಅರ್ಚಕ ಸೇವೆಗಾಗಿ ಪ್ರತಿಷ್ಠಿಸಿದನು.


ಅವರ ಸಮೀಪಕ್ಕೆ ಹೋಗಿ ಅವರನ್ನು ಕೂಗಿದರು. ದಾನ್ಯರು ಹಿಂದಿರುಗಿ ನೋಡಿ ಮೀಕನಿಗೆ, “ನಿನಗೇನಾಯಿತು? ಗುಂಪನ್ನು ಕೂಡಿಸಿಕೊಂಡು ಬಂದದ್ದೇಕೆ” ಎಂದು ಕೇಳಲು


ದಾನ್ಯರು ಅವನಿಗೆ, “ನಮ್ಮಲ್ಲಿ ಕೆಲವರು ತುಂಬಾ ಕೋಪಿಸಿಕೊಳ್ಳುವವರಿದ್ದಾರೆ; ಅವರು ನಿಮ್ಮ ಮೇಲೆ ಬಿದ್ದರೆ ನೀನೂ, ನಿನ್ನ ಮನೆಯವರೂ ಪ್ರಾಣವನ್ನು ಕಳೆದುಕೊಳ್ಳಬೇಕಾಗುತ್ತದೆ. ಆದ್ದರಿಂದ ಬಾಯಿಮುಚ್ಚಿಕೊಂಡು ಹೋಗು” ಎಂದು ಹೇಳಿ ಮುಂದೆ ನಡೆದರು.


ರಾಹೇಲಳು ಆ ವಿಗ್ರಹಗಳನ್ನು ತೆಗೆದುಕೊಂಡು ಒಂಟೆಯ ಸಬರದೊಳಗಿಟ್ಟು (ತಡಿಯ ಚೀಲದಲ್ಲಿ) ಅವುಗಳ ಮೇಲೆ ಕುಳಿತ್ತಿದ್ದಳು. ಲಾಬಾನನು ಗುಡಾರದಲ್ಲಿದ್ದ ವಸ್ತುಗಳನ್ನೆಲ್ಲಾ ನೋಡಿದರೂ ಅವುಗಳನ್ನು ಕಾಣಲಿಲ್ಲ.


ಆಗ ಯೆಹೋವನು ಅಮಚ್ಯನ ಮೇಲೆ ಬಹಳವಾಗಿ ಕೋಪಗೊಂಡು, ಅವನ ಬಳಿಗೆ ಪ್ರವಾದಿಯನ್ನು ಕಳುಹಿಸಿ ಅವನಿಗೆ, “ನಿನ್ನ ಕೈಯಿಂದ ನಿನ್ನ ಜನರನ್ನು ರಕ್ಷಿಸಲಾರದೆ ಹೋದ ಅನ್ಯದೇವತೆಗಳಲ್ಲಿ ಏಕೆ ಇಷ್ಟು ಭಕ್ತಿ?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು